Homeಕರೋನಾ ತಲ್ಲಣಬೀದಿಗೆ ಬಿದ್ದ ಲೋಹದ ಮೇಲೆ ಚಿತ್ತಾರ ಮೂಡಿಸುವ ಒನಿಪೆಂಟಾದ ಕಲಾವಿದರ ಬದುಕು

ಬೀದಿಗೆ ಬಿದ್ದ ಲೋಹದ ಮೇಲೆ ಚಿತ್ತಾರ ಮೂಡಿಸುವ ಒನಿಪೆಂಟಾದ ಕಲಾವಿದರ ಬದುಕು

- Advertisement -
- Advertisement -

ಒನಿಪೆಂಟಾ ಆಂಧ್ರಪ್ರದೇಶದ ಒಂದು ಚಿಕ್ಕ ಹಳ್ಳಿ. ಹಿತ್ತಾಳೆ, ಕಂಚಿನ ಮೇಲೆ ಕುಸುರಿ ಕಲೆಗಾಗಿ ಜಗತ್‌ಪ್ರಸಿದ್ದವಾಗಿದ್ದ ಊರು. ದೇಶದ ಮೂಲೆ ಮೂಲೆಯಿಂದ, ಜಗತ್ತಿನ ನಾನಾ ದೇಶಗಳಿಂದ ಬರುವ ಪ್ರವಾಸಿಗಳಿಂದ ಒನಿಪೆಂಟಾ ಹಳ್ಳಿ ಒಂದು ಕಾಲದಲ್ಲಿ ತುಂಬಿರುತ್ತಿತ್ತು. ಬೇರೆ ಬೇರೆ ಭಾಷೆಯ ಜನರ ಮಾತಿನ ಕಲರವ ಕೇಳುತ್ತಿತ್ತು.  ಚೌಕಾಸಿಯ ವ್ಯಾಪಾರಗಳು ನಡೆಯುತ್ತಿತ್ತು. ಇಂದು ಒನಿಪೆಂಟಾದಲ್ಲಿ ಹೇಳಲಿಕ್ಕೆ ಏನೂ ಇಲ್ಲ. ಪ್ರವಾಸಿಗಳಿಲ್ಲ. ಕಲಾವಿದರೂ ಊರು ಬಿಡುವ ಹಂತಕ್ಕೆ ತಲುಪಿದ್ದಾರೆ. ಕೊರೋನಾ ಸಾಂಕ್ರಾಮಿಕದ ಆರ್ಥಿಕ ಹೊಡೆತಕ್ಕೆ ದೇಶದಲ್ಲಿ ನೂರಾರು ಕಸುಬುಗಳು ನಾಶವಾಗಿವೆ. ಅದರೆ ನಡುವೆ ಒನಿಪೆಂಟಾದ ಹಿತ್ತಾಳೆಯ ಕಲಾವಿದರ ಬದುಕು ಇನ್ನಷ್ಟು ದುಸ್ತರವಾಗಿದೆ.

ಕಳೆದ 15 ತಿಂಗಳುಗಳಿಂದ ಹಿತ್ತಾಳೆಯ ಕಲೆಯನ್ನೇ ನಂಬಿ, ಲೋಹದಲ್ಲಿ ಜೀವ ಹಿಡಿದು ಬದುಕುತ್ತಿದ್ದ ಒನಿಪೆಂಟಾ ಕಲಾವಿದರು ಕೆಲಸವಿಲ್ಲದೇ ನಿರುದ್ಯೋಗಿಗಳಾಗಿದ್ದಾರೆ. ದೇವಸ್ಥಾನಗಳು, ಶಾಲೆ – ಕಾಲೇಜುಗಳು, ಮಾರುಕಟ್ಟೆಗಳು ಕೊರೋನಾ ಕಾರಣಕ್ಕೆ ಬಂದ್‌ ಆಗಿರುವುದರಿಂದ ಹಿತ್ತಾಳೆ ಕಂಚುಗಳ ಮೇಲೆ ಚಿತ್ತಾರ ಮೂಡಿಸುತ್ತಿದ್ದ ಕಲಾವಿದರು ಹೊತ್ತಿನ ಊಟಕ್ಕೂ ಪರದಾಡುವಂತಾಗಿದೆ.

