Homeಮುಖಪುಟಕೋವಿಡ್‌ ಸೋಂಕಿತರಿಗೆ ಆಂಟಿಬಡಿ ಕಾಕ್ಟೇಲ್ ಟ್ರೀಟ್‌ಮೆಂಟ್

ಕೋವಿಡ್‌ ಸೋಂಕಿತರಿಗೆ ಆಂಟಿಬಡಿ ಕಾಕ್ಟೇಲ್ ಟ್ರೀಟ್‌ಮೆಂಟ್

- Advertisement -
- Advertisement -

ಕೊರೋನಾ ಸೋಂಕಿಗೆ ಬೇರೆ ಬೇರೆ ಚಿಕಿತ್ಸಾ ವಿಧಾನಗಳನ್ನು ಜಗತ್ತಿನ ಬೇರೆ ಬೇರೆ ರಾಷ್ಟ್ರಗಳಲ್ಲಿನ ವೈದ್ಯರು ಕಂಡುಕೊಂಡಿದ್ದಾರೆ. ಅಂತಹ ಒಂದು ವಿಧಾನಗಳಲ್ಲಿ ಪ್ಲಾಸ್ಮಾ ಕೂಡ ಒಂದು. ಪ್ಲಾಸ್ಮಾ ಚಿಕಿತ್ಸೆ ಸಾಕಷ್ಟು ಯಶಸ್ವಿಯಾಗದ ನಂತರ ಮೇಲೆ ಈಗ ಮತ್ತೆ ಹೊಸ ಹೊಸ ಚಿಕಿತ್ಸಾ ವಿಧಾನಗಳು ಹುಟ್ಟಿಕೊಳ್ಳುತ್ತಿವೆ. ಅದರಲ್ಲಿ ಹೈದ್ರಾಬಾದಿನ ವೈದ್ಯರ ಆಂಟಿಬಡಿ ಕಾಕ್ಟೇಲ್ ಟ್ರೀಟ್‌ಮೆಂಟ್‌ ಕೂಡ ಒಂದು..

ಹೈದ್ರಾಬಾದಿನ ಏಷಿಯನ್‌ ಇನ್ಸ್‌ಟಿಟ್ಯೂಟ್‌ ಆಫ್‌ ಗ್ಯಾಸ್ಟ್ರೋಂಟರಲಜಿಯ ವಿಜ್ಞಾನಿಗಳು ಈ ಚಿಕಿತ್ಸಾ ವಿಧಾನವನ್ನು ಕಂಡು ಹಿಡಿದಿದ್ದಾರೆ. ಈ ಚಿಕಿತ್ಸಾ ವಿಧಾನವು ಭಾರತದ ಡೆಲ್ಟಾ ರೂಪಾತಂರಿ ವೈರಸ್‌ ಸೋಂಕಿಗೆ ಅತ್ಯಂತ ಪರಿಣಾಮಕಾರಿ ಚಿಕಿತ್ಸೆಯಾಗಲಿದೆ ಎನ್ನಲಾಗಿದೆ. ಸುಮಾರು 40 ಜನ ಕೊರೋನಾ ಸೋಂಕಿತರಿಗೆ ಒಂದು ಡೋಸ್‌ ನಷ್ಟು ಆಂಟಿಬಡಿಗಳನ್ನೊಳಗೊಂಡ ಕಾಕ್ಟೇಲ್ ಔಷಧಿಯನ್ನು ನೀಡಿದ್ದಾರೆ. ಈ ಕಾಕ್ಟೇಲ್ ಸಮಿಶ್ರಣಗಳ ಪರಿಣಾಮವಾಗಿ ಸೋಂಕಿತರಲ್ಲಿ ಕೋವಿಡ್‌ ಲಕ್ಷಣಗಳು ವಾಸಿಯಾಗಿವೆ.  ಔಷಧಿಯನ್ನು ನೀಡಿದ 24 ಗಂಟೆಗಳಲ್ಲಿ ಸೋಂಕಿತರಲ್ಲಿನ ಜ್ವರ, ಮತ್ತು ಇತರ ಸಮಸ್ಯೆಗಳು ವಾಸಿಯಾಗಿವೆ ಎಂದು ಇನ್ಸ್ಟಿಟ್ಯೂಟ್‌ ಅಧ್ಯಕ್ಷ ಡಾ. ನಾಗೇಶ್ವರ ರೆಡ್ಡಿ ತಿಳಿಸಿದ್ದಾರೆ.

