Homeಮುಖಪುಟರಾಮ ಜನ್ಮಭೂಮಿ ಟ್ರಸ್ಟ್‌‌ನಿಂದ ಭೂ ದಂಧೆ: ರಾಮನ ಹೆಸರಲ್ಲಿ ಲೂಟಿ ಎಂದ AAP, SP

ರಾಮ ಜನ್ಮಭೂಮಿ ಟ್ರಸ್ಟ್‌‌ನಿಂದ ಭೂ ದಂಧೆ: ರಾಮನ ಹೆಸರಲ್ಲಿ ಲೂಟಿ ಎಂದ AAP, SP

- Advertisement -
- Advertisement -

ರಾಮ ಜನ್ಮಭೂಮಿ ಟ್ರಸ್ಟ್‌‌‌ನಲ್ಲಿ ಭಾರಿ ಹಗರಣಗಳು ಬೆಳಕಿಗೆ ಬಂದಿವೆ. ರಾಮನ ಹೆಸರಲ್ಲಿ ಭೂ ದಂಧೆ ನಡೆಯುತ್ತಿದ್ದು ಇದರಲ್ಲಿ ಲ್ಯಾಂಡ್‍ ಮಾಫಿಯಾ ಭಾಗಿಯಾಗಿದೆ ಎಂಬ ಗಂಭೀರ ಆರೋಪವನ್ನು ಆಮ್‍ ಆದ್ಮಿ(AAP) ಪಕ್ಷದ ರಾಜ್ಯಸಭಾ ಸದಸ್ಯ ಸಂಜಯ ಸಿಂಗ್‍ ಮತ್ತು ಸಮಾಜವಾದಿ ಪಕ್ಷ(SP)ದ ಮಾಜಿ ಶಾಸಕ ಪವನ್‍ ಪಾಂಡೆ ಪ್ರತ್ಯೇಕ ಪತ್ರಿಕಾಗೋಷ್ಠಿಗಳಲ್ಲಿ ಮಾಡಿದ್ದಾರೆ.

ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಟ್ವೀಟ್‍ ಮಾಡಿರುವ ಸಂಜಯಸಿಂಗ್‍ ಅವರು, ಟ್ರಸ್ಟ್‌ನ ಮುಖ್ಯಸ್ಥ ಚಂಪತ್ ರಾಯ್ ಭೂ ದಂಧೆ ನಡೆಸುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ.

2 ಕೋಟಿ ರೂ. ಗೆ ಒಂದು ಜಮೀನು ಖರೀದಿಯಾಗುತ್ತದೆ. ಕೇವಲ 5 ನಿಮಿಷಗಳ ನಂತರ ಚಂಪತ್‍ರಾಯ ನೇತೃತ್ವದಲ್ಲಿ ರಾಮಜನ್ಮಭೂಮಿ ಟ್ರಸ್ಟ್‌‌ ಅದೇ ಜಮೀನನ್ನು 18.5 ಕೋಟಿ ರೂ.ಗಳಿಗೆ ಖರೀದಿಸಿದೆ ಎಂದು ಸಂಜಯ್‍ಸಿಂಗ್‍ ದಾಖಲೆಗಳ ಸಮೇತ ಅಪಾದನೆ ಮಾಡಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್‌ ಈಗ ಇದ್ದಿದ್ದರೆ ಬಿಜೆಪಿಗರು ಅವರನ್ನು ಪಾಕ್ ಪರ ಎನ್ನುತ್ತಿದ್ದರು: ಮೆಹಬೂಬಾ ಮುಫ್ತಿ

ಇದು ದೇಶದ ಕೋಟ್ಯಂತರ ಜನರ ನಂಬಿಕೆಗೆ ನೀಡಿದ ಪೆಟ್ಟಾಗಿದೆ. ರೈತರು, ಕಾರ್ಮಿಕರು ಮತ್ತು ಬೀದಿ ಬದಿ ವ್ಯಾಪಾರಿಗಳಿಂದ ಮಂದಿರ ನಿರ್ಮಾಣಕ್ಕೆ ಚಂದಾ ಸಂಗ್ರಹಿಸಿ ಅದನ್ನು ರಾಮನ ಹೆಸರಲ್ಲಿ ಲೂಟಿ ಮಾಡಲಾಗುತ್ತಿದೆ ಎಂದಿರುವ ಅವರು, ಮೋದಿಯವರೇ ಇ.ಡಿ, ಸಿಬಿಐ ತನಿಖೆ ನಡೆಸಿ ಹಗರಣದಲ್ಲಿ ಭಾಗಿಯಾದವರನ್ನು ಜೈಲಿಗೆ ಹಾಕಿ ಎಂದು ಆಗ್ರಹಿಸಿದ್ದಾರೆ.

