Homeಮುಖಪುಟಜೀವ ಬೆದರಿಕೆಯಿದೆ ಎಂದು ಪೊಲೀಸರಿಗೆ ತಿಳಿಸಿದ್ದ ಪತ್ರಕರ್ತ ಸಾವು: ಅಪಘಾತ ಎಂದ ಪೊಲೀಸರು!

ಜೀವ ಬೆದರಿಕೆಯಿದೆ ಎಂದು ಪೊಲೀಸರಿಗೆ ತಿಳಿಸಿದ್ದ ಪತ್ರಕರ್ತ ಸಾವು: ಅಪಘಾತ ಎಂದ ಪೊಲೀಸರು!

- Advertisement -
- Advertisement -

ಪೊಲೀಸ್ ಅಧಿಕಾರಿಗಳಿಗೆ ಪತ್ರ ಬರೆದು ಜೀವ ಬೆದರಿಕೆಯಿದೆ ಎಂದಿದ್ದ, ಉತ್ತರ ಪ್ರದೇಶದ ಪ್ರತಾಪಗಢ ಜಿಲ್ಲೆ ಮೂಲದ ಟಿವಿ ಪತ್ರಕರ್ತರೊಬ್ಬರು ಭಾನುವಾರ ರಾತ್ರಿ ನಿಧನರಾಗಿದ್ದಾರೆ. ಪೊಲೀಸರು ಪತ್ರಕರ್ತರ ಸಾವನ್ನು “ಬೈಕ್ ಅಪಘಾತ” ಎಂದು ಕರೆದಿದ್ದಾರೆ.

ಎಬಿಪಿ ನ್ಯೂಸ್ ಮತ್ತು ಅದರ ಪ್ರಾದೇಶಿಕ ವಿಭಾಗವಾದ ಎಬಿಪಿ ಗಂಗಾ ಸುದ್ದಿ ಮಾಧ್ಯಮದಲ್ಲಿ ಕೆಲಸ ಮಾಡುತ್ತಿದ್ದ ಸುಲಭ್ ಶ್ರೀವಾಸ್ತವ, ಶನಿವಾರವಷ್ಟೇ ತಮಗೆ ಜೀವ ಬೆದರಿಕೆ ಇದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಪತ್ರ ಬರೆದಿದ್ದರು. ಪ್ರತಾಪಗಢ ಜಿಲ್ಲೆಯಲ್ಲಿ ಇತ್ತೀಚೆಗೆ ಮದ್ಯ ಮಾಫಿಯಾಗಳ ವರದಿಯ ಮೇಲೆ ಪತ್ರಕರ್ತ ಸುಲಭ್ ಬೆಳಕು ಚೆಲ್ಲಿದ್ದರು. ನಂತರ ತನಗೆ ಬೆದರಿಕೆಯಿದೆ ಎಂದು ಹೇಳಿದ್ದರು.

“ಸುಲಭ್ ಶ್ರೀವಾಸ್ತವ ಅವರು ಭಾನುವಾರ ರಾತ್ರಿ 11 ಗಂಟೆ ಸುಮಾರಿಗೆ ಕೆಲಸದ ನಂತರ ತಮ್ಮ ಮೋಟಾರ್‌ ಸೈಕಲ್‌ನಲ್ಲಿ ಹಿಂದಿರುಗುತ್ತಿದ್ದರು. ಇಟ್ಟಿಗೆ ಗೂಡು ಬಳಿ ಅಪಘಾತಕ್ಕೆ ಈಡಾಗಿ ಬಿದ್ದಿದ್ದಾರೆ. ಕೆಲವು ಕಾರ್ಮಿಕರು ನೋಡಿ, ಅವರ ಸ್ನೇಹಿತರರಿಗೆ ಕರೆ ಮಾಡಿದ್ದಾರೆ. ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಸುಲಭ್ ಶ್ರೀವಾಸ್ತವ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ” ಎಂದು ಪ್ರತಾಪಗಢದ ಹಿರಿಯ ಪೊಲೀಸ್ ಅಧಿಕಾರಿ ಸುರೇಂದ್ರ ದ್ವಿವೇದಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ತಮಿಳುನಾಡು: ಸತಿ-ಪತಿಗಳಾದ ಸೋಶಿಯಲಿಸಂ ಮತ್ತು ಮಮತಾ ಬ್ಯಾನರ್ಜಿ

“ಪ್ರಾಥಮಿಕ ತನಿಖೆಯಲ್ಲಿ ಅವರು ಒಬ್ಬರೇ ತಮ್ಮ ಬೈಕ್‌ನಲ್ಲಿ ಹೋಗುತ್ತಿದ್ದರು. ಈ ವೇಳೆ ಬೈಕ್ ರಸ್ತೆಯ ಹ್ಯಾಂಡ್‌ಪಂಪ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ನಾವು ಇತರ ಕೋನಗಳಲ್ಲಿಯೂ ಸಹ ತನಿಖೆ ನಡೆಸುತ್ತಿದ್ದೇವೆ” ಎಂದು ಹಿರಿಯ ಪೊಲೀಸ್ ಅಧಿಕಾರಿ ಸುರೇಂದ್ರ ದ್ವಿವೇದಿ ತಿಳಿಸಿದ್ದಾರೆ.

