Homeಮುಖಪುಟಮೋದಿ ಸರ್ಕಾರ ‘ಥರ್ಡ್‌ ಕ್ಲಾಸ್‌’ ರಾಜಕಾರಣ ಮಾಡುತ್ತಿದೆ: ಶಿವಸೇನೆ

ಮೋದಿ ಸರ್ಕಾರ ‘ಥರ್ಡ್‌ ಕ್ಲಾಸ್‌’ ರಾಜಕಾರಣ ಮಾಡುತ್ತಿದೆ: ಶಿವಸೇನೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರವು ರಾಷ್ಟ್ರದ ಸಮಸ್ಯೆಗಳನ್ನು ಪರಿಹರಿಸುವ ಬದಲು ‘ಥರ್ಡ್‌ ಕ್ಲಾಸ್‌’ ರಾಜಕಾರಣದಲ್ಲಿ ತೊಡಗಿದೆ ಎಂದು ಮಹಾರಾಷ್ಟ್ರದ ಶಿವಸೇನೆ ಆರೋಪಿಸಿದೆ. ಪಕ್ಷದ ಮುಖವಾಣಿ ಸಾಮ್ನಾ ತನ್ನ ಭಾನುವಾರದ ಸಂಪಾದಕೀಯದಲ್ಲಿ ಪಶ್ಚಿಮ ಬಂಗಾಳ ಸರ್ಕಾರದೊಂದಿಗೆ ಒಕ್ಕೂಟ ಸರ್ಕಾರ ನಡೆಸುತ್ತಿರುವ ಕಚ್ಚಾಟಗಳನ್ನು ಉಲ್ಲೇಖಿಸಿದೆ.

“ಒಕ್ಕೂಟ-ರಾಜ್ಯ ಸರ್ಕಾರದ ನಡುವೆ ನಡೆಯುತ್ತಿರುವ ಜಗಳವು ಒಕ್ಕೂಟ ಆಡಳಿತ ವ್ಯವಸ್ಥೆಗೆ ಒಂದು ಸವಾಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗಷ್ಟೇ ಮುಗಿದ ಚುನಾವಣೆಯಲ್ಲಿ ಬಿಜೆಪಿ ತನ್ನ ಸೋಲಿನಿಂದಾಗಿ ತೀವ್ರ ನೋವನ್ನು ಅನುಭವಿಸಿದೆ ಎಂಬುದು ನಿಜ” ಎಂದು ಶಿವಸೇನೆ ಸಂಸದ ಸಂಜಯ್ ರಾವತ್‌ ತಮ್ಮ ಸಾಪ್ತಾಹಿಕ ಅಂಕಣ ‘ರೋಕ್‌ಥಾಕ್’ನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಟಿಎಂಸಿ ಮುಖಂಡರ ಭೇಟಿ – ಬಂಗಾಳದ ಬಿಜೆಪಿ ನಾಯಕ ರಾಜೀಬ್‌ ಬ್ಯಾನರ್ಜಿ ಮತ್ತೆ ಟಿಎಂಸಿಗೆ?

ಪಶ್ಚಿಮ ಬಂಗಾಳದ ಮಾಜಿ ಮುಖ್ಯ ಕಾರ್ಯದರ್ಶಿ ಅಲಪನ್ ಬಂದೋಪಾಧ್ಯಾಯ ಅವರ ವಿಚಾರವಾಗಿ ಬಂಗಾಳ ಮತ್ತು ಒಕ್ಕೂಟ ಸರ್ಕಾರದ ನಡುವಿನ ಜಗಳವು ‘‘ಸಾರ್ವಜಿನಿಕ ನಳ್ಳಿ ನೀರಿಗಾಗಿ, ಗಲಾಟೆ ಮಾಡುತ್ತಿರುವ ಮಹಿಳೆಯರ ರೀತಿಯಲ್ಲಿ ಕಾಣುತ್ತಿದೆ’’ ಎಂದು ಅವರು ಹೇಳಿದ್ದಾರೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಅಲಪನ್‌ ಬಂದೋಪಾಧ್ಯಾಯ ಅವರು ಮೇ 28 ರಂದು ಕಲೈಕುಂಡ ವಾಯುನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯೊಂದಿಗೆ ನಿಗದಿತ ಸಭೆಯನ್ನು ಕೈಬಿಡಲು ನಿರ್ಧರಿಸಿದ ನಂತರ ಬಂದೋಪಾಧ್ಯಾಯ ಅವರು ರಾಜಕೀಯ ಕಚ್ಚಾಟದ ನಡುವೆ ಸಿಲುಕಿ ಬಿದ್ದರು. ಅವರನ್ನು ಒಕ್ಕೂಟ ಸರ್ಕಾರದ ಸೇವೆಗೆ ಹಿಂತಿರುಗಬೇಕೆಂದು ಒಕ್ಕೂಟ ಸರ್ಕಾರ ಹೇಳಿದಾಗ ತನ್ನ ಕೆಲಸಕ್ಕೆ ರಾಜೀನಾಮೆ ಸಲ್ಲಿಸಿದ ಬಂದೋಪಾಧ್ಯಾಯ ಸಿಎಂ ಮಮತಾ ಬ್ಯಾನರ್ಜಿಯ ಮುಖ್ಯ ಸಲಹೆಗಾರರಾಗಿ ಕರ್ತವ್ಯ ವಹಿಸಿಕೊಂಡರು. ಇದರ ನಂತರ ಅವರಿಗೆ ಒಕ್ಕೂಟ ಸರ್ಕಾರವು ಪ್ರಧಾನಿಯೊಂದಿಗಿನ ಸಭೆಗೆ ಭಾಗವಹಿಸದೆ ಇರಲು ಕಾರಣವೇನೆಂದು ತಿಳಿಸಲು ಶೋಕಾಸ್‌ ನೋಟಿಸ್‌ ಕೂಡಾ ನೀಡಿತ್ತು.

ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಸೋತ ನಂತರ ರಾಜ್ಯಸಭೆಯ ಮಾಜಿ ಸಂಸದ ಸ್ವಪನ್ ದಾಸ್‌ಗುಪ್ತಾ ಅವರನ್ನು ಮತ್ತೆ ರಾಜ್ಯಸಭೆಗೆ ಮರುನಾಮಕರಣ ಮಾಡಿರುವುದು ಹೊಸ ಬೆಳವಣಿಗೆಯಾಗಿದೆ ಎಂದು ರಾವತ್‌ ಹೇಳಿದ್ದಾರೆ.

ಸ್ವಪನ್ ದಾಸ್‌ಗುಪ್ತಾ ಅವರು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬೇಕಾಗಿ ಮಾರ್ಚ್‌ನಲ್ಲಿ ಮೇಲ್ಮನೆಗೆ ರಾಜೀನಾಮೆ ನೀಡಿದ್ದರು.

ಇದನ್ನೂ ಓದಿ: ಕೊರೋನಾಗೆ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡು ಅನಾಥವಾದ ರಾಜ್ಯದ 42 ಮಕ್ಕಳು

“ದಾಸ್‌ಗುಪ್ತಾ ಅವರನ್ನು ರಾಷ್ಟ್ರಪತಿಗಳು ನಾಮಕರಣ ಮಾಡಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಈ ವ್ಯಕ್ತಿ ರಾಜ್ಯಸಭೆಗೆ ರಾಜೀನಾಮೆ ನೀಡಿದ್ದರು. ಆದರೆ ಅವರು ಸೋಲನುಭವಿಸಿದರು. ಇದಾಗಿ ಮತ್ತೆ ಒಂದು ತಿಂಗಳೊಳಗೆ ಅವರನ್ನು ನಾಮಕರಣ ಮಾಡಲಾಯಿತು. ಈ ರೀತಿಯ ಘಟನೆಯು ರಾಜ್ಯಸಭೆಯ ಇತಿಹಾಸದಲ್ಲಿ ಎಂದಿಗೂ ಸಂಭವಿಸಿಲ್ಲ” ಎಂದು ರಾವತ್‌ ಹೇಳಿದ್ದಾರೆ.

ರಾಷ್ಟ್ರ ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳನ್ನು ನಿಭಾಯಿಸುವ ಬದಲು ಸೆಂಟ್ರಲ್‌ ವಿಸ್ಟಾ ಯೋಜನೆಗೆ ಸಮಯ ಮತ್ತು ಹಣವನ್ನು ವ್ಯಯಿಸುತ್ತಿದೆ ಎಂದು ರಾವತ್‌ ಒಕ್ಕೂಟ ಸರ್ಕಾರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಪ್ರಧಾನಿ ಮತ್ತು ಉಪರಾಷ್ಟ್ರಪತಿಗೆ ಹೊಸ ನಿವಾಸಗಳನ್ನು ನಿರ್ಮಿಸುವತ್ತ ಒಕ್ಕೂಟ ಸರ್ಕಾರ ಗಮನ ಹರಿಸಿದೆ. ಈ ಇಬ್ಬರು ಹೊಸ ಮನೆಗಳನ್ನು ಪಡೆಯುತ್ತಾರೆ, ಆದರೆ ನಾಗರಿಕರ ಕತೆ ಏನು? ನಾಗರಿಕರು ಬಡತನಕ್ಕೆ ಜಾರಿದ್ದಾರೆ. 2020 ರ ಏಪ್ರಿಲ್‌ನಲ್ಲಿ ಕೊರೊನಾ ಕಾರಣದಿಂದಾಗಿ 130 ದಶಲಕ್ಷ ಜನರು ಉದ್ಯೋಗ ಕಳೆದುಕೊಂಡಿದ್ದಾರೆ” ಎಂದು ರಾವತ್‌ ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ನಿರ್ಬಂಧಗಳನ್ನು ಮತ್ತಷ್ಟು ಸಡಿಲಿಸಿದ ದೆಹಲಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...