ಅಯೋಧ್ಯೆಯ ರಾಮ ಮಂದಿರಕ್ಕೆ ಭೂಮಿ ಖರೀದಿಸುವಾಗ ಕೋಟ್ಯಂತರ ಮೊತ್ತದ ಆರ್ಥಿಕ ಅಕ್ರಮಗಳು ನಡೆದಿವೆ ಎಂದು ಸಮಾಜವಾದಿ ಪಕ್ಷದ ಮಾಜಿ ಶಾಸಕ ಪವನ್ ಪಾಂಡೆ ಕೂಡ ಭಾನುವಾರ ಆರೋಪಿಸಿದ್ದಾರೆ.
ಏಕಕಾಲದಲ್ಲಿ ನಡೆದ ಪತ್ರಿಕಾಗೋಷ್ಠಿಗಳಲ್ಲಿ, (ಲಕ್ನೋದಲ್ಲಿ ಸಂಜಯ ಸಿಂಗ್ ಮತ್ತು ಅಯೋಧ್ಯೆಯಲ್ಲಿ ಪವನ್‍ ಪಾಂಡೆ) ಎರಡು ಭೂ ಖರೀದಿ ಒಪ್ಪಂದಗಳ ಪ್ರತಿಗಳನ್ನು ಮಾಧ್ಯಮಗಳಿಗೆ ನೀಡಲಾಗಿದೆ.

ಮೊದಲ ಒಪ್ಪಂದ

ಅಯೋಧ್ಯೆಯ ಕುಸುಮ್ ಪಾಠಕ್‌ ಮತ್ತು ಹರೀಶ್‍ ಪಾಠಕ್‍ ಎನ್ನುವವರಿಂದ ರವಿ ಮೋಹನ್‍ ತಿವಾರಿ ಮತ್ತು ಸುಲ್ತಾನ್ ಅನ್ಸಾರಿ ಎಂಬಿಬ್ಬರು 1.20 ಹೆಕ್ಟೇರ್ ಪ್ರದೇಶದಲ್ಲಿ ಹರಡಿರುವ ಈ ಆಸ್ತಿಯನ್ನು ಖರೀದಿ ಮಾಡುತ್ತಾರೆ. ಈ ಆಸ್ತಿಯ ಮೌಲ್ಯವನ್ನು ಸರ್ಕಾರ ನಿಗದಿಪಡಿಸಿದ ಪ್ರತಿ ಯೂನಿಟ್ ಪ್ರದೇಶದ ದರಕ್ಕೆ ಅನುಗುಣವಾಗಿ 5.79 ಕೋಟಿ ರೂ ಎಂದು ಪಟ್ಟಿ ಮಾಡಲಾಗಿದೆ. ಆದರೆ ಅಂತಿಮವಾಗಿ ಆಸ್ತಿಯ ಮಾರಾಟದ ಬೆಲೆ ಕೇವಲ 2 ಕೋಟಿ ರೂ. ಈ ಮಾರಾಟಕ್ಕಾಗಿ ಪಾವತಿಸಿದ ಸ್ಟಾಂಪ್ ಡ್ಯೂಟಿ ಇದನ್ನು ಪುಷ್ಟೀಕರಿಸುತ್ತದೆ. ಈ ಖರೀದಿಯ ಸಮಯವನ್ನು ಮಾರ್ಚ್‌ 18, 2021 ರ ಸಂಜೆ 5 ಗಂಟೆ 10 ನಿಮಿಷ ಎಂದು ಅಧಿಕೃತವಾಗಿ ದಾಖಲಿಸಲಾಗಿದೆ.

ಇದನ್ನೂ ಓದಿ: ಲವ್‌ ಜಿಹಾದ್‌, ಗೋ ಹತ್ಯೆ ನಿಷೇಧದಂತಹ ನಾಟಕಗಳು ಬಿಜೆಪಿಯನ್ನು ಗೆಲ್ಲಿಸುವುದಿಲ್ಲ- ‌ RLD ಮುಖ್ಯಸ್ಥ