ನೂರಕ್ಕು ಹೆಚ್ಚು ಕಲಾವಿದರು ಲೋಹದ ಕುಸುರಿ ಕಲೆಗಾರಿಕೆಯಲ್ಲಿಯೇ ತೊಡಗಿಕೊಂಡಿದ್ದಾರೆ. ಹಿತ್ತಾಳೆಯ ಕಲಾಕೃತಿಗಳ ತಯಾರಿಕೆಯಲ್ಲಿಯೇ ಜೀವನ ಆಧರಿಸಿದ್ದಾರೆ. ಅವರಿಗೆ ಸದ್ಯದಲ್ಲಿ ಯಾವ ಆದಾಯವೂ ಇಲ್ಲವಾಗಿದೆ ಎಂದು ಒನಪೆಂಟಾ ಲೋಹ ಕಲಾವಿದರ ಸಹಕಾರಿ ಸಂಘದ ಅಧ್ಯಕ್ಷ ಎಫ್.ಎಮ್‌ ಇಸ್ಮಾಯಿಲ್‌ ತಿಳಿಸಿದ್ದಾರೆ.

ಕೊರೋನಾ ಸಾಂಕ್ರಾಮಿಕ ಆರಂಭವಾದಾಗಿನಿಂದ ವ್ಯಾಪರ ನೆಲ ಕಚ್ಚಿದೆ. ಬೇರೆ ಬೇರೆ ಊರುಗಳಿಂದ ವ್ಯಾಪಾರಿಗಳು ಬರುತ್ತಿಲ್ಲ. ಸರ್ಕಾರ ಸಾಂಪ್ರದಾಯಿಕ ಕಲೆಯಲ್ಲಿ ತೊಡಗಿರುವ ಕಲಾವಿದರ ಸಹಾಯಕ್ಕೆ ನಿಲ್ಲಬೇಕಿದೆ. ಒಂದಷ್ಟು ಪರಿಹಾರದ ರೀತಿಯಲ್ಲಿ ಸಹಾಯವನ್ನು, ಸಬ್ಸಿಡಿಯನ್ನು ನೀಡಬೇಕು ಎಂದು ಅವರು ಹೇಳುತ್ತಾರೆ.

ಇದನ್ನೂ ಓದಿ : ರಾಜ್ಯಕ್ಕೆ ಹೆಚ್ಚಿನ ಲಸಿಕೆ ನೀಡುವಂತೆ ಆಗ್ರಹಿಸಿ ಪ್ರಧಾನಿ ಭೇಟಿಗೆ ಸಜ್ಜಾದ ತಮಿಳುನಾಡು ಸಿಎಂ ಸ್ಟಾಲಿನ್

ಕಳೆದ ಅನೇಕ ಶತಮಾನಗಳಿಂದ ತಲೆ ಮಾರುಗಳಿಂದ ತಲೆ ಮಾರುಗಳಿಗೆ ಈ ಕಂಚಿನ, ಹಿತ್ತಾಳೆಯ ಮೇಲೆ ಚಿತ್ತಾರ ಮೂಡಿಸುವ ಕಲೆ ಹರಿದು ಬಂದಿದೆ. ಇಷ್ಟು ವರ್ಷದಲ್ಲಿ ಹಿಂದೆ ಎಂದೂ ಇಂತಹ ವಿಪತ್ತುಗಳು ಬಂದಿರಲಿಲ್ಲ. ಜಿಲ್ಲಾ ಕೇಂದ್ರದಿಂದ 43 ಕಿಲೋ ಮೀಟರ್‌ ದೂರವಿರುವ ಒನಿಪೆಂಟಾ ಹಳ್ಳಿಯಲ್ಲಿ ಇಂದು ವಿಶೇಷವಾದ ಲೋಹದ ಕಲೆ ಅಳಿವಿನ ಅಂಚಿಗೆ ಬಂದು ತಲುಪಿದೆ. 13 ನೇ ಶತಮಾನದ ಜನಮೇಜಯಡು ಎಂಬ ರಾಜನ ಕಾಲದಿಂದ ಆರಂಭವಾದ ಲೋಹದ ಚಿತ್ತಾರ ಕಲೆ ಆ ಕಾಲದಲ್ಲಿ ಪೋಥುಲುರಿ ವೀರ ಬ್ರಹ್ಮೇಂದ್ರ ಸ್ವಾಮಿ ಎಂಬ ಕಲಾವಿದನಿಂದ ವಿಶ್ವಪ್ರಸಿದ್ಧವಾಯಿತು.

