Homeಮುಖಪುಟತಮಿಳುನಾಡು ರಾಜಕೀಯದಲ್ಲಿ ದಿಢೀರ್‌ ಬೆಳವಣಿಗೆ- ಎಐಡಿಎಂಕೆಯಲ್ಲಿ ಬಂಡಾಯದ ಬಿರುಗಾಳಿ

ತಮಿಳುನಾಡು ರಾಜಕೀಯದಲ್ಲಿ ದಿಢೀರ್‌ ಬೆಳವಣಿಗೆ- ಎಐಡಿಎಂಕೆಯಲ್ಲಿ ಬಂಡಾಯದ ಬಿರುಗಾಳಿ

- Advertisement -
- Advertisement -

ತಮಿಳುನಾಡಿನ ರಾಜಕೀಯದಲ್ಲಿ ದಿಡೀರ್‌ ಬೆಳವಣಿಗೆಯೊಂದು ನಡೆದಿದೆ. ವಿರೋಧಪಕ್ಷ ಎಐಡಿಎಂಕೆ ನಾಯಕ ಇ. ಪಳನಿಸ್ವಾಮಿ ಮತ್ತು ಎಐಡಿಎಂಕೆ ಉಚ್ಛಾಟಿತ ನಾಯಕಿ V K ಶಶಿಕಲಾ ಬಣಗಳ ನಡುವೆ ಬಿರುಸಿನ ರಾಜಕೀಯ ತಿಕ್ಕಾಟ ಆರಂಭವಾಗಿದೆ. ಈ ಬೆಳವಣಿಗೆಯಲ್ಲಿ ಶಶಿಕಲಾ ಬಣದ 16 ಜನ  ನಾಯಕರನ್ನು ಇಂದು ಎಐಡಿಎಂಕೆ ಪಕ್ಷದಿಂದ ಉಚ್ಛಾಟಿಸಲಾಗಿದೆ. ಪಕ್ಷದಿಂದ ಉಚ್ಛಾಟನೆಗೊಂಡವರಲ್ಲಿ ಎಐಡಿಎಂಕೆ ವಕ್ತಾರ ವಿ ಪುಗಲೆಂದಿ ಸೇರಿ ಇತರ ನಾಯಕರು ಸೇರಿದ್ದಾರೆ.

ಘಟನೆಯ ಹಿನ್ನಲೆ 

ನಿನ್ನೆ ಭಾನುವಾರ ಜೂನ್‌ 13 ರಂದು ಏಐಡಿಎಂಕೆಯ ನಾಯಕಿ V K ಶಶಿಕಲಾ ಅವರು ರಾಜಕೀಯಕ್ಕೆ ಮರಳುವುದಾಗಿ ಪತ್ರ ಬರೆದಿದ್ದರು. ನಂತರದಲ್ಲಿ ಶಶಿಕಲಾ ತಮಿಳುನಾಡು ರಾಜಕೀಯ ಮರುಪ್ರವೇಶದ ಕುರಿತು ತಮ್ಮ ಬೆಂಬಲಿಗರೊಂದಿಗೆ ಮಾತನಾಡಿದ ದೂರವಾಣಿ ಕರೆ ಕೂಡ ಎಲ್ಲೆಡೆ ಹರಿದಾಡಿತ್ತು. ಈ ವೇಳೆ ಶಶಿಕಲಾ ರಾಜಕೀಯದ ಎರಡನೇ ಇನ್ನಿಂಗ್ಸ್‌ಗೆ ಅನೇಕರು ಬೆಂಬಲ ಸೂಚಿಸಿದ್ದರು. ಈಗ ಶಶಿಕಲಾರವರನ್ನು ಬೆಂಬಲಿಸಿದ ಎಐಡಿಎಂಕೆಯ ನಾಯಕರನ್ನು ಪಕ್ಷದಿಂದ ವಜಾಮಾಡಲಾಗಿದೆ.

ಏಐಡಿಎಂಕೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು ವಿ.ಕೆ. ಶಶಿಕಲಾ ರಾಜಕೀಯ ಪ್ರವೇಶವೆಂಬುದು ಒಂದು ನಾಟಕ. ಪಕ್ಷವನ್ನು ಯಾವುದೇ ಕಾರಣಕ್ಕೂ ಒಂದು ಕುಟುಂಬದ ಹಿಡಿತಕ್ಕೆ ನೀಡಲು ಸಾಧ್ಯವಿಲ್ಲ.  V K ಶಶಿಕಲಾ ತೆಕ್ಕೆಗೆ ಪಕ್ಷವನ್ನು ಒಪ್ಪಿಸಿದರೆ ಏಐಡಿಎಂಕೆ ನಾಶವಾಗುತ್ತದೆ ಎಂದು ಹೇಳಿಕೆ ನೀಡಿದೆ.

ಶಶಿಕಲಾ ವಿರೋಧಿ ಬಣದಲ್ಲಿ ಗುರುತಿಸಿಕೊಂಡಿರುವ ಎಐಡಿಎಂಕೆ ಮುಖಂಡ ಸಿ ಪೊನ್ನಿಯನ್‌ ಮಾತನಾಡಿ  V K ಶಶಿಕಲಾ ಪಕ್ಷದಿಂದ ಉಚ್ಛಾಟನೆಗೊಂಡಿರುವ ವ್ಯಕ್ತಿ. ಅವರು ಬಂದು ಏಐಡಿಎಂಕೆಯನ್ನು ಮರುಸಂಘಟನೆ ಮಾಡುತ್ತೇನೆ ಎನ್ನುತ್ತಾರೆ. ಆದರೆ ಸಾಧ್ಯವಿಲ್ಲ. ಅವರನ್ನು ಮತ್ತೆ ಪಕ್ಷಕ್ಕೆ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು  ಹೇಳಿದ್ದಾರೆ.

ವಿ.ಕೆ.   V K ಶಶಿಕಲಾ ಟಿ.ಟಿ.ವಿ. ದಿನಕರನ್‌ ಅವರ ಬಣಕ್ಕೆ ಸೇರಿದವರು. ಯಾರು ಶಶಿಕಲಾ ಜೊತೆ ಇರುತ್ತಾರೋ ಅವರಿಗೆ ಎಐಡಿಎಂಕೆಯಲ್ಲಿ ಸ್ಥಳವಿಲ್ಲ ಎಂದು ಸಿ ಪೊನ್ನಿಯನ್‌ ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನೂ ಓದಿ : ತೆಲಂಗಾಣ: 40,000 ಕೋಟಿ ಸಾಲವಿದ್ದರೂ ಅಧಿಕಾರಿಗಳಿಗೆ ಐಷಾರಾಮಿ ಕಾರು ನೀಡಿದ ಸರ್ಕಾರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...