Homeಮುಖಪುಟಲವ್‌ ಜಿಹಾದ್‌, ಗೋ ಹತ್ಯೆ ನಿಷೇಧದಂತಹ ನಾಟಕಗಳು ಬಿಜೆಪಿಯನ್ನು ಗೆಲ್ಲಿಸುವುದಿಲ್ಲ- ‌ RLD ಮುಖ್ಯಸ್ಥ ಜಯಂತ್‌...

ಲವ್‌ ಜಿಹಾದ್‌, ಗೋ ಹತ್ಯೆ ನಿಷೇಧದಂತಹ ನಾಟಕಗಳು ಬಿಜೆಪಿಯನ್ನು ಗೆಲ್ಲಿಸುವುದಿಲ್ಲ- ‌ RLD ಮುಖ್ಯಸ್ಥ ಜಯಂತ್‌ ಚೌಧರಿ

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷದ ವಿಧಾನಸಭಾ ಚುನಾವಣೆಗೆ ತಯಾರಿಗಳು ಸದ್ದಿಲ್ಲದೇ ನಡೆಯತೊಡಗಿವೆ. ಆಡಳಿತಾರೂಢ ಬಿಜೆಪಿಗೆ ಕೊರೋನಾ ಮತ್ತು ರೈತರ ಪ್ರತಿಭಟನೆಗಳು ಆತಂಕವನ್ನು ತಂದಿವೆ. ಅತ್ತ ವಿರೋಧ ಪಕ್ಷಗಳು ಕೂಡ ಉತ್ತರ ಪ್ರದೇಶ ಚುನಾವಣೆಗೆ ರಾಜಕೀಯ ತಂತ್ರಗಾರಿಕೆಯನ್ನು ಆರಂಭಿಸಿವೆ. ರೈತ ಹೋರಾಟಗಳಲ್ಲೂ ಕಾಣಿಸಿಕೊಳ್ಳುತ್ತಿವೆ. ಕೆಲವು ಪಕ್ಷಗಳು ರೈತರ ಜೊತೆ ನಿಂತಿವೆ.  ಹಾಗೆ ನಿಂತಿರುವ ಪಕ್ಷಗಳಲ್ಲಿ ಒಂದು ರಾಷ್ಟ್ರೀಯ ಲೋಕ ದಳ. ರಾಷ್ಟ್ರೀಯ ಲೋಕದಳದ ಅಧ್ಷಕ್ಷ ಜಯಂತ್‌ ಚೌಧರಿ ಬಿಜೆಪಿ ವಿರುದ್ಧ ತಮ್ಮ ಹೋರಾಟವನ್ನು ಮುಂದುವರೆಸುವುದಾಗಿ ಹೇಳಿದ್ದಾರೆ. ರೈತರ ಬಗೆಗಿನ ಅಸಡ್ಡೆ ಮತ್ತು ತಿರಸ್ಕಾರ ಬಿಜೆಪಿಗೆ ಮುಳುವಾಗಲಿದೆ ಎಂದು ಅವರು  ವಾಗ್ದಾಳಿ ನಡೆಸಿದ್ದಾರೆ.  ಇನ್ನು ಬಿಜೆಪಿಯ ಲವ್‌ ಜಿಹಾದ್‌, ಗೋ ಹತ್ಯೆಯ ಹುಸಿ ನಾಟಕಗಳು ಅವರಿಗೆ ಚುನಾವಣೆಯ ಗೆಲುವನ್ನು ತಂದು ಕೊಡುವುದಿಲ್ಲ ಎಂದು ಇದೇ ಸಂದರ್ಭದಲ್ಲಿ ಜಯಂತ್‌ ಹೇಳುತ್ತಾರೆ.

ಆರೋಗ್ಯ ವ್ಯವಸ್ಥೆಯ ಸುಧಾರಣೆ. ಶಿಕ್ಷಣ ಮತ್ತು ಸಮತೋಲಿತ ಅಭಿವೃದ್ಧಿಗೆ ಮಾತ್ರ ಈ ಬಾರಿ ಯುಪಿಯ ಜನ ಮತ ಹಾಕಲಿದ್ದಾರೆ ಎಂದು ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪಶ್ಚಿಮ ಬಂಗಾಳ ಚುನಾವಣೆಯ ನಂತರ ದೇಶದ ಗಮನ ಉತ್ತರ ಪ್ರದೇಶದ ಕಡೆ ತಿರುಗುತ್ತಿರುವ ಈ ಹೊತ್ತಿನಲ್ಲಿ ಜಯಂತ್‌ ಚೌಧರಿ ಆರ್‌ಎಲ್‌ಡಿಯ ಹೊಸ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಜಯಂತ್‌ ಯಾದವ್‌ ತಮ್ಮ ಪಕ್ಷವು ಧರ್ಮ ಆಧಾರಿತ ಚುನಾವಣಾ ಪ್ರಚಾರಕ್ಕೆ ಮತ್ತು ಓಲೈಕೆಗೆ ಈ ಚುನಾವಣೆಯಲ್ಲಿ ಅವಕಾಶ ಕೊಡುವುದಿಲ್ಲ ಎಂದು ಹೇಳಿದ್ದಾರೆ.

