Homeಕರ್ನಾಟಕಸಂಚಾರಿ ವಿಜಯ್‌ ನಿಧನಕ್ಕೆ ಕನ್ನಡದಲ್ಲಿ ಸಂತಾಪ ಸೂಚಿಸಿದ ಅಮೆರಿಕಾ!

ಸಂಚಾರಿ ವಿಜಯ್‌ ನಿಧನಕ್ಕೆ ಕನ್ನಡದಲ್ಲಿ ಸಂತಾಪ ಸೂಚಿಸಿದ ಅಮೆರಿಕಾ!

ಅಂತ್ಯಕ್ರಿಯೆ ಚಿಕ್ಕಮಗಳೂರಿನ ಅವರ ಹುಟ್ಟೂರಲ್ಲಿ ನಡೆಯಲಿದೆ

- Advertisement -
- Advertisement -

ಬೆಂಗಳೂರಿನಲ್ಲಿ ರಸ್ತೆ ಅಪಘಾತಕ್ಕೀಡಾಗಿ ಮೆದುಳು ನಿಷ್ಕ್ರಿಯಗೊಂಡು ಮೃತಪಟ್ಟಿದ್ದ ನಟ ಸಂಚಾರಿ ವಿಜಯ್ (38) ಪಾರ್ಥಿವ ಶರೀರವನ್ನು ಅವರ ಹುಟ್ಟೂರಾದ ಚಿಕ್ಕಮಗಳೂರಿನ ಪಂಚನಹಳ್ಳಿಗೆ ತರಲಾಗಿದೆ. ಪ್ರತಿಭಾವಂತ ನಟನ ಅಂತಿಮ ದರ್ಶನಕ್ಕೆ ಗ್ರಾಮಸ್ಥರು ಸೇರಿದಂತೆ ನೆರೆಯ ಊರಿನವರು ಸೇರಿದ್ದಾರೆ. ಅವರ ಸ್ನೇಹಿತ ರಘು ಎಂಬವರ ತೋಟದಲ್ಲಿ ವೀರಶೈವ ಲಿಂಗಾಯತ ವಿಧಿವಿಧಾನದಂತೆ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ.

ಕಳೆದ ಶನಿವಾರ ರಾತ್ರಿ ಬೈಕ್ ಅಪಘಾತಕ್ಕೀಡಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆ ಸೇರಿದ್ದ ವಿಜಯ್ ಅವರು ಮಂಗಳವಾರ ಮುಂಜಾನೆ ಮೃತಪಟ್ಟರು ಎಂದು ಆಸ್ಪತ್ರೆಯು ಅಧೀಕೃತವಾಗಿ ಘೋಷಿಸಿತ್ತು. ಅಂತಿಮ ದರ್ಶನಕ್ಕಾಗಿ ಇಂದು ಬೆಳಿಗ್ಗೆ ಮೃತ ಶರೀರವನ್ನು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಇಡಲಾಗಿತ್ತು. ಅಲ್ಲಿ ಸಿನಿಮಾ ನಟರು, ರಂಗಭೂಮಿ ಕಲಾವಿದರು, ಅಭಿಮಾನಿಗಳು ಸೇರಿದಂತೆ ಸಾರ್ವಜನಿಕರು ಅಂತಿಮ ದರ್ಶನ ಪಡೆದಿದ್ದಾರೆ.

