Homeಮುಖಪುಟಪ್ರಧಾನಿಯಿಂದ ಸಚಿವರ ಮೌಲ್ಯ ಮಾಪನ : ಸಹೋದ್ಯೋಗಿಗಳ ಕಾರ್ಯವೈಖರಿಗೆ ಮೋದಿ ಅಸಮಾಧಾನ

ಪ್ರಧಾನಿಯಿಂದ ಸಚಿವರ ಮೌಲ್ಯ ಮಾಪನ : ಸಹೋದ್ಯೋಗಿಗಳ ಕಾರ್ಯವೈಖರಿಗೆ ಮೋದಿ ಅಸಮಾಧಾನ

- Advertisement -
- Advertisement -

ಕೇಂದ್ರ ಸರ್ಕಾರದ ಕೊರೋನಾ ನಿರ್ವಹಣೆಯ ಕುರಿತು ಜನರಲ್ಲಿ ಅಸಮಾಧಾನ ಮನೆ ಮಾಡಿದೆ. ಜನರು ಕೇಂದ್ರ ಸರ್ಕಾರದ ವೈಫಲ್ಯದಿಂದ ಆಕ್ರೋಶಗೊಂಡಿದ್ದಾರೆ. ಇದೇ ಸಂದರ್ಭದಲ್ಲಿ ನಡೆಯುತ್ತಿರುವ ಕೇಂದ್ರ ಸಚಿವ ಸಂಪುಟ ಸಭೆಯು ಮಹತ್ವ ಪಡೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಕೊರೋನಾ ನಿರ್ವಹಣೆಯ ಕುರಿತು ಮಂತ್ರಿಗಳ ಮೌಲ್ಯಮಾಪನ ನಡೆಸಿದ್ದಾರೆ. ಕೇಂದ್ರದ ಹಲವು ಮಂತ್ರಿಗಳ ಕಾರ್ಯವೈಖರಿ ಪ್ರಧಾನಿಗಳಿಗೆ ಸಮಾಧಾನವನ್ನು ತಂದಿಲ್ಲ ಎಂದು ಮೂಲಗಳು ತಿಳಿಸಿವೆ.

ಪ್ರಧಾನ ಮಂತ್ರಿಗಳ ಕಾರ್ಯಾಲಯವು ಕೇಂದ್ರದ ಕೆಲವು ಮಂತ್ರಿಗಳ ಕೆಲಸದ ಕುರಿತು ಕಳೆದ ವಾರ ಮೌಲ್ಯಮಾಪನವನ್ನು ನಡೆಸಿದೆ. ಈ ಸಂದರ್ಭದಲ್ಲಿ ಹಲವು ಪ್ರಶ್ನೆಗಳನ್ನು ಮಂತ್ರಿಗಳಿಗೆ ಕೇಳಲಾಗಿದ್ದು ಕೆಲವರು ಉತ್ತರಿಸಿಲ್ಲ ಎಂದು ಬಿಜೆಪಿಯ ಉನ್ನತ ಮೂಲಗಳು ತಿಳಿಸಿವೆ.

ಕೃಷಿ ಮಂತ್ರಿ ನರೇಂದ್ರ ಸಿಂಗ್‌ ತೋಮರ್‌, ವಿಮಾನಯಾನ ಸಚಿವ ಹರ್ದೀಪ್‌ ಸಿಂಗ್‌ ಪುರಿ, ವಿದೇಶಾಂಗ ಮಂತ್ರಿ ಎಸ್‌. ಜೈಶಂಕರ್‌, ಪೆಟ್ರೋಲಿಯಂ ಮಂತ್ರಿ ಧರ್ಮೇಂದ್ರ ಪ್ರಧಾನ್‌, ಮೀನುಗಾರಿಕೆ ಮತ್ತು ಪಶು ಸಂಗೋಪನೆ ಸಚಿವ ಗಿರಿರಾಜ್‌ ಸಿಂಗ್‌, ಐಟಿ ಮಿನಿಸ್ಟರ್‌ ರವಿ ಶಂಕರ್‌ ಪ್ರಸಾದ್‌, ಆರೋಗ್ಯ ಮಂತ್ರಿ ಹರ್ಷವರ್ಧನ್ ಅವರ ಕಾರ್ಯ ನಿರ್ವಹಣೆಯನ್ನು ಪ್ರಧಾನಿಗಳು ಮೌಲ್ಯ ಮಾಪನ ಮಾಡಿದ್ದರೆನ್ನಲಾಗಿದೆ. ಈ ಮಂತ್ರಿಗಳ ಜೊತೆ ಪ್ರಧಾನಿಗಳು ನೇರವಾಗಿ ಸಮಾಲೋಚನ ಸಭೆಗಳನ್ನು ನಡೆಸಿದ್ದಾರೆ.

ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಎಷ್ಟು ಸಚಿವರು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿದ್ದೀರೆಂದು ಕೇಳಿದ್ದಾರೆ. ಹಾಗೇ ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಯಾವ ಪ್ರಯತ್ನಗಳನ್ನು ಮಾಡುತ್ತಿದ್ದೀರಿ ಎಂದು ಕೂಡ ಪ್ರಧಾನಿ ತಮ್ಮ ಸಹುದ್ಯೋಗಿಗಳನ್ನು ಪ್ರಶ್ನಿಸಿದ್ದಾರೆ. ಮುಖ್ಯವಾಗಿ ವ್ಯಾಕ್ಸಿನೇಶನ್‌ ಗೆ ಸಂಬಂಧಿಸಿದಂತೆ ವ್ಯಾಕ್ಸೀನ್‌ ಪೂರೈಕೆ ಮತ್ತು ಬೇಡಿಕೆ ಅಂತರ ಕಡಿಮೆ ಮಾಡಲು ಯಾವ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಏಂದು ಪ್ರಧಾನಿಗಳು ಕೇಂದ್ರ ಮಂತ್ರಿಗಳನ್ನು ಪ್ರಶ್ನಿಸಿದ್ದಾರೆನ್ನಲಾಗುತ್ತಿದೆ.

ಕೇಂದ್ರ ಸರ್ಕಾರದ ಇಲಾಖೆಗಳು ಪರಿಣಾಮಕಾರಿಯಾಗಿ ಕೆಲಸ ಮಾಡುವಂತೆ ಮಾಡಬೇಕು. ಜನರನ್ನು ಸರ್ಕಾರ ತಲುಪಬೇಕು ಎಂದು ಪ್ರಧಾನಿಗಳು ಕಳೆದ ವಾರ ನಡೆದ ಈ ವಿಮರ್ಶ ಸಭೆಯಲ್ಲಿ ಮಂತ್ರಿಗಳಿಗೆ ಸಲಹೆ ನೀಡಿದ್ದಾರೆ ಎಂದು ಸರ್ಕಾರದ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಇನ್ನು ತಮ್ಮ ಸರ್ಕಾರದ ಮೇಲಿನ ಜನಾಕ್ರೋಶವನ್ನು ತಣಿಸಲು ಬಿಜೆಪಿ ದೇಶಾದ್ಯಂತ ಪ್ರಚಾರ ಸಭೆ ನಡೆಸಲು ತೀರ್ಮಾನಿಸಿದೆ. ಮನೆ ಮನೆಗೆ ತೆರಳಿಗೆ ಕೊರೊನಾ ನಿರ್ವಹಣೆಗ ತಾವು ಮಾಡಿದ ಕೆಲಸಗಳನ್ನು ಪ್ರಚಾರಕ್ಕೆ ತರುವಂತೆ ನಿರ್ಧರಿಸಲಾಗಿದೆ.


ಇದನ್ನೂ ಓದಿ : ಆನೆಗಳಾಯಿತು, ಈಗ ಚಿರತೆಗಳ ಸರದಿ : ಮೈಸೂರಿನಲ್ಲಿ ವನ್ಯ ಪ್ರಾಣಿಗಳಿಗೆ ವಿಷ ಪ್ರಾಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...