Homeಮುಖಪುಟಕೋವಿಡ್ ಸಾವುಗಳು ಅಧಿಕೃತ ಸಂಖ್ಯೆಗಿಂತ 7 ಪಟ್ಟು ಹೆಚ್ಚಿವೆ: ವರದಿಗೆ ಕಿಡಿಕಾರಿದ ಕೇಂದ್ರ

ಕೋವಿಡ್ ಸಾವುಗಳು ಅಧಿಕೃತ ಸಂಖ್ಯೆಗಿಂತ 7 ಪಟ್ಟು ಹೆಚ್ಚಿವೆ: ವರದಿಗೆ ಕಿಡಿಕಾರಿದ ಕೇಂದ್ರ

- Advertisement -
- Advertisement -

ಭಾರತದ ಹಲವು ರಾಜ್ಯಗಳು ಕೋವಿಡ್ ಪ್ರಕರಣಗಳು ಮತ್ತು ಸಾವುಗಳ ಸಂಖ್ಯೆಯನ್ನು ಮುಚ್ಚಿಡುತ್ತಿವೆ ಎಂಬ ಆರೋಪ ಕಳೆದ ನಾಲ್ಕೈದು ತಿಂಗಳಿಂದ ಪದೇ ಪದೇ ಕೇಳಿಬರುತ್ತಿದೆ. ರಾಜ್ಯ ಸರ್ಕಾರಗಳು ನೀಡುತ್ತಿರುವ ವರದಿ ಸುಳ್ಳೆಂದು ಹಲವಾರು ಪತ್ರಿಕೆಗಳು ಚಿತಾಗಾರಗಳಲ್ಲಿ ಲೆಕ್ಕ ಹಾಕಿ ದಾಖಲೆ ಸಮೇತ ನಿರೂಪಿಸಿದ್ದಾರೆ. ಅಲ್ಲದೇ ಬಿಹಾರ ಸರ್ಕಾರ ಕೋವಿಡ್ ಸಾವುಗಳ ಸಂಖ್ಯೆ ಮುಚ್ಚಿಟ್ಟಿದೆ ಎಂದು ಪಾಟ್ನಾ ಹೈಕೋರ್ಟ್ ಆಡಿಟ್‌ಗೆ ಸೂಚಿಸಿದಾಗ ಒಂದೇ ದಿನ ಬಿಹಾರ 3500 ಹೆಚ್ಚು ಸಾವುಗಳನ್ನು ಪರಿಷ್ಕರಿಸಿ ಸೇರಿಸಿತ್ತು.. ಇಷ್ಟೆಲ್ಲ ನಡೆಯುತ್ತಿರುವ ಸಂದರ್ಭ ಭಾರತದಲ್ಲಿ ಕೋವಿಡ್ ಸಾವುಗಳು ಸರ್ಕಾರ ಪ್ರಕಟಿಸಿದ ಅಧಿಕೃತ ಸಂಖ್ಯೆಗಿಂತ 7 ಪಟ್ಟು ಹೆಚ್ಚಿವೆ ಎಂಬ ಸುದ್ದಿ ಲೇಖನದ ವಿರುದ್ಧ ಕೇಂದ್ರ ಸರ್ಕಾರ ತಿರುಗಿಬಿದ್ದಿದೆ.

ಭಾರತದಲ್ಲಿ ಅಧಿಕೃತ ಕೋವಿಡ್‌ ಸಾವುಗಳ ಸಂಖ್ಯೆಗಿಂತ 5-7 ಹೆಚ್ಚಿದ ಎಂಬ ವರದಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಇದು ಯಾವುದೇ ಸಾಂಕ್ರಾಮಿಕ ರೋಗಶಾಸ್ತ್ರೀಯ ಪುರಾವೆಗಳಿಲ್ಲದ ದತ್ತಾಂಶ ಎಂದು ಟೀಕಿಸಿದೆ. ಕೇಂದ್ರ ಆರೋಗ್ಯ ಸಚಿವಾಲಯ ಈ ಕುರಿತು ಹೇಳಿಕೆಯೊಂದನ್ನು ಬಿಡುಗಡೆ ಮಾಡಿ ಪತ್ರಿಕೆ ಅಥವಾ ವರದಿಯ ಹೆಸರು ಹೇಳದೆ ಕಿಡಿಕಾರಿದೆ.

