Homeಮುಖಪುಟಎಲ್‌‌ಜೆಪಿಯಲ್ಲಿ ಬಂಡಾಯ; ಸೇಡು ತೀರಿಸುತ್ತಿದ್ದಾರೆಯೆ ನಿತೀಶ್ ಕುಮಾರ್‌?

ಎಲ್‌‌ಜೆಪಿಯಲ್ಲಿ ಬಂಡಾಯ; ಸೇಡು ತೀರಿಸುತ್ತಿದ್ದಾರೆಯೆ ನಿತೀಶ್ ಕುಮಾರ್‌?

- Advertisement -
- Advertisement -

ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷ (ಎಲ್‌ಜೆಪಿ)ದ ತನ್ನ ಆರು ಲೋಕಸಭಾ ಸಂಸದರಲ್ಲಿ ಐವರು ಸಂಸದರು ಬಂಡಾಯವೆದ್ದಿದ್ದು, ತಮಗೆ ಹೊಸ ನಾಯಕತ್ವವನ್ನು ವಹಿಸಬೇಕು ಎಂದು ಒತ್ತಾಯಿಸಿದ್ದಾರೆ. ಐದು ಬಂಡಾಯ ಸಂಸದರು ಚಿರಾಗ್‌ ಪಾಸ್ವಾನ್ ಅವರ ಚಿಕ್ಕಪ್ಪ, ಹಾಜಿಪುರ ಸಂಸದ ಪಶುಪತಿ ಕುಮಾರ್ ಪರಾಸ್ ಅವರನ್ನು ಎಲ್‌‌ಜೆಪಿಯ ಹೊಸ ಅಧ್ಯಕ್ಷರನ್ನಾಗಿ ಘೋಷಿಸಬೇಕೆಂದು ಒತ್ತಾಯಿಸಿದ್ದಾರೆ.

ದೂರವಾಣಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಪರಾಸ್, ಪಕ್ಷವನ್ನು ಉಳಿಸಲು ಮತ್ತು ಎಲ್‌ಜೆಪಿಯನ್ನು ಕಟ್ಟಿದ ದಿವಂಗತ ರಾಮ್ ವಿಲಾಸ್ ಪಾಸ್ವಾನ್ ಅವರ ರಾಜಕೀಯ ಸಿದ್ಧಾಂತಗಳನ್ನು ಮುಂದುವರೆಸಲು ಈ ಕ್ರಮವನ್ನು ತೆಗೆದುಕೊಳ್ಳಬೇಕಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್‌ ಈಗ ಇದ್ದಿದ್ದರೆ ಬಿಜೆಪಿಗರು ಅವರನ್ನು ಪಾಕ್ ಪರ ಎನ್ನುತ್ತಿದ್ದರು: ಮೆಹಬೂಬಾ ಮುಫ್ತಿ

“ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎಲ್‌ಜೆಪಿ ತೀವ್ರ ಹಿನ್ನಡೆ ಅನುಭವಿಸಿತು. ನಾನು ಪಕ್ಷವನ್ನು ಪುನರುಜ್ಜೀವನಗೊಳಿಸುತ್ತೇನೆ ಮತ್ತು ಈ ಮೂಲಕ ಪಕ್ಷದ ಸಂಸ್ಥಾಪಕರ ಆತ್ಮಕ್ಕೆ ಶಾಂತಿ ಒದಗಿಸಲು ಪ್ರಯತ್ನಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ಮೂಲಗಳ ಪ್ರಕಾರ, ಹೊಸ ನಾಯಕತ್ವದೊಂದಿಗೆ ಹೊಸ ಪಕ್ಷದ ರಚನೆಯನ್ನು ಭಾನುವಾರ ಸಂಜೆ ನವದೆಹಲಿಯಲ್ಲಿ ಪರಾಸ್ ನಿವಾಸದಲ್ಲಿ ನಿರ್ಧರಿಸಲಾಯಿತು. ಐವರು ಸಂಸದರೊಂದಿಗೆ ಎಲ್‌ಜೆಪಿಯ ಹೊಸ ಬಣವನ್ನು ರಚಿಸುವ ಈ ನಿರ್ಧಾರದ ಬಗ್ಗೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ತಿಳಿಸಲಾಯಿತು. ಚಿರಾಗ್‌ ಪಾಸ್ವಾನ್ ಅವರು ಪಕ್ಷದ ಹಿರಿಯರನ್ನು ಹಿನ್ನಲೆಗೆ ತಳ್ಳುತ್ತಿದ್ದಾರೆ ಎಂದು ಆರೋಪಿಸಲಾಗಿದ್ದು, ಇದು ಪಕ್ಷದ ನಾಯಕರಿಗೆ ಅಸಮಾಧಾನವನ್ನುಂಟು ಮಾಡಿದೆ.

ಏತನ್ಮಧ್ಯೆ, ಜೆಡಿಯು ಹಿರಿಯ ಮುಖಂಡರೂ ಇತ್ತೀಚೆಗೆ ಪರಾಸ್‌ ಅವರನ್ನು ಭೇಟಿ ಮಾಡಿದ್ದಾರೆ ಎಂದು ಸ್ಥಳೀಯ ರಾಜಕೀಯ ಮೂಲಗಳು ತಿಳಿಸಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. “ಚಿರಾಗ್ ಪಾಸ್ವಾನ್ ಅವರಿಗೆ ಪಾಠ ಕಲಿಸಲು ಹಿಂದಿನಿಂದ ಹೊಸ ರಾಜಕೀಯ ಆಟವನ್ನು ಆಡಲಾಗುತ್ತಿದೆ” ಎಂದು ಪಕ್ಷದ ಮುಖಂಡರು ಹೇಳಿದ್ದಾರೆ.

