Homeಮುಖಪುಟಶ್ರೀರಾಮನ ಹೆಸರಲ್ಲಿ ಮೋಸ ಮಾಡುವುದು ಅಧರ್ಮ: ರಾಹುಲ್ ಗಾಂಧಿ

ಶ್ರೀರಾಮನ ಹೆಸರಲ್ಲಿ ಮೋಸ ಮಾಡುವುದು ಅಧರ್ಮ: ರಾಹುಲ್ ಗಾಂಧಿ

- Advertisement -
- Advertisement -

ಅಯೋಧ್ಯೆಯ ರಾಮ ಜನ್ಮಭೂಮಿ ಟ್ರಸ್ಟ್ ಖರೀದಿಸಿದ ಭೂಮಿಯಲ್ಲಿ ಭ್ರಷ್ಟಾಚಾರದ ಆರೋಪದ ಬಗ್ಗೆ ಸೋಮವಾರ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಶ್ರೀರಾಮನ ಹೆಸರಲ್ಲಿ ಮೋಸ ಮಾಡುವುದು ಅಧರ್ಮವಾಗಿದೆ ಎಂದು ಹೇಳಿದ್ದಾರೆ.

ಆಮ್‍ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ಸಂಜಯ ಸಿಂಗ್‍ ಮತ್ತು ಸಮಾಜವಾದಿ ಪಕ್ಷದ ಮಾಜಿ ಶಾಸಕ ಪವನ್‍ ಪಾಂಡೆ ಭಾನುವಾರ ಪ್ರತ್ಯೇಕ ಪತ್ರಿಕಾಗೋಷ್ಠಿ ನಡೆಸಿ ರಾಮ ಜನ್ಮಭೂಮಿ ಟ್ರಸ್ಟ್‌ ಭೂ ದಂಧೆ ನಡೆಸುತ್ತಿದೆ ಎಂದು ದಾಖಲೆ ಸಮೇತ ಆರೋಪ ಮಾಡಿದ್ದರು.

ಇದನ್ನೂ ಓದಿ: ರಾಮ ಜನ್ಮಭೂಮಿ ಟ್ರಸ್ಟ್‌‌ನಿಂದ ಭೂ ದಂಧೆ: ರಾಮನ ಹೆಸರಲ್ಲಿ ಲೂಟಿ; ದಾಖಲೆ ಬಿಡುಗಡೆ

ಇಂದು ಟ್ವೀಟ್ ಮಾಡಿದ್ದ ರಾಹುಲ್ ಗಾಂಧಿ, “ಶ್ರೀರಾಮ ಎಂದರೆ ನ್ಯಾಯ, ಸತ್ಯ, ಧರ್ಮ ಆಗಿದೆ. ಅವನ ಹೆಸರಲ್ಲಿ ಮೋಸ ಮಾಡುವುದು ಅಧರ್ಮವಾಗಿದೆ” ಎಂದು ಬರೆದಿರುವ ಅವರು “ರಾಮ ಮಂದಿರ ಹಗರಣ” ಎಂಬ ಹ್ಯಾಶ್‌ಟ್ಯಾಗ್‌ ಬಳಸಿದ್ದಾರೆ.

2 ಕೋಟಿ ರೂ. ಗೆ ಒಂದು ಜಮೀನು ಖರೀದಿ ಮಾಡಿ, ಕೇವಲ 5 ನಿಮಿಷಗಳ ಅಂತರದಲ್ಲಿ ರಾಮಜನ್ಮಭೂಮಿ ಟ್ರಸ್ಟ್‌‌ ಅದೇ ಜಮೀನನ್ನು 18.5 ಕೋಟಿ ರೂ.ಗಳಿಗೆ ಖರೀದಿಸಿದೆ ಎಂದು ಸಂಜಯ್‍ಸಿಂಗ್‍ ದಾಖಲೆಗಳ ಸಮೇತ ಅಪಾದನೆ ಮಾಡಿದ್ದಾರೆ.

ಅಯೋಧ್ಯೆಯ ರಾಮ ಮಂದಿರಕ್ಕೆ ಭೂಮಿ ಖರೀದಿಸುವಾಗ ಕೋಟ್ಯಂತರ ಮೊತ್ತದ ಆರ್ಥಿಕ ಅಕ್ರಮಗಳು ನಡೆದಿವೆ ಎಂದು ಸಮಾಜವಾದಿ ಪಕ್ಷದ ಮಾಜಿ ಶಾಸಕ ಪವನ್ ಪಾಂಡೆ ಕೂಡ ಭಾನುವಾರ ಆರೋಪಿಸಿದ್ದಾರೆ. ಏಕಕಾಲದಲ್ಲಿ ನಡೆದ ಪತ್ರಿಕಾಗೋಷ್ಠಿಗಳಲ್ಲಿ, (ಲಕ್ನೋದಲ್ಲಿ ಸಂಜಯ ಸಿಂಗ್ ಮತ್ತು ಅಯೋಧ್ಯೆಯಲ್ಲಿ ಪವನ್‍ ಪಾಂಡೆ) ಎರಡು ಭೂ ಖರೀದಿ ಒಪ್ಪಂದಗಳ ಪ್ರತಿಗಳನ್ನು ಮಾಧ್ಯಮಗಳಿಗೆ ನೀಡಲಾಗಿದೆ.

ಸಧ್ಯಕ್ಕೆ ಪ್ರಕರಣದ ವಿವಾದ ಹೆಚ್ಚುತ್ತಿದ್ದು ಬಿಜೆಪಿಯ ಮಾಜಿ ಮಿತ್ರ ಪ್ರಕ್ಷವಾಗಿರುವ ಶಿವಸೇನೆ ಕೂಡಾ ಇದರ ಬಗ್ಗೆ ಸ್ಪಷ್ಟನೆ ಕೋರಿದೆ. ಶಿವಸೇನೆ ಸಂಸದ ಸಂಜಯ್ ರಾವತ್‌, “ರಾಮ ಮತ್ತು ರಾಮ ಮಂದಿರದ ಹೋರಾಟವು ನಮಗೆ ನಂಬಿಕೆಯ ವಿಷಯವಾಗಿದೆ. ಕೆಲವರಿಗೆ ಇದು ರಾಜಕೀಯ ವಿಷಯ. ಮಂದಿರದ ನಿರ್ಮಾಣಕ್ಕಾಗಿ ರಚಿಸಲಾದ ಟ್ರಸ್ಟ್‌ ತಮ್ಮ ಮೇಲಿನ ಆರೋಪಗಳು ನಿಜವೋ ಸುಳ್ಳೋ ಎಂದು ಸ್ಪಷ್ಟಪಡಿಸಬೇಕು ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ರಾಮ ಮಂದಿರ ಟ್ರಸ್ಟ್‌ ಭೂ ದಂಧೆ – ಅಧರ್ಮ, ಪಾಪ ಮತ್ತು ಭಕ್ತರ ನಂಬಿಕೆಗೆ ಅಪಮಾನ: ಪ್ರಿಯಾಂಕ ಗಾಂಧಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...