Homeಮುಖಪುಟಕೋವಿಡ್‌ ಸೋಂಕಿತರಿಗೆ ಆಂಟಿಬಡಿ ಕಾಕ್ಟೇಲ್ ಟ್ರೀಟ್‌ಮೆಂಟ್

ಕೋವಿಡ್‌ ಸೋಂಕಿತರಿಗೆ ಆಂಟಿಬಡಿ ಕಾಕ್ಟೇಲ್ ಟ್ರೀಟ್‌ಮೆಂಟ್

- Advertisement -
- Advertisement -

ಕೊರೋನಾ ಸೋಂಕಿಗೆ ಬೇರೆ ಬೇರೆ ಚಿಕಿತ್ಸಾ ವಿಧಾನಗಳನ್ನು ಜಗತ್ತಿನ ಬೇರೆ ಬೇರೆ ರಾಷ್ಟ್ರಗಳಲ್ಲಿನ ವೈದ್ಯರು ಕಂಡುಕೊಂಡಿದ್ದಾರೆ. ಅಂತಹ ಒಂದು ವಿಧಾನಗಳಲ್ಲಿ ಪ್ಲಾಸ್ಮಾ ಕೂಡ ಒಂದು. ಪ್ಲಾಸ್ಮಾ ಚಿಕಿತ್ಸೆ ಸಾಕಷ್ಟು ಯಶಸ್ವಿಯಾಗದ ನಂತರ ಮೇಲೆ ಈಗ ಮತ್ತೆ ಹೊಸ ಹೊಸ ಚಿಕಿತ್ಸಾ ವಿಧಾನಗಳು ಹುಟ್ಟಿಕೊಳ್ಳುತ್ತಿವೆ. ಅದರಲ್ಲಿ ಹೈದ್ರಾಬಾದಿನ ವೈದ್ಯರ ಆಂಟಿಬಡಿ ಕಾಕ್ಟೇಲ್ ಟ್ರೀಟ್‌ಮೆಂಟ್‌ ಕೂಡ ಒಂದು..

ಹೈದ್ರಾಬಾದಿನ ಏಷಿಯನ್‌ ಇನ್ಸ್‌ಟಿಟ್ಯೂಟ್‌ ಆಫ್‌ ಗ್ಯಾಸ್ಟ್ರೋಂಟರಲಜಿಯ ವಿಜ್ಞಾನಿಗಳು ಈ ಚಿಕಿತ್ಸಾ ವಿಧಾನವನ್ನು ಕಂಡು ಹಿಡಿದಿದ್ದಾರೆ. ಈ ಚಿಕಿತ್ಸಾ ವಿಧಾನವು ಭಾರತದ ಡೆಲ್ಟಾ ರೂಪಾತಂರಿ ವೈರಸ್‌ ಸೋಂಕಿಗೆ ಅತ್ಯಂತ ಪರಿಣಾಮಕಾರಿ ಚಿಕಿತ್ಸೆಯಾಗಲಿದೆ ಎನ್ನಲಾಗಿದೆ. ಸುಮಾರು 40 ಜನ ಕೊರೋನಾ ಸೋಂಕಿತರಿಗೆ ಒಂದು ಡೋಸ್‌ ನಷ್ಟು ಆಂಟಿಬಡಿಗಳನ್ನೊಳಗೊಂಡ ಕಾಕ್ಟೇಲ್ ಔಷಧಿಯನ್ನು ನೀಡಿದ್ದಾರೆ. ಈ ಕಾಕ್ಟೇಲ್ ಸಮಿಶ್ರಣಗಳ ಪರಿಣಾಮವಾಗಿ ಸೋಂಕಿತರಲ್ಲಿ ಕೋವಿಡ್‌ ಲಕ್ಷಣಗಳು ವಾಸಿಯಾಗಿವೆ.  ಔಷಧಿಯನ್ನು ನೀಡಿದ 24 ಗಂಟೆಗಳಲ್ಲಿ ಸೋಂಕಿತರಲ್ಲಿನ ಜ್ವರ, ಮತ್ತು ಇತರ ಸಮಸ್ಯೆಗಳು ವಾಸಿಯಾಗಿವೆ ಎಂದು ಇನ್ಸ್ಟಿಟ್ಯೂಟ್‌ ಅಧ್ಯಕ್ಷ ಡಾ. ನಾಗೇಶ್ವರ ರೆಡ್ಡಿ ತಿಳಿಸಿದ್ದಾರೆ.

