Homeಚಳವಳಿಪ್ರತಿಭಟನೆಯನ್ನು ‘ದುಷ್ಕೃತ್ಯ’ ಎಂದು ಜೆಎನ್‌ಯು ಅಧ್ಯಕ್ಷೆಗೆ ನೋಟಿಸ್‌ ನೀಡಿದ ವಿವಿ!

ಪ್ರತಿಭಟನೆಯನ್ನು ‘ದುಷ್ಕೃತ್ಯ’ ಎಂದು ಜೆಎನ್‌ಯು ಅಧ್ಯಕ್ಷೆಗೆ ನೋಟಿಸ್‌ ನೀಡಿದ ವಿವಿ!

2018 ರಲ್ಲಿ ವಿಶ್ವವಿದ್ಯಾಲಯವು ಏಕಾಏಕಿ ಶುಲ್ಕ ಹೆಚ್ಚಿಸಿದ್ದು, ಇದರ ವಿರುದ್ದ ವಿದ್ಯಾರ್ಥಿಗಳು ಭಾರಿ ಪ್ರತಿಭಟನೆಯನ್ನು ನಡೆಸಿದ್ದರು.

- Advertisement -
- Advertisement -

2018 ರಲ್ಲಿ ನಡೆಸಿದ ಪ್ರತಿಭಟನೆಗಾಗಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ(ಜೆಎನ್‌ಯು)ದ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಆಯಿಷೆ ಘೋಷ್ ಮತ್ತು ಇನ್ನೊಬ್ಬ ವಿದ್ಯಾರ್ಥಿಗೆ ವಿಶ್ವವಿದ್ಯಾಲಯ ಶೋಕಾಸ್‌ ನೋಟಿಸ್ ನೀಡಿದ್ದು, ಪ್ರತಿಭಟನೆಯನ್ನು “ಅಶಿಸ್ತು ಮತ್ತು ದುಷ್ಕೃತ್ಯ” ಎಂದು ಕರೆದಿದೆ.

ನೋಟಿಸ್‌ಗೆ ಪ್ರತಿಕ್ರಿಯಿಸಿದ ಆಯಿಷೆ ಘೋಷ್, ಕೊರೊನಾ ಸಾಂಕ್ರಾಮಿಕದಿಂದಾಗಿ ವಿಶ್ವವಿದ್ಯಾಲಯದ ಹಲವಾರು ಆಡಳಿತ ಕಚೇರಿಗಳನ್ನು ಮುಚ್ಚಿದರೂ, ವಿಶ್ವವಿದ್ಯಾಲಯದ ಮುಖ್ಯ ಪ್ರೊಕ್ಟರ್ ಕಚೇರಿಯು, “ವಿದ್ಯಾರ್ಥಿಗಳನ್ನು ಬೆದರಿಸಲು ಮತ್ತು ಶಿಕ್ಷಿಸಲು ಮಾತ್ರ ನಿಯಮಿತವಾಗಿ ಕಾರ್ಯನಿರ್ವಹಿಸುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2018 ರಲ್ಲಿ ವಿಶ್ವವಿದ್ಯಾಲಯವು ಏಕಾಏಕಿ ಶುಲ್ಕ ಹೆಚ್ಚಿಸಿದ್ದು, ಇದರ ವಿರುದ್ದ ವಿದ್ಯಾರ್ಥಿಗಳು ಭಾರಿ ಪ್ರತಿಭಟನೆಯನ್ನು ನಡೆಸಿದ್ದರು.

ಇದನ್ನೂ ಓದಿ: ರಾಮ ಮಂದಿರ ಹಗರಣ: ಮಾನನಷ್ಟ ಮೊಕದ್ದಮೆ ಹೂಡಲು ಸೂಚಿಸಿದ ವಿಎಚ್‌‌ಪಿ!

ಜೂನ್ 11 ರಂದು ಆಯಿಷೆ ಅವರಿಗೆ ನೋಟಸ್‌ ನೀಡಲಾಗಿದ್ದು, ಕಳೆದ ವರ್ಷದ ಡಿಸೆಂಬರ್ 5 ರಂದು ನಡೆದ ಅಧ್ಯಯನ ಮಂಡಳಿ (ಬಿಒಎಸ್) ಸಭೆಯನ್ನು ಅವರು ಅಡ್ಡಿಪಡಿಸಿದ್ದಾರೆ ಎಂದು ಹೇಳಲಾಗಿದೆ.

ವಿಶ್ವವಿದ್ಯಾಲಯದ ಮುಖ್ಯ ಪ್ರೊಕ್ಟರ್ ಪ್ರೊಫೆಸರ್‌ ರಜನೀಶ್ ಕುಮಾರ್ ಮಿಶ್ರಾ ಅವರು ಈ ಬೆಳವಣಿಗೆಯನ್ನು ದೃಡಪಡಿಸಿದ್ದಾರೆ ಎಂದು ಇಂಡಿಯಾ ಟುಡೆ ಉಲ್ಲೇಖಿಸಿದೆ.

