Homeಅಂತರಾಷ್ಟ್ರೀಯಭೀಮಾ ಕೋರೆಗಾಂವ್‌ ಖೈದಿಗಳ ಬಿಡುಗಡೆ ಮಾಡಿ-ಮೋದಿಗೆ ನೊಬೆಲ್ ಪ್ರಶಸ್ತಿ ವಿಜೇತರು ಮತ್ತು ಯುರೋಪಿಯನ್‌ ಸಂಸದರ ಪತ್ರ

ಭೀಮಾ ಕೋರೆಗಾಂವ್‌ ಖೈದಿಗಳ ಬಿಡುಗಡೆ ಮಾಡಿ-ಮೋದಿಗೆ ನೊಬೆಲ್ ಪ್ರಶಸ್ತಿ ವಿಜೇತರು ಮತ್ತು ಯುರೋಪಿಯನ್‌ ಸಂಸದರ ಪತ್ರ

- Advertisement -
- Advertisement -

ಭೀಮಾ ಕೊರೆಗಾಂವ್‌ನ ರಾಜಕೀಯ ಖೈದಿಗಳನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿ ಶಿಕ್ಷಣ ತಜ್ಞರು, ಯುರೋಪಿಯನ್ ಯೂನಿಯನ್ ಸಂಸದರು, ನೊಬೆಲ್ ಪ್ರಶಸ್ತಿ ವಿಜೇತರು ಮತ್ತು ಅಂತರರಾಷ್ಟ್ರೀಯ ಖ್ಯಾತಿಯ ವ್ಯಕ್ತಿಗಳು ಪ್ರಧಾನಿ ನರೇಂದ್ರ ಮೋದಿ, ಭಾರತದ ಮುಖ್ಯ ನ್ಯಾಯಮೂರ್ತಿ, ಮಹಾರಾಷ್ಟ್ರದ ಮುಖ್ಯಮಂತ್ರಿ ಮತ್ತು ಇತರ ಭಾರತೀಯ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ಭಾರತದ ಜೈಲುಗಳ ಶೋಚನೀಯವಾದ ನೈರ್ಮಲ್ಯ ಪರಿಸ್ಥಿತಿಯಲ್ಲಿ ಮಾನವ ಹಕ್ಕುಗಳ ಹೋರಾಟಗಾರರನ್ನು ಬಂಧಿಸುವುದು ಮತ್ತು ಸೂಕ್ತವಾದ ವೈದ್ಯಕೀಯ ಆರೈಕೆಯ ನೀಡದೆ ಇರುವುದರ ಬಗ್ಗೆ ಪತ್ರದಲ್ಲಿ ಕಳವಳ ವ್ಯಕ್ತಪಡಿಸಲಾಗಿದೆ. ಬಂಧಿತರಾಗಿರುವ ರಾಜಕೀಯ ಕೈದಿಗಳು ಹೊಸ ಮತ್ತು ಹೆಚ್ಚು ತೀವ್ರವಾದ ಕೊರೊನಾ ವೈರಸ್ ರೋಗಕ್ಕೆ ತುತ್ತಾಗುವ ಅಪಾಯವಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಕೊರೊನಾ ಹಿನ್ನಲೆಯಲ್ಲಿ ಭಾರತದ ರಾಜಕೀಯ ಕೈದಿಗಳಿಗೂ ಸೇರಿ, ಇತರ ಕೈದಿಗಳನ್ನು ಬಿಡುಗಡೆ ಮಾಡುವ ತಾತ್ಕಾಲಿಕ ಆಡಳಿತಾತ್ಮಕ ಆದೇಶವನ್ನು ನೀಡಬೇಕು ಎಂದು ಪತ್ರವು ಕೋರಿದೆ.

ಇದನ್ನೂ ಓದಿ: ಮಹಾತ್ಮ ಗಾಂಧಿಯವರ ಮರಿ ಮೊಮ್ಮಗಳು ದಕ್ಷಿಣ ಆಫ್ರಿಕಾದ ಜೈಲಿನಲ್ಲಿ ಬಂಧಿ

ಅಂತಾರಾಷ್ಟ್ರೀಯ ಖ್ಯಾತಿಯ ಗಣ್ಯರು ಈ ಪತ್ರಕ್ಕೆ ಸಹಿ ಹಾಕಿದ್ದು, ಅವುಗಳಲ್ಲಿ ಖ್ಯಾತ ಶೈಕ್ಷಣಿಕ ಮತ್ತು ಭಾಷಾಶಾಸ್ತ್ರಜ್ಞ ನೋಮ್ ಚೋಮ್ಸ್ಕಿ, ಅನಿಯಂತ್ರಿತ ಬಂಧನ ಕುರಿತ ವಿಶ್ವಸಂಸ್ಥೆಯ ಕಾರ್ಯನಿರತ ಗುಂಪಿನ ಮಾಜಿ ಅಧ್ಯಕ್ಷ ಜೋಸ್ ಆಂಟೋನಿಯೊ ಗುವೇರಾ-ಬರ್ಮಡೆಜ್, ನೊಬೆಲ್ ಪ್ರಶಸ್ತಿ ವಿಜೇತರರಾದ ಓಲ್ಗಾ ಟೋಕಾರ್ಜುಕ್ ಮತ್ತು ವೋಲ್ ಸೊಯಿಂಕಾ, ಕೊಲಂಬಿಯಾ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪಾರ್ಥಾ ಚಟರ್ಜಿ, ಬ್ರೌನ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಶುತೋಷ್ ವರ್ಶ್ನಿ, ಮಾನವ ಹಕ್ಕುಗಳ ಕಾರ್ಯಕರ್ತ ಶಾಹಿದುಲ್ ಆಲಂ, ದಿ ಗಾರ್ಡಿಯನ್ ಯುಕೆ ಮಾಜಿ ಪ್ರಧಾನ ಸಂಪಾದಕ ಅಲನ್ ರಸ್ಬ್ರಿಡ್ಜರ್ ಮತ್ತು ಪತ್ರಕರ್ತ ನವೋಮಿ ಕ್ಲೈನ್ ಸಹಾಕಿದ್ದಾರೆ.

