Homeಮುಖಪುಟಕೊರೊನಾ ನಿರ್ವಹಣೆ ಟೀಕೆಗಳಿಂದ ಬಚಾವಾಗಲು ಬಿಜೆಪಿಯ ಹೊಸ ಯೋಜನೆ

ಕೊರೊನಾ ನಿರ್ವಹಣೆ ಟೀಕೆಗಳಿಂದ ಬಚಾವಾಗಲು ಬಿಜೆಪಿಯ ಹೊಸ ಯೋಜನೆ

- Advertisement -
- Advertisement -

ಕೊರೊನಾ ನಿರ್ವಹಣೆ ಬಗ್ಗೆ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಟೀಕೆ ಎದುರಿಸಿದ್ದ ಬಿಜೆಪಿ ಮತ್ತೆ ಹೊಸ ಯೋಜನೆಯೊಂದಿಗೆ ಮುಂದೆ ಬಂದಿದೆ. ಕೊರೊನಾ ವ್ಯಾಕ್ಸಿನೇಷನ್ ಉತ್ತೇಜಿಸಲು, ಲಸಿಕೆ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಸೋಂಕಿನಿಂದ ಬಳಲುತ್ತಿರುವ ಜನರಿಗೆ ಸಹಾಯ ಮಾಡಲು ದೇಶಾದ್ಯಂತ ಸ್ವಯಂಸೇವಕ ಸೇವೆಯ ಎರಡನೇ ಹಂತವನ್ನು ಪ್ರಾರಂಭಿಸಲು ಬಿಜೆಪಿ ಸಜ್ಜಾಗಿದೆ.

ಕೊರೊನಾ ಬಿಕ್ಕಟ್ಟನ್ನು ಎದುರಿಸಲು ಸರ್ಕಾರ ಸಿದ್ಧವಾಗಿಲ್ಲ ಎಂದು ಪ್ರತಿಪಕ್ಷಗಳು ಆರೋಪಿಸದ ಬಳಿಕ, ಸೋಂಕಿನ ಎರಡನೇ ಅಲೆಯಲ್ಲಿ ತತ್ತರಿಸಿರುವ ದೇಶದಲ್ಲಿ ಜನರಿಗೆ ಸಹಾಯ ಮಾಡಲು ಕಳೆದ ತಿಂಗಳು ಬಿಜೆಪಿ ಮುಖ್ಯಸ್ಥ ಜೆ.ಪಿ.ನಡ್ಡಾ ನೇತೃತ್ವದಲ್ಲಿ ಈ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿತ್ತು.

“ಸೇವೆಯೇ ಸಂಘಟನೆ” ಎಂಬ ಘೋಷವಾಕ್ಯದ ಅಡಿಯಲ್ಲಿ ಜೆಪಿ ನಡ್ಡಾ ಅವರು ಪಕ್ಷದ ಕಾರ್ಯಕರ್ತರಿಗೆ ವ್ಯಾಕ್ಸಿನೇಷನ್ ಅಭಿಯಾನ, ಪರಿಹಾರ ಕಾರ್ಯಕ್ರಮಗಳು, ಹಳ್ಳಿಗಳಲ್ಲಿ ಆರೋಗ್ಯ ಸ್ವಯಂಸೇವಕರಿಗೆ ತರಬೇತಿ ನೀಡಲು ಸಹಾಯ ಮಾಡುವಂತೆ ಸೂಚಿಸಿದ್ದರು.

ಇದನ್ನೂ ಓದಿ: ಪ್ರಧಾನಿಯಿಂದ ಸಚಿವರ ಮೌಲ್ಯ ಮಾಪನ : ಸಹೋದ್ಯೋಗಿಗಳ ಕಾರ್ಯವೈಖರಿಗೆ ಮೋದಿ ಅಸಮಾಧಾನ

18 ರಿಂದ 44 ವರ್ಷ ವಯಸ್ಸಿನ ಡೆಲಿವರಿ ಮಾಡುವ ವ್ಯಕ್ತಿಗಳು, ಆಟೋ ರಿಕ್ಷಾ ಚಾಲಕರು, ಮನೆ ಕೆಲಸದವರು, ಪತ್ರಿಕೆ ವಿತರಕರು, ಗ್ಯಾಸ್ ಸಿಲಿಂಡರ್ ತಲುಪಿಸುವವರಿಗೆ ಲಸಿಕೆ ಪಡೆಯಲು ಪ್ರೇರೇಪಿಸುವಂತೆ ಬಿಜೆಪಿ ಕಾರ್ಯಕರ್ತರಿಗೆ ಈ ಅಭಿಯಾನದಡಿ ಹೇಳಲಾಗಿದೆ.

ಇತರ ಕೆಲವು ಗುಂಪುಗಳು 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಪೋಷಕರನ್ನು ಒಳಗೊಂಡಿರುತ್ತದೆ. ಈ ಗುಂಪು ಕೊರೊನಾ ಮೂರನೇ ಹಂತವನ್ನು ತಡೆಗಟ್ಟುವ ಸರ್ಕಾರದ ಪೂರ್ವಸಿದ್ಧತಾ ಕ್ರಮಗಳ ಒಂದು ಭಾಗವಾಗಿದೆ, ಇದರಲ್ಲಿ ಒಂದು ವಿಭಾಗದ ತಜ್ಞರು ಮಕ್ಕಳಿಗೆ ಈ ಸೋಂಕು ಹೆಚ್ಚು ಅಪಾಯಕಾರಿ ಎಂದು ನಂಬುತ್ತಾರೆ.

