Homeಮುಖಪುಟಪೆಟ್ರೋಲ್-ಡಿಸೇಲ್ GST ವ್ಯಾಪ್ತಿಗೆ ಚರ್ಚೆ: ಬಿಜೆಪಿ-ಕಾಂಗ್ರೆಸ್ ವಿರುದ್ಧ ಎಚ್.ಡಿ ಕುಮಾರಸ್ವಾಮಿ ವಾಗ್ದಾಳಿ

ಪೆಟ್ರೋಲ್-ಡಿಸೇಲ್ GST ವ್ಯಾಪ್ತಿಗೆ ಚರ್ಚೆ: ಬಿಜೆಪಿ-ಕಾಂಗ್ರೆಸ್ ವಿರುದ್ಧ ಎಚ್.ಡಿ ಕುಮಾರಸ್ವಾಮಿ ವಾಗ್ದಾಳಿ

- Advertisement -
- Advertisement -

ದೇಶದ ಹಲವು ರಾಜ್ಯಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ 100 ರೂ ದಾಟಿ ಮುನ್ನುಗ್ಗುತ್ತಿದೆ. ಇದರಿಂದ ಉಳಿದ ದಿನಬಳಕೆಯ ವಸ್ತುಗಳ ಬೆಲೆಯಲ್ಲಿ ದಿಢೀರ್ ಏರಿಕೆಯಾಗುತ್ತಿದೆ. ಹೀಗಾಗಿ ಕೇಂದ್ರ ಸರ್ಕಾರ ಇಂಧನ ಬೆಲೆ ಮೇಲಿನ ತೆರಿಗೆ ಇಳಿಸುವ ಮೂಲಕ ಬೆಲೆ ನಿಯಂತ್ರಣ ಮಾಡಲು ಜನಸಾಮಾನ್ಯರು ಒತ್ತಾಯಿಸುತ್ತಿದ್ದಾರೆ. ಪ್ರತಿಪಕ್ಷ ಕಾಂಗ್ರೆಸ್ ದೇಶಾದ್ಯಂತ ಹೋರಾಟಕ್ಕಿಳಿದಿದೆ. ಈ ಸಂದರ್ಭದಲ್ಲಿ ಪೆಟ್ರೋಲ್ – ಡೀಸೆಲ್ ಬೆಲೆಗಳನ್ನು GST ವ್ಯಾಪ್ತಿಗೆ ತರಬೇಕೆಂಬ ಬೇಡಿಕೆಯೂ ಕೇಳಿಬಂದಿದ್ದು, ಇದಕ್ಕೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

‘ಪೆಟ್ರೋಲ್ 100 ನಾಟ್‌ಔಟ್’ ಘೋಷಣೆ ಹೆಸರಿನಲ್ಲಿ ಕಾಂಗ್ರೆಸ್ ಪಕ್ಷವು ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ, ಮಾಜಿ ಸಿಎಂ ವೀರಪ್ಪ ಮೊಯ್ಲಿ “ಅತಾರ್ಕಿಕವಾಗಿ ಬೆಲೆ ಏರಿಕೆಗೆ ಕೇಂದ್ರ ಸರ್ಕಾರವೇ ಜವಾಬ್ದಾರಿಯಾಗಿದೆ. ಹಾಗಾಗಿ ಪೆಟ್ರೋಲ್ – ಡೀಸೆಲ್ ಬೆಲೆಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರಬೇಕೆಂದು ಒತ್ತಾಯಿಸುತ್ತೇನೆ” ಎಂದಿದ್ದಾರೆ.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಎಚ್.ಡಿ ಕುಮಾರಸ್ವಾಮಿಯವರು, “ಕೇಂದ್ರ ಸರ್ಕಾರ ಪೆಟ್ರೋಲ್‌ ಬೆಲೆ ಏರಿಸುತ್ತಿದೆ. ಇತ್ತ ಕಾಂಗ್ರೆಸ್‌ ದೇಶದಾದ್ಯಂತ ಹೋರಾಡುತ್ತಿದೆ. ಪೆಟ್ರೋಲ್‌ ಬೆಲೆ ಇಳಿಯಬೇಕಿದ್ದರೆ ಅದನ್ನು GSTಗೆ ಸೇರಿಸಬೇಕೆಂದು ಕೇಂದ್ರ ಹೇಳಿದರೆ, ಕಾಂಗ್ರೆಸ್‌ ಕೂಡ ಅದನ್ನೇ ಪ್ರತಿಪಾದಿಸಿದೆ. ಹಾಗಾದರೆ, ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು GSTಗೆ ಸೇರಿಸಲೋ? ಎಂದು ಪ್ರಶ್ನಿಸಿದ್ದಾರೆ.

