Homeಮುಖಪುಟಹೈದರಾಬಾದ್‌: 16 ಕೋಟಿ ರೂಗಳ ವಿಶ್ವದ ದುಬಾರಿ ಇಂಜೆಕ್ಷನ್ ಪಡೆದ 3 ವರ್ಷದ ಮಗು!

ಹೈದರಾಬಾದ್‌: 16 ಕೋಟಿ ರೂಗಳ ವಿಶ್ವದ ದುಬಾರಿ ಇಂಜೆಕ್ಷನ್ ಪಡೆದ 3 ವರ್ಷದ ಮಗು!

- Advertisement -
- Advertisement -

ಆಯನ್ಸ್ ಗುಪ್ತಾ ಹೆಸರಿನ ಮೂರು ವರ್ಷದ ಮಗುವಿಗೆ ಅಪರೂಪದ ಬೆನ್ನುಮೂಳೆಯ ಸ್ನಾಯು ಕ್ಷೀಣತೆ (spinal muscular atrophy) ಎಂಬ ರೋಗ ಕಾಡುತ್ತಿತ್ತು. ಅದರ ಜೀನ್ ಥೆರಪಿ ಚಿಕಿತ್ಸೆಗೆ 16 ಕೋಟಿ ರೂ ಬೆಲೆಯ ಇಂಜೆಕ್ಷನ್ ಅಗತ್ಯವಿತ್ತು. ಆ ಮಗುವಿನ ಪೋಷಕರು ಕ್ರೌಡ್ ಫಂಡಿಂಗ್‌ನಲ್ಲಿ ಮನವಿ ಮಾಡಿದಾಗ 62,000 ಜನರು ದೇಣಿಗೆ ನೀಡಿದ್ದರ ಪರಿಣಾಮವಾಗಿ 16 ಕೋಟಿ ರೂ ಸಂಗ್ರಹವಾಯಿತು. ಕೊನೆಗೂ ವಿಶ್ವದ ಅತಿ ದುಬಾರಿ ಇಂಜೆಕ್ಷನ್ ಅನ್ನು ಆ ಮಗು ಪಡೆಯಿತು…

ಇದೆಲ್ಲವೂ ನಡೆದಿದ್ದು ಹೈದರಾಬಾದ್‌ನಲ್ಲಿ. ಅಲ್ಲಿನ ರೈನ್ಬೊ ಚಿಲ್ಡ್ರನ್ಸ್ ಹಾಸ್ಪಿಟಲ್‌ನಲ್ಲಿ ಜೂನ್ 09 ರಂದು ಆಯನ್ಸ್ ಝೊಲ್ಗೆನ್ಸ್ಮ ಎಂಬ ಔಷಧಿಯನ್ನು ಅಮೆರಿಕದಿಂದ ಆಮದು ಮಾಡಿಕೊಂಡು ನೀಡಲಾಯಿತು. ಪೋಷಕರಾದ ಯೋಗೇಶ್ ಗುಪ್ತಾ ಮತ್ತು ರುಪಾಲ್ ಗುಪ್ತಾ ಮೊದಲಿಗೆ ಅಷ್ಟು ದೊಡ್ಡ ಮೊತ್ತವನ್ನು ಹೊಂದಿಸಲು ಕಷ್ಟ ಎಂದುಕೊಂಡಿದ್ದರು. ಆದರೆ ImpactGuru.com ಮೂಲಕ ಈ ವರ್ಷದ ಫೆಬ್ರವರಿಯಿಂದ ಕ್ರೌಡ್ ಫಂಡಿಂಗ್‌ಗೆ ಮನವಿ ಮಾಡಿದರು. ಜೂನ್‌ ವೇಳೆಗೆ ಹಣ ಸಂಗ್ರಹವಾಗಿ ಚಿಕಿತ್ಸೆಗೆ ಸಹಕಾರಿಯಾಯಿತು.

