Homeಮುಖಪುಟಪೆಟ್ರೋಲ್-ಡಿಸೇಲ್ GST ವ್ಯಾಪ್ತಿಗೆ ಚರ್ಚೆ: ಬಿಜೆಪಿ-ಕಾಂಗ್ರೆಸ್ ವಿರುದ್ಧ ಎಚ್.ಡಿ ಕುಮಾರಸ್ವಾಮಿ ವಾಗ್ದಾಳಿ

ಪೆಟ್ರೋಲ್-ಡಿಸೇಲ್ GST ವ್ಯಾಪ್ತಿಗೆ ಚರ್ಚೆ: ಬಿಜೆಪಿ-ಕಾಂಗ್ರೆಸ್ ವಿರುದ್ಧ ಎಚ್.ಡಿ ಕುಮಾರಸ್ವಾಮಿ ವಾಗ್ದಾಳಿ

- Advertisement -
- Advertisement -

ದೇಶದ ಹಲವು ರಾಜ್ಯಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ 100 ರೂ ದಾಟಿ ಮುನ್ನುಗ್ಗುತ್ತಿದೆ. ಇದರಿಂದ ಉಳಿದ ದಿನಬಳಕೆಯ ವಸ್ತುಗಳ ಬೆಲೆಯಲ್ಲಿ ದಿಢೀರ್ ಏರಿಕೆಯಾಗುತ್ತಿದೆ. ಹೀಗಾಗಿ ಕೇಂದ್ರ ಸರ್ಕಾರ ಇಂಧನ ಬೆಲೆ ಮೇಲಿನ ತೆರಿಗೆ ಇಳಿಸುವ ಮೂಲಕ ಬೆಲೆ ನಿಯಂತ್ರಣ ಮಾಡಲು ಜನಸಾಮಾನ್ಯರು ಒತ್ತಾಯಿಸುತ್ತಿದ್ದಾರೆ. ಪ್ರತಿಪಕ್ಷ ಕಾಂಗ್ರೆಸ್ ದೇಶಾದ್ಯಂತ ಹೋರಾಟಕ್ಕಿಳಿದಿದೆ. ಈ ಸಂದರ್ಭದಲ್ಲಿ ಪೆಟ್ರೋಲ್ – ಡೀಸೆಲ್ ಬೆಲೆಗಳನ್ನು GST ವ್ಯಾಪ್ತಿಗೆ ತರಬೇಕೆಂಬ ಬೇಡಿಕೆಯೂ ಕೇಳಿಬಂದಿದ್ದು, ಇದಕ್ಕೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

‘ಪೆಟ್ರೋಲ್ 100 ನಾಟ್‌ಔಟ್’ ಘೋಷಣೆ ಹೆಸರಿನಲ್ಲಿ ಕಾಂಗ್ರೆಸ್ ಪಕ್ಷವು ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ, ಮಾಜಿ ಸಿಎಂ ವೀರಪ್ಪ ಮೊಯ್ಲಿ “ಅತಾರ್ಕಿಕವಾಗಿ ಬೆಲೆ ಏರಿಕೆಗೆ ಕೇಂದ್ರ ಸರ್ಕಾರವೇ ಜವಾಬ್ದಾರಿಯಾಗಿದೆ. ಹಾಗಾಗಿ ಪೆಟ್ರೋಲ್ – ಡೀಸೆಲ್ ಬೆಲೆಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರಬೇಕೆಂದು ಒತ್ತಾಯಿಸುತ್ತೇನೆ” ಎಂದಿದ್ದಾರೆ.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಎಚ್.ಡಿ ಕುಮಾರಸ್ವಾಮಿಯವರು, “ಕೇಂದ್ರ ಸರ್ಕಾರ ಪೆಟ್ರೋಲ್‌ ಬೆಲೆ ಏರಿಸುತ್ತಿದೆ. ಇತ್ತ ಕಾಂಗ್ರೆಸ್‌ ದೇಶದಾದ್ಯಂತ ಹೋರಾಡುತ್ತಿದೆ. ಪೆಟ್ರೋಲ್‌ ಬೆಲೆ ಇಳಿಯಬೇಕಿದ್ದರೆ ಅದನ್ನು GSTಗೆ ಸೇರಿಸಬೇಕೆಂದು ಕೇಂದ್ರ ಹೇಳಿದರೆ, ಕಾಂಗ್ರೆಸ್‌ ಕೂಡ ಅದನ್ನೇ ಪ್ರತಿಪಾದಿಸಿದೆ. ಹಾಗಾದರೆ, ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು GSTಗೆ ಸೇರಿಸಲೋ? ಎಂದು ಪ್ರಶ್ನಿಸಿದ್ದಾರೆ.