ಅಮೇರಿಕಾದಲ್ಲಿ ನಡೆದ ಅಧ್ಯಯನಗಳು ಕಾಕ್ಟೇಲ್ ಚಿಕಿತ್ಸಾ ವಿಧಾನವು ಬ್ರಿಟನ್‌ ಮತ್ತು ದಕ್ಷಿಣ ಆಫ್ರಿಕಾ ಮೂಲದ ಕೊರೊನಾ ರೂಪಾಂತರ ತಳಿಯ ಚಿಕಿತ್ಸೆಗೂ ಪರಿಣಾಮ ಬೀರಿವೆ ಎಂಬುದನ್ನು ತೋರಿಸಿವೆ.

ಮೋನೋಕ್ಲೋನಲ್‌ ಆಂಟಿಬಡಿ ಚಿಕಿತ್ಸೆ ಪಡೆದ 40 ಜನ ಸೋಂಕಿತರನ್ನು ನಾವು 1 ವಾರ ಬಿಟ್ಟು ಮತ್ತೆ ಪರೀಕ್ಷೆ ಮಾಡಿದ್ದೇವೆ. ಆರ್‌ಟಿಪಿಸಿಆರ್‌ ವಿಧಾನದಲ್ಲೂ ಪರೀಕ್ಷೆ ಮಾಡಿದ್ದೇವೆ. ಯಾರಲ್ಲೂ ಮತ್ತೆ ಸೋಂಕು ಕಾಣಿಸಿಕೊಂಡಿಲ್ಲ. ಎಲ್ಲರೂ ವಾಸಿಯಾಗಿದ್ದಾರೆ ಎಂದು ಡಾ. ನಾಗೇಶ್ವರ್‌ ರೆಡ್ಡಿ ಹೇಳುತ್ತಾರೆ.

ಇದನ್ನೂ ಓದಿ : ಕೊರೊನಾ ನಿರ್ಬಂಧಗಳನ್ನು ಮತ್ತಷ್ಟು ಸಡಿಲಿಸಿದ ದೆಹಲಿ ಸರ್ಕಾರ

ಮೋನೋಕ್ಲೋನಲ್‌ ವಿಧಾನದಲ್ಲಿ ಕೊರೋನಾ ಚಿಕಿತ್ಸೆ ಪಡೆದಿದ್ದ ಅಮೇರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌

ಈ ಹಿಂದೆ ಅಮೇರಿಕಾದ ಅಧ್ಯಕ್ಷರಾಗಿದ್ದ ಡೊನಾಲ್ಡ್‌ ಟ್ರಂಪ್‌ ಕೂಡ ಮೋನೋಕ್ಲೋನಲ್‌ ವಿಧಾನದಲ್ಲಿಯೇ ಚಿಕಿತ್ಸೆ ಪಡೆದಿದ್ದರು. ಆ ನಂತರ ಜಗತ್ತಿನ ಅನೇಕ ದೇಶಗಳಲ್ಲಿ ಈ ಆಂಟಿಬಡಿ ಕಾಕ್ಟೇಲ್ ಚಿಕಿತ್ಸಾ ವಿಧಾನವನ್ನು ಅನುಸರಿಸಲಾಗಿತ್ತು. ಭಾರತದ ಡೆಲ್ಟಾ ವೇರಿಯೆಂಟ್‌ಗೆ ಇದುವರೆಗೆ ಈ ಮಾದರಿಯ ಚಿಕಿತ್ಸಾ ವಿಧಾನವನ್ನು ಅನುಸರಿಸಿರಲಿಲ್ಲ. ಕಾಕ್ಟೇಲ್ ಚಿಕಿತ್ಸಾ ವಿಧಾನದಿಂದ ಮೈಲ್ಡ್‌ ಹಾಗೂ ಸಾಧಾರಣವಾದ ಸೋಂಕಿನ ಲಕ್ಷಣ ಹೊಂದಿರುವ ಕೊರೋನಾ ಸೋಂಕಿತರಿಗೆ  1 ರಿಂದ 2 ದಿನಗಳಲ್ಲಿ  ಕೊರೋನಾ ಸಂಬಂಧಿ ಸಮಸ್ಯೆಯನ್ನು ವಾಸಿ ಮಾಡಬಹುದು ಎಂದು ಸಂಸ್ಥೆಯ ವೈದ್ಯರು ತಿಳಿಸಿದ್ದಾರೆ.

