Homeಮುಖಪುಟಎಲ್‌‌ಜೆಪಿಯಲ್ಲಿ ಬಂಡಾಯ; ಸೇಡು ತೀರಿಸುತ್ತಿದ್ದಾರೆಯೆ ನಿತೀಶ್ ಕುಮಾರ್‌?

ಎಲ್‌‌ಜೆಪಿಯಲ್ಲಿ ಬಂಡಾಯ; ಸೇಡು ತೀರಿಸುತ್ತಿದ್ದಾರೆಯೆ ನಿತೀಶ್ ಕುಮಾರ್‌?

- Advertisement -
- Advertisement -

ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷ (ಎಲ್‌ಜೆಪಿ)ದ ತನ್ನ ಆರು ಲೋಕಸಭಾ ಸಂಸದರಲ್ಲಿ ಐವರು ಸಂಸದರು ಬಂಡಾಯವೆದ್ದಿದ್ದು, ತಮಗೆ ಹೊಸ ನಾಯಕತ್ವವನ್ನು ವಹಿಸಬೇಕು ಎಂದು ಒತ್ತಾಯಿಸಿದ್ದಾರೆ. ಐದು ಬಂಡಾಯ ಸಂಸದರು ಚಿರಾಗ್‌ ಪಾಸ್ವಾನ್ ಅವರ ಚಿಕ್ಕಪ್ಪ, ಹಾಜಿಪುರ ಸಂಸದ ಪಶುಪತಿ ಕುಮಾರ್ ಪರಾಸ್ ಅವರನ್ನು ಎಲ್‌‌ಜೆಪಿಯ ಹೊಸ ಅಧ್ಯಕ್ಷರನ್ನಾಗಿ ಘೋಷಿಸಬೇಕೆಂದು ಒತ್ತಾಯಿಸಿದ್ದಾರೆ.

ದೂರವಾಣಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಪರಾಸ್, ಪಕ್ಷವನ್ನು ಉಳಿಸಲು ಮತ್ತು ಎಲ್‌ಜೆಪಿಯನ್ನು ಕಟ್ಟಿದ ದಿವಂಗತ ರಾಮ್ ವಿಲಾಸ್ ಪಾಸ್ವಾನ್ ಅವರ ರಾಜಕೀಯ ಸಿದ್ಧಾಂತಗಳನ್ನು ಮುಂದುವರೆಸಲು ಈ ಕ್ರಮವನ್ನು ತೆಗೆದುಕೊಳ್ಳಬೇಕಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್‌ ಈಗ ಇದ್ದಿದ್ದರೆ ಬಿಜೆಪಿಗರು ಅವರನ್ನು ಪಾಕ್ ಪರ ಎನ್ನುತ್ತಿದ್ದರು: ಮೆಹಬೂಬಾ ಮುಫ್ತಿ

“ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎಲ್‌ಜೆಪಿ ತೀವ್ರ ಹಿನ್ನಡೆ ಅನುಭವಿಸಿತು. ನಾನು ಪಕ್ಷವನ್ನು ಪುನರುಜ್ಜೀವನಗೊಳಿಸುತ್ತೇನೆ ಮತ್ತು ಈ ಮೂಲಕ ಪಕ್ಷದ ಸಂಸ್ಥಾಪಕರ ಆತ್ಮಕ್ಕೆ ಶಾಂತಿ ಒದಗಿಸಲು ಪ್ರಯತ್ನಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ಮೂಲಗಳ ಪ್ರಕಾರ, ಹೊಸ ನಾಯಕತ್ವದೊಂದಿಗೆ ಹೊಸ ಪಕ್ಷದ ರಚನೆಯನ್ನು ಭಾನುವಾರ ಸಂಜೆ ನವದೆಹಲಿಯಲ್ಲಿ ಪರಾಸ್ ನಿವಾಸದಲ್ಲಿ ನಿರ್ಧರಿಸಲಾಯಿತು. ಐವರು ಸಂಸದರೊಂದಿಗೆ ಎಲ್‌ಜೆಪಿಯ ಹೊಸ ಬಣವನ್ನು ರಚಿಸುವ ಈ ನಿರ್ಧಾರದ ಬಗ್ಗೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ತಿಳಿಸಲಾಯಿತು. ಚಿರಾಗ್‌ ಪಾಸ್ವಾನ್ ಅವರು ಪಕ್ಷದ ಹಿರಿಯರನ್ನು ಹಿನ್ನಲೆಗೆ ತಳ್ಳುತ್ತಿದ್ದಾರೆ ಎಂದು ಆರೋಪಿಸಲಾಗಿದ್ದು, ಇದು ಪಕ್ಷದ ನಾಯಕರಿಗೆ ಅಸಮಾಧಾನವನ್ನುಂಟು ಮಾಡಿದೆ.

ಏತನ್ಮಧ್ಯೆ, ಜೆಡಿಯು ಹಿರಿಯ ಮುಖಂಡರೂ ಇತ್ತೀಚೆಗೆ ಪರಾಸ್‌ ಅವರನ್ನು ಭೇಟಿ ಮಾಡಿದ್ದಾರೆ ಎಂದು ಸ್ಥಳೀಯ ರಾಜಕೀಯ ಮೂಲಗಳು ತಿಳಿಸಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. “ಚಿರಾಗ್ ಪಾಸ್ವಾನ್ ಅವರಿಗೆ ಪಾಠ ಕಲಿಸಲು ಹಿಂದಿನಿಂದ ಹೊಸ ರಾಜಕೀಯ ಆಟವನ್ನು ಆಡಲಾಗುತ್ತಿದೆ” ಎಂದು ಪಕ್ಷದ ಮುಖಂಡರು ಹೇಳಿದ್ದಾರೆ.