ಪ್ರತಿಭಟನೆ ನಡೆದು ಸುಮಾರು ಮೂರು ವರ್ಷಗಳ ನಂತರ ಯಾಕೆ ನೋಟಿಸ್ ನೀಡಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಶುಲ್ಕ ಹೆಚ್ಚಿಸುವ ವಿಶ್ವವಿದ್ಯಾಲಯದ ನಿರ್ದಾರವನ್ನು ವಿರೋಧಿಸಿ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯವನ್ನು ದೀರ್ಘಕಾಲದವರೆಗೆ ನಿರ್ಬಂಧಿಸಿದ್ದರು, ನಂತರ ಮಧ್ಯಂತರ ಅಡಚಣೆಗಳು ಉಂಟಾದವು. 2020 ರಲ್ಲಿ ಸಾಂಕ್ರಾಮಿಕ ಪ್ರಾರಂಭವಾಯಿತು, ಆದ್ದರಿಂದ ನಾವು ಈಗ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದೇವೆ” ಎಂದು ತಿಳಿಸಿದ್ದಾರೆ.

ಅವರ ಪ್ರತಿಭಟನೆಯನ್ನು ಅಶಿಸ್ತು ಮತ್ತು ದುಷ್ಕೃತ್ಯ ಎಂದು ವಿಶ್ವವಿದ್ಯಾಲಯ ಕರೆದಿದ್ದು, “ತಮ್ಮ ವಿರುದ್ದ ಯಾಕೆ ಶಿಸ್ತು ಕ್ರಮವನ್ನು ಪ್ರಾರಂಭಿಸಬಾರದು” ಎಂದು ವಿವರಣೆ ನೀಡುವಂತೆ ಕೋರಿದೆ. ನೋಟಿಸ್‌ಗೆ ಉತ್ತರಿಸಲು ಆಯಿಷೆ ಘೋಷ್ ಅವರಿಗೆ ಜೂನ್ 21 ರವರೆಗೆ ಕಾಲಾವಕಾಶ ನೀಡಲಾಗಿದೆ. “ಉತ್ತರಿಸಲು ವಿಫಲವಾದರೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುತ್ತದೆ” ಎಂದು ನೋಟಿಸ್ ಎಚ್ಚರಿಸಿದೆ.

ಇದನ್ನೂ ಓದಿ: ಕೊರೊನಾ ನಿರ್ವಹಣೆ ಟೀಕೆಗಳಿಂದ ಬಚಾವಾಗಲು ಬಿಜೆಪಿಯ ಹೊಸ ಯೋಜನೆ

ನೋಟಿಸ್‌ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ ಆಯಿಷೆ ಘೋಷ್‌, ಜೆಎನ್‌ಯು ಆಡಳಿತಕ್ಕೆ ಮಾಡಲು ಕೆಲಸವಿಲ್ಲದಿದ್ದರೆ ನಮ್ಮಲ್ಲಿ ಒಂದು ಪಟ್ಟಿಯಿದೆ ಎಂದು ಹೇಳಿದ್ದಾರೆ. ಅವರು, “ಕೋವಿಡ್ ಆರೈಕೆ ಕೇಂದ್ರವನ್ನು ನಿರ್ಮಿಸಿ. ಕ್ಯಾಂಪಸ್‌ನಲ್ಲಿ ನೀರಿನ ಬಿಕ್ಕಟ್ಟನ್ನು ನಿಭಾಯಿಸಿ. ಫೆಲೋಶಿಪ್ ಅನ್ನು ಸರಿಯಾಗಿ ವಿತರಿಸಿ, ಎಲ್ಲರಿಗೂ ಲಸಿಕೆ ನೀಡಿ” ಎಂದು ಬರೆದಿದ್ದಾರೆ.

“ಇಷ್ಟೆಲ್ಲಾ ಸಮಸ್ಯೆ ಇರುವಾಗ ಮುಖ್ಯ ಕಚೇರಿ ವಿದ್ಯಾರ್ಥಿಗಳನ್ನು ಬೆದರಿಸಲು ಮತ್ತು ಶಿಕ್ಷಿಸಲು ನಿಯಮಿತವಾಗಿ ಕಾರ್ಯನಿರ್ವಹಿಸುತ್ತಿದೆ. ನೋಟಿಸ್‌ಗಳನ್ನು ನೀಡುವುದು ಮತ್ತು ವಿದ್ಯಾರ್ಥಿಗಳನ್ನು ಬೆದರಿಸುವುದರ ಮೂಲಕ ನಾವು ಧ್ವನಿ ಎತ್ತುದನ್ನು ತಡೆಯಲು ಸಾಧ್ಯವಿಲ್ಲ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಂಗಾಳ ರಾಜ್ಯಪಾಲರ ಭೇಟಿಗೆ 24 ಬಿಜೆಪಿ ಶಾಸಕರ ಗೈರು: ಟಿಎಂಸಿಗೆ ವಲಸೆ ತಡೆಯಲು ಬಿಜೆಪಿ ಹರಸಾಹಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...