ಅಮೇರಿಕಾದಲ್ಲಿ ನಡೆದ ಅಧ್ಯಯನಗಳು ಕಾಕ್ಟೇಲ್ ಚಿಕಿತ್ಸಾ ವಿಧಾನವು ಬ್ರಿಟನ್‌ ಮತ್ತು ದಕ್ಷಿಣ ಆಫ್ರಿಕಾ ಮೂಲದ ಕೊರೊನಾ ರೂಪಾಂತರ ತಳಿಯ ಚಿಕಿತ್ಸೆಗೂ ಪರಿಣಾಮ ಬೀರಿವೆ ಎಂಬುದನ್ನು ತೋರಿಸಿವೆ.

ಮೋನೋಕ್ಲೋನಲ್‌ ಆಂಟಿಬಡಿ ಚಿಕಿತ್ಸೆ ಪಡೆದ 40 ಜನ ಸೋಂಕಿತರನ್ನು ನಾವು 1 ವಾರ ಬಿಟ್ಟು ಮತ್ತೆ ಪರೀಕ್ಷೆ ಮಾಡಿದ್ದೇವೆ. ಆರ್‌ಟಿಪಿಸಿಆರ್‌ ವಿಧಾನದಲ್ಲೂ ಪರೀಕ್ಷೆ ಮಾಡಿದ್ದೇವೆ. ಯಾರಲ್ಲೂ ಮತ್ತೆ ಸೋಂಕು ಕಾಣಿಸಿಕೊಂಡಿಲ್ಲ. ಎಲ್ಲರೂ ವಾಸಿಯಾಗಿದ್ದಾರೆ ಎಂದು ಡಾ. ನಾಗೇಶ್ವರ್‌ ರೆಡ್ಡಿ ಹೇಳುತ್ತಾರೆ.

ಇದನ್ನೂ ಓದಿ : ಕೊರೊನಾ ನಿರ್ಬಂಧಗಳನ್ನು ಮತ್ತಷ್ಟು ಸಡಿಲಿಸಿದ ದೆಹಲಿ ಸರ್ಕಾರ

ಮೋನೋಕ್ಲೋನಲ್‌ ವಿಧಾನದಲ್ಲಿ ಕೊರೋನಾ ಚಿಕಿತ್ಸೆ ಪಡೆದಿದ್ದ ಅಮೇರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌

ಈ ಹಿಂದೆ ಅಮೇರಿಕಾದ ಅಧ್ಯಕ್ಷರಾಗಿದ್ದ ಡೊನಾಲ್ಡ್‌ ಟ್ರಂಪ್‌ ಕೂಡ ಮೋನೋಕ್ಲೋನಲ್‌ ವಿಧಾನದಲ್ಲಿಯೇ ಚಿಕಿತ್ಸೆ ಪಡೆದಿದ್ದರು. ಆ ನಂತರ ಜಗತ್ತಿನ ಅನೇಕ ದೇಶಗಳಲ್ಲಿ ಈ ಆಂಟಿಬಡಿ ಕಾಕ್ಟೇಲ್ ಚಿಕಿತ್ಸಾ ವಿಧಾನವನ್ನು ಅನುಸರಿಸಲಾಗಿತ್ತು. ಭಾರತದ ಡೆಲ್ಟಾ ವೇರಿಯೆಂಟ್‌ಗೆ ಇದುವರೆಗೆ ಈ ಮಾದರಿಯ ಚಿಕಿತ್ಸಾ ವಿಧಾನವನ್ನು ಅನುಸರಿಸಿರಲಿಲ್ಲ. ಕಾಕ್ಟೇಲ್ ಚಿಕಿತ್ಸಾ ವಿಧಾನದಿಂದ ಮೈಲ್ಡ್‌ ಹಾಗೂ ಸಾಧಾರಣವಾದ ಸೋಂಕಿನ ಲಕ್ಷಣ ಹೊಂದಿರುವ ಕೊರೋನಾ ಸೋಂಕಿತರಿಗೆ  1 ರಿಂದ 2 ದಿನಗಳಲ್ಲಿ  ಕೊರೋನಾ ಸಂಬಂಧಿ ಸಮಸ್ಯೆಯನ್ನು ವಾಸಿ ಮಾಡಬಹುದು ಎಂದು ಸಂಸ್ಥೆಯ ವೈದ್ಯರು ತಿಳಿಸಿದ್ದಾರೆ.

