Homeಕರ್ನಾಟಕಶಾಲಾ ಶುಲ್ಕ ವಿಚಾರ: ಸಮಸ್ಯೆ ಬಗೆಹರಿಸುವಂತೆ ಸಿಎಂ ಯಡಿಯೂರಪ್ಪಗೆ ಸಿದ್ದರಾಮಯ್ಯ ಪತ್ರ

ಶಾಲಾ ಶುಲ್ಕ ವಿಚಾರ: ಸಮಸ್ಯೆ ಬಗೆಹರಿಸುವಂತೆ ಸಿಎಂ ಯಡಿಯೂರಪ್ಪಗೆ ಸಿದ್ದರಾಮಯ್ಯ ಪತ್ರ

’ಪೋಷಕರ ಒತ್ತಾಯಕ್ಕೆ ಮಣಿದ ಸರ್ಕಾರ ಕಳೆದ ವರ್ಷ ಬೋಧನಾ ಶುಲ್ಕದಲ್ಲಿ ಶೇ 30 ರಷ್ಟು ವಿನಾಯಿತಿ ನೀಡಿ ಶೇ 70 ರಷ್ಟು ಶುಲ್ಕ ಕಟ್ಟಬೇಕೆಂದು ಆದೇಶ ಹೊರಡಿಸಿತ್ತು. ಆದರೆ ಈ ಆದೇಶ ಜಾರಿಗೆ ಬರಲಿಲ್ಲ’

- Advertisement -
- Advertisement -

ಶಾಲಾ ಶುಲ್ಕ ವಿಚಾರದಲ್ಲಿ ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿಗಳ ನಡುವೆ ಉಂಟಾಗಿರುವ ಸಂಘರ್ಷವನ್ನು ತಕ್ಷಣ ನಿವಾರಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

’ಪೋಷಕರು ಪಾವತಿಸಬೇಕಾದ ರಿಯಾಯಿತಿ ಶುಲ್ಕವನ್ನು ಸರ್ಕಾರವೇ ನಿರ್ಧರಿಸಬೇಕು ಮತ್ತು ಸರ್ಕಾರದ ನಿರ್ಧಾರ ಕಟ್ಟುನಿಟ್ಟಿನ ಜಾರಿ ಆಗುವಂತೆ ಕ್ರಮ ವಹಿಸಬೇಕು. ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ತಡೆ ಹಿಡಿದಿರುವ ಸಂಬಳ ನೀಡಬೇಕು. ಖಾಸಗಿ ಶಾಲಾ ಆಡಳಿತ ಮಂಡಳಿಗಳು ಬ್ಯಾಂಕ್‍ಗಳಿಗೆ ಪಾವತಿಸಬೇಕಾದ ಕೊರೋನಾ ಅವಧಿಯಲ್ಲಿನ ಸಾಲದ ಮೇಲಿನ ಬಡ್ಡಿ ಮುಂತಾದ ವಿಚಾರಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಅವರಿಗಾಗುವ ಹೊರೆ ತಗ್ಗಿಸಲು ಸಾಧ್ಯವಿರುವ ಕ್ರಮಗಳನ್ನು ತೆಗೆದುಕೊಳ್ಳಬೇಕು’ ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.

