Homeಮುಖಪುಟಕೇಂದ್ರ ಸರ್ಕಾರ ಸದ್ದಿಲ್ಲದೇ CAA ಜಾರಿಗೊಳಿಸುತ್ತಿದೆ: ಸುಪ್ರೀಂನಲ್ಲಿ IUML ಪ್ರಶ್ನೆ

ಕೇಂದ್ರ ಸರ್ಕಾರ ಸದ್ದಿಲ್ಲದೇ CAA ಜಾರಿಗೊಳಿಸುತ್ತಿದೆ: ಸುಪ್ರೀಂನಲ್ಲಿ IUML ಪ್ರಶ್ನೆ

- Advertisement -
- Advertisement -

ಕಳೆದ ವರ್ಷ ಕೇಂದ್ರ ಸರ್ಕಾರ ಜಾರಿಗೊಳಿಸಿದ CAA ಕಾನೂನಿನ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ನಡೆದಿದ್ದವು. ಲಕ್ಷಾಂತರ ಜನರು CAA ವಿರುದ್ಧದ ಹೋರಾಟದಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಸುಪ್ರೀಂ ಕೋರ್ಟ್ ಸೇರಿದಂತೆ ದೇಶದ ನ್ಯಾಯಾಲಯಗಳಲ್ಲಿ ಹೊಸ ಸಿಟಿಜೆನ್‌ಶಿಪ್ ಕಾಯ್ದೆ ವಿರುದ್ಧ ಅರ್ಜಿಗಳು ದಾಖಲಾಗಿದ್ದವು. ಇವೆಲ್ಲದರ ನಡುವೆಯೂ ಸುಪ್ರೀಂ ಕೋರ್ಟ್‌ ಸಿಟಿಜೆನ್‌ಶಿಪ್‌ ಕಾಯ್ದೆಗೆ ತಡೆ ನೀಡಲು ನಿರಾಕರಿಸಿತ್ತು. ನಂತರ ಕೋವಿಡ್‌ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಸದ್ದಿಲ್ಲದೇ ಸಿಎಎ ಕಾನೂನನ್ನು ಜಾರಿಗೊಳಿಸಲು ಮುಂದಾಗಿದೆ. ಅದರ ಮೊದಲ ಭಾಗವಾಗಿ ಗುಜರಾಥ್, ರಾಜಸ್ಥಾನ್, ಹರಿಯಾಣ, ಪಂಜಾಬ್, ಛತ್ತಿಸ್‌ಗಡ್‌ನಲ್ಲಿರುವ ಅಪಘಾನ್ ಬಾಂಗ್ಲಾದೇಶ್, ಪಾಕಿಸ್ತಾನ ಮೂಲದ ಮುಸ್ಲೀಮೇತರರಿಗೆ ದೇಶದ ಪೌರತ್ವಕ್ಕೆ ಅರ್ಜಿ ಸಲ್ಲಿಸುವಂತೆ ಆಹ್ವಾನಿಸಿದೆ. ಆ ಸಂಬಂಧ ಸದ್ಯ ಕೇಂದ್ರ ಸರ್ಕಾರವು ಅಧಿಸೂಚನೆಯನ್ನು ಹೊರಡಿಸಿದೆ.

ಕೇಂದ್ರದ ಅಧಿಸೂಚನೆಯನ್ನು ಪ್ರಶ್ನಿಸಿ ಅನೇಕರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಇಂದು ಸಿಟಿಜನ್‌ ಶಿಫ್‌ಗೆ ಸಂಬಂಧಿಸಿ ಇಂಡಿಯನ್ ಯುನಿಯನ್ ಮುಸ್ಲೀಂ ಲೀಗ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆಗೆ ಕೈಗೆತ್ತಿಕೊಂಡಿತು. ಅರ್ಜಿದಾರರ ಪರವಾಗಿ ಕಪಿಲ್ ಸಿಬಾಲ್ ನ್ಯಾಯಾಲಯದಲ್ಲಿ ಹಾಜರಿದ್ದರು. ಕೇಂದ್ರ ಸರ್ಕಾರ ಈ ಅಧಿಸೂಚನೆ CAA ಗೆ  ಸಂಬಂಧಿಸಿದ್ದಲ್ಲ. ಕೇಂದ್ರ ಸರ್ಕಾರದ ಅಂತರ್ಗತ ಅಧಿಕಾರವನ್ನು ಬಳಸಿ ಈ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಸಿಎಎ ಮತ್ತು ಅಧಿಸೂಚನೆಗೆ ಸಂಬಂಧ ಕಲ್ಪಿಸಿ ಸರ್ಕಾರದ ವಿರುದ್ಧ ನ್ಯಾಯಾಲಯದಲ್ಲಿ ಸಲ್ಲಿಸಿರುವ ಅರ್ಜಿ ದೋಷಪೂರಿತವಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ನಿನ್ನೆ ಸೋಮವಾರ ಅಫಿಡೆವಿಟ್ ಸಲ್ಲಿಸಿತ್ತು. ಇದಕ್ಕೆ ಪ್ರತಿಯಾಗಿ ಅರ್ಜಿದಾರರ ಪರ ವಕೀಲ ಕಪಿಲ್ ಸಿಬಾಲ್ ತಮಗೆ ಉತ್ತರಿಸಲು 2 ವಾರದ ಕಾಲಾವಕಾಶವನ್ನು ಕೇಳಿದ್ದಾರೆ. ಅರ್ಜಿದಾರರ ಮನವಿಗೆ ಸ್ಪಂದಿಸಿದ ಕೋರ್ಟ್ ಪ್ರಕರಣದ ವಿಚಾರಣೆಯನ್ನು 2 ವಾರಗಳ ನಂತರ ಆರಂಭಿಸುವುದಾಗಿ ಹೇಳಿದೆ.

