Homeಮುಖಪುಟಕೊರೊನಾ ನಿರ್ವಹಣೆ ಟೀಕೆಗಳಿಂದ ಬಚಾವಾಗಲು ಬಿಜೆಪಿಯ ಹೊಸ ಯೋಜನೆ

ಕೊರೊನಾ ನಿರ್ವಹಣೆ ಟೀಕೆಗಳಿಂದ ಬಚಾವಾಗಲು ಬಿಜೆಪಿಯ ಹೊಸ ಯೋಜನೆ

- Advertisement -
- Advertisement -

ಕೊರೊನಾ ನಿರ್ವಹಣೆ ಬಗ್ಗೆ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಟೀಕೆ ಎದುರಿಸಿದ್ದ ಬಿಜೆಪಿ ಮತ್ತೆ ಹೊಸ ಯೋಜನೆಯೊಂದಿಗೆ ಮುಂದೆ ಬಂದಿದೆ. ಕೊರೊನಾ ವ್ಯಾಕ್ಸಿನೇಷನ್ ಉತ್ತೇಜಿಸಲು, ಲಸಿಕೆ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಸೋಂಕಿನಿಂದ ಬಳಲುತ್ತಿರುವ ಜನರಿಗೆ ಸಹಾಯ ಮಾಡಲು ದೇಶಾದ್ಯಂತ ಸ್ವಯಂಸೇವಕ ಸೇವೆಯ ಎರಡನೇ ಹಂತವನ್ನು ಪ್ರಾರಂಭಿಸಲು ಬಿಜೆಪಿ ಸಜ್ಜಾಗಿದೆ.

ಕೊರೊನಾ ಬಿಕ್ಕಟ್ಟನ್ನು ಎದುರಿಸಲು ಸರ್ಕಾರ ಸಿದ್ಧವಾಗಿಲ್ಲ ಎಂದು ಪ್ರತಿಪಕ್ಷಗಳು ಆರೋಪಿಸದ ಬಳಿಕ, ಸೋಂಕಿನ ಎರಡನೇ ಅಲೆಯಲ್ಲಿ ತತ್ತರಿಸಿರುವ ದೇಶದಲ್ಲಿ ಜನರಿಗೆ ಸಹಾಯ ಮಾಡಲು ಕಳೆದ ತಿಂಗಳು ಬಿಜೆಪಿ ಮುಖ್ಯಸ್ಥ ಜೆ.ಪಿ.ನಡ್ಡಾ ನೇತೃತ್ವದಲ್ಲಿ ಈ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿತ್ತು.

“ಸೇವೆಯೇ ಸಂಘಟನೆ” ಎಂಬ ಘೋಷವಾಕ್ಯದ ಅಡಿಯಲ್ಲಿ ಜೆಪಿ ನಡ್ಡಾ ಅವರು ಪಕ್ಷದ ಕಾರ್ಯಕರ್ತರಿಗೆ ವ್ಯಾಕ್ಸಿನೇಷನ್ ಅಭಿಯಾನ, ಪರಿಹಾರ ಕಾರ್ಯಕ್ರಮಗಳು, ಹಳ್ಳಿಗಳಲ್ಲಿ ಆರೋಗ್ಯ ಸ್ವಯಂಸೇವಕರಿಗೆ ತರಬೇತಿ ನೀಡಲು ಸಹಾಯ ಮಾಡುವಂತೆ ಸೂಚಿಸಿದ್ದರು.

ಇದನ್ನೂ ಓದಿ: ಪ್ರಧಾನಿಯಿಂದ ಸಚಿವರ ಮೌಲ್ಯ ಮಾಪನ : ಸಹೋದ್ಯೋಗಿಗಳ ಕಾರ್ಯವೈಖರಿಗೆ ಮೋದಿ ಅಸಮಾಧಾನ

18 ರಿಂದ 44 ವರ್ಷ ವಯಸ್ಸಿನ ಡೆಲಿವರಿ ಮಾಡುವ ವ್ಯಕ್ತಿಗಳು, ಆಟೋ ರಿಕ್ಷಾ ಚಾಲಕರು, ಮನೆ ಕೆಲಸದವರು, ಪತ್ರಿಕೆ ವಿತರಕರು, ಗ್ಯಾಸ್ ಸಿಲಿಂಡರ್ ತಲುಪಿಸುವವರಿಗೆ ಲಸಿಕೆ ಪಡೆಯಲು ಪ್ರೇರೇಪಿಸುವಂತೆ ಬಿಜೆಪಿ ಕಾರ್ಯಕರ್ತರಿಗೆ ಈ ಅಭಿಯಾನದಡಿ ಹೇಳಲಾಗಿದೆ.

ಇತರ ಕೆಲವು ಗುಂಪುಗಳು 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಪೋಷಕರನ್ನು ಒಳಗೊಂಡಿರುತ್ತದೆ. ಈ ಗುಂಪು ಕೊರೊನಾ ಮೂರನೇ ಹಂತವನ್ನು ತಡೆಗಟ್ಟುವ ಸರ್ಕಾರದ ಪೂರ್ವಸಿದ್ಧತಾ ಕ್ರಮಗಳ ಒಂದು ಭಾಗವಾಗಿದೆ, ಇದರಲ್ಲಿ ಒಂದು ವಿಭಾಗದ ತಜ್ಞರು ಮಕ್ಕಳಿಗೆ ಈ ಸೋಂಕು ಹೆಚ್ಚು ಅಪಾಯಕಾರಿ ಎಂದು ನಂಬುತ್ತಾರೆ.

