Homeಚಳವಳಿವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ನೋಟಿಸ್: ಠಾಣೆಗೆ ಹೋಗುತ್ತೇನೆ, ಹೋರಾಟ ಮುಂದುವರೆಸುತ್ತೇನೆ ಎಂದ ನಟ ಚೇತನ್‌

ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ನೋಟಿಸ್: ಠಾಣೆಗೆ ಹೋಗುತ್ತೇನೆ, ಹೋರಾಟ ಮುಂದುವರೆಸುತ್ತೇನೆ ಎಂದ ನಟ ಚೇತನ್‌

ನಾಳೆ ಬೆಳಿಗ್ಗೆ ಪೊಲೀಸ್ ಠಾಣೆಗೆ ಹೋಗುತ್ತೇನೆ ಮತ್ತು ಸಂವಿಧಾನದ ಮೌಲ್ಯಗಳಾದ ಸಮಾನತೆ ಮತ್ತು ನ್ಯಾಯಕ್ಕಾಗಿನ ಹೋರಾಟ ಮುಂದುವರೆಯುತ್ತದೆ. - ನಟ ಚೇತನ್

- Advertisement -
- Advertisement -

ಚಿತ್ರನಟ, ಸಾಮಾಜಿಕ ಹೋರಾಟಗಾರ ಚೇತನ್ ತಮ್ಮ ವಿಡಿಯೋ ಮತ್ತು ಬರಹಗಳಲ್ಲಿ ’ಬ್ರಾಹ್ಮಣ್ಯ’ ಎಂಬ ಪದ ಬಳಸಿರುವುದರ ವಿರುದ್ಧ ವಿಶ್ವ ಯುವ ವೇದಿಕೆಯ ಪವನ್‌ ಕುಮಾರ್‌ ಎಂಬುವವರು ದೂರು ನೀಡಿರುವುದರ ಹಿನ್ನೆಲೆಯಲ್ಲಿ ಬಸವನಗುಡಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನಟ ಚೇತನ್‌ಗೆ ನೋಟಿಸ್ ನೀಡಿದ್ದಾರೆ.

ನಟ ಚೇತನ್‌ರವರು ಫೇಸ್‌ಬುಕ್ ಮತ್ತು ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಿರುವ ವಿಡಿಯೋಗಳಿಗೆ ಸಂಬಂಧಿಸಿದಂತೆ ಯಾವ ಐಟಿಯಿಂದ ಅಪ್‌ಲೋಡ್ ಮಾಡಲಾಗಿದೆ ಎಂಬುದರ ಕುರಿತು ಮಾಹಿತಿ ನೀಡಬೇಕೆಂದು ಪೊಲೀಸರು ಮನವಿ ಮಾಡಿದ್ದಾರೆ.

ಈ ಕುರಿತು ನಟ ಚೇತನ್ ಟ್ವಿಟರ್‌ನಲ್ಲಿ ಮಾಹಿತಿ ನೀಡಿ “ಬ್ರಾಹ್ಮಣ್ಯದ ವಿರುದ್ಧದ ನನ್ನ ಸಾಮಾಜಿಕ ಜಾಲತಾಣದ ಪೋಸ್ಟ್‌ಗಳ ಕುರಿತು ತನಿಖೆಗಾಗಿ ಬಸವನಗುಡಿ ಪೊಲೀಸ್‌ ಠಾಣೆಗೆ ಹಾಜರಾಗುವಂತೆ ಇಂದು ನೋಟಿಸ್ ಸ್ವೀಕರಿಸಿದ್ದೇನೆ. ನಾಳೆ ಬೆಳಿಗ್ಗೆ ಪೊಲೀಸ್ ಠಾಣೆಗೆ ಹೋಗುತ್ತೇನೆ ಮತ್ತು ಸಂವಿಧಾನದ ಮೌಲ್ಯಗಳಾದ ಸಮಾನತೆ ಮತ್ತು ನ್ಯಾಯಕ್ಕಾಗಿನ ಹೋರಾಟ ಮುಂದುವರೆಯುತ್ತದೆ” ಎಂದು ತಿಳಿಸಿದ್ದಾರೆ.

