Homeಮುಖಪುಟಎಲ್‌‌ಜೆಪಿಯಲ್ಲಿ ಬಂಡಾಯ; ಸೇಡು ತೀರಿಸುತ್ತಿದ್ದಾರೆಯೆ ನಿತೀಶ್ ಕುಮಾರ್‌?

ಎಲ್‌‌ಜೆಪಿಯಲ್ಲಿ ಬಂಡಾಯ; ಸೇಡು ತೀರಿಸುತ್ತಿದ್ದಾರೆಯೆ ನಿತೀಶ್ ಕುಮಾರ್‌?

- Advertisement -
- Advertisement -

ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷ (ಎಲ್‌ಜೆಪಿ)ದ ತನ್ನ ಆರು ಲೋಕಸಭಾ ಸಂಸದರಲ್ಲಿ ಐವರು ಸಂಸದರು ಬಂಡಾಯವೆದ್ದಿದ್ದು, ತಮಗೆ ಹೊಸ ನಾಯಕತ್ವವನ್ನು ವಹಿಸಬೇಕು ಎಂದು ಒತ್ತಾಯಿಸಿದ್ದಾರೆ. ಐದು ಬಂಡಾಯ ಸಂಸದರು ಚಿರಾಗ್‌ ಪಾಸ್ವಾನ್ ಅವರ ಚಿಕ್ಕಪ್ಪ, ಹಾಜಿಪುರ ಸಂಸದ ಪಶುಪತಿ ಕುಮಾರ್ ಪರಾಸ್ ಅವರನ್ನು ಎಲ್‌‌ಜೆಪಿಯ ಹೊಸ ಅಧ್ಯಕ್ಷರನ್ನಾಗಿ ಘೋಷಿಸಬೇಕೆಂದು ಒತ್ತಾಯಿಸಿದ್ದಾರೆ.

ದೂರವಾಣಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಪರಾಸ್, ಪಕ್ಷವನ್ನು ಉಳಿಸಲು ಮತ್ತು ಎಲ್‌ಜೆಪಿಯನ್ನು ಕಟ್ಟಿದ ದಿವಂಗತ ರಾಮ್ ವಿಲಾಸ್ ಪಾಸ್ವಾನ್ ಅವರ ರಾಜಕೀಯ ಸಿದ್ಧಾಂತಗಳನ್ನು ಮುಂದುವರೆಸಲು ಈ ಕ್ರಮವನ್ನು ತೆಗೆದುಕೊಳ್ಳಬೇಕಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್‌ ಈಗ ಇದ್ದಿದ್ದರೆ ಬಿಜೆಪಿಗರು ಅವರನ್ನು ಪಾಕ್ ಪರ ಎನ್ನುತ್ತಿದ್ದರು: ಮೆಹಬೂಬಾ ಮುಫ್ತಿ

“ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎಲ್‌ಜೆಪಿ ತೀವ್ರ ಹಿನ್ನಡೆ ಅನುಭವಿಸಿತು. ನಾನು ಪಕ್ಷವನ್ನು ಪುನರುಜ್ಜೀವನಗೊಳಿಸುತ್ತೇನೆ ಮತ್ತು ಈ ಮೂಲಕ ಪಕ್ಷದ ಸಂಸ್ಥಾಪಕರ ಆತ್ಮಕ್ಕೆ ಶಾಂತಿ ಒದಗಿಸಲು ಪ್ರಯತ್ನಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ಮೂಲಗಳ ಪ್ರಕಾರ, ಹೊಸ ನಾಯಕತ್ವದೊಂದಿಗೆ ಹೊಸ ಪಕ್ಷದ ರಚನೆಯನ್ನು ಭಾನುವಾರ ಸಂಜೆ ನವದೆಹಲಿಯಲ್ಲಿ ಪರಾಸ್ ನಿವಾಸದಲ್ಲಿ ನಿರ್ಧರಿಸಲಾಯಿತು. ಐವರು ಸಂಸದರೊಂದಿಗೆ ಎಲ್‌ಜೆಪಿಯ ಹೊಸ ಬಣವನ್ನು ರಚಿಸುವ ಈ ನಿರ್ಧಾರದ ಬಗ್ಗೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ತಿಳಿಸಲಾಯಿತು. ಚಿರಾಗ್‌ ಪಾಸ್ವಾನ್ ಅವರು ಪಕ್ಷದ ಹಿರಿಯರನ್ನು ಹಿನ್ನಲೆಗೆ ತಳ್ಳುತ್ತಿದ್ದಾರೆ ಎಂದು ಆರೋಪಿಸಲಾಗಿದ್ದು, ಇದು ಪಕ್ಷದ ನಾಯಕರಿಗೆ ಅಸಮಾಧಾನವನ್ನುಂಟು ಮಾಡಿದೆ.

ಏತನ್ಮಧ್ಯೆ, ಜೆಡಿಯು ಹಿರಿಯ ಮುಖಂಡರೂ ಇತ್ತೀಚೆಗೆ ಪರಾಸ್‌ ಅವರನ್ನು ಭೇಟಿ ಮಾಡಿದ್ದಾರೆ ಎಂದು ಸ್ಥಳೀಯ ರಾಜಕೀಯ ಮೂಲಗಳು ತಿಳಿಸಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. “ಚಿರಾಗ್ ಪಾಸ್ವಾನ್ ಅವರಿಗೆ ಪಾಠ ಕಲಿಸಲು ಹಿಂದಿನಿಂದ ಹೊಸ ರಾಜಕೀಯ ಆಟವನ್ನು ಆಡಲಾಗುತ್ತಿದೆ” ಎಂದು ಪಕ್ಷದ ಮುಖಂಡರು ಹೇಳಿದ್ದಾರೆ.