ನೀರು ಮತ್ತು ವೈದ್ಯಕೀಯ ಸೌಲಭ್ಯಗಳ ಕೊರತೆಯಿರುವ ಕಿಕ್ಕಿರಿದ ಕಾರಾಗೃಹಗಳು ರಾಜಕೀಯ ಕೈದಿಗಳಿಗೆ ಗಂಭೀರ ಆರೋಗ್ಯದ ಅಪಾಯ ಉಂಟುಮಾಡುತ್ತವೆ ಎಂದು ಪತ್ರದಲ್ಲಿ ಸೂಚಿಸಲಾಗಿದೆ. ಈ ರಾಜಕೀಯ ಕೈದಿಗಳಲ್ಲಿ ಹಲವರು ಈಗಾಗಲೇ ಕೊರೊನಾಗೆ ತುತ್ತಾಗಿದ್ದರು ಮತ್ತು ಅವರ ಆರೋಗ್ಯದ ಕುರಿತು ನಿರ್ಲಕ್ಷ್ಯ ತಾಳುವ ಬಗ್ಗೆ ಆರೋಪಗಳೂ ಕೇಳಿ ಬಂದಿತ್ತು.

ಭೀಮಾ ಕೊರೆಗಾಂವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಧೀರ್ ಧವಾಲೆ, ದಲಿತ ಹಕ್ಕುಗಳ ಹೋರಾಟಗಾರ ಮಹೇಶ್ ರೌತ್, ನಾಗ್ಪುರ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಸಾಹಿತ್ಯ ವಿಭಾಗದ ಮುಖ್ಯಸ್ಥರಾಗಿದ್ದ ಶೋಮಾ ಸೇನ್, ವಕೀಲರಾದ ಅರುಣ್ ಫೆರೇರಾ ಮತ್ತು ವಕೀಲೆ ಆದಿವಾಸಿ ಹಕ್ಕುಗಳ ಹೋರಾಟಗಾರ್ತಿ ಸುಧಾ ಭಾರದ್ವಾಜ್, ಕ್ರಾಂತಿಕಾರಿ ಬರಹಗಾರ ವರವರ ರಾವ್, ಸಾಮಾಜಿಕ ಹೋರಾಟಗಾರ ವೆರ್ನಾನ್ ಗೊನ್ಸಾಲ್ವೆಸ್, ಕೈದಿಗಳ ಹಕ್ಕುಗಳ ಹೋರಾಟಗಾರ ರೋನಾ ವಿಲ್ಸನ್, ವಕೀಲ ಸುರೇಂದ್ರ ಗ್ಯಾಡ್ಲಿಂಗ್, ಫಾದರ್ ಸ್ಟಾನ್ ಸ್ವಾಮಿ, ದೆಹಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಹನಿ ಬಾಬು, ವಿದ್ವಾಂಸ ಮತ್ತು ದಲಿತ ಹಕ್ಕುಗಳ ಹೋರಾಟಗಾರ ಆನಂದ್ ತೇಲ್ತುಂಬ್ಡೆ, ನಾಗರಿಕ ಸ್ವಾತಂತ್ರ್ಯ ಹೋರಾಟಗಾರ ಗೌತಮ್ ನವಲಖಾ , ಕಬೀರ್ ಕಲಾ ಮಂಚ್‌ನ ಸದಸ್ಯರಾದ ಸಾಗರ್ ಗೂರ್ಖೆ, ರಮೇಶ್ ಘೈಚೋರ್ ಮತ್ತು ಜ್ಯೋತಿ ಜಗ್ತಾಪ್ ಸೇರಿ ಒಟ್ಟು 16 ಜನರು ಬಂಧನದಲ್ಲಿದ್ದಾರೆ.

ಪಂಜಾಬ್‌- ಆಡಳಿತರೂಢ ಕಾಂಗ್ರೆಸ್‌ ಆಂತರಿಕ ಕಚ್ಚಾಟ ಬೀದಿಗೆ: ಬೆಂಬಲಿಗರ ಪೋಸ್ಟರ್‌ ಯುದ್ಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು ಇಲ್ಲದಿದ್ದರೆ ಹೋರಾಟ ಮಾಡಬೇಕಾಗುತ್ತದೆ ಜೈ ಭೀಮ್ ಜೈ ಟಿಪ್ಪು ಸುಲ್ತಾನ್

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...