ಅಭಿಯಾನದ ನೇತೃತ್ವ ವಹಿಸಿರುವ ಜೆಪಿ ನಡ್ಡಾ ಅವರ ಸೂಚನೆಗಳ ಜೊತೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಆದ್ಯತೆ ನೀಡಬೇಕಾದ ಕೆಲವು ಕ್ಷೇತ್ರಗಳನ್ನು ಗುರುತಿಸಿ ಪತ್ರವನ್ನು ಬರೆದಿದ್ದಾರೆ.

“ರಕ್ತದಾನ ಶಿಬಿರಗಳನ್ನು ಆಯೋಜಿಸುವುದು ಮತ್ತು ಮನವಿಗಳ ಮೇರೆಗೆ ರಕ್ತದಾನ ಮಾಡುವುದು. ಆಸ್ಪತ್ರೆಗಳು ಮತ್ತು ಇತರ ಸ್ಥಳಗಳಲ್ಲಿ ಪಡಿತರ ಕಿಟ್ ಮತ್ತು ಆಹಾರ ವಿತರಣೆಯನ್ನು ಏರ್ಪಡಿಸುವುದು ಮಾಡಬೇಕು. ವಯಸ್ಸಾದ ಜನರು ಸಮಸ್ಯೆಗಳನ್ನು ಎದುರಿಸುತ್ತಿರುವ ಅಥವಾ ಮನೆಯ ಎಲ್ಲರೂ ಸೋಂಕಿಗೆ ಒಳಗಾದ ಪ್ರತ್ಯೇಕ ಮನೆಗಳಿಗೆ ಸ್ವಯಂಸೇವಕರನ್ನು ನಿಯೋಜಿಸುವುದು ಮುಖ್ಯ” ಎಂದಿದ್ದಾರೆ.

’ದೂರವಾಣಿ ಮೂಲಕ ಮೆಡಿಸಿನ್ ಕನ್ಸಲ್ಟೆನ್ಸಿ ಮತ್ತು ವೈದ್ಯಕೀಯ ಸಹಾಯ ಕೇಂದ್ರಗಳನ್ನು ತೆರೆಯಬೇಕು. ಕೊರೊನಾ ಸೋಂಕಿತ ಜನರಿಗೆ ಸಹಾಯ ಮಾಡುವುದು ಅವರಿಗೆ ತಮ್ಮ ವಿಮಾ ಸೌಲಭ್ಯ ಶೀಘ್ರದಲ್ಲಿಯೇ ದೊರೆಯುವಂತೆ ನೋಡಿಕೊಳ್ಳಬೇಕು. ಸ್ವಯಂಸೇವಕರು ಅಗತ್ಯವಿರುವ ಕುಟುಂಬಗಳಿಗೆ ಸಹಾಯ ಮಾಡಬೇಕಾಗುತ್ತದೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಗ್ರಾಮೀಣ ಪ್ರದೇಶದ ಕಾರ್ಯಕರ್ತರಿಗೆ ತರಬೇತಿ ನೀಡಲು ಮತ್ತು ಸ್ಥಳೀಯ ವೈದ್ಯಕೀಯ ಕಚೇರಿಗಳಲ್ಲಿ ಥರ್ಮಲ್ ಸ್ಕ್ಯಾನರ್‌ಗಳು, ಆಕ್ಸಿಮೀಟರ್‌ಗಳು, ಹೋಮ್ ಟೆಸ್ಟ್ ಕಿಟ್‌ಗಳು ಮತ್ತು ಆಮ್ಲಜನಕ ಸಿಲಿಂಡರ್‌ ಸಂಗ್ರಹಿಸಲು ರಾಜ್ಯ ಮಟ್ಟದಲ್ಲಿ ತಂಡಗಳನ್ನು ರಚಿಸಲಾಗುವುದು‍ ಎಂದು ಬಿಜೆಪಿ ತಿಳಿಸಿದೆ.

ದೇಶದಲ್ಲಿ ಕೋವಿಡ್ ನಿರ್ವಹಣೆ ಬಗ್ಗೆ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಟೀಕೆಗಳ ಮಧ್ಯೆ, ಸರ್ಕಾರ ಮತ್ತು ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕ ಎನ್ನಲಾಗಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕಳೆದ ತಿಂಗಳಿನಿಂದ ಈ ಕಾರ್ಯಕ್ರಮವನ್ನು ನಡೆಸುತ್ತಿದೆ.


ಇದನ್ನೂ ಓದಿ: ಬೆಲೆ ಏರಿಕೆಯ ವಿರುದ್ಧ ಜೂನ್ 16 ರಿಂದ 30 ವರೆಗೆ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಎಡಪಕ್ಷಗಳ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...