ತಮ್ಮ ತಂದೆ ಅಜಿತ್‌ ಸಿಂಗ್‌ ಚೌಧರಿ ಮರಣದ ನಂತರ ಪಕ್ಷದ ಅಧಿಕಾರ  ಸ್ವೀಕರಿಸಿರುವ ಜಯಂತ್‌ ಚೌಧರಿ ತಮ್ಮ ಪಕ್ಷ ಮತ್ತು ಸಮಾಜವಾದಿ ಪಕ್ಷದ ಜೊತೆ ಉತ್ತಮ ಹೊಂದಾಣಿಕೆಯಿದೆ. ಮುಂದೆಯೂ ಅದೇ ಹೊಂದಾಣಿಕೆ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.

ಮುಂದೆ ಉತ್ತರ ಪ್ರದೇಶದಲ್ಲಿ ಎಲ್ಲಾ ವಿರೋಧ ಪಕ್ಷಗಳನ್ನು ಒಳಗೊಂಡ ಮಹಾ ಘಟಬಂಧನ ಒಕ್ಕೂಟ ನಿರ್ಮಾಣಮಾಡುವ ಪ್ರಯತ್ನ ನಡೆಸುತ್ತೀರಾ ಎಂಬ ಪ್ರಶ್ನೆಗೆ ನಮಗೆ ಜನರ ಸಮಸ್ಯೆಗಳು ಬಹಳ ಮುಖ್ಯ. ನಮ್ಮ ಮತ್ತು ಬೇರೆ ಪಕ್ಷಗಳ ಅಜೆಂಡಾ, ಪ್ರಣಾಳಿಕೆಗಳು ಮತ್ತು ಉದ್ಧೇಶಗಳು ಒಂದೇ ಆಗಿದ್ದರೆ ಕೈಜೋಡಿಸಬಹುದು. ಸದ್ಯ ನಮ್ಮ ಮುಂದೆ ಅಂತಹ ಆಯ್ಕೆಗಳಿಲ್ಲ ಎಂದು ಜಯಂತ್‌ ಚೌಧರಿ ಹೇಳುತ್ತಾರೆ.

ಇದನ್ನೂ ಓದಿ : ತಮಿಳುನಾಡು: ಸತಿ-ಪತಿಗಳಾದ ಸೋಶಿಯಲಿಸಂ ಮತ್ತು ಮಮತಾ ಬ್ಯಾನರ್ಜಿ

ಕಾಂಗ್ರೆಸ್‌ ಪಕ್ಷ ಉತ್ತರ ಪ್ರದೇಶದಲ್ಲಿ ಯಾವ ಪಾತ್ರ ವಹಿಸಬಹುದು? ಪಂಚಾಯತ ಚುನಾವಣೆಯಲ್ಲಿನ ಕಾಂಗ್ರೆಸ್‌ ನ ಕಳಪೆ ಪ್ರದರ್ಶನಗಳು ಅಸ್ಸೆಂಬ್ಲಿ ಚುನಾವಣೆಗಳ ಮೇಲೆ ಪ್ರಭಾವ ಬೀರಬಹುದೇ ? ಎಂಬ ಪ್ರಶ್ನೆಗೆ ಜಯಂತ್‌ ಯಾವುದೇ ಉತ್ತರಗಳನ್ನು ನೀಡಲು ನಿರಾಕರಿಸುತ್ತಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಬದಲಾವಣೆ ಕುರಿತು, ಸಚಿವ ಸಂಪುಣ ವಿಸ್ತರಣೆಯ ಕುರಿತು ಕೇಳಿದಾಗ ಜಯಂತ್‌ ಯಾದವ್‌  “ಬಿಜೆಪಿಯು ತನ್ನ ಪಕ್ಷದ ಒಳಗಿನ ಆಂತರಿಕ ಸಮಸ್ಯೆಗಳನ್ನು ಮುಚ್ಚಿ ಹಾಕಿಕೊಳ್ಳಲೂ ಈ ಚರ್ಚೆಗಳನ್ನು ಹುಟ್ಟುಹಾಕಿದೆ. ಕೇವಲ ಒಬ್ಬರು ಇಬ್ಬರು ನಾಯಕರನ್ನು ಬದಲಾಯಿಸುವುದರಿಂದ ಸರ್ಕಾರದಲ್ಲಿ ಯಾವುದೇ ಬದಲಾವಣೆ ಸಾಧ್ಯವಿಲ್ಲ.  ಬಿಜೆಪಿಯ ಸರ್ಕಾರ ಜಾತಿ ಲೆಕ್ಕಾಚಾರದ ಗೋಜಲಾಗಿದೆ. ಯೋಗಿ ಸರ್ಕಾರ ಜನರಿಗೆ ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯಗಳನ್ನು ನೀಡಲು ವಿಫಲವಾಗಿದೆ. ಆರ್ಥಿಕ ಪ್ರಗತಿ ಬಿಜೆಪಿ ಅವಧಿಯಲ್ಲಿ ಕುಂಠಿತವಾಗಿದೆ. ಯೋಗಿ ಆದಿತ್ಯನಾಥ ಸರ್ಕಾರದ ಕೊರೋನಾ ನಿವರ್ವಹಣೆಯ ರೀತಿಯಿಂದ ನೂರಾರು ಜನರ ದೇಹ ನದಿಯಲ್ಲಿ ತೇಲಿ ಹೋಗುವಂತ ಕೆಟ್ಟ ದಿನಗಳನ್ನು ಉತ್ತರ ಪ್ರದೇಶ ನೋಡುವಂತಾಯಿತು. ಯೋಗಿ ಆದಿತ್ಯನಾಥ್‌ ಸರ್ಕಾರ ಕೊರೋನಾ ನಿರ್ವಹಣೆಯಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಈ ವಿಷಯವನ್ನೂ ಜನರ ಮುಂದೆ ಕೊಂಡೊಯ್ಯುತ್ತೇವೆ ಎಂದು ಜಯಂತ್‌ ಯಾದವ್‌ ಹೇಳಿದ್ದಾರೆ.

