Homeಮುಖಪುಟಉತ್ತರ ಪ್ರದೇಶ ಬಿಜೆಪಿ ಭಿನ್ನಮತ ಶಮನಕ್ಕೆ ಯತ್ನ: ಸಿಎಂ ಯೋಗಿ ಹೊಗಳಿದ ಪಿಎಂ ಮೋದಿ

ಉತ್ತರ ಪ್ರದೇಶ ಬಿಜೆಪಿ ಭಿನ್ನಮತ ಶಮನಕ್ಕೆ ಯತ್ನ: ಸಿಎಂ ಯೋಗಿ ಹೊಗಳಿದ ಪಿಎಂ ಮೋದಿ

- Advertisement -
- Advertisement -

ಕಳೆದ ಕೆಲವು ದಿನಗಳಿಂದ ಉತ್ತರ ಪ್ರದೇಶ ಬಿಜೆಪಿಯಲ್ಲಿ ಭಿನ್ನಮತ ಹೊಗೆಯಾಡುತ್ತಿದೆ. ಕೋವಿಡ್ ನಿರ್ವಹಣೆಯಲ್ಲಿ ಆದಿತ್ಯನಾಥ್ ಸಂಪೂರ್ಣ ವಿಫಲರಾಗಿದ್ದಾರೆ ಎಂಬ ಆರೋಪಗಳಿಂದ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುನ್ನ ನಾಯಕತ್ವ ಬದಲಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿದ್ದವು. ಈ ವದಂತಿಗಳ ಹಿನ್ನೆಲೆಯಲ್ಲಿಯೇ ಬಿ.ಎಲ್ ಸಂತೋಷ್ ಮತ್ತು ಉತ್ತರಪ್ರದೇಶ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ಸಿಂಗ್ ಅವರು ರಾಜ್ಯಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದರು. ಅದರ ಬೆನ್ನಲ್ಲೆ ಸಿಎಂ ಯೋಗಿ ಆದಿತ್ಯನಾಥ್ ದೆಹಲಿಗೆ ಭೇಟಿ ನೀಡಿ ಪಿಎಂ ಮೋದಿ, ಅಮಿತ್ ಶಾ ಮತ್ತು ಪಕ್ಷದ ಅಧ್ಯಕ್ಷ ಜೆ.ಪಿ ನಡ್ಡಾರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಆ ಸಭೆಯ ವಿವರಗಳು ಇನ್ನೂ ಬಹಿರಂಗಗೊಂಡಿಲ್ಲ..

ಇದೆಲ್ಲದರ ನಡುವೆ ಭಾನುವಾರ ರಾತ್ರಿ ಪ್ರಧಾನಿ ನರೇಂದ್ರ ಮೋದಿಯವರು ಸಿಎಂ ಯೋಗಿ ಆದಿತ್ಯನಾಥ್‌ರವರನ್ನು ಹೊಗಳಿ ಟ್ವೀಟ್ ಮಾಡಿದ್ದಾರೆ. “ಉತ್ತರ ಪ್ರದೇಶದ ಹಿರಿಯ ನಾಗರಿಕರ ಕುರಿತು ಕಾಳಜಿ ವಹಿಸುವ ಹೆಲ್ಫ್‌ಲೈನ್‌ ಅನ್ನು ಸಿಎಂ ಯೋಗಿ ಆದಿತ್ಯನಾಥ್ ದೇಶದಲ್ಲಿ ಮೊದಲ ಬಾರಿಗೆ ಆರಂಭಿಸಿದ್ದಾರೆ” ಎಂದು ಎಬಿಪಿ ಲೈವ್ ಪ್ರಕಟಿಸಿದ ಲೇಖನವನ್ನು ಟ್ವೀಟ್ ಮಾಡಿರುವ ಮೋದಿ, ತುಂಬಾ ಒಳ್ಳೆಯ ಉಪಕ್ರಮ! ಎಂದು ಮೋದಿ ಬರೆದಿದ್ದಾರೆ.

ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಗಂಗಾ ನದಿಯಲ್ಲಿ ಹೆಣಗಳು ತೇಲಿ ಬಂದಿದ್ದು, ನದಿ ತೀರಗಳು ಸಾಮೂಹಿಕ ಚಿತಾಗಾರಗಳಾಗಿ ಬದಲಾಗಿದ್ದು ದೇಶ-ವಿದೇಶದ ಮಾಧ್ಯಮಗಳಲ್ಲಿ ದೊಡ್ಡ ಚರ್ಚೆಗೆ ಆಸ್ಪದ ನೀಡಿದ್ದವು. ಅದೇ ಸಮಯದಲ್ಲಿ ಯುಪಿ ಬಿಜೆಪಿ ಪಕ್ಷದ ಶಾಸಕರೆ ಯೋಗಿ ಆದಿತ್ಯನಾಥ್ ವಿರುದ್ಧ ದನಿಯೆತ್ತಿದ್ದರು. ಕೋವಿಡ್ ಪರಿಸ್ಥಿತಿಯನ್ನು ಪ್ರಶ್ನಿಸಿದರೆ ನನಗೆ ದೇಶದ್ರೋಹಿಯ ಪಟ್ಟ ಕಟ್ಟಬಹುದು ಎಂದು ಬಿಜೆಪಿ ಶಾಸಕ ಆತಂಕ ವ್ಯಕ್ತಪಡಿಸಿದ್ದರು.

ಅದೇ ಸಮಯದಲ್ಲಿ ಯುಪಿ ಸಚಿವ ಸಂಪುಟ ವಿಸ್ತರಣೆಯಲ್ಲಿಯೂ ಭಿನ್ನಾಭಿಪ್ರಾಯ ತಲೆದೋರಿತ್ತು. ಮೋದಿಯವರ ಆಪ್ತ ಎನ್ನಲಾದ ಮಾಜಿ ಅಧಿಕಾರಿ ಎ.ಕೆ. ಶರ್ಮಾ ಅವರಿಗೆ ರಾಜ್ಯ ಸರ್ಕಾರದಲ್ಲಿ ಪ್ರಮುಖ ಪಾತ್ರ ನೀಡಬೇಕು ಎಂಬ ಬೇಡಿಕೆ ಕೇಳಿಬಂದಿತ್ತು. ಈ ಎಲ್ಲಾ ಹಿನ್ನೆಲೆಯಲ್ಲಿ ಇದು 2022ರ ವಿಧಾನಸಭಾ ಚುನಾವಣೆಯ ಮೇಲೆ ನಕರಾತ್ಮಕ ಪರಿಣಾಮ ಬೀರಬಹುದು ಎಂಬ ಆತಂಕಗಳು ಬಿಜೆಪಿಯನ್ನು ಕಾಡಿದ್ದವು.

ಈಗ ಸ್ವತಃ ನರೇಂದ್ರ ಮೋದಿಯವರೆ ಯೋಗಿ ಹೊಗಳಿ ಟ್ವೀಟ್ ಮಾಡುವ ಮೂಲಕ ಭಿನ್ನಮತ ಶಮನಕ್ಕೆ ಮುಂದಾಗಿದ್ದಾರೆ. ಇದು ಎಷ್ಟರಮಟ್ಟಿಗೆ ಪ್ರಯೋಜನವಾಗಲಿದೆ ಎಂಬುದು ಸದ್ಯದಲ್ಲಿಯೇ ತಿಳಿಯಲಿದೆ.


ಇದನ್ನೂ ಓದಿ: ಉತ್ತರಪ್ರದೇಶ ಬಿಜೆಪಿಯಲ್ಲಿ ಭಿನ್ನಮತ: ಯೋಗಿ ಬದಲಾವಣೆಯೇ? ಸಂಪುಟ ವಿಸ್ತರಣೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಪ್ರತಿಭಟನಾಕಾರರಿಗೆ ಗುಂಡಿಕ್ಕುವ ಬೆದರಿಕೆ: ಬಿಜೆಪಿ ನಾಯಕನ ವಿರುದ್ಧ FIR

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...