Homeಚಳವಳಿಸಂಪೂರ್ಣ ಪ್ಯಾಕೇಜ್‌ಗಾಗಿ ಆಗ್ರಹ: ನಾಳೆ ಮುಖ್ಯಮಂತ್ರಿಯವರ ಮನೆಯಡೆಗೆ ಜನಾಗ್ರಹ ನಡಿಗೆ

ಸಂಪೂರ್ಣ ಪ್ಯಾಕೇಜ್‌ಗಾಗಿ ಆಗ್ರಹ: ನಾಳೆ ಮುಖ್ಯಮಂತ್ರಿಯವರ ಮನೆಯಡೆಗೆ ಜನಾಗ್ರಹ ನಡಿಗೆ

ಕುಸಿಯುತ್ತಿರುವ ಲಕ್ಷಾಂತರ ಕುಟುಂಬಗಳ ಜೀವನೋಪಾಯವನ್ನು ರಕ್ಷಿಸಿಕೊಳ್ಳಲು ಇಂದು ಬೀದಿಗಿಳಿಯುವುದು ಅನಿವಾರ್ಯ ಎಂದು ಮಾವಳ್ಳಿ ಶಂಕರ್, ಬಿ.ಟಿ. ಲಲಿತಾ ನಾಯ್ಕ್ ತಿಳಿಸಿದ್ದಾರೆ.

- Advertisement -
- Advertisement -

ಕೊರೊನಾ ಎರಡನೇ ಅಲೆ ಲಕ್ಷಾಂತರ ಜನರನ್ನು ಬಲಿ ತೆಗೆದುಕೊಂಡರೆ, ಕೊರೊನಾ ಕಾರಣಕ್ಕಾಗಿ ಹೇರಲಾದ ಲಾಕ್‌ಡೌನ್‌ನಿಂದಾಗಿ ಕೋಟ್ಯಾಂತರ ಜನ ಸಂಕಷ್ಟಕ್ಕೊಳಗಾಗಿದ್ದಾರೆ. ಈ ಸಂಕಷ್ಟವನ್ನು ಕಡಿಮೆ ಮಾಡಲು ಹಲವು ರಾಜ್ಯಗಳು ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿದ್ದರೂ ಸಹ ಅದು ಬಡಜನರನ್ನು ತಲುಪಿಲ್ಲ ಎಂಬ ಆರೋಪ ಸಾಮಾನ್ಯವಾಗಿದೆ. ಕೇರಳ ಮತ್ತು ತಮಿಳುನಾಡು ರಾಜ್ಯಗಳು ಇರುವುದರಲ್ಲಿ ಉತ್ತಮ ಪ್ಯಾಕೇಜ್ ಘೋಷಿಸಿದ್ದರೆ ಕರ್ನಾಟಕ ಸರ್ಕಾರದ ಪ್ಯಾಕೇಜ್ ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ರೀತಿ ಇದೆ ಎಂದು ಹಲವರು ಟೀಕಿಸಿದ್ದಾರೆ. ಇನ್ನು ಹಲವಾರು ಜನರಿಗೆ ಪ್ಯಾಕೇಜ್ ತಲುಪಿಲ್ಲ ಎಂಬ ಆರೋಪ ಕೇಳಿಬಂದಿದೆ. ಹಾಗಾಗಿ ಸಂಪೂರ್ಣ ಪ್ಯಾಕೇಜ್‌ಗೆ ಆಗ್ರಹಿಸಿ ಜನಾಗ್ರಹ ಆಂದೋಲನದ ವತಿಯಿಂದ ಜೂನ್ 15 ರಂದು ಮುಖ್ಯಮಂತ್ರಿಗಳ ಮನೆಗೆ ಪಾದಯಾತ್ರೆ ಹೋರಾಟ ಹಮ್ಮಿಕೊಳ್ಳಲಾಗಿದೆ.