’ಕಳೆದ ವರ್ಷದಿಂದ ಮಕ್ಕಳು ಶಾಲೆಗಳಿಗೆ ಹೋಗಲು ಸಾಧ್ಯವಾಗಿಲ್ಲ. ತರಗತಿಗಳು ನಡೆಯಲಿಲ್ಲವೆಂದು ಖಾಸಗಿ ಶಾಲೆ-ಕಾಲೇಜುಗಳು ಶಿಕ್ಷಕರಿಗೆ ಸಂಬಳವನ್ನು ನೀಡಿಲ್ಲ. ಸಂಬಳವಿಲ್ಲದೆ ಸಂಕಷ್ಟ ಅನುಭವಿಸುತ್ತಿರುವ ಶಿಕ್ಷಕರು ನರೇಗಾ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಅನೇಕರು ಹಣ್ಣು ತರಕಾರಿ ವ್ಯಾಪಾರಿಗಳಾಗಿದ್ದಾರೆ. ಇಂಥ ಪರಿಸ್ಥಿತಿಯಲ್ಲಿ ಖಾಸಗಿ ಶಾಲೆ ಕಾಲೇಜುಗಳು ವಿದ್ಯಾರ್ಥಿಗಳ ಶುಲ್ಕದಲ್ಲಿ ವಿನಾಯಿತಿ ನೀಡಬೇಕೆಂದು ಪೋಷಕರು ಒತ್ತಾಯ ಮಾಡುತ್ತಿದ್ದಾರೆ. ಪೋಷಕರ ಒತ್ತಾಯಕ್ಕೆ ಮಣಿದ ಸರ್ಕಾರ ಕಳೆದ ವರ್ಷ ಬೋಧನಾ ಶುಲ್ಕದಲ್ಲಿ ಶೇ 30 ರಷ್ಟು ವಿನಾಯಿತಿ ನೀಡಿ ಶೇ 70 ರಷ್ಟು ಶುಲ್ಕ ಕಟ್ಟಬೇಕೆಂದು ಆದೇಶ ಹೊರಡಿಸಿತ್ತು. ಆದರೆ ಈ ಆದೇಶ ಜಾರಿಗೆ ಬರಲಿಲ್ಲ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೋನಾದಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ: ಬಿಎಸ್‌ವೈ

’ಪೋಷಕರಿಂದ ವಾಹನ ಶುಲ್ಕ ಸೇರಿ ಇತರೆ ಶುಲ್ಕವನ್ನೂ ಕಟ್ಟಿಸಿಕೊಳ್ಳಲಾಗಿದೆ. ಇಂಥ ಸಂದರ್ಭದಲ್ಲಿ ಸರ್ಕಾರ ನಿಷ್ಕ್ರಿಯವಾಗಿ ಕೂತಿದೆ. ಸರ್ಕಾರದ ಆದೇಶಕ್ಕೆ ಕಿಮ್ಮತ್ತು ಕೊಡದ ಖಾಸಗಿ ಶಿಕ್ಷಣ ಸಂಸ್ಥೆಗಳ ಕುರಿತು ಯಾವ ಕ್ರಮ ವಹಿಸಲಾಗಿದೆ..? ಪೂರ್ತಿ ಶುಲ್ಕವನ್ನು ಕಟ್ಟಲಾಗದ ಮಕ್ಕಳಿಗೆ ಮುಂದಿನ ತರಗತಿಗಳಿಗೆ ಪ್ರವೇಶ ನೀಡದೆ ಶೋಷಿಸುತ್ತಿರುವ ಶಾಲೆಗಳ ವಿಚಾರದಲ್ಲಿ ಯಾವ ಕ್ರಮ ವಹಿಸಲಾಗಿದೆ.. ? ಎಂಬುದರ ಬಗ್ಗೆ ರಾಜ್ಯದ ಜನರಿಗೆ ಸ್ಪಷ್ಟಪಡಿಸಬೇಕಿದೆ’ ಎಂದು ಒತ್ತಾಯಿಸಿದ್ದಾರೆ.

’ಜುಲೈ 1 ರಿಂದ ಶೈಕ್ಷಣಿಕ ವರ್ಷದ ತರಗತಿಗಳನ್ನು ಆರಂಭಿಸಲು ಹಾಗೂ ಇದೇ 15 ರಿಂದ ದಾಖಲಾತಿ ಪ್ರಕ್ರಿಯೆ ಆರಂಭಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಸೂಚನೆ ಹೊರಡಿಸಿದೆ. ಆದರೆ, ಶುಲ್ಕ ವಸೂಲಿ ಬಗ್ಗೆ ಇಲಾಖೆ ಯಾವುದೇ ಸ್ಪಷ್ಟ ಸೂಚನೆ ನೀಡಿಲ್ಲ. ಹೀಗಾಗಿ ಕಳೆದ ವರ್ಷದಂತೆಯೇ ಈ ಶೈಕ್ಷಣಿಕ ವರ್ಷದಲ್ಲೂ ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿಗಳ ನಡುವೆ ಸಂಘರ್ಷದ ವಾತಾವರಣ ಸೃಷ್ಟಿಯಾಗಿದೆ’ ಎಂದಿದ್ದಾರೆ.

