Homeಕರೋನಾ ತಲ್ಲಣಪ್ರಧಾನಿ ಹೇಡಿಯಂತೆ ವರ್ತಿಸುತ್ತಿದ್ದಾರೆ: ಕೋವಿಡ್ ನಿರ್ವಹಣೆ ಕುರಿತು ಮೋದಿ ವಿರುದ್ಧ ಕಿಡಿಕಾರಿದ ಪ್ರಿಯಾಂಕಾ ಗಾಂಧಿ

ಪ್ರಧಾನಿ ಹೇಡಿಯಂತೆ ವರ್ತಿಸುತ್ತಿದ್ದಾರೆ: ಕೋವಿಡ್ ನಿರ್ವಹಣೆ ಕುರಿತು ಮೋದಿ ವಿರುದ್ಧ ಕಿಡಿಕಾರಿದ ಪ್ರಿಯಾಂಕಾ ಗಾಂಧಿ

- Advertisement -
- Advertisement -

ಭಾರತದ ಪ್ರಧಾನಿ ಹೇಡಿಯಂತೆ ವರ್ತಿಸುತ್ತಿದ್ದಾರೆ. ಅವರು ನಮ್ಮ ದೇಶವನ್ನು ನಿರಾಶೆಗೊಳಿಸಿದರು ಎಂದು ಕಾಂಗ್ರೆಸ್ ಮುಖಂಡೆ ಪ್ರಿಯಾಂಕಾ ಗಾಂಧಿ, ಕೋವಿಡ್ ನಿರ್ವಹಣೆಯ ಕುರಿತು ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದ್ದಾರೆ.

ಈಗ ಸಂಭವಿಸಿರುವ ಕೋವಿಡ್ ದುರಂತಗಳಿಗೆ ಯಾರು ಜವಾಬ್ದಾರಿ (ಜಿಮ್ಮೆದಾರ್ ಕೌನ್) ಎಂಬ ಆಂದೋಲನ ಆರಂಭಿಸಿರುವ ಅವರು, “ಭಾರತದಲ್ಲಿ ನಾಯಕತ್ವದ ಬಿಕ್ಕಟ್ಟು ಮತ್ತು ಸಾಂಕ್ರಾಮಿಕ ಸಮಯದಲ್ಲಿ ಪ್ರಧಾನಮಂತ್ರಿಯವರ ಆಡಳಿತದ ಅಸಮರ್ಥತೆಯನ್ನು ಇಡೀ ಜಗತ್ತು ಕಂಡಿದೆ ಎಂದು ಪ್ರತಿಪಾದಿಸಿದ್ದಾರೆ.

ಕೋವಿಡ್ ಎರಡನೇ ಅಲೆ ಅಪ್ಪಳಿಸಿದಾಗ ಅವರು ಹಿಂದೆ ಸರಿದರು ಮತ್ತು ಅತಿ ಕೆಟ್ಟ ಕಾಲ ತಾನಾಗಿಯೇ ಸರಿದು ಹೋಗಲು ಕಾದು ಕುಳಿತರು. ಈ ರೀತಿಯಾಗಿ ತಾವೊಬ್ಬ ಹೇಡಿ ಎಂಬುದನ್ನು ತೋರಿಸಿಕೊಟ್ಟರು ಎಂದು ಪ್ರಿಯಾಂಕ ಆರೋಪಿಸಿದ್ದಾರೆ.

“ಪ್ರಧಾನಿಗಳಿಗೆ ಭಾರತೀಯರು ಮುಖ್ಯವಲ್ಲ, ರಾಜಕೀಯ ಮುಖ್ಯ. ಅವರಿಗೆ ಸತ್ಯ ಮುಖ್ಯವಲ್ಲ ಪ್ರೊಪಗಂಡಾ ಮುಖ್ಯ. ಭಾರತದಲ್ಲಿ ಸಂಭವಿಸಿದ ಸಾವು ನೋವುಗಳಿಗೆ ಯಾರು ಹೊಣೆ ಎಂದು ಭಾರತೀಯರೆಲ್ಲರೂ ಕೇಳುವ ಸಮಯ ಬಂದಿದೆ” ಎಂದು ಅವರು ಬರೆದ ಪತ್ರದಲ್ಲಿ ಕಟುವಾಗಿ ಟೀಕಿಸಿದ್ದಾರೆ.