ನ್ಯಾಯಮೂರ್ತಿಗಳಾದ ಜಸ್ಟಿಸ್ ಹೇಮಂತ್ ಗುಪ್ತಾ ಮತ್ತು ಜಸ್ಟಿಸ್ ವಿ. ರಾಮಸುಬ್ರಮಣ್ಯನ್ ಅವರ ಪೀಠವು 2 ವಾರಗಳ ನಂತರ ಕೇಂದ್ರ ಸರ್ಕಾರದ ಪೌರತ್ವ ನೊಂದಣಿ ಅಧಿಸೂಚನೆಯ ವಿರುದ್ಧದ ಅರ್ಜಿಗಳ ವಿಚಾರಣೆಯನ್ನು ಆರಂಭಿಸಲಿದೆ.

ಇದನ್ನೂ ಓದಿ : ಸಂಚಾರಿ ವಿಜಯ್‌ ನಿಧನಕ್ಕೆ ಕನ್ನಡದಲ್ಲಿ ಸಂತಾಪ ಸೂಚಿಸಿದ ಅಮೆರಿಕಾ!

ಇದಕ್ಕು ಮೊದಲು ಕೇಂದ್ರ ಸರ್ಕಾರವು 2004, 2005, 2006, 2016, 2018 ರಲ್ಲಿ ಇಂತಹುದೇ ಅಧಿಸೂಚನೆಯನ್ನು ದೇಶದಲ್ಲಿ ಸರ್ಕಾರವು ಹೊರಡಿಸಿದೆ. 1955 ರ ಸಿಟಿಜನ್‌ಶಿಪ್ ಕಾಯ್ದೆಯ ನಿಯಮಗಳಡಿಯಲ್ಲಿಯೇ ಈ ಅಧಿಸೂಚನೆಗಳನ್ನು ಹೊರಡಿಸಲಾಗಿದೆ. ಪೌರತ್ವದ ಅರ್ಹತೆಯ ಮಾನದಂಡಗಳನ್ನು ಸಡಿಸಲಾಗಿಲ್ಲ. ಹೊಸ ನಿಯಮಗಳನ್ನು ಇನ್ನೂ ಜಾರಿಗೆ ತಂದಿಲ್ಲ ಎಂದು ಹೇಳಿದೆ.

ಕೇಂದ್ರ ಸರ್ಕಾರವು ಹಿಂದೆ ಸುಪ್ರೀಂ ಕೋರ್ಟ್‌ನಲ್ಲಿ ಸಿಎಎ ವಿರುದ್ಧದ ಅರ್ಜಿಗಳ ವಿಚಾರಣೆ ಸಂದರ್ಭದಲ್ಲಿ ಸಿಎಎ ನಿಯಮಾವಳಿಗಳು ಇದುವರೆಗೆ ರೂಪಿಸಲಾಗಿಲ್ಲ. ಹಾಗಾಗಿ ಸಿಎಎ ಜಾರಿ ಸದ್ಯಕ್ಕಿಲ್ಲವೆಂದು ಹೇಳಿದೆ. ಆದರೆ ಸದ್ದಿಲ್ಲದೇ ಸರ್ಕಾರ ಪೌರತ್ವ ನೀಡಲು ಅರ್ಜಿ ಕರೆದಿದೆ ಎಂದು ಸರ್ಕಾರದ ಅಧಿಸೂಚನೆಯನ್ನು ಪ್ರಶ್ನಿಸಿ ಇಂಡಿಯನ್ ಯೂನಿಯನ್ ಆಫ್ ಮುಸ್ಲೀಂ ಲೀಗ್ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಸದ್ಯ ನ್ಯಾಯಾಲಯ ಪ್ರಕರಣದ ವಿಚಾರಣೆಯನ್ನು 2 ವಾರಗಳ ನಂತರ ಆರಂಭಿಸಲಿದೆ.

ಕೇಂದ್ರ ಸರ್ಕಾರ ಬಹು ನಿರೀಕ್ಷಿತ ಸಿಎಎ, ಎನ್‌ಆರ್‌ಸಿ ಯೋಜನೆಗಳ ಜಾರಿ ಇದುವರೆಗೆ ಆರಂಭವಾಗಿಲ್ಲ ಎಂದು ಹೇಳಿಕೊಂಡು ಬರುತ್ತಿದೆ. ಆದರೆ ಸರ್ಕಾರ ಹಿಂಬಾಗಿಲ ಮೂಲಕ ಸದ್ದಿಲ್ಲದೇ  CAA ಕಾನೂನನ್ನು ಜಾರಿಗೊಳಿಸಲು ಮುಂದಾಗಿದೆ ಎಂದು ದೇಶದ ಅನೇಕ ಸಂಘಟನೆಗಳು ಮತ್ತು ಹೋರಾಟಗಾರರು ದೂರುತ್ತಿದ್ದಾರೆ. ಕೇಂದ್ರ ಸರ್ಕಾರ ಸಿಎಎ ಜಾರಿಗೊಳಿಸುತ್ತಿದೆಯೋ ಅಥವಾ ಇಲ್ಲವೋ ಎಂಬುದು ಪ್ರಕರಣದ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ಆರಂಭವಾದಾಗಲೇ ತಿಳಿದು ಬರಲಿದೆ.


ಇದನ್ನೂ ಓದಿ :ಓರಿಸ್ಸಾದಲ್ಲಿ ಮೊಸಳೆ ದಾಳಿಗೆ ವ್ಯಕ್ತಿ ಬಲಿ: ಸ್ಥಳೀಯರಲ್ಲಿ ಹೆಚ್ಚಿದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...