ಕರ್ನಾಟಕದಲ್ಲಿ ಕೋವಿಡ್‌ಗೆ 35,000 ಜನರು ಬಲಿಯಾಗಿದ್ದಾರೆ. 30 ಲಕ್ಷ ಜನ ಕೋವಿಡ್‌ಗೆ ತುತ್ತಾಗಿ, ಸಂಕಟ ಅನುಭವಿಸಿ, ಸಾಲಸೋಲ ಮಾಡಿಕೊಂಡು ಚೇತರಿಸಿಕೊಳ್ಳಲು ಪ್ರಯಾಸಪಡುತ್ತಿದ್ದಾರೆ. ಮೂರು ತಿಂಗಳಿಂದ ಲಕ್ಷಾಂತರ ದುಡಿಯುವ ಕೈಗಳಿಗೆ ಕೆಲಸವಿಲ್ಲ. ವ್ಯಾಪಾರ ವಹಿವಾಟು ನೆಲಕಚ್ಚಿದೆ. ಸಾಲದೆಂಬಂತೆ ಮೂರನೇ ಅಲೆಯ ಕತ್ತಿ ನೆತ್ತಿಯ ಮೇಲೆ ತೂಗಾಡುತ್ತಿದೆ. ಈ ಅವನತಿಯಿಂದ ರಾಜ್ಯವನ್ನು ಹಾಗೂ ಜನರನ್ನು ಮೇಲೆತ್ತಬೇಕಾದರೆ ಸರ್ಕಾರ ದಿಟ್ಟ ಕ್ರಮಗಳಿಗೆ ಮುಂದಾಗಲೇಬೇಕು. ಆದರೆ ಅದು ಸಂವೇದನಾಹೀನವಾಗಿ ನಡೆದುಕೊಳ್ಳುತ್ತಿದೆ, ನೊಂದ ಜನರಿಗೆ ಎಷ್ಟು ಮಾತ್ರಕ್ಕೂ ನೆರವಾಗದ ಬರೀ ತೋರಿಕೆಯ ಕ್ರಮಗಳನ್ನಷ್ಟೇ ತೆಗೆದುಕೊಳ್ಳುತ್ತಿದೆ. ಈ ಕಾರಣದಿಂದಾಗಿಯೇ ಸಾವು ನೋವುಗಳು ಹೆಚ್ಚಾಗಿವೆ ಎಂದು ಜನಾಗ್ರಹ ಆಂದೋಲನ ಆರೋಪಿಸಿದೆ.

ಜನಾಗ್ರಹ, ಜನರಪರ ಸಂಘಟನೆಗಳು ಹಾಗೂ ಮಾಧ್ಯಮಗಳ ಒತ್ತಡದಿಂದಾಗಿ ಸರ್ಕಾರ ಎರಡು ಅರೆಮನಸ್ಸಿನ ಪ್ಯಾಕೇಜುಗಳನ್ನು ಘೋಷಿಸಿದೆ. ಆದರೆ ಅವು ಏತಕ್ಕೂ ಸಾಲದ ಪ್ಯಾಕೇಜುಗಳು. ಕೆಲಸವಿಲ್ಲದೆ ದುಡಿಯುವ ಜನರ ಜೇಬು ಮತ್ತು ಮನೆ ಪಾತ್ರೆ ಎರಡೂ ಖಾಲಿಯಾಗಿವೆ. ಹಸಿವಿನ ಹಾಗೂ ಹಣ ಅಭಾವದ ಹಾಹಾಕಾರ ಶುರುವಾಗಿದೆ. ಇಂತಹ ಸಂದರ್ಭದಲ್ಲಿ ಅಪಾಯದಲ್ಲಿರುವ ಜನಸಾಮಾನ್ಯರೆಲ್ಲರ ಜೀವ ಉಳಿಸಿಕೊಳ್ಳಲು, ಕುಸಿಯುತ್ತಿರುವ ಲಕ್ಷಾಂತರ ಕುಟುಂಬಗಳ ಜೀವನೋಪಾಯವನ್ನು ರಕ್ಷಿಸಿಕೊಳ್ಳಲು ಇಂದು ಬೀದಿಗಿಳಿಯುವುದು ಅನಿವಾರ್ಯ ಅಗತ್ಯವಾಗಿದೆ ಎಂದು ಜನಾಗ್ರಹದ ಪರವಾಗಿ ಮಾವಳ್ಳಿ ಶಂಕರ್
ಬಿ.ಟಿ. ಲಲಿತಾ ನಾಯ್ಕ್ ತಿಳಿಸಿದ್ದಾರೆ.