ರೈತ ಹೋರಾಟಗಳು ಉತ್ತರ ಪ್ರದೇಶ ಚುನಾವಣೆಯ ಮುಖ್ಯ ವಿಷಯಗಳಾಗಬಹುದೇ? ಎಂಬ ಪ್ರಶ್ನೆಗೆ ಜಯಂತ್‌ ಚೌಧರಿ, ಖಂಡಿತ ರೈತ ಹೋರಾಟಗಳು ಉತ್ತರ ಪ್ರದೇಶ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿವೆ. ಪಂಚಾಯತ್‌ ಚುನಾವಣೆಗಳಲ್ಲಿಯೇ ಇದನ್ನು ಗಮನಿಸಹಬಹುದು. ಕೇಂದ್ರ ಸರ್ಕಾರದ ಮತ್ತು ಬಿಜೆಪಿಯ ರೈತ ವಿರೋಧಿ ನೀತಿ ವಿರುದ್ಧ ನಾವೆಲ್ಲರೂ ಉತ್ತರ ಪ್ರದೇಶದಲ್ಲಿ ಹೋರಾಟವನ್ನು ಮುಂದುವರೆಸಲಿದ್ದೇವೆ. ಕೇಂದ್ರ ಸರ್ಕಾರ ಮತ್ತು ಯೋಗಿ ಆದಿತ್ಯನಾಥ್‌ ಸರ್ಕಾರದ ವೈಫಲ್ಯವನ್ನು ಎಳೆ ಎಳೆಯಾಗಿ ತೆರೆದಿಡುತ್ತೇವೆ. ರೈತರನ್ನು ಸಂಘಟಿಸಿ ಬಿಜೆಪಿ ವಿರುದ್ಧ ಹೋರಾಟ ನಡೆಸಲಿದ್ದೇವೆ ಎಂದು ಜಯಂತ್‌ ಚೌಧರಿ ತಿಳಿಸಿದ್ದಾರೆ.

ಒಟ್ಟಿನಲ್ಲಿ ಉತ್ತರ ಪ್ರದೇಶದಲ್ಲಿ ಚುನಾವಣೆಯ ದಿನಗಳು ಹತ್ತಿರವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ತೀವ್ರ ಗೊಳ್ಳುತ್ತಿವೆ. ಬಿಜೆಪಿಯ ವಿರುದ್ಧ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ,  ರೈತ ಹೋರಾಟದ ಲಾಭ ಪಡೆಯುವ ಪ್ರಯತ್ನಗಳನ್ನು ಅನೇಕ ನಾಯಕರು ಮಾಡತೊಡಗಿದ್ದಾರೆ. ಅದೇ ಪ್ರಯತ್ನದಲ್ಲಿ ಆರ್‌ಎಲ್‌ಡಿ ನಾಯಕ ಜಯಂತ್‌ ಚೌಧರಿ ಕೂಡ ತೊಡಗಿರುವಂತೆ ತೋರುತ್ತದೆ.

ಇದನ್ನೂ ಓದಿ : ಅಂಬೇಡ್ಕರ್‌ ಇದ್ದಿದ್ದರೇ ಬಿಜೆಪಿಗರು ಅವರನ್ನು ಪಾಕ್ ಪರ ಎನ್ನುತ್ತಿದ್ದರು: ಮೆಹಬೂಬಾ ಮುಫ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...