ಪೆಟ್ರೋಲ್‌ ಬೆಲೆ ಏರಿಕೆ ವಿರುದ್ಧದ ಹೋರಾಟಗಳು ತೆರಿಗೆ, ಸುಂಕ ಇಳಿಕೆಯ ಉದ್ದೇಶದ್ದಾಗಿರಬೇಕೇ ವಿನಾ GSTಗೆ ಸೇರಿಸುವುದಾಗಿರಬಾರದು. ಈಗ ಕಾಂಗ್ರೆಸ್‌ ಪ್ರತಿಭಟಿಸುತ್ತಿರುವುದು ತೆರಿಗೆ ಇಳಿಸಲೋ ಅಥವಾ ಪೆಟ್ರೋಲನ್ನು GSTಗೆ ಸೇರಿಸಲೋ ಎಂಬುದು ಸ್ಪಷ್ಟವಾಗಬೇಕು. GSTಗೆ ಸೇರಿಸುವುದೇ ಕಾಂಗ್ರೆಸ್‌ ಉದ್ದೇಶವಾಗಿದ್ದರೆ ಅದು ಶೋಷಣೆ ಪರವಾದ ಹೋರಾಟ. ಕೇಂದ್ರದ ಅಧಿಕಾರದ ಮೇಲೆ ಕಣ್ಣಿಟ್ಟು ಅದರ ಸುತ್ತಲೇ ರಾಜಕಾರಣ ಮಾಡುವುದಷ್ಟೇ ರಾಷ್ಟ್ರೀಯ ಪಕ್ಷಗಳ ಅಜೆಂಡಾ. ಅವುಗಳಿಗೆ ರಾಜ್ಯಗಳ ಹಿತಾಸಕ್ತಿ, ಸ್ಥಳೀಯ ಅಗತ್ಯಗಳು ಲೆಕ್ಕಕ್ಕೇ ಇಲ್ಲ. ಪೆಟ್ರೋಲ್‌ ಅನ್ನು GSTಗೆ ಸೇರಿಸುವುದು ರಾಜ್ಯಗಳನ್ನು ಶೋಷಿಸಿದಂತೆ. ಈಗ ಕಾಂಗ್ರೆಸ್‌–ಬಿಜೆಪಿಗಳೆರಡೂ ಆ ಶೋಷಣೆ ಪರವಾಗಿ ನಿಂತಿವೆ ಎಂಬುದು ಬಹಿರಂಗವಾಗಿದೆ ಎಂದು ಅವರು ಕಿಡಿಕಾರಿದ್ದಾರೆ.

ಪೆಟ್ರೋಲ್‌ ಅನ್ನು GSTಗೆ ತಂದರೆ ಜನರಿಗೆ ತಕ್ಷಣಕ್ಕೆ ಬೆಲೆ ಇಳಿದಂತೆ ಅನ್ನಿಸಬಹುದು. ಆದರೆ, ಪೆಟ್ರೋಲನ್ನು GSTಗೆ ಸೇರಿಸುತ್ತಲೇ ಅದರ ಮೇಲಿನ ತೆರಿಗೆಯಿಂದ ಬರುತ್ತಿದ್ದ ಸಂಪನ್ಮೂಲ ರಾಜ್ಯಗಳ ಕೈತಪ್ಪಿ ಹೋಗುತ್ತದೆ. ಎಲ್ಲ ತೆರಿಗೆಯೂ ಕೇಂದ್ರದ ಪಾಲಾಗಿ ರಾಜ್ಯಗಳು ಸಂಪನ್ಮೂಲ ಬರ ಎದುರಿಸುತ್ತವೆ. ರಾಜ್ಯಗಳ ಅಭಿವೃದ್ಧಿಗೆ ಪೆಟ್ಟು ಬೀಳುತ್ತದೆ.