ಇದನ್ನೂ ಓದಿ: Sanchari Vijay | ಬೈಕ್‌ ಅಪಘಾತಕ್ಕೀಡಾಗಿದ್ದ ನಟ ಸಂಚಾರಿ ವಿಜಯ್‌ ನಿಧನ

ನಟ ಸಂಚಾರಿ ವಿಜಯ್ ಅವರ ನಿಧನಕ್ಕೆ ಚೆನ್ನೈನಲ್ಲಿರುವ ಅಮೆರಿಕಾದ ರಾಯಭಾರ ಕಚೇರಿ ಕನ್ನಡದಲ್ಲೇ ಸಂತಾಪ ಸೂಚಿಸಿದೆ. ಅದು ತನ್ನ ಟ್ವೀಟ್‌ನಲ್ಲಿ, “ರಾಷ್ಟ್ರ ಪ್ರಶಸ್ತಿ ವಿಜೇತ #SanchariVijay ಅವರ ಕುಟುಂಬ ಹಾಗೂ ಅಭಿಮಾನಿ ಬಳಗಕ್ಕೆ ನಮ್ಮ ಸಂತಾಪಗಳು. 2018ರಲ್ಲಿ ಚೆನ್ನೈನ ಅಮೆರಿಕ ದೂತಾವಾಸದಲ್ಲಿ #Pride ತಿಂಗಳ ಆಚರಣೆಯ ಅಂಗವಾಗಿ LGBTQi+ ಸಮುದಾಯದ ಸಂಘರ್ಷವನ್ನು ಬಿಂಬಿಸುವ ಪ್ರಶಸ್ತಿ ವಿಜೇತ ಚಿತ್ರ “ನಾನು ಅವನಲ್ಲ…ಅವಳು” ಪ್ರದರ್ಶನ-ಸಂವಾದದಲ್ಲಿ ಸಂಚಾರಿ ವಿಜಯ್‌ ಭಾಗಿಯಾಗಿದ್ದರು. #RIP” ಎಂದು ಬರೆದಿದೆ.

ಚಿಕ್ಕಮಗಳೂರು ಜಿಲ್ಲೆಯ, ಕಡೂರು ತಾಲ್ಲೂಕಿನ ರಂಗಾಪುರ ಗ್ರಾಮದ ವಿಜಯ್‌ ಅವರು ಬಾಲ್ಯದಿಂದಲೇ ರಂಗಭೂಮಿ ಹಾಗೂ ಚಿತ್ರಕಲೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ರಂಗಭೂಮಿ ಕಲಾವಿದರಾಗಿ ಸಿನೆಮಾ ಕ್ಷೇತ್ರಕ್ಕೆ ಕಾಲಿಟ್ಟ ಇವರು, ಕನ್ನಡ ಚಿತ್ರರಂಗ ಸೇರಿದಂತೆ ತಮಿಳು, ತೆಲುಗು ಮತ್ತು ಹಿಂದಿ ಭಾಷೆಯ ಸಿನಿಮಾಗಳಲ್ಲಿ ನಟಿಸಿದ್ದಾರೆ.

ಇವರು ನಟಿಸಿದ್ದ ನಾನು ಅವನಲ್ಲ…ಅವಳು ಕನ್ನಡ ಸಿನಿಮಾ ಚಿತ್ರಕ್ಕೆ 62ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ವಿಜಯ್‌ ಅತ್ಯುತ್ತಮ ನಟ ಪ್ರಶಸ್ತಿ ಪಡೆದಿದ್ದರು. ಈ ಚಿತ್ರದಲ್ಲಿ ಅವರು ತೃತೀಯ ಲಿಂಗಿಯ ಪಾತ್ರ ನಿರ್ವಹಿಸಿದ್ದಾರೆ.

ನಾತಿಚರಾಮಿ, ದಾಸವಾಳ, ಪಾದರಸ, ವರ್ತಮಾನ, ಒಗ್ಗರಣೆ, ರಂಗಪ್ಪ ಹೋಗ್ಬಿಟ್ನ, ಉಲವಚಾರು ಬಿರಿಯಾನಿ ಮುಂತಾದ ಸಿನಿಮಾಗಳಲ್ಲಿ ಸಂಚಾರಿ ವಿಜಯ್ ನಟಿಸಿದ್ದಾರೆ.

ಇದನ್ನೂ ಓದಿ: ನಟ ಸಂಚಾರಿ ವಿಜಯ್ ನಿಧನ: ಗಣ್ಯರು, ಅಭಿಮಾನಿಗಳಿಂದ ಅಂತಿಮ ದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...