ಜೂನ್ 15ರ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಮೌರ್ಯ ಸರ್ಕಲ್ಲಿನಿಂದ ಮುಖ್ಯಮಂತ್ರಿ ಮನೆಗೆ ಜನಾಗ್ರಹ ನಡಿಗೆಯನ್ನು ಆಯೋಜಿಸಲಾಗಿದೆ. ಮುಖ್ಯಮಂತ್ರಿಯವರನ್ನು ಕಂಡು ಜನರ ಒಕ್ಕೊರಲಿನ ಮನದಾಳದ ಆಗ್ರಹಗಳನ್ನು ಮುಂದಿಡುವುದು ನಾಳೆಯ ನಡಿಗೆಯ ಉದ್ದೇಶವಾಗಿದೆ. ನಾಳೆಯ ನಡಿಗೆಯಲ್ಲಿ ಶಸಿಕಾಂತ್ ಸೆಂದಿಲ್, ಮಾವಳ್ಳಿ ಶಂಕರ್, ಕೋಡಿಹಳ್ಳಿ ಚಂದ್ರಶೇಖರ್, ಬಡಗಲಪುರ ನಾಗೇಂದ್ರ, ಬಿ.ಟಿ. ಲಲಿತಾ ನಾಯ್ಕ್, ಸಿರಿಮನೆ ನಾಗರಾಜ್, ಯೂಸೂಫ್ ಕನ್ನಿ, ವಿ. ನಾಗರಾಜ್, ಹಬೀಬುಲ್ಲಾ, ಅಫ್ಸರ್ ಕೊಡ್ಲಿಪೇಟೆ, ಕುಮಾರ್ ಸಮತಳ ಮುಂತಾದ ಮುಖಂಡರುಗಳು ಹಾಗೂ ಅನೇಕ ಸಮಾಜಿಕ ಕಾರ್ಯಕರ್ತರು ಸಂಪೂರ್ಣ ರೀತಿಯಲ್ಲಿ ಕೋವಿಡ್ ಮುನ್ನೆಚ್ಚರಿಕೆಗಳನ್ನು ಪಾಲಿಸುತ್ತಾ ಭಾಗವಹಿಸಲಿದ್ದಾರೆ.

ಹಕ್ಕೊತ್ತಾಯಗಳು

1. ಕೋವಿಡ್ ಚಿಕಿತ್ಸೆಯನ್ನು ಉಚಿತಗೊಳಿಸಬೇಕು, ವ್ಯವಸ್ಥಿತಗೊಳಿಸಬೇಕು, ಗ್ರಾಮಗಳಿಗೂ ವಿಸ್ತರಿಸಬೇಕು.
2. ಎಲ್ಲರಿಗೂ ಸರ್ಕಾರದಿಂದಲೇ ಉಚಿತ ವ್ಯಾಕ್ಸಿನ್ ವ್ಯವಸ್ಥೆಯನ್ನು ಕೂಡಲೇ ಮಾಡಬೇಕು. ಸೆಪ್ಟೆಂಬರ್ ಒಳಗೆ ಕಡ್ಡಾಯವಾಗಿ ಪೂರ್ಣಗೊಳಿಸಬೇಕು.
3. ರಾಜ್ಯದಲ್ಲಿ ಬಡತನ ರೇಖಗಿಂತ ಕೆಳಗಿರುವ ಎಲ್ಲಾ 70 ಲಕ್ಷ ಕುಟುಂಬಗಳಿಗೆ ಸಮಗ್ರ ಪಡಿತರ ನೀಡಬೇಕು ಮತ್ತು 10 ಸಾವಿರ ನೆರವು ಧನ ನೀಡಬೇಕು.
4. ದುಡಿವವರನ್ನು ಕಳೆದುಕೊಂಡ ಅನಾಥಗೊಂಡಿರುವ ಕುಟುಂಬಗಳಿಗೆ 5 ಲಕ್ಷ ಪರಿಹಾರ ಧನ ನೀಡಬೇಕು.
5. ರೈತರ ಬಿತ್ತನೆ ಬೀಜ – ಗೊಬ್ಬರಕ್ಕೆ ವಿಶೇಷ ಸಬ್ಸಿಡಿ ಘೋಷಿಸಬೇಕು.


ಇದನ್ನೂ ಓದಿ: ಕೊರೋನಾದಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ: ಬಿಎಸ್‌ವೈ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...