Homeಕರೋನಾ ತಲ್ಲಣಪ್ರಧಾನಿ ಹೇಡಿಯಂತೆ ವರ್ತಿಸುತ್ತಿದ್ದಾರೆ: ಕೋವಿಡ್ ನಿರ್ವಹಣೆ ಕುರಿತು ಮೋದಿ ವಿರುದ್ಧ ಕಿಡಿಕಾರಿದ ಪ್ರಿಯಾಂಕಾ ಗಾಂಧಿ

ಪ್ರಧಾನಿ ಹೇಡಿಯಂತೆ ವರ್ತಿಸುತ್ತಿದ್ದಾರೆ: ಕೋವಿಡ್ ನಿರ್ವಹಣೆ ಕುರಿತು ಮೋದಿ ವಿರುದ್ಧ ಕಿಡಿಕಾರಿದ ಪ್ರಿಯಾಂಕಾ ಗಾಂಧಿ

- Advertisement -
- Advertisement -

ಭಾರತದ ಪ್ರಧಾನಿ ಹೇಡಿಯಂತೆ ವರ್ತಿಸುತ್ತಿದ್ದಾರೆ. ಅವರು ನಮ್ಮ ದೇಶವನ್ನು ನಿರಾಶೆಗೊಳಿಸಿದರು ಎಂದು ಕಾಂಗ್ರೆಸ್ ಮುಖಂಡೆ ಪ್ರಿಯಾಂಕಾ ಗಾಂಧಿ, ಕೋವಿಡ್ ನಿರ್ವಹಣೆಯ ಕುರಿತು ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದ್ದಾರೆ.

ಈಗ ಸಂಭವಿಸಿರುವ ಕೋವಿಡ್ ದುರಂತಗಳಿಗೆ ಯಾರು ಜವಾಬ್ದಾರಿ (ಜಿಮ್ಮೆದಾರ್ ಕೌನ್) ಎಂಬ ಆಂದೋಲನ ಆರಂಭಿಸಿರುವ ಅವರು, “ಭಾರತದಲ್ಲಿ ನಾಯಕತ್ವದ ಬಿಕ್ಕಟ್ಟು ಮತ್ತು ಸಾಂಕ್ರಾಮಿಕ ಸಮಯದಲ್ಲಿ ಪ್ರಧಾನಮಂತ್ರಿಯವರ ಆಡಳಿತದ ಅಸಮರ್ಥತೆಯನ್ನು ಇಡೀ ಜಗತ್ತು ಕಂಡಿದೆ ಎಂದು ಪ್ರತಿಪಾದಿಸಿದ್ದಾರೆ.

ಕೋವಿಡ್ ಎರಡನೇ ಅಲೆ ಅಪ್ಪಳಿಸಿದಾಗ ಅವರು ಹಿಂದೆ ಸರಿದರು ಮತ್ತು ಅತಿ ಕೆಟ್ಟ ಕಾಲ ತಾನಾಗಿಯೇ ಸರಿದು ಹೋಗಲು ಕಾದು ಕುಳಿತರು. ಈ ರೀತಿಯಾಗಿ ತಾವೊಬ್ಬ ಹೇಡಿ ಎಂಬುದನ್ನು ತೋರಿಸಿಕೊಟ್ಟರು ಎಂದು ಪ್ರಿಯಾಂಕ ಆರೋಪಿಸಿದ್ದಾರೆ.

“ಪ್ರಧಾನಿಗಳಿಗೆ ಭಾರತೀಯರು ಮುಖ್ಯವಲ್ಲ, ರಾಜಕೀಯ ಮುಖ್ಯ. ಅವರಿಗೆ ಸತ್ಯ ಮುಖ್ಯವಲ್ಲ ಪ್ರೊಪಗಂಡಾ ಮುಖ್ಯ. ಭಾರತದಲ್ಲಿ ಸಂಭವಿಸಿದ ಸಾವು ನೋವುಗಳಿಗೆ ಯಾರು ಹೊಣೆ ಎಂದು ಭಾರತೀಯರೆಲ್ಲರೂ ಕೇಳುವ ಸಮಯ ಬಂದಿದೆ” ಎಂದು ಅವರು ಬರೆದ ಪತ್ರದಲ್ಲಿ ಕಟುವಾಗಿ ಟೀಕಿಸಿದ್ದಾರೆ.

