Homeಅಂತರಾಷ್ಟ್ರೀಯದೇಹದ ವಾಸನೆ ಗ್ರಹಿಸಿ ಕೊರೋನಾ ಸೋಂಕು ಪತ್ತೆಹಚ್ಚುವ ಉಪಕರಣಗಳನ್ನು ಕಂಡು ಹಿಡಿದ ಬ್ರಿಟನ್‌

ದೇಹದ ವಾಸನೆ ಗ್ರಹಿಸಿ ಕೊರೋನಾ ಸೋಂಕು ಪತ್ತೆಹಚ್ಚುವ ಉಪಕರಣಗಳನ್ನು ಕಂಡು ಹಿಡಿದ ಬ್ರಿಟನ್‌

- Advertisement -
- Advertisement -

ದೇಶದಲ್ಲಿ ಕೊರೋನಾ ಸಾಂಕ್ರಾಮಿಕದ ಎರಡನೇಯ ಅಲೆಯ ಪ್ರಭಾವ ಸಾಕಷ್ಟು ಇಳಿಮುಖವಾಗಿದೆ. ಅನೇಕ ನಗರಗಳು ಲಾಕ್‌ ಡೌನ್‌ ನಿಂದ ತೆರೆದುಕೊಳ್ಳುತ್ತಿವೆ. ಈ ನಡುವೆ ಜನರ ಓಡಾಟದಿಂದ ಮತ್ತಷ್ಟು ಸೋಂಕು ಹೆಚ್ಚಳವಾಗುವ ಆತಂಕವನ್ನು ತಜ್ಞರು ಹೊರಹಾಕಿದ್ದಾರೆ. ಕೊರೋನಾ ವ್ಯಾಕ್ಸಿನೇಶನ್‌ ಕೂಡ ಸೋಂಕು ನಿಯಂತ್ರಣಕ್ಕೆ ಸಹಾಯ ಮಾಡುವ ಇನ್ನೊಂದು ಅಸ್ತ್ರ. ವ್ಯಾಕ್ಸಿನೇಶನ್‌ ಜೊತೆಗೆ ಕೊರೋನಾ ಸೋಂಕಿತರನ್ನು ಅಂತರದಿಂದಲೇ ಗುರುತಿಸಿ ಕ್ವಾರಂಟೈನ್‌ ಅಥವಾ ಐಸೋಲೇಶನ್‌ ವ್ಯವಸ್ಥೆ ಮಾಡಲು ಸಾಧ್ಯವಾದರೆ? ಹೌದು ಬ್ರಿಟನ್‌ ಒಂದು ಇಂತಹ ತಂತ್ರಜ್ಞಾನದ ಸಂಶೋಧನೆಯಲ್ಲಿ ತೊಡಗಿದೆ. ಸಾರ್ವಜನಿಕ ಪ್ರದೇಶದಲ್ಲಿರುವ ಕೊರೋನಾ ಸೋಂಕಿತರನ್ನು ಪತ್ತೆಹಚ್ಚುವ ವಿಶೇಷ ಸ್ಕಾನಿಂಗ್‌ ತಂತ್ರಜ್ಞಾನವನ್ನು ಬ್ರಿಟನ್‌ ಮೂಲದ ಕಂಪನಿಯೊಂದು ಅಭಿವೃದ್ಧಿಪಡಿಸುತ್ತಿದೆ. ಈ ತಂತ್ರಜ್ಞಾನ ಉಪಕರಣಕ್ಕೆ ಕೋವಿಡ್‌ ಅಲರಾಮ್‌ ಎಂದು ಹೆಸರಿಸಲಾಗಿದೆ.