ಯಾವುದೇ ಆಧಾರವಿಲ್ಲದ, ಊಹಾಪೋಹದಿಂದ ಕೂಡಿದ ವರದಿಯಿದು. ಯಾವುದೇ ದೇಶ ಅಥವಾ ಪ್ರದೇಶದ ಸಾವಿನ ಪ್ರಮಾಣವನ್ನು ನಿರ್ಧರಿಸಲು ಮರಣ ಪ್ರಮಾಣವನ್ನು ಅಂದಾಜು ಮಾಡಲು ನಿಯತಕಾಲಿಕವು ಬಳಸಿದ ಅಧ್ಯಯನಗಳು ಮೌಲ್ಯೀಕರಿಸಿದ ಸಾಧನಗಳಲ್ಲ ಎಂದು ಕೇಂದ್ರ ಹೇಳಿದೆ.

ಈ ಕುರಿತು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಪಿಐಬಿ ಫ್ಯಾಕ್ಟ್‌ಚೆಕ್ ಅನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಆರೋಗ್ಯ ಸಚಿವಾಲಯ ಸರಿಯಾದ, ಪಾರದರ್ಶಕ ಮಾಹಿತಿಯನ್ನು ಪ್ರಕಟಿಸುತ್ತಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಲೇಖನದಲ್ಲಿ ಪುರಾವೆಯಾಗಿ ವಿಮಾ ಹಕ್ಕುಗಳ ಆಧಾರದ ಮೇಲೆ ತೆಲಂಗಾಣದಲ್ಲಿ ನಡೆಸಿದ ಅಧ್ಯಯನವನ್ನು ಹೆಸರಿಸಲಾಗಿದೆ. ಅಲ್ಲಿಯೂ ವೈಜ್ಞಾನಿಕ ದತ್ತಾಂಶಗಳು ಲಭ್ಯವಿಲ್ಲ ಎಂದು ಕೇಂದ್ರದ ಹೇಳಿಕೆ ತಿಳಿಸಿದೆ.

“ಮತದಾನದ ಸಮೀಕ್ಷೆಗಳನ್ನು ನಡೆಸುವುದು, ಊಹಿಸುವುದು ಮತ್ತು ವಿಶ್ಲೇಷಿಸುವುದರಲ್ಲಿ ಚೆನ್ನಾಗಿ ಪರಿಣತಿ ಹೊಂದಿರುವ ಪ್ರಶ್ನಮ್” ಮತ್ತು “ಸಿ-ವೋಟರ್” ಎಂಬ ಗುಂಪುಗಳು ನಡೆಸಿದ ಇತರ ಎರಡು ಅಧ್ಯಯನಗಳನ್ನು ಲೇಖಣ ಆಧರಿಸಿದೆ. ಆದರೆ ಅವು ಎಂದಿಗೂ ಸಾರ್ವಜನಿಕ ಆರೋಗ್ಯ ಸಂಶೋಧನೆಯೊಂದಿಗೆ ಸಂಬಂಧ ಹೊಂದಿಲ್ಲ” ಎಂದು ಕೇಂದ್ರ ಹೇಳಿದೆ.

ತಮ್ಮದೇ ಆದ ಅಂದಾಜು ಅಭಿಪ್ರಾಯಗಳ ಮೂಲಕ ವಿಶ್ವಾಸಾರ್ಹವಲ್ಲದ ಸ್ಥಳೀಯ ಸರ್ಕಾರದ ದತ್ತಾಂಶಗಳಿಂದ, ಕಂಪನಿಯ ದಾಖಲೆಗಳಿಂದ ಮತ್ತು ಶ್ರದ್ಧಾಂಜಲಿ ಬರಹಗಳ ವಿಶ್ಲೇಷಣೆಗಳಿಂದ ಈ ವರದಿ ರಚಿಸಲಾಗಿದೆ ಎಂದು ಕೇಂದ್ರ ಕಿಡಿಕಾರಿದೆ.


ಇದನ್ನೂ ಓದಿ: ಪ್ರಧಾನಿ ಹೇಡಿಯಂತೆ ವರ್ತಿಸುತ್ತಿದ್ದಾರೆ: ಕೋವಿಡ್ ನಿರ್ವಹಣೆ ಕುರಿತು ಮೋದಿ ವಿರುದ್ಧ ಕಿಡಿಕಾರಿದ ಪ್ರಿಯಾಂಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...