ತೈಲ ಬೆಲೆ ಇಳಿಸುವ ಉದ್ದೇಶದೊಂದಿಗೆ ಪೆಟ್ರೋಲನ್ನು GSTಗೆ ಸೇರಿಸುವುದು ಪರಿಹಾರವಲ್ಲ. ಅದು ಶೋಷಣೆ. ಬದಲಿಗೆ ಕೇಂದ್ರ ಈಗ ವಿಧಿಸುತ್ತಿರುವ ಮಿತಿಮೀರಿದ ಸುಂಕ ಕಡಿತ ಮಾಡಲಿ. ರಾಜ್ಯ ಸರ್ಕಾರವೂ ತೆರಿಗೆ ಇಳಿಸಲಿ. ಈಗ ತೈಲದ ಮೇಲೆ ಕೇಂದ್ರ, ರಾಜ್ಯಗಳೆರಡೂ ಶೇ. 68ರಷ್ಟು ತೆರಿಗೆ ವಿಧಿಸುತ್ತಿವೆ. ಈ ತೆರಿಗೆ ಪ್ರಮಾಣ ಕಡಿಮೆಯಾಗಬೇಕಾದ್ದು ಅಗತ್ಯ. ಅಂದರೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಈಗ ಒಂದು ಲೀಟರ್‌ ಪೆಟ್ರೋಲ್‌ ಮೇಲೆ ₹60–65 ತೆರಿಗೆ ಹಣ ಸಿಗುತ್ತಿದೆ. ಆದರೆ, ಎರಡೂ ಸರ್ಕಾರಗಳೂ ಲೀಟರ್‌ ಪೆಟ್ರೋಲ್‌ ಮೇಲೆ ಸಂಗ್ರಹಿಸುವ ಹಣ ₹30 ಮೀರಬಾರದು. ಆಗ ಪೆಟ್ರೋಲ್‌ ₹65–70ಗೆ ಬಂದು ನಿಲ್ಲಲಿದೆ. ನಿಜವಾಗಿಯೂ ಆಗಬೇಕಾದ್ದು ಇದು. ಈ ನಿಟ್ಟಿನಲ್ಲಿ ನಾವೆಲ್ಲರೂ ಹೋರಾಡಬೇಕಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಪೆಟ್ರೋಲ್‌ ಮೇಲೆ ಕೇಂದ್ರ, ರಾಜ್ಯ ಸರ್ಕಾರಗಳೆರಡು ವಿಧಿಸುತ್ತಿರುವ ಅತ್ಯಧಿಕ ತೆರಿಗೆ ಇಳಿಸುವ ಮೂಲಕ ಬೆಲೆ ಏರಿಕೆ ತಗ್ಗಿಸಬೇಕು ಎಂಬುದು JDS ಒತ್ತಾಯ. ಜತೆಗೆ ಪೆಟ್ರೋಲನ್ನು GSTಗೆ ಸೇರಿಸುವ ರಾಷ್ಟ್ರೀಯ ಪಕ್ಷಗಳ ಹುನ್ನಾರದ ವಿರುದ್ಧ ಹೋರಾಡುವುದೂ ನಮ್ಮ ನಿಲುವು. ಇದರ ಸುತ್ತಲೇ ನಾವು ಹೋರಾಟ, ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ದಾಖಲೆ ಬರೆದ ಪೆಟ್ರೋಲ್, ಡೀಸೆಲ್ ಬೆಲೆಗಳು: ಮುಂಬೈನಲ್ಲಿ ಸೆಂಚುರಿ ಬಾರಿಸಿದ ಪೆಟ್ರೋಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...