Homeಮುಖಪುಟಜೀವ ಬೆದರಿಕೆಯಿದೆ ಎಂದು ಪೊಲೀಸರಿಗೆ ತಿಳಿಸಿದ್ದ ಪತ್ರಕರ್ತ ಸಾವು: ಅಪಘಾತ ಎಂದ ಪೊಲೀಸರು!

ಜೀವ ಬೆದರಿಕೆಯಿದೆ ಎಂದು ಪೊಲೀಸರಿಗೆ ತಿಳಿಸಿದ್ದ ಪತ್ರಕರ್ತ ಸಾವು: ಅಪಘಾತ ಎಂದ ಪೊಲೀಸರು!

- Advertisement -
- Advertisement -

ಪೊಲೀಸ್ ಅಧಿಕಾರಿಗಳಿಗೆ ಪತ್ರ ಬರೆದು ಜೀವ ಬೆದರಿಕೆಯಿದೆ ಎಂದಿದ್ದ, ಉತ್ತರ ಪ್ರದೇಶದ ಪ್ರತಾಪಗಢ ಜಿಲ್ಲೆ ಮೂಲದ ಟಿವಿ ಪತ್ರಕರ್ತರೊಬ್ಬರು ಭಾನುವಾರ ರಾತ್ರಿ ನಿಧನರಾಗಿದ್ದಾರೆ. ಪೊಲೀಸರು ಪತ್ರಕರ್ತರ ಸಾವನ್ನು “ಬೈಕ್ ಅಪಘಾತ” ಎಂದು ಕರೆದಿದ್ದಾರೆ.

ಎಬಿಪಿ ನ್ಯೂಸ್ ಮತ್ತು ಅದರ ಪ್ರಾದೇಶಿಕ ವಿಭಾಗವಾದ ಎಬಿಪಿ ಗಂಗಾ ಸುದ್ದಿ ಮಾಧ್ಯಮದಲ್ಲಿ ಕೆಲಸ ಮಾಡುತ್ತಿದ್ದ ಸುಲಭ್ ಶ್ರೀವಾಸ್ತವ, ಶನಿವಾರವಷ್ಟೇ ತಮಗೆ ಜೀವ ಬೆದರಿಕೆ ಇದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಪತ್ರ ಬರೆದಿದ್ದರು. ಪ್ರತಾಪಗಢ ಜಿಲ್ಲೆಯಲ್ಲಿ ಇತ್ತೀಚೆಗೆ ಮದ್ಯ ಮಾಫಿಯಾಗಳ ವರದಿಯ ಮೇಲೆ ಪತ್ರಕರ್ತ ಸುಲಭ್ ಬೆಳಕು ಚೆಲ್ಲಿದ್ದರು. ನಂತರ ತನಗೆ ಬೆದರಿಕೆಯಿದೆ ಎಂದು ಹೇಳಿದ್ದರು.

“ಸುಲಭ್ ಶ್ರೀವಾಸ್ತವ ಅವರು ಭಾನುವಾರ ರಾತ್ರಿ 11 ಗಂಟೆ ಸುಮಾರಿಗೆ ಕೆಲಸದ ನಂತರ ತಮ್ಮ ಮೋಟಾರ್‌ ಸೈಕಲ್‌ನಲ್ಲಿ ಹಿಂದಿರುಗುತ್ತಿದ್ದರು. ಇಟ್ಟಿಗೆ ಗೂಡು ಬಳಿ ಅಪಘಾತಕ್ಕೆ ಈಡಾಗಿ ಬಿದ್ದಿದ್ದಾರೆ. ಕೆಲವು ಕಾರ್ಮಿಕರು ನೋಡಿ, ಅವರ ಸ್ನೇಹಿತರರಿಗೆ ಕರೆ ಮಾಡಿದ್ದಾರೆ. ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಸುಲಭ್ ಶ್ರೀವಾಸ್ತವ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ” ಎಂದು ಪ್ರತಾಪಗಢದ ಹಿರಿಯ ಪೊಲೀಸ್ ಅಧಿಕಾರಿ ಸುರೇಂದ್ರ ದ್ವಿವೇದಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ತಮಿಳುನಾಡು: ಸತಿ-ಪತಿಗಳಾದ ಸೋಶಿಯಲಿಸಂ ಮತ್ತು ಮಮತಾ ಬ್ಯಾನರ್ಜಿ

“ಪ್ರಾಥಮಿಕ ತನಿಖೆಯಲ್ಲಿ ಅವರು ಒಬ್ಬರೇ ತಮ್ಮ ಬೈಕ್‌ನಲ್ಲಿ ಹೋಗುತ್ತಿದ್ದರು. ಈ ವೇಳೆ ಬೈಕ್ ರಸ್ತೆಯ ಹ್ಯಾಂಡ್‌ಪಂಪ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ನಾವು ಇತರ ಕೋನಗಳಲ್ಲಿಯೂ ಸಹ ತನಿಖೆ ನಡೆಸುತ್ತಿದ್ದೇವೆ” ಎಂದು ಹಿರಿಯ ಪೊಲೀಸ್ ಅಧಿಕಾರಿ ಸುರೇಂದ್ರ ದ್ವಿವೇದಿ ತಿಳಿಸಿದ್ದಾರೆ.

