Homeಕರೋನಾ ತಲ್ಲಣಕೊರೊನಾ ಭೀತಿ ಸೃಷ್ಟಿಸಿದ ಆರೋಪ: ಟಿವಿ ಪ್ಯಾನಲಿಸ್ಟ್‌ ವಿರುದ್ಧ ದೂರ ದಾಖಲಿಸಿದ ತೆಲಂಗಾಣ ಸರ್ಕಾರ

ಕೊರೊನಾ ಭೀತಿ ಸೃಷ್ಟಿಸಿದ ಆರೋಪ: ಟಿವಿ ಪ್ಯಾನಲಿಸ್ಟ್‌ ವಿರುದ್ಧ ದೂರ ದಾಖಲಿಸಿದ ತೆಲಂಗಾಣ ಸರ್ಕಾರ

- Advertisement -
- Advertisement -

ಕೊರೊನಾ ಮೂರನೇ ಅಲೆಯಲ್ಲಿ ತೆಲಂಗಾಣದಲ್ಲಿ ಸಾವುಗಳು ಸಂಭವಿಸುವ ಕುರಿತು ಭೀತಿ ಸೃಷ್ಟಿಸುವ ಹೇಳಿಕೆ ನೀಡಿದ ಟೆಲಿವಿಷನ್ ಪ್ಯಾನಲಿಸ್ಟ್ ವಿರುದ್ಧ ಕ್ರಮಕೈಗೊಳ್ಳುವಂತೆ ತೆಲಂಗಾಣ ಸರ್ಕಾರ ಪೊಲೀಸರಿಗೆ ದೂರು ನೀಡಿದೆ.

ಕೆಮಿಕಲ್ ಎಂಜಿನಿಯರ್ ಆಗಿರುವ ಪರುಚುರಿ ಮಲ್ಲಿಕ್ ವಿರುದ್ಧ ತೆಲಂಗಾಣ ಸಾರ್ವಜನಿಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ನಿರ್ದೇಶಕ ಡಾ.ಜಿ.ಶ್ರೀನಿವಾಸ್ ರಾವ್ ಅವರು ದೂರು ದಾಖಲಿಸಿದ್ದಾರೆ. ಟಿವಿ ಪ್ಯಾನಲಿಸ್ಟ್ ಆಗಿರುವ ಮಲ್ಲಿಕ್ ಸುದ್ದಿ ಚಾನೆಲ್‌ ಒಂದರ ನೇರ ಪ್ರಸಾರದ ಚರ್ಚೆಯಲ್ಲಿ, ಕೊರೊನಾ ಮೂರನೇ ಅಲೆಯಲ್ಲಿ ತೆಲಂಗಾಣದ ಪ್ರತಿಯೊಂದು ಮನೆಯಲ್ಲಿಯೂ ಸಾವುಗಳು ದಾಖಲಾಗುತ್ತವೆ ಎಂದು ಹೇಳಿದ್ದರು.

ಮಲ್ಲಿಕ್ ಅವರು ಮಾಧ್ಯಮದಲ್ಲ ಹೇಳಿರುವ ಹೇಳಿಕೆಗಳು ವೈದ್ಯಕೀಯ ನೀತಿಶಾಸ್ತ್ರದ ವಿಷಯದಲ್ಲಿ ಹೆಚ್ಚು ಆಕ್ಷೇಪಾರ್ಹವಾಗಿವೆ. ಜೊತೆಗೆ ಸಾಮಾನ್ಯ ಜನರಲ್ಲಿ ಭೀತಿ ಉಂಟುಮಾಡುತ್ತದೆ” ಎಂದು ಸಾರ್ವಜನಿಕ ಆರೋಗ್ಯ ನಿರ್ದೇಶಕರು ಸುಲ್ತಾನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ದೂರಿನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ತೆಲಂಗಾಣ: 40,000 ಕೋಟಿ ಸಾಲವಿದ್ದರೂ ಅಧಿಕಾರಿಗಳಿಗೆ ಐಷಾರಾಮಿ ಕಾರು ನೀಡಿದ ಸರ್ಕಾರ

