Homeಮುಖಪುಟಬಂಗಾಳ ರಾಜ್ಯಪಾಲರ ಭೇಟಿಗೆ 24 ಬಿಜೆಪಿ ಶಾಸಕರ ಗೈರು: ಟಿಎಂಸಿಗೆ ವಲಸೆ ತಡೆಯಲು ಬಿಜೆಪಿ ಹರಸಾಹಸ

ಬಂಗಾಳ ರಾಜ್ಯಪಾಲರ ಭೇಟಿಗೆ 24 ಬಿಜೆಪಿ ಶಾಸಕರ ಗೈರು: ಟಿಎಂಸಿಗೆ ವಲಸೆ ತಡೆಯಲು ಬಿಜೆಪಿ ಹರಸಾಹಸ

- Advertisement -
- Advertisement -

ಬಂಗಾಳ ಬಿಜೆಪಿಯಲ್ಲಿ ಪಕ್ಷಾಂತರದ ಪರ್ವ ಆರಂಭವಾಗಿದೆ. ಒಬ್ಬರ ನಂತರ ಒಬ್ಬರು ಬಿಜೆಪಿ ತೊರೆದು ತಮ್ಮ ಹಳೆಯ ಟಿಎಂಸಿ ಪಕ್ಷ ಸೇರುತ್ತಿದ್ದಾರೆ. ಇದು ಅಲ್ಲಿನ ಬಿಜೆಪಿ ನಾಯಕರಿಗೆ ದೊಡ್ಡ ತಲೆನೋವಾಗಿದೆ. ಈ ಕುರಿತು ನಿನ್ನೆ ಪಕ್ಷದ ಶಾಸಕರೊಂದಗೆ ವಿರೋಧ ಪಕ್ಷದ ನಾಯಕ ಸುವೆಂದು ಅಧಿಕಾರಿ ಬಂಗಾಳ ರಾಜ್ಯಪಾಲರನ್ನು ಭೇಟಿಯಾದರು. ಆದರೆ ಮೂರನೇ ಒಂದು ಭಾಗ ಅಂದರೆ 74 ಶಾಸಕರಲ್ಲಿ 24 ಶಾಸಕರು ಸುವೆಂದು ಅಧಿಕಾರಿಯಿಂದ ದೂರವುಳಿದಿದ್ದು, ರಾಜ್ಯಪಾಲರ ಭೇಟಿಗೆ ಗೈರು ಹಾಜರಾಗಿದ್ದಾರೆ. ಇದು ಬಂಗಾಳ ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು ಮತ್ತೊಮ್ಮೆ ಜಗಜ್ಜಾಹೀರಾಗಿದೆ.

‘ತೋಡ್ನಾ-ಜೋಡ್ನಾ (ಕಳಿಸುವುದು-ಕರೆದುಕೊಳ್ಳುವುದು)’ ಟಿಎಂಸಿಯ ಕೊಳಕು ರಾಜಕೀಯದ ಒಂದು ಭಾಗವಾಗಿದೆ. ಅವರು ಕಳೆದ 10 ವರ್ಷಗಳಿಂದ ಇದನ್ನು ಮಾಡುತ್ತಿದ್ದಾರೆ ಮತ್ತು ಯಾರೂ ಇದನ್ನು ವಿರೋಧಿಸಲಿಲ್ಲ. ಆದರೆ ಇದೀಗ ಇದನ್ನು ವಿರೋಧಿಸಲಾಗುತ್ತಿದೆ ಮತ್ತು ಪಕ್ಷಾಂತರ ವಿರೋಧಿ ಕಾನೂನಿನಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಸುವೆಂದು ಅಧಿಕಾರಿ ಹೇಳಿದ್ದಾರೆ.

