Homeಕರ್ನಾಟಕಸರೋಜಿನಿ ಮಹಿಷಿ ವರದಿ ಜಾರಿಯಾಗಲಿ, ಕರ್ನಾಟಕದ ಉದ್ಯೋಗ ಕನ್ನಡಿಗರಿಗೆ ಸಿಗಲಿ: ಟ್ವಿಟರ್ ಟ್ರೆಂಡ್

ಸರೋಜಿನಿ ಮಹಿಷಿ ವರದಿ ಜಾರಿಯಾಗಲಿ, ಕರ್ನಾಟಕದ ಉದ್ಯೋಗ ಕನ್ನಡಿಗರಿಗೆ ಸಿಗಲಿ: ಟ್ವಿಟರ್ ಟ್ರೆಂಡ್

ಯಡಿಯೂರಪ್ಪನವರೆ, ಕರ್ನಾಟಕದ ಶೇ.75 ರಷ್ಟು ಹುದ್ದೆಗಳನ್ನು ಕನ್ನಡಿಗರಿಗೆ ಮೀಸಲಿಡಿ. ಸರೋಜಿನಿ ಮಹಿಷಿ ವರದಿ ಸಂಪೂರ್ಣ ಅನುಷ್ಠಾನ ಮಾಡಿ ಎಂದು ಮೊಹಮ್ಮದ್ ಹನೀಫ್ ಎಂಬುವವರು ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಸರೋಜಿನಿ ಮಹಿಷಿ ವರದಿ ಸಂಪೂರ್ಣ ಅನುಷ್ಠಾನವಾಗಬೇಕು ಮತ್ತು ಕರ್ನಾಟಕದ ಉದ್ಯೋಗಗಳು ಕನ್ನಡಿಗರಿಗೆ ಸಿಗಲಿ ಎಂಬ ಹಕ್ಕೊತ್ತಾಯಗಳನ್ನಿಟ್ಟುಕೊಂಡು ಕರ್ನಾಟಕ ಜನಾಧಿಕಾರ ಪಕ್ಷ ಮತ್ತು ಕರ್ನಾಟಕ ರಣಧೀರ ಪಡೆಯಿಂದ ಇಂದು ಟ್ವಿಟರ್ ಅಭಿಯಾನ ನಡೆಸಲಾಯಿತು.

“ಕರುನಾಡು ನಮ್ಮದು, ನಾವು ಕನ್ನಡಿಗರು ನಮ್ಮ ನೆಲ, ನಮ್ಮ ಜಲ, ನಮ್ಮ ಗಾಳಿ ಅಂತೆಯೇ ಉದ್ಯೋಗವೂ ನಮ್ಮದೇ. ಕರ್ನಾಟಕಕ್ಕೆ ಭದ್ರ ಬುನಾದಿಯೊಂದು ಬೇಕಿದೆ ಅದು ಕನ್ನಡಿಗರಿಗೆ ಉದ್ಯೋಗದ ಮೂಲಕವೇ ಆಗಬೇಕಿದೆ. ಕನ್ನಡದ ಅಸ್ಮಿತೆಗಾಗಿ ಹೋರಾಡುವ ನಾವು ಕನ್ನಡದ ಉದ್ಯೋಗಕ್ಕೂ ಹೋರಾಡುವ. ಕ್ರಾಂತಿಯ ಕಿಡಿ ಆರದಿರಲಿ. ಕನ್ನಡಿಗರ ವೀರ ಧ್ವನಿ ಗಟ್ಟಿಯಾಗಲಿ” ಎಂಬ ಘೋಷಣೆಗಳೊಂದಿಗೆ ಹತ್ತಾರು ಸಾವಿರ ಟ್ವೀಟ್‌ಗಳು ದಾಖಲಾಗಿದ್ದು, ಉದ್ಯೋಗಕ್ಕಾಗಿ ದೊಡ್ಡ ದನಿ ಕೇಳಿಬಂದಿದೆ.

“ಅನ್ನ ಕೊಡುವ ಚಿನ್ನದ ನಾಡಿದು ಕರ್ನಾಟಕ, ಇಲ್ಲಿ ಉದಯಿಸಿವ ಪ್ರತೀ ಉದ್ಯೋಗಗಳೂ ಕನ್ನಡಿಗರಿಗಾಗೇ ಮೀಸಲು, ಗಟ್ಟಿ ದನಿಯಲ್ಲಿ ಹೇಳಿ ಕರ್ನಾಟಕದ ಉದ್ಯೋಗಗಳು ಕನ್ನಡಿಗರಿಗೆ” ಎಂದು ಕರ್ನಾಟಕ ರಣಧೀರರ ಪಡೆಯ ರಾಜ್ಯಾಧ್ಯಕ್ಷ ಹರೀಶ್ ಕುಮಾರ್ ಬಿ ಟ್ವೀಟ್ ಮಾಡಿದ್ದಾರೆ.

