Homeಕರ್ನಾಟಕಸರೋಜಿನಿ ಮಹಿಷಿ ವರದಿ ಜಾರಿಯಾಗಲಿ, ಕರ್ನಾಟಕದ ಉದ್ಯೋಗ ಕನ್ನಡಿಗರಿಗೆ ಸಿಗಲಿ: ಟ್ವಿಟರ್ ಟ್ರೆಂಡ್

ಸರೋಜಿನಿ ಮಹಿಷಿ ವರದಿ ಜಾರಿಯಾಗಲಿ, ಕರ್ನಾಟಕದ ಉದ್ಯೋಗ ಕನ್ನಡಿಗರಿಗೆ ಸಿಗಲಿ: ಟ್ವಿಟರ್ ಟ್ರೆಂಡ್

ಯಡಿಯೂರಪ್ಪನವರೆ, ಕರ್ನಾಟಕದ ಶೇ.75 ರಷ್ಟು ಹುದ್ದೆಗಳನ್ನು ಕನ್ನಡಿಗರಿಗೆ ಮೀಸಲಿಡಿ. ಸರೋಜಿನಿ ಮಹಿಷಿ ವರದಿ ಸಂಪೂರ್ಣ ಅನುಷ್ಠಾನ ಮಾಡಿ ಎಂದು ಮೊಹಮ್ಮದ್ ಹನೀಫ್ ಎಂಬುವವರು ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಸರೋಜಿನಿ ಮಹಿಷಿ ವರದಿ ಸಂಪೂರ್ಣ ಅನುಷ್ಠಾನವಾಗಬೇಕು ಮತ್ತು ಕರ್ನಾಟಕದ ಉದ್ಯೋಗಗಳು ಕನ್ನಡಿಗರಿಗೆ ಸಿಗಲಿ ಎಂಬ ಹಕ್ಕೊತ್ತಾಯಗಳನ್ನಿಟ್ಟುಕೊಂಡು ಕರ್ನಾಟಕ ಜನಾಧಿಕಾರ ಪಕ್ಷ ಮತ್ತು ಕರ್ನಾಟಕ ರಣಧೀರ ಪಡೆಯಿಂದ ಇಂದು ಟ್ವಿಟರ್ ಅಭಿಯಾನ ನಡೆಸಲಾಯಿತು.

“ಕರುನಾಡು ನಮ್ಮದು, ನಾವು ಕನ್ನಡಿಗರು ನಮ್ಮ ನೆಲ, ನಮ್ಮ ಜಲ, ನಮ್ಮ ಗಾಳಿ ಅಂತೆಯೇ ಉದ್ಯೋಗವೂ ನಮ್ಮದೇ. ಕರ್ನಾಟಕಕ್ಕೆ ಭದ್ರ ಬುನಾದಿಯೊಂದು ಬೇಕಿದೆ ಅದು ಕನ್ನಡಿಗರಿಗೆ ಉದ್ಯೋಗದ ಮೂಲಕವೇ ಆಗಬೇಕಿದೆ. ಕನ್ನಡದ ಅಸ್ಮಿತೆಗಾಗಿ ಹೋರಾಡುವ ನಾವು ಕನ್ನಡದ ಉದ್ಯೋಗಕ್ಕೂ ಹೋರಾಡುವ. ಕ್ರಾಂತಿಯ ಕಿಡಿ ಆರದಿರಲಿ. ಕನ್ನಡಿಗರ ವೀರ ಧ್ವನಿ ಗಟ್ಟಿಯಾಗಲಿ” ಎಂಬ ಘೋಷಣೆಗಳೊಂದಿಗೆ ಹತ್ತಾರು ಸಾವಿರ ಟ್ವೀಟ್‌ಗಳು ದಾಖಲಾಗಿದ್ದು, ಉದ್ಯೋಗಕ್ಕಾಗಿ ದೊಡ್ಡ ದನಿ ಕೇಳಿಬಂದಿದೆ.

“ಅನ್ನ ಕೊಡುವ ಚಿನ್ನದ ನಾಡಿದು ಕರ್ನಾಟಕ, ಇಲ್ಲಿ ಉದಯಿಸಿವ ಪ್ರತೀ ಉದ್ಯೋಗಗಳೂ ಕನ್ನಡಿಗರಿಗಾಗೇ ಮೀಸಲು, ಗಟ್ಟಿ ದನಿಯಲ್ಲಿ ಹೇಳಿ ಕರ್ನಾಟಕದ ಉದ್ಯೋಗಗಳು ಕನ್ನಡಿಗರಿಗೆ” ಎಂದು ಕರ್ನಾಟಕ ರಣಧೀರರ ಪಡೆಯ ರಾಜ್ಯಾಧ್ಯಕ್ಷ ಹರೀಶ್ ಕುಮಾರ್ ಬಿ ಟ್ವೀಟ್ ಮಾಡಿದ್ದಾರೆ.

