Homeಮುಖಪುಟಕೇಂದ್ರ ಸರ್ಕಾರ ಸದ್ದಿಲ್ಲದೇ CAA ಜಾರಿಗೊಳಿಸುತ್ತಿದೆ: ಸುಪ್ರೀಂನಲ್ಲಿ IUML ಪ್ರಶ್ನೆ

ಕೇಂದ್ರ ಸರ್ಕಾರ ಸದ್ದಿಲ್ಲದೇ CAA ಜಾರಿಗೊಳಿಸುತ್ತಿದೆ: ಸುಪ್ರೀಂನಲ್ಲಿ IUML ಪ್ರಶ್ನೆ

- Advertisement -
- Advertisement -

ಕಳೆದ ವರ್ಷ ಕೇಂದ್ರ ಸರ್ಕಾರ ಜಾರಿಗೊಳಿಸಿದ CAA ಕಾನೂನಿನ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ನಡೆದಿದ್ದವು. ಲಕ್ಷಾಂತರ ಜನರು CAA ವಿರುದ್ಧದ ಹೋರಾಟದಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಸುಪ್ರೀಂ ಕೋರ್ಟ್ ಸೇರಿದಂತೆ ದೇಶದ ನ್ಯಾಯಾಲಯಗಳಲ್ಲಿ ಹೊಸ ಸಿಟಿಜೆನ್‌ಶಿಪ್ ಕಾಯ್ದೆ ವಿರುದ್ಧ ಅರ್ಜಿಗಳು ದಾಖಲಾಗಿದ್ದವು. ಇವೆಲ್ಲದರ ನಡುವೆಯೂ ಸುಪ್ರೀಂ ಕೋರ್ಟ್‌ ಸಿಟಿಜೆನ್‌ಶಿಪ್‌ ಕಾಯ್ದೆಗೆ ತಡೆ ನೀಡಲು ನಿರಾಕರಿಸಿತ್ತು. ನಂತರ ಕೋವಿಡ್‌ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಸದ್ದಿಲ್ಲದೇ ಸಿಎಎ ಕಾನೂನನ್ನು ಜಾರಿಗೊಳಿಸಲು ಮುಂದಾಗಿದೆ. ಅದರ ಮೊದಲ ಭಾಗವಾಗಿ ಗುಜರಾಥ್, ರಾಜಸ್ಥಾನ್, ಹರಿಯಾಣ, ಪಂಜಾಬ್, ಛತ್ತಿಸ್‌ಗಡ್‌ನಲ್ಲಿರುವ ಅಪಘಾನ್ ಬಾಂಗ್ಲಾದೇಶ್, ಪಾಕಿಸ್ತಾನ ಮೂಲದ ಮುಸ್ಲೀಮೇತರರಿಗೆ ದೇಶದ ಪೌರತ್ವಕ್ಕೆ ಅರ್ಜಿ ಸಲ್ಲಿಸುವಂತೆ ಆಹ್ವಾನಿಸಿದೆ. ಆ ಸಂಬಂಧ ಸದ್ಯ ಕೇಂದ್ರ ಸರ್ಕಾರವು ಅಧಿಸೂಚನೆಯನ್ನು ಹೊರಡಿಸಿದೆ.

ಕೇಂದ್ರದ ಅಧಿಸೂಚನೆಯನ್ನು ಪ್ರಶ್ನಿಸಿ ಅನೇಕರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಇಂದು ಸಿಟಿಜನ್‌ ಶಿಫ್‌ಗೆ ಸಂಬಂಧಿಸಿ ಇಂಡಿಯನ್ ಯುನಿಯನ್ ಮುಸ್ಲೀಂ ಲೀಗ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆಗೆ ಕೈಗೆತ್ತಿಕೊಂಡಿತು. ಅರ್ಜಿದಾರರ ಪರವಾಗಿ ಕಪಿಲ್ ಸಿಬಾಲ್ ನ್ಯಾಯಾಲಯದಲ್ಲಿ ಹಾಜರಿದ್ದರು. ಕೇಂದ್ರ ಸರ್ಕಾರ ಈ ಅಧಿಸೂಚನೆ CAA ಗೆ  ಸಂಬಂಧಿಸಿದ್ದಲ್ಲ. ಕೇಂದ್ರ ಸರ್ಕಾರದ ಅಂತರ್ಗತ ಅಧಿಕಾರವನ್ನು ಬಳಸಿ ಈ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಸಿಎಎ ಮತ್ತು ಅಧಿಸೂಚನೆಗೆ ಸಂಬಂಧ ಕಲ್ಪಿಸಿ ಸರ್ಕಾರದ ವಿರುದ್ಧ ನ್ಯಾಯಾಲಯದಲ್ಲಿ ಸಲ್ಲಿಸಿರುವ ಅರ್ಜಿ ದೋಷಪೂರಿತವಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ನಿನ್ನೆ ಸೋಮವಾರ ಅಫಿಡೆವಿಟ್ ಸಲ್ಲಿಸಿತ್ತು. ಇದಕ್ಕೆ ಪ್ರತಿಯಾಗಿ ಅರ್ಜಿದಾರರ ಪರ ವಕೀಲ ಕಪಿಲ್ ಸಿಬಾಲ್ ತಮಗೆ ಉತ್ತರಿಸಲು 2 ವಾರದ ಕಾಲಾವಕಾಶವನ್ನು ಕೇಳಿದ್ದಾರೆ. ಅರ್ಜಿದಾರರ ಮನವಿಗೆ ಸ್ಪಂದಿಸಿದ ಕೋರ್ಟ್ ಪ್ರಕರಣದ ವಿಚಾರಣೆಯನ್ನು 2 ವಾರಗಳ ನಂತರ ಆರಂಭಿಸುವುದಾಗಿ ಹೇಳಿದೆ.