ನಮ್ಮ ಉದ್ದೇಶ ಇಷ್ಟೇ ಯಾವ ಕಂಪನಿ ಬ್ಯಾಂಕ್ ಗಳಿಗೆ ಹೋದ್ರು ಕನ್ನಡ ಬಿಟ್ಟು ಮಿಕ್ಕೆಲ್ಲಾ ಭಾಷೆಗಳನ್ನು ಕೇಳುತ್ತಿದ್ದೇವೆ. ಇನ್ಮೇಲೆ ಎಂತಹ ದೊಡ್ಡ ಕಂಪನಿಗಳಿಗೆ ಹೋದ್ರು ಬರೀ ಕನ್ನಡವೇ ಕೇಳಿಸಬೇಕು ರಾಜ್ಯೋತ್ಸವ ದೊಡ್ಡದಾಗಿ ಆಚರಣೆ ಆಗಬೇಕು.. ಎಲ್ಲೆಡೆ ಕನ್ನಡಿಗರೇ ಕಾಣಬೇಕು ಎಂದು ರೂಪೇಶ್ ರಾಜಣ್ಣನವರು ಟ್ವೀಟ್ ಮಾಡಿದ್ದಾರೆ.

ಯಡಿಯೂರಪ್ಪನವರೆ, ಕರ್ನಾಟಕದ ಶೇ.75 ರಷ್ಟು ಹುದ್ದೆಗಳನ್ನು ಕನ್ನಡಿಗರಿಗೆ ಮೀಸಲಿಡಿ. ಸರೋಜಿನಿ ಮಹಿಷಿ ವರದಿ ಸಂಪೂರ್ಣ ಅನುಷ್ಠಾನ ಮಾಡಿ ಎಂದು ಮೊಹಮ್ಮದ್ ಹನೀಫ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಕರ್ನಾಟಕ ಅತಿ ಹೆಚ್ಚು ತೆರಿಗೆ ಕಟ್ಟುವ ರಾಜ್ಯಗಳಲ್ಲೊಂದಾಗಿದೆ. ಭಾರತದ ಇತರ ರಾಜ್ಯಗಳಿಗೆ ಉದ್ಯೋಗ ಒದಗಿಸಿದೆ. ಆದರೆ ಎಲ್ಲಾ ಸರ್ಕಾರಗಳು ಮತ್ತು ಖಾಸಗಿ ಕಂಪನಿಗಳಿಂದ ಕನ್ನಡಿಗರು ನಿರಂತರವಾಗಿ ನಿರ್ಲಕ್ಷ್ಯಕ್ಕೊಳಗಾಗಿದ್ದಾರೆ ಎಂದು ಸಿದ್ದೇಶ್ ಎಚ್ ಟ್ವೀಟ್ ಮಾಡಿದ್ದಾರೆ.

ಈ ವರದಿ ಪ್ರಕಟವಾಗುವ ಹೊತ್ತಿಗೆ 18 ಸಾವಿರ ಕನ್ನಡಿಗರು ಸಮರ್ಪಕ ಉದ್ಯೋಗ ನೀತಿಗಾಗಿ ಒತ್ತಾಯಿಸಿ ಟ್ವೀಟ್ ಮಾಡಿದ್ದಾರೆ. ಕೆಲವು ಇಲ್ಲಿವೆ.


ಇದನ್ನೂ ಓದಿ: “ಕರ್ನಾಟಕದ ಉದ್ಯೋಗಗಳು ಕನ್ನಡಿಗರಿಗೇ ಸಿಗಲಿ”: ಸ್ವಾತಂತ್ರ್ಯ ದಿನಾಚರಣೆಯಂದು ದಿಟ್ಟ ಹೋರಾಟ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕನ್ನಡದ ನಿರುದ್ಯೋಗಿ ಯುವಕರ ಕಣ್ಣೀರು ಒರೆಸುವವರು ಯಾರು……? ???? ಅದಕ್ಕಾಗಿ ಎಲ್ಲರೂ ಒಂದಾಗೋಣ…. ಮುಂದೆ ಯಾದರೂ ಕನ್ನಡಕ್ಕಾಗಿ ಭಾಳೋಣ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...