HomeUncategorizedಪ್ರಶಾಂತ್ ಕಿಶೋರ್ ಇಲ್ಲದೆಯೂ TMC ಗಾಗಿ ಕೆಲಸ ಮಾಡಲಿದೆ I-PAC!

ಪ್ರಶಾಂತ್ ಕಿಶೋರ್ ಇಲ್ಲದೆಯೂ TMC ಗಾಗಿ ಕೆಲಸ ಮಾಡಲಿದೆ I-PAC!

- Advertisement -
- Advertisement -

ದೇಶದಲ್ಲಿ ಮತ್ತೊಮ್ಮೆ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಸುದ್ದಿಯಲ್ಲಿದ್ದಾರೆ. 2021 ರ ಪಶ್ಚಿಮ ಬಂಗಾಳ ಚುನಾವಣೆಯ ತೃಣಮೂಲ ಗೆಲುವಿನೊಂದಿಗೆ ತಮ್ಮ ರಾಜಕೀಯ ತಂತ್ರಗಾರಿಕೆಯ ವೃತ್ತಿಯಿಂದ ನಿವೃತ್ತಿ ಹೊಂದುವುದಾಗಿ ಹೇಳಿ ಪ್ರಶಾಂತ್ ಕಿಶೋರ್ ಆಶ್ಚರ್ಯ ಮೂಡಿಸಿದ್ದರು. ಇದರ ನಡುವೆ ಪ್ರಶಾಂತ್ ಕಿಶೋರ್ ರಾಜಕೀಯಕ್ಕೆ ಪ್ರವೇಶಿಸುತ್ತಾರ ಎಂಬ ಸುದ್ದಿಗಳು ಕೆಲವುದಿನ ಹರಿದಾಡುತ್ತಿತ್ತು. ಬಿಹಾರ ಮೂಲದ ಚುನಾವಣಾ ತಂತ್ರಜ್ಞ ಸದ್ಯ ರಾಜಕೀಯದ ಕಡೆ ಮುಖ ಮಾಡಿಲ್ಲ. ಹಾಗೆಂದು ರಾಜಕೀಯದಿಂದ ದೂರವೂ ಉಳಿದಿಲ್ಲ. ಇದರ ನಡುವೆ ತೃಣಮೂಲ್ ಕಾಂಗ್ರೆಸ್ ಪ್ರಶಾಂತ್ ಕಿಶೋರ್ ಹುಟ್ಟು ಹಾಕಿದ I-PAC ಚುನಾವಣಾ ವಿಶ್ಲೇಷಣಾ ಸಂಸ್ಥೆಯ ಜೊತೆ ತನ್ನ ಒಪ್ಪಂದವನ್ನು ಮುಂದುವರೆಸಿದೆ. ಪಶ್ಚಿಮ ಬಂಗಾಳದ ಜಿಲ್ಲಾ ಪಂಚಾಯತಿ, ಸ್ಥಳೀಯ ಸಂಸ್ಥೆಗಳು, ಇತರ ಚುನಾವಣೆಗಳು ಸೇರಿ ಎಲ್ಲಾ ಚುನಾವಣಾ ಪ್ರಕ್ರಿಯೆಯಲ್ಲಿ I-PAC ತೃಣಮೂಲ ಕಾಂಗ್ರೆಸ್‌ಗೆ ಸಹಾಯ ಮಾಡಲಿದೆ. ತೃಣಮೂಲ ಕಾಂಗ್ರೆಸ್‌ ಮತ್ತು I-PAC ನಡುವಿನ ಒಪ್ಪಂದ 2026 ರ ವರೆಗೂ ಮುಂದುವರೆಯಲಿದೆ. ಆದರೆ ಈಗ I-PAC ನಲ್ಲಿ ಮುಖ್ಯಸ್ಥರಾಗಿ ಪ್ರಶಾಂತ್ ಕಿಶೋರ್ ಕೆಲಸ ಮಾಡುತ್ತಿಲ್ಲ. ಅವರ ಬದಲಾಗಿ 9 ಜನ ಹಿರಿಯ ಸದಸ್ಯರ ನೇತೃತ್ವದಲ್ಲಿ I-PAC ಕಾರ್ಯನಿರ್ವಹಿಸುತ್ತಿದೆ. ಪ್ರಶಾಂತ್ ಕಿಶೋರ್ ಇಲ್ಲದೇ ತೃಣಮೂಲ್-I-PAC ಜೋಡಿ ಚುನಾವಣೆಗಳಲ್ಲಿ ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂದು ಬಂಗಾಳದ ಉಪಚುನಾವಣೆಗಳು ಸ್ಪಷ್ಟಪಡಿಸಲಿವೆ.