ಪೆಟ್ರೋಲ್‌ ಬೆಲೆ ಏರಿಕೆ ವಿರುದ್ಧದ ಹೋರಾಟಗಳು ತೆರಿಗೆ, ಸುಂಕ ಇಳಿಕೆಯ ಉದ್ದೇಶದ್ದಾಗಿರಬೇಕೇ ವಿನಾ GSTಗೆ ಸೇರಿಸುವುದಾಗಿರಬಾರದು. ಈಗ ಕಾಂಗ್ರೆಸ್‌ ಪ್ರತಿಭಟಿಸುತ್ತಿರುವುದು ತೆರಿಗೆ ಇಳಿಸಲೋ ಅಥವಾ ಪೆಟ್ರೋಲನ್ನು GSTಗೆ ಸೇರಿಸಲೋ ಎಂಬುದು ಸ್ಪಷ್ಟವಾಗಬೇಕು. GSTಗೆ ಸೇರಿಸುವುದೇ ಕಾಂಗ್ರೆಸ್‌ ಉದ್ದೇಶವಾಗಿದ್ದರೆ ಅದು ಶೋಷಣೆ ಪರವಾದ ಹೋರಾಟ. ಕೇಂದ್ರದ ಅಧಿಕಾರದ ಮೇಲೆ ಕಣ್ಣಿಟ್ಟು ಅದರ ಸುತ್ತಲೇ ರಾಜಕಾರಣ ಮಾಡುವುದಷ್ಟೇ ರಾಷ್ಟ್ರೀಯ ಪಕ್ಷಗಳ ಅಜೆಂಡಾ. ಅವುಗಳಿಗೆ ರಾಜ್ಯಗಳ ಹಿತಾಸಕ್ತಿ, ಸ್ಥಳೀಯ ಅಗತ್ಯಗಳು ಲೆಕ್ಕಕ್ಕೇ ಇಲ್ಲ. ಪೆಟ್ರೋಲ್‌ ಅನ್ನು GSTಗೆ ಸೇರಿಸುವುದು ರಾಜ್ಯಗಳನ್ನು ಶೋಷಿಸಿದಂತೆ. ಈಗ ಕಾಂಗ್ರೆಸ್‌–ಬಿಜೆಪಿಗಳೆರಡೂ ಆ ಶೋಷಣೆ ಪರವಾಗಿ ನಿಂತಿವೆ ಎಂಬುದು ಬಹಿರಂಗವಾಗಿದೆ ಎಂದು ಅವರು ಕಿಡಿಕಾರಿದ್ದಾರೆ.

ಪೆಟ್ರೋಲ್‌ ಅನ್ನು GSTಗೆ ತಂದರೆ ಜನರಿಗೆ ತಕ್ಷಣಕ್ಕೆ ಬೆಲೆ ಇಳಿದಂತೆ ಅನ್ನಿಸಬಹುದು. ಆದರೆ, ಪೆಟ್ರೋಲನ್ನು GSTಗೆ ಸೇರಿಸುತ್ತಲೇ ಅದರ ಮೇಲಿನ ತೆರಿಗೆಯಿಂದ ಬರುತ್ತಿದ್ದ ಸಂಪನ್ಮೂಲ ರಾಜ್ಯಗಳ ಕೈತಪ್ಪಿ ಹೋಗುತ್ತದೆ. ಎಲ್ಲ ತೆರಿಗೆಯೂ ಕೇಂದ್ರದ ಪಾಲಾಗಿ ರಾಜ್ಯಗಳು ಸಂಪನ್ಮೂಲ ಬರ ಎದುರಿಸುತ್ತವೆ. ರಾಜ್ಯಗಳ ಅಭಿವೃದ್ಧಿಗೆ ಪೆಟ್ಟು ಬೀಳುತ್ತದೆ.