’ಸರ್ಕಾರ ಶೇ 30 ರಷ್ಟು ಶುಲ್ಕ ಕಡಿತ ಮಾಡಿದ್ದು ಹಿಂದಿನ ವರ್ಷಕ್ಕೆ ಮಾತ್ರ, ಈ ವರ್ಷ ಸರ್ಕಾರವೇ ಪೂರ್ಣ ಶುಲ್ಕ ವಸೂಲಿ ಮಾಡಲು ಒಪ್ಪಿಗೆ ಕೊಟ್ಟಿದೆ ಎಂದು ಆಡಳಿತ ಮಂಡಳಿಗಳು ಪೋಷಕರಿಗೆ ಹೇಳುತ್ತಿವೆ. ಹೀಗಾಗಿ ತಕ್ಷಣ ಸರ್ಕಾರ ಈ ವಿಚಾರದಲ್ಲಿ ತನ್ನ ನಿಲುವು ಏನು ಎನ್ನುವುದನ್ನು ಸ್ಪಷ್ಟಪಡಿಸಬೇಕು ಮತ್ತು ಶುಲ್ಕದ ಪ್ರಮಾಣವನ್ನು ಸರ್ಕಾರವೇ ನಿರ್ಧರಿಸಿ ತನ್ನ ನಿರ್ಧಾರ ಕಟ್ಟುನಿಟ್ಟಾಗಿ ಜಾರಿ ಆಗುವಂತೆ ಕ್ರಮ ವಹಿಸಬೇಕು. ಪೋಷಕರ ಸಂಘಗಳ ಜತೆ ಚರ್ಚಿಸಿ ವೈಜ್ಞಾನಿಕವಾದ ಮಾನದಂಡದಲ್ಲಿ ಶುಲ್ಕದ ಪ್ರಮಾಣವನ್ನು ನಿಗಧಿ ಮಾಡಬೇಕು” ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

’ಶಾಲಾ ಶುಲ್ಕ ಸಮಸ್ಯೆ ಮುಂದುವರೆದಷ್ಟು ಮಕ್ಕಳ ಕಲಿಕೆಯ ಮೇಲೆ, ಮಾನಸಿಕತೆ ಮೇಲೆ ಮತ್ತು ಶೈಕ್ಷಣಿಕ ವಾತಾವರಣದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಖಾಸಗಿ ಆಡಳಿತ ಮಂಡಳಿಗಳು ಮತ್ತು ಪೋಷಕರು ಪರಸ್ಪರ ಸಂಘರ್ಷಕ್ಕಿಳಿಯುವುದನ್ನು ನೋಡುತ್ತಾ ಕೂರುವುದು ಸರ್ಕಾರದ ಅರಾಜಕ ನಿಲುವಿನ ಸಂಕೇತ ಮತ್ತು ಕ್ರೌರ್ಯದ ಸಂಗತಿ. ಆದ್ದರಿಂದ ಈ ಕೂಡಲೇ ಸರ್ಕಾರ ಮಧ್ಯ ಪ್ರವೇಶಿಸಿ ಈ ಸಮಸ್ಯೆಯನ್ನು ಬಗೆಹರಿಸಬೇಕ”  ಎಂದು ಸಿದ್ದರಾಮಯ್ಯ ಪತ್ರದಲ್ಲಿ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ರಾಮ ಮಂದಿರ ಹಗರಣ: ಮಾನನಷ್ಟ ಮೊಕದ್ದಮೆ ಹೂಡಲು ಸೂಚಿಸಿದ ವಿಎಚ್‌‌ಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...