Homeಮುಖಪುಟಗೋಹತ್ಯೆ ತಡೆ ಕಾನೂನಿನ ದುರ್ಬಳಕೆ: ಪೊಲೀಸರ ವಿರುದ್ಧ ಅಲಹಾಬಾದ್ ಹೈಕೋರ್ಟ್ ಗರಂ

ಗೋಹತ್ಯೆ ತಡೆ ಕಾನೂನಿನ ದುರ್ಬಳಕೆ: ಪೊಲೀಸರ ವಿರುದ್ಧ ಅಲಹಾಬಾದ್ ಹೈಕೋರ್ಟ್ ಗರಂ

- Advertisement -
- Advertisement -

ಉತ್ತರ ಪ್ರದೇಶದ ಗೋಹತ್ಯೆ ನಿಷೇಧ ಕಾನೂನಿನ ಅಡಿಯಲ್ಲಿ ದಾಖಲಾಗಿರುವ ಪ್ರಕರಣವನ್ನು ತಪ್ಪಾಗಿ ಅರ್ಜಿದಾರರನ್ನು ಸಿಲುಕಿಸಲಾಗಿದೆ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಪ್ರಕರಣ ದಾಖಲಿಸಿದ್ದ ಸೀತಾಪುರ ಪೊಲೀಸರ ಕ್ರಮಕ್ಕೆ ಆಕ್ಷೇಪಣೆ ವ್ಯಕ್ತಪಡಿಸಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ವಾರಗಳಲ್ಲಿ ಉತ್ತರ ನೀಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ತಿಳಿಸಿದೆ.

ನ್ಯಾಯಮೂರ್ತಿ ಅಬ್ದುಲ್ ಮೊಯಿನ್ ಅವರ ನ್ಯಾಯಪೀಠವು ಫೆಬ್ರವರಿ 25 ರಂದು ಕಾಯಿದೆಯ ಸೆಕ್ಷನ್ 3 ಮತ್ತು 8 ರ ಅಡಿಯಲ್ಲಿ ಪ್ರಕರಣ ದಾಖಲಿಸಿರುವ ಸೂರಜ್ (22) ಅವರ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿತು. ಇಬ್ರಾಹಿಂ, ಅನೀಶ್ ಮತ್ತು ಶಹ್‌ಜಾದ್‌ ಪ್ರಕರಣದ ಇನ್ನಿತರ ಆರೋಪಿಗಳಾಗಿದ್ದಾರೆ.

ಮೂರು ಹಸುಗಳನ್ನು ಕೊಂದ ಬಗ್ಗೆ ಆರೋಪಿಗಳ ನಡುವೆ ನಡೆದ ಸಂಭಾಷಣೆಯನ್ನು ಪೊಲೀಸ್ ತಂಡ ಕೇಳಿದೆ ಎಂದು ಆರೋಪಿಸಿ ಪೊಲೀಸರ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ಎಫ್‌ಐಆರ್ ಪ್ರಕಾರ, ಮಾಹಿತಿದಾರರ ಆಧಾರದ ಮೇಲೆ, ಪೊಲೀಸರು ಈ ಆರೋಪಿತರನ್ನು ಹಿಂಬಾಲಿಸಿದೆ. ಇವರು ಮೂರು ಹಸುಗಳನ್ನು ಕೊಂದಿದ್ದಾರೆ ಅದಕ್ಕಾಗಿ ದೊಡ್ಡ ಮೊತ್ತವನ್ನು ಪಡೆದಿದ್ದಾರೆ ಎಂದು ಪೊದೆಗಳಲ್ಲಿ ಪರಸ್ಪರ ಮಾತನಾಡುವುದನ್ನು ಕೇಳಿಸಿಕೊಂಡಿದ್ದಾರೆ. ಇದರ ಜೊತೆಗೆ ತಮ್ಮ ಬಳಿ ಇರುವ ಇನ್ನು  2 ಎತ್ತುಗಳನ್ನು ವಧಿಸಲು ಯೋಜಿಸಿದ್ದರು ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಸುಪ್ರೀಂ ಚಾಟಿಗೂ ಮೊದಲೇ ಮೋದಿ ಉಚಿತ ಲಸಿಕೆ ನೀತಿ ಸಿದ್ಧ ಮಾಡಿದ್ದರೆ?: ಮೋದಿ ಸರ್ಕಾರದ ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾದ ಪತ್ರಕರ್ತರು

ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಲಾಗಿದೆ. ಆರೋಪಿಗಳಿಂದ ಎರಡು ಎತ್ತುಗಳು, ಒಂದು ಕಟ್ಟು ಹಗ್ಗ, ಒಂದು ಸುತ್ತಿಗೆ, ಒಂದು ಉಗುರು ಮತ್ತು ತಲಾ 5 ಕೆಜಿ ತೂಕದ 12 ಖಾಲಿ ಚೀಲಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು  ಹಿರಿಯ ಸಬ್ ಇನ್ಸ್‌ಪೆಕ್ಟರ್ ದೀಪಕ್ ಕುಮಾರ್ ಪಾಂಡೆ ಸಲ್ಲಿಸಿದ ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಎಫ್‌ಐಆರ್ ಪ್ರಕಾರ ಆರೋಪಿಗಳ ಬಳಿ ವಶಪಡಿಸಿಕೊಂಡ ಎತ್ತುಗಳನ್ನು ಹತ್ಯೆ ಮಾಡಿಲ್ಲ. ಅವು ಅಂಗವಿಕಲರಾಗಿಲ್ಲ ಅಥವಾ ಯಾವುದೇ ರೀತಿಯ ದೈಹಿಕ ಗಾಯಗಳಿಗೆ ಒಳಗಾಗಿಲ್ಲ ಎಂಬುದು ಸ್ಪಷ್ಟವಾಗಿ ತಿಳಿದು ಬರುತ್ತದೆ ಎಂದು ಅಲಹಾಬಾದ್ ನ್ಯಾಯಾಲಯ ಹೇಳಿದೆ.

“ಕೇವಲ ಆಪಾದಿತರ ಸಂಭಾಷಣೆಯ ಆಧಾರದ ಮೇಲೆ ಪೊಲೀಸರು ದೂರು ದಾಖಲಿಸಿದ್ದಾರೆ. ಪ್ರಕರಣದಲ್ಲಿ, ಆರೋಪಿಗಳಿಂದ ವಶ ಪಡೆದ ಎರಡು ಎತ್ತುಗಳನ್ನು ಆರೋಗ್ಯವಾಗಿವೆ. ಇದು ಗೋಹತ್ಯೆ ನಿಷೇಧ ಕಾಯಿದೆಯ ಸೆಕ್ಷನ್ 3 ಮತ್ತು 8 ರ ಅಡಿಯಲ್ಲಿ ಬರುವುದಿಲ್ಲ ಎಂಬುದನ್ನು ಸೂಚಿಸುತ್ತದೆ” ಎಂದು ನ್ಯಾಯಲಯ ಹೇಳಿದೆ.

ಆರೋಪಿಗಳಿಗೆ ಜಾಮೀನು ನೀಡಿದ ಅಲಹಾಬಾದ್ ನ್ಯಾಯಾಲಯ, ಪ್ರಕರಣದ ಕುರಿತು ಅಫಿಡವಿಟ್ ಸಲ್ಲಿಸಲು ಸೀತಾಪುರ ಎಸ್‌ಪಿಗೆ ಎರಡು ವಾರಗಳ ಕಾಲಾವಕಾಶ ನೀಡಿದೆ. ಜೂನ್ 16 ರಂದು ವಿಚಾರಣೆಯನ್ನು ಮುಂದೂಡಿದೆ.


ಇದನ್ನೂ ಓದಿ: ಕೇರಳದ ಆರ್ಥಿಕತೆ ಮೇಲೆತ್ತಲು 77,350 ಉದ್ಯೋಗ ಸೃಷ್ಟಿಗೆ ಮುಂದಾದ ಪಿಣರಾಯಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...