ಈ ವಿಶೇಷ ಕೋವಿಡ್‌ ಅಲರಾಮ್‌ ಜನನಿಬಿಡ ಮಾರುಕಟ್ಟೆ, ನಗರಗಳ ಬೀದಿಯಲ್ಲಿ ದೂರದಿಂದಲೇ ಜನರ ದೇಹವನ್ನು ಪರೀಕ್ಷಿಸಲು ಶಕ್ತವಾಗಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಅಂತರದಿಂದಲೇ ದೇಹದಲ್ಲಿರುವ ವೈರಸ್‌ ಲಕ್ಷಣವನ್ನು ಪತ್ತೆ ಹಚ್ಚಿ ಇದು ಅಲರಾಮ್‌ ನೀಡುತ್ತದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ. ವ್ಯಕ್ತಿಗೆ ಕೊರೋನಾ ಸೋಂಕು ತಗುಲಿದರೆ ವೈರಸ್‌ನ ಜೀವರಾಸಾಯನಿಕ ಕ್ರಿಯೆಯಿಂದ ಆ ವ್ಯಕ್ತಿಯ ದೇಹದಲ್ಲಿ ವಿಭಿನ್ನವಾದ ವಾಸನೆ ಉತ್ಪತ್ತಿಯಾಗುತ್ತದೆ. ಈ ವಾಸನೆಯನ್ನು ಕಂಡು ಹಿಡಿಯುವ ಸೆನ್ಸಾರ್‌ಗಳನ್ನು ಅಭಿವೃದ್ಧಿಡಿಸಿದ್ದೇವೆ ಎಂದು ಲಂಡನ್‌ ಸ್ಕೂಲ್‌ ಆಫ್‌ ಹೈಜಿನ್‌ ಎಂಡ್‌ ಟ್ರೋಪಿಕಲ್‌ ಮೆಡಿಸಿನ್ಸ್‌ ( LSHTM) ಸಂಸ್ಥೆಯ ವಿಜ್ಞಾನಿಗಳು ತಿಳಿಸಿದ್ದಾರೆ.

ಇದನ್ನೂ ಓದಿ :ಅಧಿಕಾರ ಕಳೆದುಕೊಂಡ ನೆತನ್ಯಾಹು: ನಫ್ತಾಲಿ ಬೆನೆಟ್ ಇಸ್ರೇಲ್‍ನ ಹೊಸ ಪ್ರಧಾನಿ

LSHTM ಮತ್ತು ಡರ್ಹಾಮ್‌ ವಿಶ್ವವಿದ್ಯಾಲಯದ  ರೋಬೋ ಸೈಂಟಿಫಿಕ್‌ ಲಿಮಿಟೆಡ್‌ ಎಂಬ ಬಯೋಟೆಕ್‌ ಕಂಪನಿಗಳು ಜಂಟಿಯಾಗಿ ಈ ಸಂಶೋಧನೆಯನ್ನು ನಡೆಸುತ್ತಿವೆ. ಈ ಸಂಬಂಧ ಒರ್ಗಾನಿಕ್‌ ಸೆಮಿಕಂಡಕ್ಟಿಂಗ್ ಸೆನ್ಸರ್‌ ಗಳನ್ನು ಅಭಿವೃದ್ಧಿಪಡಿಸಲಾಗಿದೆ. ಇದುವರೆಗಿನ ಪರೀಕ್ಷೆಗಳು ಅತ್ಯಂತ ನಿಖರವಾದ ಫಲಿತಾಂಶಗಳನ್ನು ನೀಡಿವೆ. ಈ ಉಪಕರಣ ಕೊರೋನಾ ಟೆಸ್ಟಿಂಗ್‌ಗೆ ಸಂಬಂಧಿಸಿದಂತೆ ಕ್ರಾಂತಿಕಾರಕ ಬದಲಾವಣೆಗಳನ್ನು ತರಲಿದೆ ಎಂದು  ಲಂಡ್‌ ಸ್ಕೂಲ್‌ ಆಫ್‌ ಹೈಜಿನ್‌ನ ವಿಜ್ಞಾನಿ ಪ್ರೊಫೆಸರ್‌ ಜೇಮ್ಸ್‌ ಲೋಗಾನ್‌ ಅಭಿಪ್ರಾಯಪಟ್ಟಿದ್ದಾರೆ.

ಈ ಸೆನ್ಸಾರ್‌ಗಳನ್ನು ಯಶಸ್ವಿಯಾಗಿ ಅಭಿವೃದ್ಧಿಪಡಿಸಿದರೆ ಸಾರ್ವಜನಿಕ ಪ್ರದೇಶಗಳಲ್ಲಿ ಯಶಸ್ವಿಯಾಗಿ ಅಳವಡಿಸಬಹುದು. ಇದು ಅಷ್ಟೊಂದು ದುಬಾರಿ ಬೆಲೆಯ ಉಪಕರಣವಲ್ಲ. ಮುಂದೆ ಸಂಭವಿಸಬಹುದಾದ ಇತರ ಸೋಂಕುಗಳನ್ನು ಈ ಉಪಕರಣದಿಂದ ಪತ್ತೆಹಚ್ಚಲು ಸಾಧ್ಯವಿದೆ ಎಂದು ಜೇಮ್ಸ್‌ ಲೋಗಾನ್‌ ಅಭಿಪ್ರಾಯಪಡುತ್ತಾರೆ.

