Homeಮುಖಪುಟಮಹಾರಾಷ್ಟ್ರ: ಒಂದು ವರ್ಷದಲ್ಲಿ ಶಾಲೆಯಿಂದ ಹೊರಗುಳಿದ 2 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು

ಮಹಾರಾಷ್ಟ್ರ: ಒಂದು ವರ್ಷದಲ್ಲಿ ಶಾಲೆಯಿಂದ ಹೊರಗುಳಿದ 2 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದಿಂದ ತತ್ತರಿಸಿರುವ ಮಹಾರಾಷ್ಟ್ರದಲ್ಲಿ ಎರಡು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಳೆದ ಒಂದು ವರ್ಷದಿಂದ ಶಿಕ್ಷಣದಿಂದ ವಂಚಿತರಾಗಿದ್ದಾರೆ. 10ನೇ ತರಗತಿಗೆ ಸೇರಲು ಅರ್ಜಿ ತುಂಬಿರುವ ವಿದ್ಯಾರ್ಥಿಗಳು ಮತ್ತು ಒಂಬತ್ತನೇ ತರಗತಿಯಲ್ಲಿ ಉತ್ತೀರ್ಣರಾದವರಿಗೆ ಹೋಲಿಕೆ ಮಾಡಿದರೇ ಎರಡು ಲಕ್ಷಕ್ಕಿಂತ ಕಡಿಮೆ ವಿದ್ಯಾರ್ಥಿಗಳು ದಾಖಲಾಗಿದ್ದಾರೆ.

ಈ ಮಾಹಿತಿಯು ಮಹಾರಾಷ್ಟ್ರದ ಶಿಕ್ಷಣ ಇಲಾಖೆಗೆ ಆಘಾತವನ್ನುಂಟು ಮಾಡಿದ್ದು, ಶಾಲೆ ಬಿಟ್ಟ ವಿದ್ಯಾರ್ಥಿಗಳನ್ನು ಶಾಲೆಗಳಿಗೆ ಮರಳಿ ಕರೆಸಿಕೊಳ್ಳುವ ಕಾರ್ಯಕ್ಕೆ ತುರ್ತು ಚಾಲನೆಯನ್ನು ನೀಡಲಾಗುತ್ತಿದೆ ಎನ್ನಲಾಗಿದೆ.

ಕಳೆದ ವರ್ಷ ಒಟ್ಟು 18,31,344 ವಿದ್ಯಾರ್ಥಿಗಳು ಒಂಬತ್ತನೇ ತರಗತಿಯಲ್ಲಿ ಉತ್ತೀರ್ಣರಾಗಿದ್ದಾರೆ. ಆದಾಗ್ಯೂ, ಈ ವರ್ಷ ಹತ್ತನೇ ತರಗತಿಗೆ ಅರ್ಜಿ ಸಲ್ಲಿಸಿದವರ ಸಂಖ್ಯೆ ಕೇವಲ 16, 57,000. ಈ ಪೈಕಿ 56 ಸಾವಿರ ವಿದ್ಯಾರ್ಥಿಗಳು ಮತ್ತೆ ಪರೀಕ್ಷೆಗೆ ಹಾಜರಾಗಿದ್ದರು. ಹೀಗಾಗಿ ಹತ್ತನೇ ತರಗತಿ ಪರೀಕ್ಷೆಗೆ 16 ಲಕ್ಷ ಹೊಸ ವಿದ್ಯಾರ್ಥಿಗಳು ಮಾತ್ರ ಹಾಜರಾಗಿದ್ದಾರೆ. ಕಳೆದ ವರ್ಷ 9 ನೇ ತರಗತಿಯಲ್ಲಿ ಉತ್ತೀರ್ಣರಾದವರೊಂದಿಗೆ ಹೋಲಿಸಿದರೆ, ಒಂದೇ ವರ್ಷದಲ್ಲಿ ಸುಮಾರು 2,32,000 ವಿದ್ಯಾರ್ಥಿಗಳು ಶಿಕ್ಷಣದಿಂದ ಹೊರಗುಳಿದಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್‌ ಈಗ ಇದ್ದಿದ್ದರೆ ಬಿಜೆಪಿಗರು ಅವರನ್ನು ಪಾಕ್ ಪರ ಎನ್ನುತ್ತಿದ್ದರು: ಮೆಹಬೂಬಾ ಮುಫ್ತಿ

“ಬಡತನ, ಆರ್ಥಿಕ ತೊಂದರೆ, ಬಾಲ್ಯವಿವಾಹಗಳು, ಪೋಷಕರ ಕೆಲಸ ಮತ್ತು ಬಾಲ ಕಾರ್ಮಿಕ ಪದ್ಧತಿಗಾಗಿ ಬೇರೆಡೆಗೆ ವಲಸೆ ಹೋಗುವ ಸಾಧ್ಯತೆ ಸೇರಿದಂತೆ ಹಲವು ಕಾರಣಗಳಿಂದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ” ಎಂದು ಜಲ್ಕಾರಿ ಜ್ಞಾನ ಪ್ರತಿಷ್ಠಾನದ ಹಿರಿಯ ಶಿಕ್ಷಣ ತಜ್ಞ ಮತ್ತು ಸಿಇಒ ಸಂಗಿತಾ ಮಾಲ್ಶೆ ಹೇಳಿದ್ದಾರೆ.