ಶ್ರೀನಿವಾಸ ರಾವ್ ಅವರು ತಮ್ಮ ದೂರಿನಲ್ಲಿ, ಮಲ್ಲಿಕ್ ವಿಷಯ ತಜ್ಞರಲ್ಲ. ತಮ್ಮ ಹೇಳಿಕೆಯಿಂದ ಸುಳ್ಳು ಭೀತಿ ಸೃಷ್ಟಿಸಿರುವುದಕ್ಕಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯ ಸೆಕ್ಷನ್ 54 ರ ಅಡಿಯಲ್ಲಿ ಮಲ್ಲಿಕ್ ವಿರುದ್ಧ ಕ್ರಮಕೈಗೊಳ್ಳಲು ಕೋರಿದ್ದಾರೆ. ದೂರಿನ ಬಗ್ಗೆ ಪರಿಶೀಲನೆ ನಡೆಸುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

“ಕೊರೊನಾ ಮೂರನೇ ಅಲೆಯಿಂದ ಕುಟುಂಬಗಳು ಅಥವಾ ಮಕ್ಕಳ ಮೇಲೆ ಆಗುವ ಪರಿಣಾಮದ ಬಗ್ಗೆ ಜಾಗತಿಕವಾಗಿ ಯಾವುದೇ ಸಂಸ್ಥೆ ಅಥವಾ ವ್ಯಕ್ತಿ ಕೂಡ ಅನುಭವ / ವೈಜ್ಞಾನಿಕ ಮುನ್ಸೂಚನೆ ನೀಡಿಲ್ಲ” ಎಂದು ದೂರಿನಲ್ಲಿ ಹೇಳಲಾಗಿದೆ. ಆಧಾರರಹಿತ ಮತ್ತು ಯಾವುದೇ ವೈಜ್ಞಾನಿಕ ಬೆಂಬಲವಿಲ್ಲದ ವದಂತಿಗಳನ್ನು ಅನಗತ್ಯವಾಗಿ ಹರಡುವುದು ಖಂಡಿತವಾಗಿಯೂ ಸಾಮಾನ್ಯ ಜನರಿಗೆ ಭೀತಿ ಉಂಟುಮಾಡುತ್ತದೆ ಎಂದು ಹೇಳಲಾಗಿದೆ.

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಶ್ರೀನಿವಾಸ್ ರಾವ್, ಈ ವದಂತಿಗಳನ್ನು ನಂಬಬೇಡಿ ಎಂದು ಜನರಿಗೆ ಮನವಿ ಮಾಡಿದ್ದಾರೆ. ಆಸ್ಪತ್ರೆಯ ಹಾಸಿಗೆಗಳು, ಔಷಧಿಗಳು, ಆಮ್ಲಜನಕ ಮತ್ತು ಮಾನವಶಕ್ತಿಯ ವಿಷಯದಲ್ಲಿ ರಾಜ್ಯವು ಉತ್ತಮವಾಗಿ ಸಜ್ಜುಗೊಂಡಿರುವುದರಿಂದ ಅಪ್ಪಳಿಸಲಿರುವ ಮೂರನೇ ಅಲೆಯನ್ನು ಎದುರಿಸಲು ಸಿದ್ಧವಾಗಿದೆ ಎಂದು ಪುನರುಚ್ಚರಿಸಿದ್ದಾರೆ.


ಇದನ್ನೂ ಓದಿ: ತೆಲಂಗಾಣ: ಭೂ ಕಬಳಿಕೆ ಆರೋಪದಿಂದ ಟಿಆರ್‌ಎಸ್‌ ತೊರೆದಿದ್ದ ಮಾಜಿ ಸಚಿವ ಬಿಜೆಪಿ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...