ಇದುವರೆಗೆ ಈ ತಂತ್ರಜ್ಞಾನದಿಂದ 54 ಜನರಲ್ಲಿ 27 ಜನರು ಕೋವಿಡ್‌ ಸೋಂಕಿಗೆ ಒಳಗಾಗಿರುವುದನ್ನು ಪತ್ತೆ ಹಚ್ಚಲಾಗಿದೆ. ವ್ಯಕ್ತಿಗಳು ಸೋಂಕು ಲಕ್ಷಣ ಹೊಂದಿರದಿದ್ದರೂ ಈ ತಂತ್ರಜ್ಞಾನದ ಮೂಲಕ ಪತ್ತೆ ಹಚ್ಚಿದ್ದೇವೆ. ಸಾಕ್ಸ್‌ ಸೇರಿದಂತೆ ವಿವಿಧ ಸೂಕ್ಷ್ಮಾತಿ ಸೂಕ್ಷ್ಮ ವಾಸನೆಯನ್ನು ಉಪಕರಣ ಗುರುತಿಸಿ ಕೊರೋನಾ ಸೋಂಕು ಇರುವುದನ್ನು ಪತ್ತೆಹಚ್ಚಿದೆ.  ನಾವು ಆರಂಭದಲ್ಲಿ ಕೋವಿಡ್‌ ಸೋಂಕಿತರಲ್ಲಿ ವಿಭಿನ್ನವಾದ ವಾಸನೆಯೊಂದು ಇರುವುದನ್ನು ಮತ್ತು ಸೋಂಕು ಇಲ್ಲದಿರುವವರಲ್ಲಿ ಅಂತಹ ಯಾವುದೇ ವಾಸನೆ ಇಲ್ಲದಿರುವುದನ್ನು ಕಂಡುಕೊಂಡೆವು. ನಮ್ಮ ಅಧ್ಯಯನವು ಈ ಸೂಕ್ಷ್ಮ ವಾಸನೆಯನ್ನು ಗ್ರಹಿಸುವ ಸೆನ್ಸರ್‌ ಒಂದನ್ನು ರೂಪಿಸುವ ಪ್ರಯತ್ನಕ್ಕೆ ತೊಡಗಿದೆವು. ಅದು ಯಶಸ್ವಿಯಾಗಿದೆ. ಬೇರೆ ಎಲ್ಲಾ ರೀತಿಯ ಟೆಸ್ಟಿಂಗ್‌ ವಿಧಾನಗಳಿಗಿಂತ ನಮ್ಮ ಕೋವಿಡ್‌ ಅಲಾರಾಮ್‌ ಟೆಸ್ಟಿಂಗ್‌ ವಿಧಾನವು  ನಿಖರವಾಗಿರುವುದು ಕಂಡುಬಂದಿದೆ. 100%  ಸರಿಯಾದ ಫಲಿತಾಂಶವನ್ನು ನಾವು ಪಡೆದಿದ್ದೇವೆ ಎಂದು ರೋಬೋಸೈಂಟಿಫಿಕ್‌ ಸಂಸ್ಥೆಯು ಹೇಳಿದೆ.