ಬಿಕ್ಕಟ್ಟಿನ ಸಮಯದಲ್ಲಿ ಸತ್ಯವನ್ನು ಎದುರಿಸುವುದು, ಜವಾಬ್ದಾರಿಯನ್ನು ಹೊತ್ತುಕೊಳ್ಳುವುದು ಮತ್ತು ಸೂಕ್ತ ಕ್ರಮ ತೆಗೆದುಕೊಳ್ಳುವುದು ಉತ್ತಮ ಆಡಳಿತ. ದುರದೃಷ್ಟವಶಾತ್, ಮೋದಿ ಸರ್ಕಾರ ಇವುಗಳಲ್ಲಿ ಯಾವುದನ್ನೂ ಮಾಡಲಿಲ್ಲ. ಬದಲಿಗೆ, ಸಾಂಕ್ರಾಮಿಕ ರೋಗದ ಆರಂಭದಿಂದಲೂ, ಇದು ಸತ್ಯವನ್ನು ಮರೆಮಾಚಲು ಮತ್ತು ಜವಾಬ್ದಾರಿಯಿಂದ ತಪ್ಪಿಸಲು ಎಲ್ಲ ಪ್ರಯತ್ನಗಳನ್ನು ಮಾಡಿತು” ಎಂದು ಅವರು ಆರೋಪಿಸಿದ್ದಾರೆ.

“ಇದರ ಪರಿಣಾಮವಾಗಿ, ಎರಡನೇ ಅಲೆಯೂ ಅಪ್ಪಳಿಸಿದಾಗ ಸರ್ಕಾರವು ನಿಷ್ಕ್ರಿಯ ಸ್ಥಿತಿಗೆ ಇಳಿಯಿತು. ಈ ನಿಷ್ಕ್ರಿಯತೆಯು ವೈರಸ್ ಹೆಚ್ಚು ಉಗ್ರತೆಯಿಂದ ಹರಡಲು ಮತ್ತು ವಿವರಿಸಲಾಗದ ಸಾವು ನೋವುಗಳಿಗೆ ಕಾರಣವಾಯಿತು” ಎಂದು ಪ್ರಿಯಾಂಕಾ ಹೇಳಿದ್ದಾರೆ.

ಭಾರತ ಮತ್ತು ಪ್ರಪಂಚದಾದ್ಯಂತದ ತಜ್ಞರು ನೀಡಿದ ಅಸಂಖ್ಯಾತ ಎಚ್ಚರಿಕೆಗಳನ್ನು ಪ್ರಧಾನಿ ಕೇಳಿಸಿಕೊಂಡಿದ್ದರೆ ಅಥವಾ ಆರೋಗ್ಯ ಸಂಸದೀಯ ಸಮಿತಿಯ ಶಿಫಾರಸುಗಳನ್ನು ಆಲಿಸಿದ್ದರೆ ನಾವು ಬೆಡ್, ಆಮ್ಲಜನಕ, ಔಷಧಿಗಳಿಗಾಗಿ ಒದ್ದಾಡಬೇಕಾದ ಪರಿಸ್ಥಿತಿ ಬರುತ್ತಿರಲಿಲ್ಲ. ಲಸಿಕೆಗಳನ್ನು ವಿದೇಶಕ್ಕೆ ಕಳಿಸದೇ ಇದ್ದಿದ್ದರೆ ಭಾರತದ ಇನ್ನಷ್ಟು ಜೀವಗಳನ್ನು ಉಳಿಸಬಹುದಿತ್ತು ಎಂದು ಅವರು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಸುಪ್ರೀಂ ಚಾಟಿಗೂ ಮೊದಲೇ ಮೋದಿ ಉಚಿತ ಲಸಿಕೆ ನೀತಿ ಸಿದ್ಧ ಮಾಡಿದ್ದರೆ?: ಮೋದಿ ಸರ್ಕಾರದ ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾದ ಪತ್ರಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...