Homeಮುಖಪುಟಓರಿಸ್ಸಾದಲ್ಲಿ ಮೊಸಳೆ ದಾಳಿಗೆ ವ್ಯಕ್ತಿ ಬಲಿ: ಸ್ಥಳೀಯರಲ್ಲಿ ಹೆಚ್ಚಿದ ಆಕ್ರೋಶ

ಓರಿಸ್ಸಾದಲ್ಲಿ ಮೊಸಳೆ ದಾಳಿಗೆ ವ್ಯಕ್ತಿ ಬಲಿ: ಸ್ಥಳೀಯರಲ್ಲಿ ಹೆಚ್ಚಿದ ಆಕ್ರೋಶ

- Advertisement -
- Advertisement -

ಓರಿಸ್ಸಾದ ಕೇಂದ್ರಪರ ಊರಿನಲ್ಲಿ ಮೊಸಳೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. 52 ವರ್ಷದ ವರ್ಷದ ವ್ಯಕ್ತಿ ಸ್ನಾನಕ್ಕೆಂದು ಜಗನ್ನಾಥಪುರ ಗ್ರಾಮದ ಬ್ರಹ್ಮಾಣಿ ನದಿಯಲ್ಲಿ ಸ್ನಾನಕ್ಕೆ ತೆರಳಿದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಕೇಂದ್ರಪರ ಸಮೀಪದ ಹಳ್ಳಿಗಳಲ್ಲಿ ಮೊಸಳೆ ದಾಳಿಗೆ ಮನುಷ್ಯ ಬಲಿಯಾಗುತ್ತಿರುವುದು ಇದು 2 ನೇ ಘಟನೆ. ಕಳೆದ 3 ದಿಗಳಲ್ಲಿ ಇಬ್ಬರು ವ್ಯಕ್ತಿಗಳು ಮೊಸಳೆ ದಾಳಿಗೆ ಬಲಿಯಾಗಿದ್ದಾರೆ.

ಸೋಮವಾರ ಮಧ್ಯಾಹ್ನ 1:30 ಗಂಟೆ ಹೊತ್ತಿನಲ್ಲಿ ಜಗನ್ನಾಥಪುರ ಗ್ರಾಮದ ಪುರುಷೋತ್ತಮ್ ಧಾಲ್ ಎಂಬುವವರು ನದಿಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಮೊಸಳೆ ಅವರನ್ನು ನದಿಯ ಆಳಕ್ಕೆ ಎಳೆದುಕೊಂಡು ಹೋಗಿದೆ. ಆ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಗ್ರಾಮಸ್ಥರು ಜೋರಾಗಿ ಕಿರುಚಿಕೊಂಡಿದ್ದಾರೆ. ವ್ಯಕ್ತಿಯನ್ನು ರಕ್ಷಿಸಲು ಮುಂದಾಗಿದ್ದಾರೆ. ಆದರೆ ಆ ಹೊತ್ತಿಗಾಗಲೇ ಮೊಸಳೆ ವ್ಯಕ್ತಿಯನ್ನು ಕೊಂದಾಗಿತ್ತು. ಪುರುಷೋತ್ತಮ್ ಅವರ ಮೃತದೇಹಕ್ಕಾಗಿ ಗ್ರಾಮಸ್ಥರು ಶೋಧ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ. ಇದುವರೆಗೆ ದೇಹ ಪತ್ತೆಯಾಗಿಲ್ಲ.