ತೈಲ ಬೆಲೆ ಇಳಿಸುವ ಉದ್ದೇಶದೊಂದಿಗೆ ಪೆಟ್ರೋಲನ್ನು GSTಗೆ ಸೇರಿಸುವುದು ಪರಿಹಾರವಲ್ಲ. ಅದು ಶೋಷಣೆ. ಬದಲಿಗೆ ಕೇಂದ್ರ ಈಗ ವಿಧಿಸುತ್ತಿರುವ ಮಿತಿಮೀರಿದ ಸುಂಕ ಕಡಿತ ಮಾಡಲಿ. ರಾಜ್ಯ ಸರ್ಕಾರವೂ ತೆರಿಗೆ ಇಳಿಸಲಿ. ಈಗ ತೈಲದ ಮೇಲೆ ಕೇಂದ್ರ, ರಾಜ್ಯಗಳೆರಡೂ ಶೇ. 68ರಷ್ಟು ತೆರಿಗೆ ವಿಧಿಸುತ್ತಿವೆ. ಈ ತೆರಿಗೆ ಪ್ರಮಾಣ ಕಡಿಮೆಯಾಗಬೇಕಾದ್ದು ಅಗತ್ಯ. ಅಂದರೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಈಗ ಒಂದು ಲೀಟರ್‌ ಪೆಟ್ರೋಲ್‌ ಮೇಲೆ ₹60–65 ತೆರಿಗೆ ಹಣ ಸಿಗುತ್ತಿದೆ. ಆದರೆ, ಎರಡೂ ಸರ್ಕಾರಗಳೂ ಲೀಟರ್‌ ಪೆಟ್ರೋಲ್‌ ಮೇಲೆ ಸಂಗ್ರಹಿಸುವ ಹಣ ₹30 ಮೀರಬಾರದು. ಆಗ ಪೆಟ್ರೋಲ್‌ ₹65–70ಗೆ ಬಂದು ನಿಲ್ಲಲಿದೆ. ನಿಜವಾಗಿಯೂ ಆಗಬೇಕಾದ್ದು ಇದು. ಈ ನಿಟ್ಟಿನಲ್ಲಿ ನಾವೆಲ್ಲರೂ ಹೋರಾಡಬೇಕಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಪೆಟ್ರೋಲ್‌ ಮೇಲೆ ಕೇಂದ್ರ, ರಾಜ್ಯ ಸರ್ಕಾರಗಳೆರಡು ವಿಧಿಸುತ್ತಿರುವ ಅತ್ಯಧಿಕ ತೆರಿಗೆ ಇಳಿಸುವ ಮೂಲಕ ಬೆಲೆ ಏರಿಕೆ ತಗ್ಗಿಸಬೇಕು ಎಂಬುದು JDS ಒತ್ತಾಯ. ಜತೆಗೆ ಪೆಟ್ರೋಲನ್ನು GSTಗೆ ಸೇರಿಸುವ ರಾಷ್ಟ್ರೀಯ ಪಕ್ಷಗಳ ಹುನ್ನಾರದ ವಿರುದ್ಧ ಹೋರಾಡುವುದೂ ನಮ್ಮ ನಿಲುವು. ಇದರ ಸುತ್ತಲೇ ನಾವು ಹೋರಾಟ, ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ದಾಖಲೆ ಬರೆದ ಪೆಟ್ರೋಲ್, ಡೀಸೆಲ್ ಬೆಲೆಗಳು: ಮುಂಬೈನಲ್ಲಿ ಸೆಂಚುರಿ ಬಾರಿಸಿದ ಪೆಟ್ರೋಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...