ಆಂಟಿಬಡಿ ಕೊಕ್‌ಟೇಲ್‌ ವಿಧಾನದಲ್ಲಿ ಕ್ಯಾಸಿರಿವಿಮಾಬ್‌ ಮತ್ತು ಇಂಡಿವಿಮ್ಯಾಬ್‌ ಔಷಧಗಳನ್ನು ಸಮ್ಮಿಶ್ರಣ ಮಾಡಿ ಮೋನೋಕ್ಲೋನಲ್‌ ಎಂಟಿಬಡಿ ಥೆರಪಿ  ಚಿಕಿತ್ಸೆಯನ್ನು ನೀಡಲಾಗುತ್ತದೆ. ಈ ಚಿಕಿತ್ಸೆಯ ಔಷಧಿಗಳ ಬೆಲೆ ಸರಿ ಸುಮಾರು 70000 ರೂಪಾಯಿಗಳಷ್ಟಾಗುತ್ತದೆ. ಅಮೇರಿಕಾದಲ್ಲಿ ಆಂಟಿ ಬಡಿ ಚಿಕಿತ್ಸೆಯ  ಖರ್ಚು ಸುಮಾರು 20000 ಡಾಲರ್‌ಗಳಷ್ಟಾಗುತ್ತದೆ. ಚಿಕಿತ್ಸೆ ವೆಚ್ಚ ದುಬಾರಿಯಾಗಿದ್ದರೂ ಜಗತ್ತಿನ ಅನೇಕ ಕಡೆ ಈ ವಿಧಾನಕ್ಕೆ ಬೇಡಿಕೆಗಳು ಹೆಚ್ಚಿವೆ. ಆದರೆ ಇದನ್ನು ಎಲ್ಲರಿಗೂ ಕೊಡಲು ಸಾಧ್ಯವಿಲ್ಲ. ಚಿಕಿತ್ಸಾ ವಿಧಾನವನ್ನು ಅತಿಯಾಗಿ ಬಳಸುವುದರಿಂದ ಇನ್ನಷ್ಟು ಹೆಚ್ಚು ಪ್ರಭಾವಶಾಲಿ ಕೊರೋನಾ ರೂಪಾಂತರಿ ತಳಿಗಳು ಹುಟ್ಟಿಕೊಳ್ಳುವ ಸಾಧ್ಯತೆ ಕೂಡ ಇರುತ್ತದೆ ಎಂದು ಡಾ. ನಾಗೇಶ್ವರ್‌ ರೆಡ್ಡಿ ತಿಳಿಸಿದ್ದಾರೆ. ಆಂಟಿ ಬಡಿ ಕಾಕ್ಟೇಲ್ ವಿಧಾನದಲ್ಲಿ ಚಿಕಿತ್ಸೆ ಪಡೆದ ರೋಗಿಗಳಿಗೆ 3 ತಿಂಗಳ ವರೆಗೆ ಕೊರೋನಾ ವ್ಯಾಕ್ಸೀನ್‌ ಪಡೆಯದಂತೆ ಸೂಚಿಸಲಾಗಿದೆ ಎಂದು ಡಾ ರೆಡ್ಡಿ ಹೇಳುತ್ತಾರೆ.

ಇದನ್ನೂ ಓದಿ : ಕೊರೋನಾಗೆ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡು ಅನಾಥವಾದ ರಾಜ್ಯದ 42 ಮಕ್ಕಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...