ಇದನ್ನೂ ಓದಿ : ಕೇಂದ್ರ ಸರ್ಕಾರ ಸದ್ದಿಲ್ಲದೇ CAA ಜಾರಿಗೊಳಿಸುತ್ತಿದೆ: ಸುಪ್ರೀಂನಲ್ಲಿ IUML ಪ್ರಶ್ನೆ

ಇವೆಲ್ಲದರ ನಡುವೆ ಇತ್ತ ಪ್ರಶಾಂತ್ ಕಿಶೋರ್ ಸದ್ದಿಲ್ಲದೇ ಶರತ್ ಪವಾರ್ ಅವರನ್ನು ಭೇಟಿ ಮಾಡಿದ್ದಾರೆ. ಬಂಗಾಳ ಚುನಾವಣೆಯಲ್ಲಿ ಬೆಂಬಲಿಸಿದ್ದಕ್ಕೆ ಕೃತಜ್ಞತೆ ತಿಳಿಸಲು ಪವಾರ್ ಭೇಟಿಯಾಗಿದ್ದಾಗಿ ಪ್ರಶಾಂತ್ ಕಿಶೋರ್ ಹೇಳುತ್ತಿದ್ದಾರಾದರೂ  ಭೇಟಿ ಹಿಂದೆ ಮಹತ್ವದ ರಾಜಕೀಯ ಉದ್ಧೇಶವಿದೆಯೆಂದು ಹೇಳಲಾಗುತ್ತಿದೆ. ಮಮತಾ ಬ್ಯಾನರ್ಜಿ ಪರವಾಗಿ ಪ್ರಶಾಂತ್ ಕಿಶೋರ್ ಶರದ್ ಪವಾರ್ ಅವರನ್ನು ಭೇಟಿಯಾಗಿದ್ದಾರೆ. ಮಮತಾ ಬ್ಯಾನರ್ಜಿ ರಾಷ್ಟ್ರ ಮಟ್ಟದಲ್ಲಿ ವಿರೋಧ ಪಕ್ಷಗಳ ಒಕ್ಕೂಟಗಳನ್ನು ಸಂಘಟಿಸಲು ಆರಂಭಿಸಿದ್ದಾರೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಗಳು ಕೇಳಿ ಬರುತ್ತಿವೆ. ಇದಕ್ಕೆ ಪುಷ್ಠಿ ನೀಡುವಂತೆ ತೃಣಮೂಲ್ ಕಾಂಗ್ರೆಸ್‌ ನಾಯಕಿ ಮಮತಾ ಬ್ಯಾನರ್ಜಿ ಪಕ್ಷವನ್ನು ರಾಷ್ಟ್ರ ಮಟ್ಟಕ್ಕೆ ಕೊಂಡೊಯ್ಯುವ ಅವಶ್ಯಕತೆಯಿದೆಯೆಂದು ಹೇಳಿದ್ದಾರೆ. ಮತ್ತೊಬ್ಬ ತೃಣಮೂಲ್ ನಾಯಕ ಅಭಿಷೇಕ್ ಬ್ಯಾನರ್ಜಿ ಕೂಡ ಇದೇ ರೀತಿಯ ಹೇಳಿಕೆಯನ್ನು ಇತ್ತೀಚೆಗೆ ನೀಡಿದ್ದಾರೆ. ಪ್ರಶಾಂತ್ ಕಿಶೋರ್ ಶರದ್ ಪವಾರ್ ಅವರನ್ನು ಭೇಟಿಯಾಗಿರುವುದು, ಮಮತಾ ಬ್ಯಾನರ್ಜಿಯವರ ರಾಷ್ಟ್ರ ರಾಜಕಾರಣದ ಕನಸು ಎಲ್ಲವನ್ನೂ ತಾಳೆಹಾಕಿ ನೋಡಿದರೆ ತೃಣಮೂಲ ಕಾಂಗ್ರೆಸ್‌ ತೆರೆಮರೆಯಲ್ಲಿ ರಾಷ್ಟ್ರರಾಜಕಾರಣದಲ್ಲಿ ಮಹತ್ವದ ಹೆಜ್ಜೆಯಿಡಲು ಸಜ್ಜಾಗುತ್ತಿರುವುದು ಸ್ಪಷ್ಟವಾಗುತ್ತದೆ.