ನಾನು ಎಲ್ಲ ಶಾಸಕರಿಗೂ ಕರೆ ಮಾಡಿದ್ದೆ. 50 ಶಾಸಕರು ಇಂದು ನಮ್ಮೊಂದಿಗೆ ಸೇರಿದ್ದಾರೆ. ರಾಜ ಭವನದಲ್ಲಿ ರಾಜ್ಯಪಾಲ ಜಗದೀಪ್ ಧಂಖರ್ ಅವರನ್ನು ಭೇಟಿಯಾಗಿ ಪಕ್ಷಾಂತರ ವಿರೋಧಿ ಕಾನೂನು ಸೇರಿದಂತೆ ಹಲವು ವಿಷಯಗಳ ಕುರಿತು ಮಾತನಾಡಲಿದ್ದೇವೆ. ಉಳಿದ ಶಾಸಕರನ್ನು ಇಂದು ನಮ್ಮನ್ನು ಸೇರಿಕೊಳ್ಳುತ್ತಾರೆ, ಇಲ್ಲದಿದ್ದರೆ ಪಕ್ಷಾಂತರ ನಿಷೇಧ ಕಾಯ್ದೆಯಡಿ ಶಿಕ್ಷೆ ಅನುಭವಿಸುತ್ತಾರೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಸಭೆಗೆ ಹಾಜರಾಗದ 24 ಶಾಸಕರು ಮರಳಿ ಟಿಎಂಸಿಯೆಡೆಗೆ ಮಹಾವಲಸೆ ನಡೆಸಲಿದ್ದಾರೆ ಎಂಬ ಊಹಾಪೋಹಗಳು ಹರಿದಾಡತೊಡಗಿವೆ. ಕೆಲ ಶಾಸಕರು ಬಹಿರಂಗ ಹೇಳಿಕೆಗಳನ್ನು ಸಹ ನೀಡಿರುವುದು ಇದಕ್ಕೆ ಪುಷ್ಠಿ ನೀಡಿದೆ. ಹಲವು ಶಾಸಕರು ಬಿಜೆಪಿಯಲ್ಲಿ ಸುವೆಂದು ಅಧಿಕಾರಿಯ ನಾಯಕತ್ವವನ್ನು ಒಪ್ಪಿಕೊಳ್ಳಲು ಸಿದ್ದರಿಲ್ಲ ಎನ್ನಲಾಗಿದೆ.

ಒಂದು ಕಾಲದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆತ್ಮೀಯರಾಗಿದ್ದ ಸುವೇಂಧು ಅಧಿಕಾರಿ, ಈ ಚುನಾವಣೆಗೂ ಮುನ್ನ ಟಿಎಂಸಿ ತೊರೆದು ಬಿಜೆಪಿ ಸೇರಿ ರಾಜ್ಯದ ಅಗ್ರ ನಾಯಕರಾಗಿ ಬೆಳೆದಿರುವುದು ಹಲವರಿಗೆ ಇರಿಸು ಮುರಿಸು ತಂದಿದೆ. ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಮಾಡಲಾಗಿದೆ. ಚಂಡಮಾರುತದಿಂದಾದ ಹಾನಿ ಪರಿಶೀಲನಾ ಸಭೆಯಲ್ಲಿಯೂ ಮೋದಿ ಸುವೆಂದುಗೆ ಆಹ್ವಾನ ನೀಡಿದ್ದರು.

ಈ ಎಲ್ಲಾ ಬೆಳವಣಿಗೆಗಳಿಂದ ಈಗಗಾಲೇ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದ ಮುಕುಲ್ ರಾಯ್ ಪಕ್ಷ ತೊರೆದಿದ್ದಾರೆ. ಬಿಜೆಪಿಯಲ್ಲಿನ ಉಸಿರುಕಟ್ಟಿಸುವ ವಾತಾವರಣದಿಂದಾಗಿ ತನ್ನ ಪುತ್ರನೊಂದಿಗೆ ಪಕ್ಷ ತೊರೆಯುವ ನಿರ್ಧಾರ ಮಾಡಿದ್ದೇನೆ ಎಂದು ಅವರು ಹೇಳಿದ್ದರು. ಅವರು ಟಿಎಂಸಿ ಸೇರಿದ ನಂತರ ರಾಜೀಬ್ ಬ್ಯಾನರ್ಜಿ ಮತ್ತು ದೀಪೇಂಡು ಬಿಸ್ವಾಸ್ ಸೇರಿದಂತೆ ಹಲವಾರು ನಾಯಕರು ಇದನ್ನು ಅನುಸರಿಸುತ್ತಾರೆ ಎಂದು ನಿರೀಕ್ಷಿಸಲಾಗಿದೆ.

ಇದೇ ಸಂದರ್ಭದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಈ ಹಿಂದೆ ಪಕ್ಷ ತೊರೆದವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವ ಅಭಿಯಾನ ಆರಂಭಿಸಿದ್ದಾರೆ. ಕನಿಷ್ಠ 30 ಬಿಜೆಪಿ ಶಾಸಕರೊಂದಿಗೆ ಟಿಎಂಸಿ ಸಂಪರ್ಕದಲ್ಲಿದೆ ಎಂಬ ಮಾತುಗಳು ಕೇಳಿಬಂದಿದ್ದು ಇದು ಬಿಜೆಪಿಗೆ ತಲೆನೋವಾಗಿದೆ. ಹಾಗಾಗಿ ಅವರು ಪಕ್ಷಾಂತರ ನಿಷೇಧ ಕಾಯ್ದೆಯ ಮೊರೆ ಹೋಗಿದ್ದಾರೆ.


ಇದನ್ನೂ ಓದಿ: ಮುಕುಲ್ ರಾಯ್ ನಿರ್ಗಮನ: ಬಂಗಾಳ ಬಿಜೆಪಿಯಲ್ಲಿ ಆಂತರೀಕ ಕಲಹ ಆರಂಭ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...