ಆರಂಭದಲ್ಲಿ ಈ ಊರನ್ನು ಕಾಮಸಲಿವನಿಪೆಂಟಾ ಎಂದು ಕರೆಯಲಾಗುತ್ತಿತ್ತು. ಕ್ರಮೇಣ ಊರಿನ ಹೆಸರು ಒನಿಪೆಂಟಾ ಎಂದಾಯಿತು. ಈ ಊರಿನಲ್ಲಿ ಸಧ್ಯ 500 ಕ್ಕೂ ಹೆಚ್ಚು ಕುಟುಂಬಗಳು ಹಿತ್ತಾಳೆಯ ಕರ ಕುಶಲ ವಸ್ತುಗಳ ತಯಾರಿಕೆಯಲ್ಲಿ ತೊಡಗಿದ್ದಾರೆ. ಭಿನ್ನ ಭಿನ್ನ ಶೈಲಿಯ ದೀಪಗಳು, ಚಿತ್ತಾರದ ಪಾತ್ರೆಗಳು, ವಿಭಿನ್ನ ಕಲಾಕೃತಿಗಳು ಒನಿಪೆಂಟಾ ಕಲಾವಿದರ ಕೈಯಲ್ಲಿ ತಯಾರಾಗಿ ಬಾಂಬೆ, ಹೈದ್ರಾಬಾದ್‌, ಬೆಂಗಳೂರು, ಚೆನ್ನೈಗೆ ಹೋಗುತ್ತಿದ್ದವು. ಹಾಗೇ ಕಚ್ಚಾ ಲೋಹಗಳು ಹೈದ್ರಾಬಾದ್‌, ಬೆಂಗಳೂರು, ಚೆನ್ನೈ, ಹೈದ್ರಾಬಾದ್‌ ನಗರಗಳಿಂದ ಒನಿಪೆಂಟಾ ಊರಿಗೆ ಬರುತ್ತವೆ. ಹಿತ್ತಾಳೆಯನ್ನು ಬಳಸಿಕೊಂಡು ಒನಿಪೆಂಟಾದ ಕಲಾವಿದರು, ಅಡಿಗೆ ಮನೆ ಪಾತ್ರೆ, ಪಗಡೆಗಳು, ಚಿತ್ರಗಳು, ದೇವ – ದೇವತೆಯ ವಿಗ್ರಹಗಳು, ಹಂಡೆಗಳು, ಸುಂದರ ಅಲಂಕಾರಿಕ ವಸ್ತುಗಳನ್ನು ತಯಾರಿಸುತ್ತಾರೆ. ಒನಿಪೆಂಟಾದ ವಿಶೇಷ ಶೈಲಿಯ ಕುಸುರಿಯಿಂದ ಅಲಂಕೃತವಾದ ಯಾವುದೇ ಲೋಹವಿರಲಿ ಅದು ಮನೆಗೆ ಮೆರಗು ಕೊಡುತ್ತದೆ ಎಂದು ಸ್ಥಳೀಯರು ಹೇಳುತ್ತಾರೆ.