ಬಂಗಾಳದ ಗೆಲುವು ಮಮತಾ ಬ್ಯಾನರ್ಜಿ ಅವರಲ್ಲಿ ದೆಹಲಿ ಗದ್ದುಗೆಯ ಕನಸನ್ನು ಬಿತ್ತಿರಬಹುದು. ಹಾಗಾಗಿ ಮಮತಾ ಈಗಿನಿಂದಲೇ ಪ್ರಧಾನಿ ಮೋದಿ ವಿರುದ್ಧ ವಿರೋಧ ಪಕ್ಷಗಳ ಒಕ್ಕೂಟವನ್ನು ಸಂಘಟಿಸುವ ಯತ್ನಕ್ಕೆ ಕೈ ಹಾಕಿದ್ದಾರೆ. ಬಂಗಾಳ ಚುನಾವಣೆಯ ಸಂದರ್ಭದಲ್ಲಿ ಮಮತಾ ಬ್ಯಾನರ್ಜಿ ವಿರೋಧ ಪಕ್ಷಗಳು ಒಟ್ಟಾದರೆ ಪ್ರಧಾನಿ ಮೋದಿಯವರನ್ನು ಸೋಲಿಸಬಹುದು ಎಂದಿದ್ದರು. ಹಾಗೇ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿ ಹಲವು ನಾಯಕರುಗಳಿಗೆ ಬೆಂಬಲ ಕೋರಿ ಪತ್ರ ಬರೆದಿದ್ದರು.

ಇದಕ್ಕೂ ಹಿಂದೆ 2019 ರ ಲೋಕಸಭೆ ಚುನಾವಣೆಯ ಸಮಯದಲ್ಲೂ ಮಮತಾ ಬ್ಯಾನರ್ಜಿ ಅವರು ವಿರೋಧ ಪಕ್ಷಗಳ ಒಕ್ಕೂಟವಾದ ತೃತೀಯ ರಂಗವನ್ನು ಸಂಘಟಿಸಲು ಪ್ರಯತ್ನಿಸಿದ್ದರು. ಈ ನಡುವೆ ಮಮಾತಾ ಬ್ಯಾನರ್ಜಿ ಮತ್ತು ಪ್ರಧಾನಿ ಮೋದಿಯವರ ನಡುವಿನ ವಾಕ್ಸಮರಗಳು, ಅಧಿಕಾರಿ ವರ್ಗಾವಣೆ ತಿಕ್ಕಾಟಗಳನ್ನು ಗಮನಿಸಿದರೆ ಪ್ರಶಾಂತ್ ಕಿಶೋರ್ ಶರದ್‌ ಪವಾರ್ ಭೇಟಿಯೆ ಹಿಂದೆ ಹಲವು ಅರ್ಥಗಳು ಹುಟ್ಟಿಕೊಳ್ಳುತ್ತವೆ. ಜೊತೆಗೆ ಪ್ರಶಾಂತ್ ಕಿಶೋರ್ ಸ್ಥಾಪಿಸಿದ I-PAC  ಸಂಸ್ಥೆ ಜೊತೆ ತೃಣಮೂಲ್ ಒಪ್ಪಂದವನ್ನು ಮುಂದುವರೆಸಿರುವುದು ಸಹ ಮಮತಾ ಬ್ಯಾನರ್ಜಿಯವರ ರಾಷ್ಟ್ರ ರಾಜಕಾರಣದ ಮಹತ್ವಾಕಾಂಕ್ಷೆಯ ಜಾಡನ್ನು ಸೂಚಿಸುವಂತಿದೆ.

ಒಟ್ಟಿನಲ್ಲಿ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್‌ ಗೆಲುವು, ಚುನಾವಣೆಯ ನಂತರದ ಬಿಜೆಪಿ ನಾಯಕರ ವಲಸೆ, ಪ್ರಶಾಂತ್ ಕಿಶೋರ್- ಶರದ್ ಪವಾರ್ ನಿಗೂಢ ಭೇಟಿ ಎಲ್ಲವೂ ಮಮತಾ ಬ್ಯಾನರ್ಜಿ ಅವರನ್ನು ಮತ್ತೊಮ್ಮೆ ರಾಷ್ಟ್ರ ರಾಜಕಾರಣದ ಮುನ್ನೆಲೆಗೆ ತಂದು ನಿಲ್ಲಿಸಿವೆ.


ಇದನ್ನೂ ಓದಿ : ಅಕ್ರಮ‌ ಹಣ ವರ್ಗಾವಣೆ ಆರೋಪ: ಬಿಎಸ್‌ವೈ ವಿರುದ್ಧ ಜಾರಿ ನಿರ್ದೇಶನಾಲಯಕ್ಕೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...