ನ್ಯಾಯಮೂರ್ತಿಗಳಾದ ಜಸ್ಟಿಸ್ ಹೇಮಂತ್ ಗುಪ್ತಾ ಮತ್ತು ಜಸ್ಟಿಸ್ ವಿ. ರಾಮಸುಬ್ರಮಣ್ಯನ್ ಅವರ ಪೀಠವು 2 ವಾರಗಳ ನಂತರ ಕೇಂದ್ರ ಸರ್ಕಾರದ ಪೌರತ್ವ ನೊಂದಣಿ ಅಧಿಸೂಚನೆಯ ವಿರುದ್ಧದ ಅರ್ಜಿಗಳ ವಿಚಾರಣೆಯನ್ನು ಆರಂಭಿಸಲಿದೆ.

ಇದನ್ನೂ ಓದಿ : ಸಂಚಾರಿ ವಿಜಯ್‌ ನಿಧನಕ್ಕೆ ಕನ್ನಡದಲ್ಲಿ ಸಂತಾಪ ಸೂಚಿಸಿದ ಅಮೆರಿಕಾ!

ಇದಕ್ಕು ಮೊದಲು ಕೇಂದ್ರ ಸರ್ಕಾರವು 2004, 2005, 2006, 2016, 2018 ರಲ್ಲಿ ಇಂತಹುದೇ ಅಧಿಸೂಚನೆಯನ್ನು ದೇಶದಲ್ಲಿ ಸರ್ಕಾರವು ಹೊರಡಿಸಿದೆ. 1955 ರ ಸಿಟಿಜನ್‌ಶಿಪ್ ಕಾಯ್ದೆಯ ನಿಯಮಗಳಡಿಯಲ್ಲಿಯೇ ಈ ಅಧಿಸೂಚನೆಗಳನ್ನು ಹೊರಡಿಸಲಾಗಿದೆ. ಪೌರತ್ವದ ಅರ್ಹತೆಯ ಮಾನದಂಡಗಳನ್ನು ಸಡಿಸಲಾಗಿಲ್ಲ. ಹೊಸ ನಿಯಮಗಳನ್ನು ಇನ್ನೂ ಜಾರಿಗೆ ತಂದಿಲ್ಲ ಎಂದು ಹೇಳಿದೆ.

ಕೇಂದ್ರ ಸರ್ಕಾರವು ಹಿಂದೆ ಸುಪ್ರೀಂ ಕೋರ್ಟ್‌ನಲ್ಲಿ ಸಿಎಎ ವಿರುದ್ಧದ ಅರ್ಜಿಗಳ ವಿಚಾರಣೆ ಸಂದರ್ಭದಲ್ಲಿ ಸಿಎಎ ನಿಯಮಾವಳಿಗಳು ಇದುವರೆಗೆ ರೂಪಿಸಲಾಗಿಲ್ಲ. ಹಾಗಾಗಿ ಸಿಎಎ ಜಾರಿ ಸದ್ಯಕ್ಕಿಲ್ಲವೆಂದು ಹೇಳಿದೆ. ಆದರೆ ಸದ್ದಿಲ್ಲದೇ ಸರ್ಕಾರ ಪೌರತ್ವ ನೀಡಲು ಅರ್ಜಿ ಕರೆದಿದೆ ಎಂದು ಸರ್ಕಾರದ ಅಧಿಸೂಚನೆಯನ್ನು ಪ್ರಶ್ನಿಸಿ ಇಂಡಿಯನ್ ಯೂನಿಯನ್ ಆಫ್ ಮುಸ್ಲೀಂ ಲೀಗ್ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಸದ್ಯ ನ್ಯಾಯಾಲಯ ಪ್ರಕರಣದ ವಿಚಾರಣೆಯನ್ನು 2 ವಾರಗಳ ನಂತರ ಆರಂಭಿಸಲಿದೆ.

ಕೇಂದ್ರ ಸರ್ಕಾರ ಬಹು ನಿರೀಕ್ಷಿತ ಸಿಎಎ, ಎನ್‌ಆರ್‌ಸಿ ಯೋಜನೆಗಳ ಜಾರಿ ಇದುವರೆಗೆ ಆರಂಭವಾಗಿಲ್ಲ ಎಂದು ಹೇಳಿಕೊಂಡು ಬರುತ್ತಿದೆ. ಆದರೆ ಸರ್ಕಾರ ಹಿಂಬಾಗಿಲ ಮೂಲಕ ಸದ್ದಿಲ್ಲದೇ  CAA ಕಾನೂನನ್ನು ಜಾರಿಗೊಳಿಸಲು ಮುಂದಾಗಿದೆ ಎಂದು ದೇಶದ ಅನೇಕ ಸಂಘಟನೆಗಳು ಮತ್ತು ಹೋರಾಟಗಾರರು ದೂರುತ್ತಿದ್ದಾರೆ. ಕೇಂದ್ರ ಸರ್ಕಾರ ಸಿಎಎ ಜಾರಿಗೊಳಿಸುತ್ತಿದೆಯೋ ಅಥವಾ ಇಲ್ಲವೋ ಎಂಬುದು ಪ್ರಕರಣದ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ಆರಂಭವಾದಾಗಲೇ ತಿಳಿದು ಬರಲಿದೆ.


ಇದನ್ನೂ ಓದಿ :ಓರಿಸ್ಸಾದಲ್ಲಿ ಮೊಸಳೆ ದಾಳಿಗೆ ವ್ಯಕ್ತಿ ಬಲಿ: ಸ್ಥಳೀಯರಲ್ಲಿ ಹೆಚ್ಚಿದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...