Homeಮುಖಪುಟಶ್ರೀರಾಮನ ಹೆಸರಲ್ಲಿ ಮೋಸ ಮಾಡುವುದು ಅಧರ್ಮ: ರಾಹುಲ್ ಗಾಂಧಿ

ಶ್ರೀರಾಮನ ಹೆಸರಲ್ಲಿ ಮೋಸ ಮಾಡುವುದು ಅಧರ್ಮ: ರಾಹುಲ್ ಗಾಂಧಿ

- Advertisement -
- Advertisement -

ಅಯೋಧ್ಯೆಯ ರಾಮ ಜನ್ಮಭೂಮಿ ಟ್ರಸ್ಟ್ ಖರೀದಿಸಿದ ಭೂಮಿಯಲ್ಲಿ ಭ್ರಷ್ಟಾಚಾರದ ಆರೋಪದ ಬಗ್ಗೆ ಸೋಮವಾರ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಶ್ರೀರಾಮನ ಹೆಸರಲ್ಲಿ ಮೋಸ ಮಾಡುವುದು ಅಧರ್ಮವಾಗಿದೆ ಎಂದು ಹೇಳಿದ್ದಾರೆ.

ಆಮ್‍ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ಸಂಜಯ ಸಿಂಗ್‍ ಮತ್ತು ಸಮಾಜವಾದಿ ಪಕ್ಷದ ಮಾಜಿ ಶಾಸಕ ಪವನ್‍ ಪಾಂಡೆ ಭಾನುವಾರ ಪ್ರತ್ಯೇಕ ಪತ್ರಿಕಾಗೋಷ್ಠಿ ನಡೆಸಿ ರಾಮ ಜನ್ಮಭೂಮಿ ಟ್ರಸ್ಟ್‌ ಭೂ ದಂಧೆ ನಡೆಸುತ್ತಿದೆ ಎಂದು ದಾಖಲೆ ಸಮೇತ ಆರೋಪ ಮಾಡಿದ್ದರು.

ಇದನ್ನೂ ಓದಿ: ರಾಮ ಜನ್ಮಭೂಮಿ ಟ್ರಸ್ಟ್‌‌ನಿಂದ ಭೂ ದಂಧೆ: ರಾಮನ ಹೆಸರಲ್ಲಿ ಲೂಟಿ; ದಾಖಲೆ ಬಿಡುಗಡೆ

ಇಂದು ಟ್ವೀಟ್ ಮಾಡಿದ್ದ ರಾಹುಲ್ ಗಾಂಧಿ, “ಶ್ರೀರಾಮ ಎಂದರೆ ನ್ಯಾಯ, ಸತ್ಯ, ಧರ್ಮ ಆಗಿದೆ. ಅವನ ಹೆಸರಲ್ಲಿ ಮೋಸ ಮಾಡುವುದು ಅಧರ್ಮವಾಗಿದೆ” ಎಂದು ಬರೆದಿರುವ ಅವರು “ರಾಮ ಮಂದಿರ ಹಗರಣ” ಎಂಬ ಹ್ಯಾಶ್‌ಟ್ಯಾಗ್‌ ಬಳಸಿದ್ದಾರೆ.

2 ಕೋಟಿ ರೂ. ಗೆ ಒಂದು ಜಮೀನು ಖರೀದಿ ಮಾಡಿ, ಕೇವಲ 5 ನಿಮಿಷಗಳ ಅಂತರದಲ್ಲಿ ರಾಮಜನ್ಮಭೂಮಿ ಟ್ರಸ್ಟ್‌‌ ಅದೇ ಜಮೀನನ್ನು 18.5 ಕೋಟಿ ರೂ.ಗಳಿಗೆ ಖರೀದಿಸಿದೆ ಎಂದು ಸಂಜಯ್‍ಸಿಂಗ್‍ ದಾಖಲೆಗಳ ಸಮೇತ ಅಪಾದನೆ ಮಾಡಿದ್ದಾರೆ.

ಅಯೋಧ್ಯೆಯ ರಾಮ ಮಂದಿರಕ್ಕೆ ಭೂಮಿ ಖರೀದಿಸುವಾಗ ಕೋಟ್ಯಂತರ ಮೊತ್ತದ ಆರ್ಥಿಕ ಅಕ್ರಮಗಳು ನಡೆದಿವೆ ಎಂದು ಸಮಾಜವಾದಿ ಪಕ್ಷದ ಮಾಜಿ ಶಾಸಕ ಪವನ್ ಪಾಂಡೆ ಕೂಡ ಭಾನುವಾರ ಆರೋಪಿಸಿದ್ದಾರೆ. ಏಕಕಾಲದಲ್ಲಿ ನಡೆದ ಪತ್ರಿಕಾಗೋಷ್ಠಿಗಳಲ್ಲಿ, (ಲಕ್ನೋದಲ್ಲಿ ಸಂಜಯ ಸಿಂಗ್ ಮತ್ತು ಅಯೋಧ್ಯೆಯಲ್ಲಿ ಪವನ್‍ ಪಾಂಡೆ) ಎರಡು ಭೂ ಖರೀದಿ ಒಪ್ಪಂದಗಳ ಪ್ರತಿಗಳನ್ನು ಮಾಧ್ಯಮಗಳಿಗೆ ನೀಡಲಾಗಿದೆ.

ಸಧ್ಯಕ್ಕೆ ಪ್ರಕರಣದ ವಿವಾದ ಹೆಚ್ಚುತ್ತಿದ್ದು ಬಿಜೆಪಿಯ ಮಾಜಿ ಮಿತ್ರ ಪ್ರಕ್ಷವಾಗಿರುವ ಶಿವಸೇನೆ ಕೂಡಾ ಇದರ ಬಗ್ಗೆ ಸ್ಪಷ್ಟನೆ ಕೋರಿದೆ. ಶಿವಸೇನೆ ಸಂಸದ ಸಂಜಯ್ ರಾವತ್‌, “ರಾಮ ಮತ್ತು ರಾಮ ಮಂದಿರದ ಹೋರಾಟವು ನಮಗೆ ನಂಬಿಕೆಯ ವಿಷಯವಾಗಿದೆ. ಕೆಲವರಿಗೆ ಇದು ರಾಜಕೀಯ ವಿಷಯ. ಮಂದಿರದ ನಿರ್ಮಾಣಕ್ಕಾಗಿ ರಚಿಸಲಾದ ಟ್ರಸ್ಟ್‌ ತಮ್ಮ ಮೇಲಿನ ಆರೋಪಗಳು ನಿಜವೋ ಸುಳ್ಳೋ ಎಂದು ಸ್ಪಷ್ಟಪಡಿಸಬೇಕು ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ರಾಮ ಮಂದಿರ ಟ್ರಸ್ಟ್‌ ಭೂ ದಂಧೆ – ಅಧರ್ಮ, ಪಾಪ ಮತ್ತು ಭಕ್ತರ ನಂಬಿಕೆಗೆ ಅಪಮಾನ: ಪ್ರಿಯಾಂಕ ಗಾಂಧಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....