ಅಭಿಯಾನದ ನೇತೃತ್ವ ವಹಿಸಿರುವ ಜೆಪಿ ನಡ್ಡಾ ಅವರ ಸೂಚನೆಗಳ ಜೊತೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಆದ್ಯತೆ ನೀಡಬೇಕಾದ ಕೆಲವು ಕ್ಷೇತ್ರಗಳನ್ನು ಗುರುತಿಸಿ ಪತ್ರವನ್ನು ಬರೆದಿದ್ದಾರೆ.

“ರಕ್ತದಾನ ಶಿಬಿರಗಳನ್ನು ಆಯೋಜಿಸುವುದು ಮತ್ತು ಮನವಿಗಳ ಮೇರೆಗೆ ರಕ್ತದಾನ ಮಾಡುವುದು. ಆಸ್ಪತ್ರೆಗಳು ಮತ್ತು ಇತರ ಸ್ಥಳಗಳಲ್ಲಿ ಪಡಿತರ ಕಿಟ್ ಮತ್ತು ಆಹಾರ ವಿತರಣೆಯನ್ನು ಏರ್ಪಡಿಸುವುದು ಮಾಡಬೇಕು. ವಯಸ್ಸಾದ ಜನರು ಸಮಸ್ಯೆಗಳನ್ನು ಎದುರಿಸುತ್ತಿರುವ ಅಥವಾ ಮನೆಯ ಎಲ್ಲರೂ ಸೋಂಕಿಗೆ ಒಳಗಾದ ಪ್ರತ್ಯೇಕ ಮನೆಗಳಿಗೆ ಸ್ವಯಂಸೇವಕರನ್ನು ನಿಯೋಜಿಸುವುದು ಮುಖ್ಯ” ಎಂದಿದ್ದಾರೆ.

’ದೂರವಾಣಿ ಮೂಲಕ ಮೆಡಿಸಿನ್ ಕನ್ಸಲ್ಟೆನ್ಸಿ ಮತ್ತು ವೈದ್ಯಕೀಯ ಸಹಾಯ ಕೇಂದ್ರಗಳನ್ನು ತೆರೆಯಬೇಕು. ಕೊರೊನಾ ಸೋಂಕಿತ ಜನರಿಗೆ ಸಹಾಯ ಮಾಡುವುದು ಅವರಿಗೆ ತಮ್ಮ ವಿಮಾ ಸೌಲಭ್ಯ ಶೀಘ್ರದಲ್ಲಿಯೇ ದೊರೆಯುವಂತೆ ನೋಡಿಕೊಳ್ಳಬೇಕು. ಸ್ವಯಂಸೇವಕರು ಅಗತ್ಯವಿರುವ ಕುಟುಂಬಗಳಿಗೆ ಸಹಾಯ ಮಾಡಬೇಕಾಗುತ್ತದೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಗ್ರಾಮೀಣ ಪ್ರದೇಶದ ಕಾರ್ಯಕರ್ತರಿಗೆ ತರಬೇತಿ ನೀಡಲು ಮತ್ತು ಸ್ಥಳೀಯ ವೈದ್ಯಕೀಯ ಕಚೇರಿಗಳಲ್ಲಿ ಥರ್ಮಲ್ ಸ್ಕ್ಯಾನರ್‌ಗಳು, ಆಕ್ಸಿಮೀಟರ್‌ಗಳು, ಹೋಮ್ ಟೆಸ್ಟ್ ಕಿಟ್‌ಗಳು ಮತ್ತು ಆಮ್ಲಜನಕ ಸಿಲಿಂಡರ್‌ ಸಂಗ್ರಹಿಸಲು ರಾಜ್ಯ ಮಟ್ಟದಲ್ಲಿ ತಂಡಗಳನ್ನು ರಚಿಸಲಾಗುವುದು‍ ಎಂದು ಬಿಜೆಪಿ ತಿಳಿಸಿದೆ.

ದೇಶದಲ್ಲಿ ಕೋವಿಡ್ ನಿರ್ವಹಣೆ ಬಗ್ಗೆ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಟೀಕೆಗಳ ಮಧ್ಯೆ, ಸರ್ಕಾರ ಮತ್ತು ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕ ಎನ್ನಲಾಗಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕಳೆದ ತಿಂಗಳಿನಿಂದ ಈ ಕಾರ್ಯಕ್ರಮವನ್ನು ನಡೆಸುತ್ತಿದೆ.


ಇದನ್ನೂ ಓದಿ: ಬೆಲೆ ಏರಿಕೆಯ ವಿರುದ್ಧ ಜೂನ್ 16 ರಿಂದ 30 ವರೆಗೆ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಎಡಪಕ್ಷಗಳ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...