ಬಿಕ್ಕಟ್ಟಿನ ಸಮಯದಲ್ಲಿ ಸತ್ಯವನ್ನು ಎದುರಿಸುವುದು, ಜವಾಬ್ದಾರಿಯನ್ನು ಹೊತ್ತುಕೊಳ್ಳುವುದು ಮತ್ತು ಸೂಕ್ತ ಕ್ರಮ ತೆಗೆದುಕೊಳ್ಳುವುದು ಉತ್ತಮ ಆಡಳಿತ. ದುರದೃಷ್ಟವಶಾತ್, ಮೋದಿ ಸರ್ಕಾರ ಇವುಗಳಲ್ಲಿ ಯಾವುದನ್ನೂ ಮಾಡಲಿಲ್ಲ. ಬದಲಿಗೆ, ಸಾಂಕ್ರಾಮಿಕ ರೋಗದ ಆರಂಭದಿಂದಲೂ, ಇದು ಸತ್ಯವನ್ನು ಮರೆಮಾಚಲು ಮತ್ತು ಜವಾಬ್ದಾರಿಯಿಂದ ತಪ್ಪಿಸಲು ಎಲ್ಲ ಪ್ರಯತ್ನಗಳನ್ನು ಮಾಡಿತು” ಎಂದು ಅವರು ಆರೋಪಿಸಿದ್ದಾರೆ.

“ಇದರ ಪರಿಣಾಮವಾಗಿ, ಎರಡನೇ ಅಲೆಯೂ ಅಪ್ಪಳಿಸಿದಾಗ ಸರ್ಕಾರವು ನಿಷ್ಕ್ರಿಯ ಸ್ಥಿತಿಗೆ ಇಳಿಯಿತು. ಈ ನಿಷ್ಕ್ರಿಯತೆಯು ವೈರಸ್ ಹೆಚ್ಚು ಉಗ್ರತೆಯಿಂದ ಹರಡಲು ಮತ್ತು ವಿವರಿಸಲಾಗದ ಸಾವು ನೋವುಗಳಿಗೆ ಕಾರಣವಾಯಿತು” ಎಂದು ಪ್ರಿಯಾಂಕಾ ಹೇಳಿದ್ದಾರೆ.

ಭಾರತ ಮತ್ತು ಪ್ರಪಂಚದಾದ್ಯಂತದ ತಜ್ಞರು ನೀಡಿದ ಅಸಂಖ್ಯಾತ ಎಚ್ಚರಿಕೆಗಳನ್ನು ಪ್ರಧಾನಿ ಕೇಳಿಸಿಕೊಂಡಿದ್ದರೆ ಅಥವಾ ಆರೋಗ್ಯ ಸಂಸದೀಯ ಸಮಿತಿಯ ಶಿಫಾರಸುಗಳನ್ನು ಆಲಿಸಿದ್ದರೆ ನಾವು ಬೆಡ್, ಆಮ್ಲಜನಕ, ಔಷಧಿಗಳಿಗಾಗಿ ಒದ್ದಾಡಬೇಕಾದ ಪರಿಸ್ಥಿತಿ ಬರುತ್ತಿರಲಿಲ್ಲ. ಲಸಿಕೆಗಳನ್ನು ವಿದೇಶಕ್ಕೆ ಕಳಿಸದೇ ಇದ್ದಿದ್ದರೆ ಭಾರತದ ಇನ್ನಷ್ಟು ಜೀವಗಳನ್ನು ಉಳಿಸಬಹುದಿತ್ತು ಎಂದು ಅವರು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಸುಪ್ರೀಂ ಚಾಟಿಗೂ ಮೊದಲೇ ಮೋದಿ ಉಚಿತ ಲಸಿಕೆ ನೀತಿ ಸಿದ್ಧ ಮಾಡಿದ್ದರೆ?: ಮೋದಿ ಸರ್ಕಾರದ ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾದ ಪತ್ರಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...