ಇದನ್ನೂ ಓದಿ: ಪೆಟ್ರೋಲ್‌ ದರ ಹೆಚ್ಚಳಕ್ಕೆ ಕಾರಣ ತಿಳಿಸಿದ ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್‌!

ಲೋಕಸಭಾ ಸ್ಪೀಕರ್ ಅನುಮೋದನೆಯ ನಂತರ ಸೋಮವಾರ ನವದೆಹಲಿಯಲ್ಲಿ ಈ ನಾಯಕತ್ವದ ಬೆಳವಣಿಗೆಯ ಕುರಿತು ಔಪಚಾರಿಕ ಪ್ರಕಟಣೆ ಘೋಷಣೆಯಾಗುವ ಸಾಧ್ಯತೆ ಇದೆ. ಪರಾಸ್‌ ಅವರು ಇತ್ತೀಚೆಗೆ ಸಿಎಂ ನಿತೀಶ್ ಕುಮಾರ್ ಅವರನ್ನು ಉತ್ತಮ ಆಡಳಿತಗಾರ ಎಂದು ಶ್ಲಾಘಿಸಿದ್ದರು. ಇದರ ನಂತರ ಬಿಹಾರದ ರಾಜಕೀಯ ವಲಯ ಹೊಸ ಸಂಚಲನ ಮೂಡಿಸಿವೆ.

ಸಂಸದರಾದ ಪ್ರಿನ್ಸ್ ರಾಜ್, ಚಂದನ್ ಸಿಂಗ್, ವೀಣಾ ದೇವಿ ಮತ್ತು ಮೆಹಬೂಬ್ ಅಲಿ ಕೈಸರ್ ಅವರನ್ನೊಳಗೊಂಡ ಬಂಡಾಯ ಗುಂಪು ಚಿರಾಗ್ ಪಾಸ್ವಾನ್ ಅವರ ಕಾರ್ಯವೈಖರಿಯ ಬಗ್ಗೆ ಬಹಳ ದಿನಗಳಿಂದ ಅಸಮಾಧಾನ ವ್ಯಕ್ತಪಡಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಪ್ರಸ್ತುತ ಪಕ್ಷದ ವಿಭಜನೆಗೆ ಜೆಡಿಯು ಕಾರಣ ಎಂದು ಕೂಡಾ ಚಿರಾಗ್‌ ಪಾಸ್ವಾನ್‌ ಆಪ್ತರು ಆರೋಪಿಸಿದ್ದಾರೆ. 2020 ರ ವಿಧಾನಸಭಾ ಚುನಾವಣೆಯಲ್ಲಿ ನಿತೀಶ್ ಕುಮಾರ್‌‌ ನೇತೃತ್ವದ ಆಡಳಿತ ಪಕ್ಷದ ವಿರುದ್ದ ಸ್ಪರ್ಧಿಸಿ ಪಕ್ಷದ ಹಲವು ಸ್ಥಾನಗಳು ಕಳೆದುಕೊಳ್ಳಲು ಚಿರಾಗ್‌ ಕಾರಣವಾಗಿದ್ದರು. ಜೆಡಿಯುಗೆ ತೀವ್ರ ಹಾನಿ ಮಾಡಿರುವ ಚಿರಾಗ್‌ ಅವರನ್ನು ಏಕಾಂಗಿಯಾಗಿಸಲು ನಿತೀಶ್ ಕುಮಾರ್‌ ಅವರ ಪಕ್ಷವು ಬಹಳ ಹಿಂದಿನಿಂಲೂ ಪ್ರಯತ್ನಿಸುತ್ತಿದೆ ಎಂದು ಹೇಳಲಾಗಿದೆ.

ಮುಂದಿನ ದಿನಗಳಲ್ಲಿ ಇದೀಗ ಬಂಡಾಯವೆದ್ದಿರುವ ಗುಂಪು ಜೆಡಿಯುಗೆ ಬೆಂಬಲ ನೀಡಬಹುದು ಎಂದು ಮೂಲಗಳು ತಿಳಿಸಿವೆ.

ಪಕ್ಷದ ಅಧ್ಯಕ್ಷ ಚಿರಾಗ್ ಪಾಸ್ವಾನ್ ಬಂಡಾಯ ಶಮನಕ್ಕೆ ಶ್ರಮಿಸುತ್ತಿದ್ದು, ಅವರು ಪರಾಸ್ ಅವರ ನಿವಾಸಕ್ಕೆ ಇದೀಗ ತೆರಳಿದ್ದಾರೆ.

ಇದನ್ನೂ ಓದಿ: ರಾಮ ಜನ್ಮಭೂಮಿ ಟ್ರಸ್ಟ್‌‌ನಿಂದ ಭೂ ದಂಧೆ: ರಾಮನ ಹೆಸರಲ್ಲಿ ಲೂಟಿ ಎಂದ AAP, SP

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...