ಇದನ್ನೂ ಓದಿ: ಪೆಟ್ರೋಲ್‌ ದರ ಹೆಚ್ಚಳಕ್ಕೆ ಕಾರಣ ತಿಳಿಸಿದ ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್‌!

ಲೋಕಸಭಾ ಸ್ಪೀಕರ್ ಅನುಮೋದನೆಯ ನಂತರ ಸೋಮವಾರ ನವದೆಹಲಿಯಲ್ಲಿ ಈ ನಾಯಕತ್ವದ ಬೆಳವಣಿಗೆಯ ಕುರಿತು ಔಪಚಾರಿಕ ಪ್ರಕಟಣೆ ಘೋಷಣೆಯಾಗುವ ಸಾಧ್ಯತೆ ಇದೆ. ಪರಾಸ್‌ ಅವರು ಇತ್ತೀಚೆಗೆ ಸಿಎಂ ನಿತೀಶ್ ಕುಮಾರ್ ಅವರನ್ನು ಉತ್ತಮ ಆಡಳಿತಗಾರ ಎಂದು ಶ್ಲಾಘಿಸಿದ್ದರು. ಇದರ ನಂತರ ಬಿಹಾರದ ರಾಜಕೀಯ ವಲಯ ಹೊಸ ಸಂಚಲನ ಮೂಡಿಸಿವೆ.

ಸಂಸದರಾದ ಪ್ರಿನ್ಸ್ ರಾಜ್, ಚಂದನ್ ಸಿಂಗ್, ವೀಣಾ ದೇವಿ ಮತ್ತು ಮೆಹಬೂಬ್ ಅಲಿ ಕೈಸರ್ ಅವರನ್ನೊಳಗೊಂಡ ಬಂಡಾಯ ಗುಂಪು ಚಿರಾಗ್ ಪಾಸ್ವಾನ್ ಅವರ ಕಾರ್ಯವೈಖರಿಯ ಬಗ್ಗೆ ಬಹಳ ದಿನಗಳಿಂದ ಅಸಮಾಧಾನ ವ್ಯಕ್ತಪಡಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಪ್ರಸ್ತುತ ಪಕ್ಷದ ವಿಭಜನೆಗೆ ಜೆಡಿಯು ಕಾರಣ ಎಂದು ಕೂಡಾ ಚಿರಾಗ್‌ ಪಾಸ್ವಾನ್‌ ಆಪ್ತರು ಆರೋಪಿಸಿದ್ದಾರೆ. 2020 ರ ವಿಧಾನಸಭಾ ಚುನಾವಣೆಯಲ್ಲಿ ನಿತೀಶ್ ಕುಮಾರ್‌‌ ನೇತೃತ್ವದ ಆಡಳಿತ ಪಕ್ಷದ ವಿರುದ್ದ ಸ್ಪರ್ಧಿಸಿ ಪಕ್ಷದ ಹಲವು ಸ್ಥಾನಗಳು ಕಳೆದುಕೊಳ್ಳಲು ಚಿರಾಗ್‌ ಕಾರಣವಾಗಿದ್ದರು. ಜೆಡಿಯುಗೆ ತೀವ್ರ ಹಾನಿ ಮಾಡಿರುವ ಚಿರಾಗ್‌ ಅವರನ್ನು ಏಕಾಂಗಿಯಾಗಿಸಲು ನಿತೀಶ್ ಕುಮಾರ್‌ ಅವರ ಪಕ್ಷವು ಬಹಳ ಹಿಂದಿನಿಂಲೂ ಪ್ರಯತ್ನಿಸುತ್ತಿದೆ ಎಂದು ಹೇಳಲಾಗಿದೆ.

ಮುಂದಿನ ದಿನಗಳಲ್ಲಿ ಇದೀಗ ಬಂಡಾಯವೆದ್ದಿರುವ ಗುಂಪು ಜೆಡಿಯುಗೆ ಬೆಂಬಲ ನೀಡಬಹುದು ಎಂದು ಮೂಲಗಳು ತಿಳಿಸಿವೆ.

ಪಕ್ಷದ ಅಧ್ಯಕ್ಷ ಚಿರಾಗ್ ಪಾಸ್ವಾನ್ ಬಂಡಾಯ ಶಮನಕ್ಕೆ ಶ್ರಮಿಸುತ್ತಿದ್ದು, ಅವರು ಪರಾಸ್ ಅವರ ನಿವಾಸಕ್ಕೆ ಇದೀಗ ತೆರಳಿದ್ದಾರೆ.

ಇದನ್ನೂ ಓದಿ: ರಾಮ ಜನ್ಮಭೂಮಿ ಟ್ರಸ್ಟ್‌‌ನಿಂದ ಭೂ ದಂಧೆ: ರಾಮನ ಹೆಸರಲ್ಲಿ ಲೂಟಿ ಎಂದ AAP, SP

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...