ಆಂಟಿಬಡಿ ಕೊಕ್‌ಟೇಲ್‌ ವಿಧಾನದಲ್ಲಿ ಕ್ಯಾಸಿರಿವಿಮಾಬ್‌ ಮತ್ತು ಇಂಡಿವಿಮ್ಯಾಬ್‌ ಔಷಧಗಳನ್ನು ಸಮ್ಮಿಶ್ರಣ ಮಾಡಿ ಮೋನೋಕ್ಲೋನಲ್‌ ಎಂಟಿಬಡಿ ಥೆರಪಿ  ಚಿಕಿತ್ಸೆಯನ್ನು ನೀಡಲಾಗುತ್ತದೆ. ಈ ಚಿಕಿತ್ಸೆಯ ಔಷಧಿಗಳ ಬೆಲೆ ಸರಿ ಸುಮಾರು 70000 ರೂಪಾಯಿಗಳಷ್ಟಾಗುತ್ತದೆ. ಅಮೇರಿಕಾದಲ್ಲಿ ಆಂಟಿ ಬಡಿ ಚಿಕಿತ್ಸೆಯ  ಖರ್ಚು ಸುಮಾರು 20000 ಡಾಲರ್‌ಗಳಷ್ಟಾಗುತ್ತದೆ. ಚಿಕಿತ್ಸೆ ವೆಚ್ಚ ದುಬಾರಿಯಾಗಿದ್ದರೂ ಜಗತ್ತಿನ ಅನೇಕ ಕಡೆ ಈ ವಿಧಾನಕ್ಕೆ ಬೇಡಿಕೆಗಳು ಹೆಚ್ಚಿವೆ. ಆದರೆ ಇದನ್ನು ಎಲ್ಲರಿಗೂ ಕೊಡಲು ಸಾಧ್ಯವಿಲ್ಲ. ಚಿಕಿತ್ಸಾ ವಿಧಾನವನ್ನು ಅತಿಯಾಗಿ ಬಳಸುವುದರಿಂದ ಇನ್ನಷ್ಟು ಹೆಚ್ಚು ಪ್ರಭಾವಶಾಲಿ ಕೊರೋನಾ ರೂಪಾಂತರಿ ತಳಿಗಳು ಹುಟ್ಟಿಕೊಳ್ಳುವ ಸಾಧ್ಯತೆ ಕೂಡ ಇರುತ್ತದೆ ಎಂದು ಡಾ. ನಾಗೇಶ್ವರ್‌ ರೆಡ್ಡಿ ತಿಳಿಸಿದ್ದಾರೆ. ಆಂಟಿ ಬಡಿ ಕಾಕ್ಟೇಲ್ ವಿಧಾನದಲ್ಲಿ ಚಿಕಿತ್ಸೆ ಪಡೆದ ರೋಗಿಗಳಿಗೆ 3 ತಿಂಗಳ ವರೆಗೆ ಕೊರೋನಾ ವ್ಯಾಕ್ಸೀನ್‌ ಪಡೆಯದಂತೆ ಸೂಚಿಸಲಾಗಿದೆ ಎಂದು ಡಾ ರೆಡ್ಡಿ ಹೇಳುತ್ತಾರೆ.

ಇದನ್ನೂ ಓದಿ : ಕೊರೋನಾಗೆ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡು ಅನಾಥವಾದ ರಾಜ್ಯದ 42 ಮಕ್ಕಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...