ಘಟನಾ ಸ್ಥಳದಲ್ಲಿ ತೆಗೆದಿರುವ ಪತ್ರಕರ್ತ ಸುಲಭ್ ಅವರ ಮೃತದೇಹದ ಛಾಯಾಚಿತ್ರದಲ್ಲಿ, ಪತ್ರಕರ್ತ ನೆಲದ ಮೇಲೆ ಬಿದ್ದಿರುವುದು, ಅವರ ಮುಖಕ್ಕೆ ತೀವ್ರ ಗಾಯಗಳಾಗಿರುವುದು, ಅವರು ತೊಟ್ಟಿರುವ ಬಟ್ಟೆಗಳನ್ನು ತೆಗೆದಿರುವ ರೀತಿಯಲ್ಲಿದೆ. ಶರ್ಟ್ ಸಂಪೂರ್ಣವಾಗಿ ತೆಗೆಯಲಾಗಿದ್ದು, ಪ್ಯಾಂಟ್ ಬಿಚ್ಚಿ ಕೆಳಕ್ಕೆ ಎಳೆದಿರುವುದನ್ನು ಛಾಯಾಚಿತ್ರದಲ್ಲಿ ನೋಡಬಹುದು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಮೃತ ಪತ್ರಕರ್ತ ಶನಿವಾರ ತಮಗೆ ಜೀವ ಬೆದರಿಕೆ ಇದೆ ಎಂದು ಪೊಲೀಸರಿಗೆ ಬರೆದ ಪತ್ರ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅವರ ಮಾಜಿ ಚಾನೆಲ್‌ನ ಹಿರಿಯ ಪತ್ರಕರ್ತರು ಪತ್ರವನ್ನು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್‌ ಈಗ ಇದ್ದಿದ್ದರೆ ಬಿಜೆಪಿಗರು ಅವರನ್ನು ಪಾಕ್ ಪರ ಎನ್ನುತ್ತಿದ್ದರು: ಮೆಹಬೂಬಾ ಮುಫ್ತಿ

udhsc538

“ಜೂನ್ 9 ರಂದು ಜಿಲ್ಲೆಯಲ್ಲಿ ನಡೆಯುತ್ತಿರುವ ಮದ್ಯ ಮಾಫಿಯಾ ಕುರಿತ ನನ್ನ ವರದಿಯು ನನ್ನ ಚಾನೆಲ್ ನಡೆಸುತ್ತಿರುವ ನ್ಯೂಸ್ ಪೋರ್ಟಲ್‌ನಲ್ಲಿ ವರದಿಯಾಗಿದೆ. ಅಂದಿನಿಂದ ಈ ವರದಿಯ ಬಗ್ಗೆ ಸಾಕಷ್ಟು ಚರ್ಚೆಗಳಿವೆ. ನಾನು ನನ್ನ ಮನೆಯಿಂದ ಹೊರಬಂದಾಗ ಯಾರೋ ನನ್ನನ್ನು ಹಿಂಬಾಲಿಸುವಂತೆ ಅನಿಸುತ್ತಿದೆ.  ನನ್ನ ವರದಿಯ ಬಗ್ಗೆ ಮದ್ಯ ಮಾಫಿಯಾ ಅತೃಪ್ತಿ ಹೊಂದಿದೆ. ನನಗೆ ತೊಂದರೆಯಾಗಬಹುದು ಎಂದು ನನ್ನ ಮೂಲಗಳು ತಿಳಿಸಿವೆ. ಇದರಿಂದ ನನ್ನ ಕುಟುಂಬವೂ ತುಂಬಾ ಆತಂಕಕ್ಕೊಳಗಾಗಿದೆ “ಎಂದು ಸುಲಭ್ ಶ್ರೀವಾಸ್ತವ ಪತ್ರದಲ್ಲಿ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಹಿರಿಯ ಪೊಲೀಸ್ ಅಧಿಕಾರಿ ಪ್ರೇಮ್ ಪ್ರಕಾಶ್ ಅವರು ಎಬಿಪಿ ನ್ಯೂಸ್‌ಗೆ ಫೋನ್-ಇನ್ ಸಂದರ್ಶನದಲ್ಲಿ ಪತ್ರದ ಬಗ್ಗೆ ಮಾತನಾಡಿದ್ದು, ಬೆದರಿಕೆ ಬಗ್ಗೆ ತನಿಖೆ ನಡೆಸಲು ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಸುಲಭ್ ಶ್ರೀವಾಸ್ತವ ಸಾವಿಗೆ ಪ್ರತಿಪಕ್ಷದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಅವರ ಸರ್ಕಾರದ ವಿರುದ್ಧ ಕಿಡಿಕಾರಿದ್ದು, “ಸತ್ಯವನ್ನು ಬಹಿರಂಗಪಡಿಸಲು ಪತ್ರಕರ್ತರು ಅಪಾಯಕಾರಿ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಸರ್ಕಾರ ನಿದ್ರಿಸುತ್ತಿದೆ” ಎಂದು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಕೊಡಗು: ಪೊಲೀಸರ ದೌರ್ಜನ್ಯಕ್ಕೆ ಮಾನಸಿಕ ಅಸ್ವಸ್ಥ ಬಲಿ: ಎಂಟು ಪೊಲೀಸರ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...