Homeಅಂತರಾಷ್ಟ್ರೀಯಅಧಿಕಾರ ಕಳೆದುಕೊಂಡ ನೆತನ್ಯಾಹು: ನಫ್ತಾಲಿ ಬೆನೆಟ್ ಇಸ್ರೇಲ್‍ನ ಹೊಸ ಪ್ರಧಾನಿ

ಅಧಿಕಾರ ಕಳೆದುಕೊಂಡ ನೆತನ್ಯಾಹು: ನಫ್ತಾಲಿ ಬೆನೆಟ್ ಇಸ್ರೇಲ್‍ನ ಹೊಸ ಪ್ರಧಾನಿ

- Advertisement -
- Advertisement -

ಇಸ್ರೇಲಿನ ವಿಭಿನ್ನ ಸಿದ್ದಾಂತಗಳ ಪಕ್ಷಗಳ ಮೈತ್ರಿಕೂಟ ಅಧಿಕಾರಕ್ಕೆ ಏರಿದೆ. ಭಾನುವಾರ ಅತಿ ಹೆಚ್ಚು ಕಾಲ ಅಧಿಕಾರ ನಡೆಸಿದ ಪ್ರಧಾನ ಮಂತ್ರಿ ಬೆಂಜಮಿನ್ ನೆತನ್ಯಾಹು ಅಧಿಕಾರ ಕಳೆದುಕೊಂಡಿದ್ದಾರೆ. ದೇಶದ ಪ್ರಕ್ಷುಬ್ಧ ರಾಜಕೀಯ ಸನ್ನಿವೇಶದಲ್ಲಿ ನಡೆದ ಈ ಭಾರಿ ಬದಲಾವಣೆಯಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದಿದೆ.

ಬಲಪಂಥೀಯ ಯಹೂದಿ ಜನಾಂಗೀಯವಾಗಿ ಮತ್ತು ಮಾಜಿ ಟೆಕ್ ಮಿಲಿಯನೇರ್ ಆಗಿರುವ ನಫ್ತಾಲಿ ಬೆನೆಟ್ ಅವರು ಈಗ ನೂತನ ಪ್ರಧಾನಿಯಾಗಿದ್ದಾರೆ.

71 ವರ್ಷದ ನೆತನ್ಯಾಹು ಸೋಲಿನ ಸ್ವಲ್ಪ ಸಮಯದ ಮೊದಲು, “ಪ್ರತಿಪಕ್ಷದಲ್ಲಿರುವುದು ನಮ್ಮ ಹಣೆಬರಹವಾಗಿದ್ದರೆ, ಅದನ್ನು ತಪ್ಪಿಸಲಾಗದು. ನಾವು ಈ ಕೆಟ್ಟ ಸರ್ಕಾರವನ್ನು ಕೆಳಗಿಳಿಸಿ ದೇಶವನ್ನು ನಮ್ಮ ದಾರಿಯಲ್ಲಿ ಮುನ್ನಡೆಸುವವರೆಗೆ ಹೋರಾಡುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಸೋಮವಾರದಿಂದ ಅನ್‌ಲಾಕ್‌, 11 ಜಿಲ್ಲೆಗಳಲ್ಲಿ ಲಾಕ್‌ಡೌನ್ ಮುಂದುವರಿಕೆ

ಅವರ ಬಲಪಂಥೀಯ ಬೆಂಬಲಿಗರಿಂದ “ಕಿಂಗ್ ಬೀಬಿ” ಎಂದು ಹೊಗಳಲ್ಪಡುವ ಮತ್ತು ಅವರ ಟೀಕಾಕಾರರಿಂದ “ಅಪರಾಧ ಮಂತ್ರಿ” ಎಂದು ಖಂಡಿಸಲ್ಪಡುವ ನೆತನ್ಯಾಹು ಇಸ್ರೇಲಿ ರಾಜಕೀಯದಲ್ಲಿ ಬಹುಕಾಲದಿಂದ ಪ್ರಬಲ ಮತ್ತು ವಿಭಜಕ ವ್ಯಕ್ತಿ ಎನಿಸಿದ್ದಾರೆ.

ಹಲವು ವಾರಗಳ ಕಾಲ ತೀವ್ರವಾದ ರಾಜಕೀಯ ನಾಟಕದ ನಂತರ ಭಾನುವಾರ ನೆಸ್ಸೆಟ್ ಶಾಸಕಾಂಗದಲ್ಲಿ ಮತದಾನ ನಡೆಯಿತು. ಒಟ್ಟು 120 ಸ್ಥಾನಗಳಲ್ಲಿ 60-59 ಮತಗಳ ತೀವ್ರ ಪೈಪೋಟಿ ನಡೆಯಿತು. ನೆತನ್ಯಾಹು 59 ಮತಗಳೊಂದಿಗೆ ಅಧಿಕಾರ ಕಳೆದುಕೊಂಡರು.