ಎರಡನೇ ಒಪ್ಪಂದ

ಅಂದೇ ಮಾರ್ಚ್‌ 18ರಂದು, ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಇದೇ ಆಸ್ತಿಯನ್ನು ಸುಲ್ತಾನ್ ಅನ್ಸಾರಿ ಮತ್ತು ರವಿಮೋಹನ್‍ ತಿವಾರಿಯಿಂದ ಖರೀದಿಸಿದೆ. ಸುಲ್ತಾನ್ ಅನ್ಸಾರಿ ಮತ್ತು ರವಿಮೋಹನ್‍ ತಿವಾರಿಗೆ ಮಾರಾಟವಾದ ಐದೇ ನಿಮಿಷದಲ್ಲಿ ಈ ಖರೀದಿ ನಡೆದಿದೆ. ಖರೀದಿಗೆ ಪಾವತಿಸಿದ ಸ್ಟಾಂಪ್ ಡ್ಯೂಟಿ 1.29 ಕೋಟಿ ರೂ. ಭೂಮಿಯನ್ನು 18.50 ಕೋಟಿ ರೂ.ಗೆ ಮಾರಾಟ ಮಾಡಲಾಗಿದೆ. ಈ ವಹಿವಾಟಿನ ಸಮಯ ಅದೇ ದಿನ ಸಂಜೆ 5.11 ಎಂದು ದಾಖಲಾಗಿದೆ.

ಐದೇ ನಿಮಿಷದಲ್ಲಿ 9 ಪಟ್ಟು ಏರಿದ ಆಸ್ತಿ ಮೌಲ್ಯ!

“ಒಂದು ಆಸ್ತಿಯ ಮೌಲ್ಯವನ್ನು ಐದು ನಿಮಿಷಗಳಲ್ಲಿ 2 ಕೋಟಿಯಿಂದ 18 ಕೋಟಿ ರೂ.ಗೆ ಏರಿದ್ದನ್ನು ಹಗರಣ ಎನ್ನದೇ ಇರಲಾಗುತ್ತಾ? ಪ್ರತಿ ಸೆಕೆಂಡ್‍ಗೆ 5 ಲಕ್ಷ ರೂ ದರದಲ್ಲಿ ಆಸ್ಯಿಯ ಮೌಲ್ಯ ಹೆಚ್ಚಾಗಿದ್ದು ಭಾರತದ ಇತಿಹಾಸದಲ್ಲೇ ಮೊದಲು. ಜಾರಿ ನಿರ್ದೇಶನಾಲಯ ಮತ್ತು ಕೇಂದ್ರ ತನಿಖಾ ದಳ ಇದನ್ನು ಪರಿಶೀಲಿಸಬೇಕು. ಟ್ರಸ್ಟ್ ಹಿಂದೂ ಭಕ್ತರ ಹಣವನ್ನು ತಿಂದು ಹಾಕುತ್ತಿದೆ” ಎಂದು ಸಂಜಯ್‍ಸಿಂಗ್‍‌ ಆರೋಪಿಸಿದ್ದಾರೆ.

ಟ್ರಸ್ಟ್‌ನ ಸದಸ್ಯ ಅನಿಲ್ ಕುಮಾರ್ ಮಿಶ್ರಾ ಮತ್ತು ಅಯೋಧ್ಯೆಯ ಮೇಯರ್ ರಿಷಿಕೇಶ್ ಉಪಾಧ್ಯಾಯ ಕೂಡ ಎರಡೂ ಒಪ್ಪಂದಗಳಲ್ಲಿ ಸಾಮಾನ್ಯ ಸಾಕ್ಷಿಯಾಗಿದ್ದಾರೆ.

ಮಾಜಿ ಶಾಸಕ ಪವನ್‍ ಪಾಂಡೆ, “ಟ್ರಸ್ಟ್ ಮತ್ತು ಮೇಯರ್ ಈ ವಂಚನೆಯ ಬಗ್ಗೆ ಸಂಪೂರ್ಣವಾಗಿ ತಿಳಿದಿದ್ದರು. ಕೋಟ್ಯಂತರ ಹಿಂದೂಗಳು ಮಂದಿರಕ್ಕಾಗಿ ಬೆವರಿನ ಶ್ರಮದ ದುಡ್ಡು ನೀಡಿದ್ದಾರೆ. ಆದರೆ ಬಿಜೆಪಿ ಬೆಂಬಲಿತ ಕೆಲವು ವ್ಯಕ್ತಿಗಳು ಮತ್ತು ಟ್ಟಸ್ಟ್‌‌ ಸದಸ್ಯರು ಲೂಟಿ ನಡೆಸುತ್ತಿದ್ದಾರೆ” ಎಂದು ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಪೆಟ್ರೋಲ್‌ ದರ ಹೆಚ್ಚಳಕ್ಕೆ ಕಾರಣ ತಿಳಿಸಿದ ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...