“62,450 ದೇಣಿಗೆ ನೀಡಿದ್ದಾರೆ. ದಾನಿಯೊಬ್ಬರು 56 ಲಕ್ಷ ನೀಡಿದ್ದಾರೆ. ವಿಶ್ವದ ದುಬಾರಿ ಔಷಧಿಯನ್ನು ನನ್ನ ಮಗನಿಗೆ ನೀಡಿ ಆತನನ್ನು ಬದುಕಿಸಲು ನೆರವಾದ ಎಲ್ಲಾ ದಾನಿಗಳಿಗೆ ನಾವು ಋಣಿಯಾಗಿದ್ದೇವೆ” ಎಂದು ಯೋಗೇಶ್ ಹೇಳಿದ್ದಾರೆ.

ವಿರಾಟ್ ಕೊಹ್ಲಿ, ಅನುಷ್ಕ ಶರ್ಮಾ, ಅನಿಲ್ ಕಪೂರ್, ಅಜಯ್ ದೇವಗನ್, ಧರ್ಮ ಪ್ರೊಡಕ್ಷನ್, ಟಿ-ಸೀರಿಸ್, ಸಿಪ್ಲಾ ಸೇರಿದಂತೆ ಹಲವಾರು ಜನ ದೇಣಿಗೆ ನೀಡುವ ಮೂಲಕ ಬೆಂಬಲ ನೀಡಿದ್ದರು.

ಬೆನ್ನುಮೂಳೆಯ ಸ್ನಾಯು ಕ್ಷೀಣತೆಯು ಎಸ್‌ಎಂಎನ್ 1 ಜೀನ್‌ನಲ್ಲಿನ ದೋಷದಿಂದಾಗಿ ಉಂಟಾಗುವ ಕಾಯಿಲೆಯಾಗಿದೆ. ಪೀಡಿತ ಮಕ್ಕಳು ಆರಂಭದಲ್ಲಿ ಮೇಲಿನ ಮತ್ತು ಕೆಳಗಿನ ಕಾಲುಗಳನ್ನು ಒಳಗೊಂಡ ಸ್ನಾಯು ದೌರ್ಬಲ್ಯವನ್ನು ಹೊಂದುತ್ತಾರೆ. ಈ ಎಸ್‌ಎಂಎ ಸಾಮಾನ್ಯವಾಗಿ 10,000 ಮಕ್ಕಳಲ್ಲಿ ಒಬ್ಬರ ಮೇಲೆ ಪರಿಣಾಮ ಬೀರುತ್ತದೆ, ಮತ್ತು ಪ್ರಸ್ತುತ ಭಾರತದಲ್ಲಿ ಸುಮಾರು 800 ಮಕ್ಕಳು ಎಸ್‌ಎಂಎಯಿಂದ ಬಳಲುತ್ತಿದ್ದಾರೆ.

ಝೊಲ್ಗೆನ್ಸ್ಮ ಒಂದೇ ಡೋಸ್ ಇಂಟ್ರಾವೆನಸ್ ಇಂಜೆಕ್ಷನ್ ಜೀನ್ ಚಿಕಿತ್ಸೆಯಾಗಿದೆ. 16 ಕೋಟಿ ರೂ.ಗಳ ಬೆಲೆಯ ಹೊರತಾಗಿ, ಕೇಂದ್ರೀಯ ಹಣಕಾಸು ಸಚಿವಾಲಯವು ಮಾನವೀಯ ಆಧಾರದ ಮೇಲೆ ಈ ಔಷಧದ ಮೇಲೆ ಸುಮಾರು 6 ಕೋಟಿ ಮೌಲ್ಯದ ಆಮದು ತೆರಿಗೆಯನ್ನು ಮನ್ನಾ ಮಾಡಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.


ಇದನ್ನೂ ಓದಿ: ನಿಮ್ಮ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ಸಪ್ತಪದಿ ತುಳಿಯಿರಿ: ಇದು ತಮಾಷೆಯಲ್ಲ ಸತ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...