ಘಟನಾ ಸ್ಥಳದಲ್ಲಿ ತೆಗೆದಿರುವ ಪತ್ರಕರ್ತ ಸುಲಭ್ ಅವರ ಮೃತದೇಹದ ಛಾಯಾಚಿತ್ರದಲ್ಲಿ, ಪತ್ರಕರ್ತ ನೆಲದ ಮೇಲೆ ಬಿದ್ದಿರುವುದು, ಅವರ ಮುಖಕ್ಕೆ ತೀವ್ರ ಗಾಯಗಳಾಗಿರುವುದು, ಅವರು ತೊಟ್ಟಿರುವ ಬಟ್ಟೆಗಳನ್ನು ತೆಗೆದಿರುವ ರೀತಿಯಲ್ಲಿದೆ. ಶರ್ಟ್ ಸಂಪೂರ್ಣವಾಗಿ ತೆಗೆಯಲಾಗಿದ್ದು, ಪ್ಯಾಂಟ್ ಬಿಚ್ಚಿ ಕೆಳಕ್ಕೆ ಎಳೆದಿರುವುದನ್ನು ಛಾಯಾಚಿತ್ರದಲ್ಲಿ ನೋಡಬಹುದು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಮೃತ ಪತ್ರಕರ್ತ ಶನಿವಾರ ತಮಗೆ ಜೀವ ಬೆದರಿಕೆ ಇದೆ ಎಂದು ಪೊಲೀಸರಿಗೆ ಬರೆದ ಪತ್ರ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅವರ ಮಾಜಿ ಚಾನೆಲ್‌ನ ಹಿರಿಯ ಪತ್ರಕರ್ತರು ಪತ್ರವನ್ನು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್‌ ಈಗ ಇದ್ದಿದ್ದರೆ ಬಿಜೆಪಿಗರು ಅವರನ್ನು ಪಾಕ್ ಪರ ಎನ್ನುತ್ತಿದ್ದರು: ಮೆಹಬೂಬಾ ಮುಫ್ತಿ

udhsc538

“ಜೂನ್ 9 ರಂದು ಜಿಲ್ಲೆಯಲ್ಲಿ ನಡೆಯುತ್ತಿರುವ ಮದ್ಯ ಮಾಫಿಯಾ ಕುರಿತ ನನ್ನ ವರದಿಯು ನನ್ನ ಚಾನೆಲ್ ನಡೆಸುತ್ತಿರುವ ನ್ಯೂಸ್ ಪೋರ್ಟಲ್‌ನಲ್ಲಿ ವರದಿಯಾಗಿದೆ. ಅಂದಿನಿಂದ ಈ ವರದಿಯ ಬಗ್ಗೆ ಸಾಕಷ್ಟು ಚರ್ಚೆಗಳಿವೆ. ನಾನು ನನ್ನ ಮನೆಯಿಂದ ಹೊರಬಂದಾಗ ಯಾರೋ ನನ್ನನ್ನು ಹಿಂಬಾಲಿಸುವಂತೆ ಅನಿಸುತ್ತಿದೆ.  ನನ್ನ ವರದಿಯ ಬಗ್ಗೆ ಮದ್ಯ ಮಾಫಿಯಾ ಅತೃಪ್ತಿ ಹೊಂದಿದೆ. ನನಗೆ ತೊಂದರೆಯಾಗಬಹುದು ಎಂದು ನನ್ನ ಮೂಲಗಳು ತಿಳಿಸಿವೆ. ಇದರಿಂದ ನನ್ನ ಕುಟುಂಬವೂ ತುಂಬಾ ಆತಂಕಕ್ಕೊಳಗಾಗಿದೆ “ಎಂದು ಸುಲಭ್ ಶ್ರೀವಾಸ್ತವ ಪತ್ರದಲ್ಲಿ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಹಿರಿಯ ಪೊಲೀಸ್ ಅಧಿಕಾರಿ ಪ್ರೇಮ್ ಪ್ರಕಾಶ್ ಅವರು ಎಬಿಪಿ ನ್ಯೂಸ್‌ಗೆ ಫೋನ್-ಇನ್ ಸಂದರ್ಶನದಲ್ಲಿ ಪತ್ರದ ಬಗ್ಗೆ ಮಾತನಾಡಿದ್ದು, ಬೆದರಿಕೆ ಬಗ್ಗೆ ತನಿಖೆ ನಡೆಸಲು ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಸುಲಭ್ ಶ್ರೀವಾಸ್ತವ ಸಾವಿಗೆ ಪ್ರತಿಪಕ್ಷದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಅವರ ಸರ್ಕಾರದ ವಿರುದ್ಧ ಕಿಡಿಕಾರಿದ್ದು, “ಸತ್ಯವನ್ನು ಬಹಿರಂಗಪಡಿಸಲು ಪತ್ರಕರ್ತರು ಅಪಾಯಕಾರಿ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಸರ್ಕಾರ ನಿದ್ರಿಸುತ್ತಿದೆ” ಎಂದು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಕೊಡಗು: ಪೊಲೀಸರ ದೌರ್ಜನ್ಯಕ್ಕೆ ಮಾನಸಿಕ ಅಸ್ವಸ್ಥ ಬಲಿ: ಎಂಟು ಪೊಲೀಸರ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...