ಇದಕ್ಕು ಮೊದಲು ಜೂನ್ 13ರ ಭಾನುವಾರ ಅರ್ಧ ತಿಂದ ಮಹಿಳೆಯ ದೇಹ ಸಮೀಪದ ವೆಕ್ಟಾ ಹಳ್ಳಿಯಲ್ಲಿ ಪತ್ತೆಯಾಗಿತ್ತು. ಉಪ್ಪುನೀರಿನ ಮೊಸಳೆಯೊಂದು ಮಹಿಳೆಯನ್ನು ನದಿಗೆ ಎಳೆದೊಯ್ದು ಕೊಂದುಹಾಕಿತ್ತು. ಈ ಎರಡು ಘಟನೆಗಳು ಬಿಥರ್‌ಕನಿಕಾ ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಯಲ್ಲಿ ನಡೆದಿವೆ. ಹೆಚ್ಚುತ್ತಿರುವ ಮೊಸಳೆ ದಾಳಿಯಿಂದ ನದಿ ದಂಡೆಯ ಗ್ರಾಮಸ್ಥರು ಭಯಭೀತರಾಗಿದ್ದಾರೆ.

ಬಿಥರ್‌ಕನಿಕಾ ರಾಷ್ಟ್ರೀಯ ಉದ್ಯಾನವನವು ಸರಿ ಸುಮಾರು 1,768 ಉಪ್ಪುನೀರಿನ ಮೊಸಳೆಗಳಿಗೆ ಆಶ್ರಯತಾಣವಾಗಿದೆ. ಅದರಲ್ಲಿ ಕೆಲವು ಮೊಸಳೆಗಳು ದಾರಿತಪ್ಪಿ ರಾಷ್ಟ್ರೀಯ ಉದ್ಯಾನದ ಆಚೆಯ ನದಿ ದಂಡೆಯ ಗ್ರಾಮಗಳತ್ತ ಹೋಗಿವೆ. ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ ನದಿ ದಂಡೆಗಳಿಗೆ ಪ್ರವೇಶಿಸದಂತೆ ಗ್ರಾಮಸ್ಥರಿಗೆ ಸೂಚನೆಯನ್ನು ನೀಡಿದ್ದೇವೆ. ಅಪಾಯಕಾರಿ ಮೊಸಳೆಗಳು ಇರುವುದನ್ನು ಲೆಕ್ಕಿಸದೇ ಗ್ರಾಮಸ್ಥರು ನದಿಗಳಿಗೆ ಹೋಗುತ್ತಿದ್ದಾರೆ. ಇದರಿಂದ ಹೆಚ್ಚು ಮಾನವ ಮತ್ತು ಮೊಸಳೆಗಳ ನಡುವೆ ಸಂಘರ್ಷ ನಡೆಯುತ್ತಿದೆ. ಅನೇಕ ವ್ಯಕ್ತಿಗಳು ಮೊಸಳೆ ದಾಳಿಗೆ ಬಲಿಯಾಗುತ್ತಿದ್ದಾರೆ ಎಂದು ಡಿವಿಜನಲ್ ಫಾರೆಸ್ಟ್‌ ಆಫಿಸರ್ ಬಿಕಾಶ್ ರಂಜನ್ ದಾಶ್ ತಿಳಿಸಿದ್ದಾರೆ.

ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ನದಿ ತೀರದಲ್ಲಿ ಸಾಕಷ್ಟು ಬ್ಯಾರಕೇಡ್‌ಗಳನ್ನು ಅಳವಡಿಸಿ ಮೊಸಳೆಗಳು ಜನವಸತಿ ಪ್ರದೇಶಕ್ಕೆ ಪ್ರವೇಶಿಸದಂತೆ ತಡೆಯುವ ಕೆಲಸವನ್ನು ಅರಣ್ಯ ಇಲಾಖೆಯ ಸಿಬ್ಬಂದಿ ನಡೆಸುತ್ತಿದ್ದಾರೆ ಎಂದು DFO ಬಿಕಾಶ್ ರಂಜನ್ ದಾಶ್ ತಿಳಿಸಿದ್ದಾರೆ.


ಇದನ್ನೂ ಓದಿ : ರಮೇಶ್ ಜಾರಕಿಹೋಳಿ ಸಂಪುಟ ಸೇರ್ಪಡೆಗೆ ಬಿಜೆಪಿಯಲ್ಲಿ ತೆರೆಮರೆಯ ಕಸರತ್ತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...