ನಮ್ಮ ಉದ್ದೇಶ ಇಷ್ಟೇ ಯಾವ ಕಂಪನಿ ಬ್ಯಾಂಕ್ ಗಳಿಗೆ ಹೋದ್ರು ಕನ್ನಡ ಬಿಟ್ಟು ಮಿಕ್ಕೆಲ್ಲಾ ಭಾಷೆಗಳನ್ನು ಕೇಳುತ್ತಿದ್ದೇವೆ. ಇನ್ಮೇಲೆ ಎಂತಹ ದೊಡ್ಡ ಕಂಪನಿಗಳಿಗೆ ಹೋದ್ರು ಬರೀ ಕನ್ನಡವೇ ಕೇಳಿಸಬೇಕು ರಾಜ್ಯೋತ್ಸವ ದೊಡ್ಡದಾಗಿ ಆಚರಣೆ ಆಗಬೇಕು.. ಎಲ್ಲೆಡೆ ಕನ್ನಡಿಗರೇ ಕಾಣಬೇಕು ಎಂದು ರೂಪೇಶ್ ರಾಜಣ್ಣನವರು ಟ್ವೀಟ್ ಮಾಡಿದ್ದಾರೆ.

ಯಡಿಯೂರಪ್ಪನವರೆ, ಕರ್ನಾಟಕದ ಶೇ.75 ರಷ್ಟು ಹುದ್ದೆಗಳನ್ನು ಕನ್ನಡಿಗರಿಗೆ ಮೀಸಲಿಡಿ. ಸರೋಜಿನಿ ಮಹಿಷಿ ವರದಿ ಸಂಪೂರ್ಣ ಅನುಷ್ಠಾನ ಮಾಡಿ ಎಂದು ಮೊಹಮ್ಮದ್ ಹನೀಫ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಕರ್ನಾಟಕ ಅತಿ ಹೆಚ್ಚು ತೆರಿಗೆ ಕಟ್ಟುವ ರಾಜ್ಯಗಳಲ್ಲೊಂದಾಗಿದೆ. ಭಾರತದ ಇತರ ರಾಜ್ಯಗಳಿಗೆ ಉದ್ಯೋಗ ಒದಗಿಸಿದೆ. ಆದರೆ ಎಲ್ಲಾ ಸರ್ಕಾರಗಳು ಮತ್ತು ಖಾಸಗಿ ಕಂಪನಿಗಳಿಂದ ಕನ್ನಡಿಗರು ನಿರಂತರವಾಗಿ ನಿರ್ಲಕ್ಷ್ಯಕ್ಕೊಳಗಾಗಿದ್ದಾರೆ ಎಂದು ಸಿದ್ದೇಶ್ ಎಚ್ ಟ್ವೀಟ್ ಮಾಡಿದ್ದಾರೆ.

ಈ ವರದಿ ಪ್ರಕಟವಾಗುವ ಹೊತ್ತಿಗೆ 18 ಸಾವಿರ ಕನ್ನಡಿಗರು ಸಮರ್ಪಕ ಉದ್ಯೋಗ ನೀತಿಗಾಗಿ ಒತ್ತಾಯಿಸಿ ಟ್ವೀಟ್ ಮಾಡಿದ್ದಾರೆ. ಕೆಲವು ಇಲ್ಲಿವೆ.


ಇದನ್ನೂ ಓದಿ: “ಕರ್ನಾಟಕದ ಉದ್ಯೋಗಗಳು ಕನ್ನಡಿಗರಿಗೇ ಸಿಗಲಿ”: ಸ್ವಾತಂತ್ರ್ಯ ದಿನಾಚರಣೆಯಂದು ದಿಟ್ಟ ಹೋರಾಟ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕನ್ನಡದ ನಿರುದ್ಯೋಗಿ ಯುವಕರ ಕಣ್ಣೀರು ಒರೆಸುವವರು ಯಾರು……? ???? ಅದಕ್ಕಾಗಿ ಎಲ್ಲರೂ ಒಂದಾಗೋಣ…. ಮುಂದೆ ಯಾದರೂ ಕನ್ನಡಕ್ಕಾಗಿ ಭಾಳೋಣ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...