ಇದನ್ನೂ ಓದಿ: ಪೆಟ್ರೋಲ್‌ ದರ ಹೆಚ್ಚಳಕ್ಕೆ ಕಾರಣ ತಿಳಿಸಿದ ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್‌!

ಲೋಕಸಭಾ ಸ್ಪೀಕರ್ ಅನುಮೋದನೆಯ ನಂತರ ಸೋಮವಾರ ನವದೆಹಲಿಯಲ್ಲಿ ಈ ನಾಯಕತ್ವದ ಬೆಳವಣಿಗೆಯ ಕುರಿತು ಔಪಚಾರಿಕ ಪ್ರಕಟಣೆ ಘೋಷಣೆಯಾಗುವ ಸಾಧ್ಯತೆ ಇದೆ. ಪರಾಸ್‌ ಅವರು ಇತ್ತೀಚೆಗೆ ಸಿಎಂ ನಿತೀಶ್ ಕುಮಾರ್ ಅವರನ್ನು ಉತ್ತಮ ಆಡಳಿತಗಾರ ಎಂದು ಶ್ಲಾಘಿಸಿದ್ದರು. ಇದರ ನಂತರ ಬಿಹಾರದ ರಾಜಕೀಯ ವಲಯ ಹೊಸ ಸಂಚಲನ ಮೂಡಿಸಿವೆ.

ಸಂಸದರಾದ ಪ್ರಿನ್ಸ್ ರಾಜ್, ಚಂದನ್ ಸಿಂಗ್, ವೀಣಾ ದೇವಿ ಮತ್ತು ಮೆಹಬೂಬ್ ಅಲಿ ಕೈಸರ್ ಅವರನ್ನೊಳಗೊಂಡ ಬಂಡಾಯ ಗುಂಪು ಚಿರಾಗ್ ಪಾಸ್ವಾನ್ ಅವರ ಕಾರ್ಯವೈಖರಿಯ ಬಗ್ಗೆ ಬಹಳ ದಿನಗಳಿಂದ ಅಸಮಾಧಾನ ವ್ಯಕ್ತಪಡಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಪ್ರಸ್ತುತ ಪಕ್ಷದ ವಿಭಜನೆಗೆ ಜೆಡಿಯು ಕಾರಣ ಎಂದು ಕೂಡಾ ಚಿರಾಗ್‌ ಪಾಸ್ವಾನ್‌ ಆಪ್ತರು ಆರೋಪಿಸಿದ್ದಾರೆ. 2020 ರ ವಿಧಾನಸಭಾ ಚುನಾವಣೆಯಲ್ಲಿ ನಿತೀಶ್ ಕುಮಾರ್‌‌ ನೇತೃತ್ವದ ಆಡಳಿತ ಪಕ್ಷದ ವಿರುದ್ದ ಸ್ಪರ್ಧಿಸಿ ಪಕ್ಷದ ಹಲವು ಸ್ಥಾನಗಳು ಕಳೆದುಕೊಳ್ಳಲು ಚಿರಾಗ್‌ ಕಾರಣವಾಗಿದ್ದರು. ಜೆಡಿಯುಗೆ ತೀವ್ರ ಹಾನಿ ಮಾಡಿರುವ ಚಿರಾಗ್‌ ಅವರನ್ನು ಏಕಾಂಗಿಯಾಗಿಸಲು ನಿತೀಶ್ ಕುಮಾರ್‌ ಅವರ ಪಕ್ಷವು ಬಹಳ ಹಿಂದಿನಿಂಲೂ ಪ್ರಯತ್ನಿಸುತ್ತಿದೆ ಎಂದು ಹೇಳಲಾಗಿದೆ.

ಮುಂದಿನ ದಿನಗಳಲ್ಲಿ ಇದೀಗ ಬಂಡಾಯವೆದ್ದಿರುವ ಗುಂಪು ಜೆಡಿಯುಗೆ ಬೆಂಬಲ ನೀಡಬಹುದು ಎಂದು ಮೂಲಗಳು ತಿಳಿಸಿವೆ.

ಪಕ್ಷದ ಅಧ್ಯಕ್ಷ ಚಿರಾಗ್ ಪಾಸ್ವಾನ್ ಬಂಡಾಯ ಶಮನಕ್ಕೆ ಶ್ರಮಿಸುತ್ತಿದ್ದು, ಅವರು ಪರಾಸ್ ಅವರ ನಿವಾಸಕ್ಕೆ ಇದೀಗ ತೆರಳಿದ್ದಾರೆ.

ಇದನ್ನೂ ಓದಿ: ರಾಮ ಜನ್ಮಭೂಮಿ ಟ್ರಸ್ಟ್‌‌ನಿಂದ ಭೂ ದಂಧೆ: ರಾಮನ ಹೆಸರಲ್ಲಿ ಲೂಟಿ ಎಂದ AAP, SP

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...