‘ಚಿತ್ರನಟ ಚೇತನ್ ಸಾಮಾಜಿಕ ಜಾಲತಾಣಗಳಲ್ಲಿ ಬ್ರಾಹ್ಮಣ ಸಮುದಾಯದ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿ ಅವಮಾನ ಮಾಡಿರುತ್ತಾರೆ. ಇದರಿಂದ ಸಮುದಾಯ ಮಾನಸಿಕವಾಗಿ ನೊಂದಿದ್ದು, ರಾಜ್ಯಾದ್ಯಂತ ವಿವಿಧ ಸಂಘ ಸಂಸ್ಥೆಗಳು ನನಗೆ ಮನವಿ ಮಾಡಿದ್ದಾರೆ. ಹಾಗಾಗಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಎಂಬುವವರು ಸಹ ನಗರ ಪೊಲೀಸ್​ ಆಯುಕ್ತರಿಗೆ ಈ ಹಿಂದೆ ದೂರು ಸಲ್ಲಿಸಿದ್ದಾರೆ.

ನಟ ಚೇತನ್ ಪೋಸ್ಟ್‌ನಲ್ಲಿ ಇದ್ದದ್ದು ಏನು…?

ಜೂನ್ 6 ರಂದು ನಟ ಚೇತನ್ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಮತ್ತು ಪೆರಿಯಾರ್‌ ಅವರ ಹೇಳಿಕೆಗಳನ್ನು ಕೋಟ್ ಮಾಡಿ, ಪೋಸ್ಟ್ ಮಾಡಿದ್ದರು.
‘ಬ್ರಾಹ್ಮಣ್ಯವು ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವದ ಮನೋಭಾವವನ್ನು ನಿರಾಕರಿಸುತ್ತದೆ… ನಾವು ಬ್ರಾಹ್ಮಣ್ಯವನ್ನು ಬೇರುಸಹಿತ ಕಿತ್ತುಹಾಕಬೇಕು’ — ಅಂಬೇಡ್ಕರ್
‘ಎಲ್ಲರೂ ಸರಿಸಮಾನರಾಗಿ ಜನಿಸಿದರೆ, ಬ್ರಾಹ್ಮಣರು ಮಾತ್ರ ಅತ್ಯುನ್ನತರು ಮತ್ತು ಉಳಿದವರೆಲ್ಲರೂ ಕೆಳಹಂತದವರು ಮತ್ತು ಅಸ್ಪ್ರಶ್ಯರು ಎಂದು ಹೇಳುವುದು ಸಂಪೂರ್ಣ ಅಸಂಬದ್ಧ. ಇದೊಂದು ದೊಡ್ಡ ವಂಚನೆ ’- ಪೆರಿಯಾರ್

ಇಬ್ಬರ ಹೇಳಿಕೆಗಳ ಜೊತೆಗೆ #Brahminism #Ambedkar #Periyar ಎಂಬ ಹ್ಯಾಶ್‌ಟ್ಯಾಗ್ ಬಳಸಿದ್ದರು.

’ಚೇತನ್ ಅವರು ತಮ್ಮ ಹೋರಾಟ ಬ್ರಾಹ್ಮಣ್ಯದ ವಿರುದ್ಧ ಹೊರತು ಬ್ರಾಹ್ಮಣರ ವಿರುದ್ಧ ಅಲ್ಲ ಅಂತ ಟ್ವೀಟ್ ಮೂಲಕ ಸ್ಪಷ್ಟ ಪಡಿಸಿದ್ದಾರೆ. ಅವರೆಲ್ಲೂ ಜನಾಂಗದ ನಿಂದನೆ ಮಾಡಿಲ್ಲ. ಅವರ ಮೇಲಿನ ಈ ದಾಳಿ ನಿಲ್ಲಬೇಕು ಎಂದು ಹಲವರು ಚೇತನ್‌ ಬೆಂಬಲಕ್ಕೆ ನಿಂತಿದ್ದಾರೆ.


ಇದನ್ನೂ ಓದಿ; ನಟ, ಹೋರಾಟಗಾರ ಚೇತನ್ ವಿರುದ್ಧ ದೂರು: IStandWithChetanAhimsa ಎಂದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...