ರೋಬೋ ಸೌಂಟಿಫಿಕ್‌ ಸಂಸ್ಥೆಯು ಈ ತಂತ್ರಜ್ಞಾನದ ಸಹಾಯದಿಂದ ಎರಡು ರೀತಿಯ ಉಪಕರಣವನ್ನು ತಯಾರಿಸಲು ಹೊರಟಿದೆ. ಒಂದು ಕೈಯಲ್ಲಿ ಹಿಡಿದುಕೊಳ್ಳಬಹುದಾದ ಸಣ್ಣ ಉಪಕರಣ. ಮತ್ತೊಂದು ಕೋಣೆಯಲ್ಲಿ ಅಳವಡಿಸಬಹುದಾದ ಟೆಸ್ಟಿಂಗ್‌ ಉಪಕರಣ. ಈ ಉಪಕರಣಗಳನ್ನು ಹೆಚ್ಚಾಗಿ ಸ್ಕೂಲ್‌, ವಿಮಾನಗಳು, ಸರ್ಕಾರಿ ಬಸ್‌ಗಳು, ಕಚೇರಿಗಳು, ಕಂಪನಿಗಳು ಸೇರಿ ಹಲವುಕಡೆ ಪರಿಣಾಮಕಾರಿಯಾಗಿ ಕೊರೋನಾ ಟೆಸ್ಟ್‌ಗೆ ಬಳಸಿಕೊಳ್ಳಬಹುದು ಎಂದು ಕಂಪನಿಯು ತಿಳಿಸಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಈ ಉಪಕರಣಗಳಿಂದ ಅತ್ಯಂತ ಸುಲಭವಾಗಿ ಕೊರೋನಾ ಪರೀಕ್ಷೆಯನ್ನು ನಡೆಸಬಹುದಾಗಿದೆ. ಆಟೋಮೇಟಿಕ್‌ ತಂತ್ರಜ್ಞಾನವಾಗಿರುವುದರಿಂದ ಕೊರೋನಾ ಟೆಸ್ಟಿಂಗ್‌ ನಡೆಸಲು ಹೆಚ್ಚಿನ ಜನರ ಅವಶ್ಯಕತೆಯೂ ಇಲ್ಲ. ಜನರು ಸ್ವಯೋ ಪ್ರೇರಿತರಾಗಿ ಪರೀಕ್ಷೆಗೆ ಒಳಗಾಗಿ ತಮಗೆ ತಾವೇ ಫಲಿತಾಂಶವನ್ನು ತಿಳಿದುಕೊಳ್ಳುವ ವ್ಯವಸ್ಥೆ ಇದಾಗಿದೆ. ಜನನಿಬಿಡ ಪ್ರದೇಶಗಳಲ್ಲಿ ಕೋವಿಡ್‌ ಸೋಂಕಿತರನ್ನು ಪತ್ತೆಹಚ್ಚಿ ಅಲಾರ್ಮ್‌ ನೀಡಲು ಈ ಉಪಕರಣ ಅತ್ಯಂತ ಸಹಾಯಕಾರಿಯಾಗಲಿದೆ ಎಂದು ರೋಬೋ ಸೈಂಟಿಫಿಕ್‌ ಸಂಸ್ಥೆ ಮಾಹಿತಿ ನೀಡಿದೆ.

ಒಟ್ಟಿನಲ್‌ ಕೊರೋನಾ ಟೆಸ್ಟಿಂಗ್‌ ಕೂಡ ಅತ್ಯಂತ ಅಪಾಯಕಾರಿ ಕೆಲಸವಾಗಿರುವ ನಮ್ಮ ದೇಶದಲ್ಲಿ ಇಂತಹ ಆಟೋಮ್ಯಾಟಿಕ್‌ ಉಪಕರಣಗಳ ಅವಶ್ಯಕತೆ ಇದೆ. ಟೆಸ್ಟಿಂಗ್‌ ಕೂಡ ಸಾಧ್ಯವಿಲ್ಲದಷ್ಟು ಬೃಹತ್‌ ಜನಸಂಖ್ಯೆಯ ಭಾರತದಲ್ಲಿ ಇಂತಹ ಸ್ವಯಂಚಾಲಿತ ತಂತ್ರಜ್ಞಾನ ವ್ಯವಸ್ಥೆಗಳು ಹೆಚ್ಚು ಉಪಯೋಗಕ್ಕೆ ಬರುತ್ತವೆ. ಆದರೆ ಈ ಕೋವಿಡ್‌ ಅಲಾರಾಮ್‌ ತಂತ್ರಜ್ಞಾನ ಬ್ರಿಟನ್‌ನಲ್ಲಿ ಅಭಿವೃದ್ಧಿಗೊಂಡು ಭಾರತಕ್ಕೆ ಬರಲು ಎಷ್ಟು ಕಾಲ ಬೇಕಾಗಬಹದು ಎಂಬುದು  ತಿಳಿದಿಲ್ಲ.


ಇದನ್ನೂ ಓದಿ :ಎಲ್‌‌ಜೆಪಿಯಲ್ಲಿ ಬಂಡಾಯ; ಸೇಡು ತೀರಿಸುತ್ತಿದ್ದಾರೆಯೆ ನಿತೀಶ್ ಕುಮಾರ್‌?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...