ಮದುವೆಗಳಲ್ಲಿ ವಧುವಿಗೆ ಹಿತ್ತಾಳೆಯ ಪಾತ್ರೆ ಪಗಡೆಗಳನ್ನು ಕೊಟ್ಟು ಕಳುಹಿಸುವ ಸಂಪ್ರದಾಯವಿದೆ. ಹಾಗೇ ದೇವಸ್ಥಾನಗಳ ಧ್ವಜಸ್ಥಂಭ, ದೇವರ ವಿಗ್ರಹಗಳು, ಹಿತ್ತಾಳೆ ದೀಪಗಳು, ಗೋಪುರದ ಕಳಶ, ಗೋಡೆಗಳಿಗೆ ಲೇಪನ ಹೀಗೆ ವರ್ಷವಿಡಿ ಒಂದಿಲ್ಲೊಂದು ದೇವಸ್ಥಾನಗಳಲ್ಲಿ ಇಲ್ಲಿನ ಕಲಾವಿದರಿಗೆ ಕೆಲಸವಿರುತ್ತಿತ್ತು. ಆದರೆ ಕೊರೋನಾ ಕಾರಣದಿಂದ ಎಲ್ಲಿಂದಲೂ ಈ ಕಲಾವಿದರಿಗೆ ಕೆಲಸ ಬರುತ್ತಿಲ್ಲ. ಹಾಗಾಗಿ ಹಿತ್ತಾಳೆ ಮತ್ತು ಲೋಹದ ಕೆಲಸ ಮಾಡುತ್ತಿದ್ದ 500 ಕುಟುಂಬಗಳಲ್ಲಿ ಈಗ ಕೇವಲ 222 ಕುಟುಂಬಗಳು ಮಾತ್ರ ತಮ್ಮ ಸಾಂಪ್ರದಾಯಿಕ ಕಸುಬಿನಲ್ಲಿ ಉಳಿದಿವೆ. 100 ಕುಟುಂಬಗಳು ಚೆನ್ನೈ, ಹೈದ್ರಾಬಾದ್‌, ಬೆಂಗಳೂರಿನಂತಹ  ನಗರಗಳಿಗೆ ಬದುಕು ಅರಸಿ ವಲಸೆ ಹೋಗಿವೆ. ಉಳಿದ ಕೆಲವೇ ಕೆಲವರು ಇರುವ ಕೆಲಸವನ್ನೇ ನಂಬಿ ಜೀವ ಸಾಗಿಸುತ್ತಿದ್ದಾರೆ.

ನಮಗೆ ಬೇರೆ ಕೆಲಸ ಗೊತ್ತಿಲ್ಲ. ನಾವು ಹಿತ್ತಾಳೆಯ ಕುಸುರಿ ವೃತ್ತಿಯನ್ನು ಬಿಟ್ಟು ಬಿಡಲು ಸಾದ್ಯವಿಲ್ಲ. ನಮ್ಮ ತಲತಲಾಂತರದಿಂದ ನಡೆಸಿಕೋಂಡು ಬಂದಿದ್ದೇವೆ. ಈ ಕಾಲ ಸರಿದು ಮುಂದೆ ನಮಗೂ ಒಳ್ಳೆಯ ದಿನಗಳು ಬರಬಹುದು.‌ ಹಿತ್ತಾಳೆಯೂ ಹೊಳೆಯಬಹುದು ಎನ್ನುತ್ತಾರೆ ಮೋರ್ ವಿರೋಜಿ ಮತ್ತು ಮುಕ್ತಿಯಾ ಭಾಷಾ ಎಂಬ ಒನಿಪೆಂಟಾದ ಕಲಾವಿದರು.

ಕೊರೋನಾ ಸಾಂಕ್ರಾಮಿಕ ಕಳೆದು ಒನಿಪೆಂಟಾ ಕಲಾವಿದರಿಗೆ ಒಂದಷ್ಟು ನೆಮ್ಮದಿಯ ಉಸಿರಾಡುವ ಕಾಲ ಬರಲಿ. ತಲ ತಲಾಂತರದಿಂದ ಕಾಪಾಡಿಕೊಂಡು ಬಂದಿರುವ ಒನಿಪೆಂಟಾದ ದೇಸೀ ಸಂಸ್ಕೃತಿ ಮತ್ತು ಕಲೆಯನ್ನು ಉಳಿಸಲು ಸರ್ಕಾರಗಳೂ ಒಂದಷ್ಟು ಪ್ರಯತ್ನ ಪಡಬೇಕು. ಒನಿಪೆಂಟಾದ ಕಲಾವಿದರಿಗೆ  ಸರ್ಕಾರಗಳು ಆರ್ಥಿಕವಾಗಿ ಸಹಾಯ ಮಾಡಿ ಅವರನ್ನು ಮೇಲೆತ್ತಬೇಕು.


ಇದನ್ನೂ ಓದಿ :ಗೋಹತ್ಯೆ ತಡೆ ಕಾನೂನಿನ ದುರ್ಬಳಕೆ: ಪೊಲೀಸರ ವಿರುದ್ಧ ಅಲಹಾಬಾದ್ ಹೈಕೋರ್ಟ್ ಗರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...