’ಶಿಕ್ಷಣ ಹಕ್ಕು ಕಾಯ್ದೆಯ ಪ್ರಕಾರ, ವಿದ್ಯಾರ್ಥಿಗಳು ಶಾಲೆಗೆ ಬರುವಂತಹ ವಾತಾವರಣ ಕಲ್ಪಿಸುವುದು ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದೆ. ಗ್ರೇಡ್ ವ್ಯವಸ್ಥೆಯನ್ನು ಬಳಸಿಕೊಂಡು ವಿದ್ಯಾರ್ಥಿಗಳನ್ನು 8 ನೇ ತರಗತಿವರೆಗೆ ತೇರ್ಗಡೆ ಮಾಡಲಾಗುತ್ತಿದೆ. ಒಂಬತ್ತನೇ ತರಗತಿಯಿಂದ ವಿದ್ಯಾರ್ಥಿಗಳು ಹೊರಗುಳಿದ ಹಲವಾರು ಘಟನೆಗಳು ನಡೆದಿವೆ, ಆದರೆ ಈಗ ಎರಡು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣ ನಿಲ್ಲಿಸಿರುವುದು ಆಘಾತಕಾರಿ ಮತ್ತು  ಅಸ್ವಾಭಾವಿಕವಾಗಿದೆ’ ಎಂದು ಶಿಕ್ಷಣ ತಜ್ಞರು ಹೇಳುತ್ತಾರೆ.

“ಪ್ರಾಥಮಿಕ ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳನ್ನು ತಲುಪಬೇಕಿದೆ. ಮಹಾರಾಷ್ಟ್ರದ ಶಿಕ್ಷಣ ಇಲಾಖೆಯಿಂದ  ಯಾವುದೇ ರೀತಿಯ ಪ್ರಯತ್ನಗಳನ್ನು ನಾವು ನೋಡಿಲ್ಲ. ಅವರು ವಿದ್ಯಾರ್ಥಿಗಳನ್ನು ಹುಡುಕಲು ಮತ್ತು ಹತ್ತನೇ ತರಗತಿಗೆ ದಾಖಲು ಮಾಡಲು ಕ್ರಮ ಕೈಗೊಳ್ಳಬೇಕಾಗಿತ್ತು” ಎಂದು ಮಾಜಿ ಶಿಕ್ಷಣ ಸಚಿವ ಮತ್ತು ಬಿಜೆಪಿ ನಾಯಕ ಆಶಿಶ್ ಶೆಲಾರ್ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಸತತ ಎರಡು ವರ್ಷ ಆನ್‌ಲೈನ್ ಶಿಕ್ಷಣ ವ್ಯವಸ್ಥೆಯನ್ನು ಆಶ್ರಯಿಸಬೇಕಾಗಿದ್ದು, ಈ ಕ್ರಮವು ಬಡ ವಿದ್ಯಾರ್ಥಿಗಳನ್ನು ಶಿಕ್ಷಣ ವ್ಯವಸ್ಥೆಯಿಂದ ಹೊರಗೆ ತಳ್ಳುತ್ತದೆ ಎಂದು ತಜ್ಞರು ಹೇಳುತ್ತಾರೆ. ರಾಜ್ಯದ ಪ್ರಾಥಮಿಕ ಶಿಕ್ಷಣ ಇಲಾಖೆಯು ಎಲ್ಲಾ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿಕೊಳ್ಳುತ್ತಲೇ ಇದ್ದರೂ, ಸರ್ಕಾರದ ಯೋಜನೆಗಳು ಕಾರ್ಯರೂಪಕ್ಕೆ ಬಂದಿಲ್ಲ ಎಂದು ವಾಸ್ತವ ತಿಳಿಸುತ್ತಿದೆ ಎಂದು ಶಿಕ್ಷಣ ತಜ್ಞರು ಮತ್ತು ಪ್ರತಿಪಕ್ಷ ಆರೋಪಿಸಿದೆ.


ಇದನ್ನೂ ಓದಿ: ಡಾಲರ್‌ಗೆ ಬೈಬೈ ಹೇಳಿದ ರಷ್ಯಾ: ಮುರಿಯಲಿದೆಯೆ ಅಮೆರಿಕನ್‍ ಡಾಲರ್ ಏಕಾಧಿಪತ್ಯ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...