ಟೆಲ್ ಅವೀವ್‌ನ ರಾಬಿನ್ ಚೌಕದಲ್ಲಿ “ಬೈ ಬೈ ಬೀಬಿ” ಫಲಕಗಳೊಂದಿಗೆ ರ್‍ಯಾಲಿ ಮಾಡಿದ ನೆತನ್ಯಾಹು ಅವರ ವಿರೋಧಿಗಳು ಹರ್ಷೋದ್ಗಾರಗಳ ಮೂಲಕ  ಸಂಭ್ರಮಾಚರಣೆ ಮಾಡಿದರೆ.

ಪ್ರತಿಭಟನಾಕಾರರಲ್ಲಿ ಒಬ್ಬರಾದ 19 ವರ್ಷದ ತಾಲ್ ನರ್ಕಿಸ್‍,  ಹೊಸ ಸರ್ಕಾರದ ಬಗ್ಗೆ ಮಿಶ್ರ ಭಾವನೆಗಳನ್ನು  ವ್ಯಕ್ತಪಡಿಸಿದರೂ, ಈಗ ಬದಲಾವಣೆ ಅಗತ್ಯವಿತ್ತು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ರೌಡಿಗಳಿಗೆ ಆಯುಧ ಪೂರೈಸುತ್ತಿದ್ದ ವೆಪನ್‌ ಡೀಲರ್‌ ಬಂಧನ

49ರ ಹರೆಯದ ಬೆನೆಟ್ ಮತದಾನದ ಮೊದಲು ನೆಸ್ಸೆಟ್ ಭಾಷಣದಲ್ಲಿ, ಸೈದ್ಧಾಂತಿಕವಾಗಿ ಭಿನ್ನವಾಗಿರುವ ಪಕ್ಷಗಳ ಒಕ್ಕೂಟವಾದ ಹೊಸ ಸರ್ಕಾರ ಸಂಪೂರ್ಣ ಇಸ್ರೇಲ್‍ ಅನ್ನು  ಪ್ರತಿನಿಧಿಸಲಿದೆ ಎಂದು ಭರವಸೆ ನೀಡಿದರು.

ಎರಡು ವರ್ಷಗಳಲ್ಲಿ ನಾಲ್ಕು ಅನಿಶ್ಚಿತ ಚುನಾವಣೆಗಳ ನಂತರ ದೇಶವನ್ನು ದ್ವೇಷ ಮತ್ತು ಹೋರಾಟದ ಸುಂಟರಗಾಳಿಯಲ್ಲಿ ಎಸೆಯಲಾಗಿದೆ ಎಂದು ಅವರು ಹೇಳಿದರು.

“ಜನಸಂಖ್ಯೆಯ ಎಲ್ಲಾ ಭಾಗಗಳಳನ್ನು ಪ್ರತಿನಿಧಿಸುವ ವಿಭಿನ್ನ ನಾಯಕರು ಒಟ್ಟಾಗಿ ನಿಂತು ಈ ಹುಚ್ಚುತನವನ್ನು ತಡೆಯುವ ಸಮಯ ಬಂದಿದೆ” ಎಂದು ಅವರು ಹೇಳಿದರು,

ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿರುವ ನೆತನ್ಯಾಹು, ಹಿಂದಿನ ಮೂರು  ಅವಧಿಗೆ ಪ್ರಧಾನಿಯಾಗಿದ್ದಾರೆ.

ಅವರ ಬೆಂಬಲಿಗರು ಇಸ್ರೇಲ್‍ನ ಪ್ರಬಲ ರಕ್ಷಕ ಎಂದು ಶ್ಲಾಘಿಸುತ್ತಾರೆ. ಇರಾನ್‍, ಪ್ಯಾಲಿಸ್ಟೈನ್‍ ವಿಚಾರದಲ್ಲಿ ನೆತನ್ಯಾಹು ಅವರು ಮಾನವ ಹಕ್ಕುಗಳ ಹೋರಾಟಗಾರರಿಂದ ವ್ಯಾಪಕ ಟೀಕೆಗೆ ಒಳಗಾಗಿದ್ದಾರೆ. ಆದರೆ ಕಳೆದ ವರ್ಷ ಹಲವಾರು ಅರಬ್ ರಾಷ್ಟ್ರಗಳೊಂದಿಗೆ ಐತಿಹಾಸಿಕ ಒಪ್ಪಂದಗಳನ್ನು ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಸರೋಜಿನಿ ಮಹಿಷಿ ವರದಿ ಜಾರಿಯಾಗಲಿ, ಕರ್ನಾಟಕದ ಉದ್ಯೋಗ ಕನ್ನಡಿಗರಿಗೆ ಸಿಗಲಿ: ಟ್ವಿಟರ್ ಟ್ರೆಂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...