HomeUncategorizedಪ್ರಶಾಂತ್ ಕಿಶೋರ್ ಇಲ್ಲದೆಯೂ TMC ಗಾಗಿ ಕೆಲಸ ಮಾಡಲಿದೆ I-PAC!

ಪ್ರಶಾಂತ್ ಕಿಶೋರ್ ಇಲ್ಲದೆಯೂ TMC ಗಾಗಿ ಕೆಲಸ ಮಾಡಲಿದೆ I-PAC!

- Advertisement -
- Advertisement -

ದೇಶದಲ್ಲಿ ಮತ್ತೊಮ್ಮೆ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಸುದ್ದಿಯಲ್ಲಿದ್ದಾರೆ. 2021 ರ ಪಶ್ಚಿಮ ಬಂಗಾಳ ಚುನಾವಣೆಯ ತೃಣಮೂಲ ಗೆಲುವಿನೊಂದಿಗೆ ತಮ್ಮ ರಾಜಕೀಯ ತಂತ್ರಗಾರಿಕೆಯ ವೃತ್ತಿಯಿಂದ ನಿವೃತ್ತಿ ಹೊಂದುವುದಾಗಿ ಹೇಳಿ ಪ್ರಶಾಂತ್ ಕಿಶೋರ್ ಆಶ್ಚರ್ಯ ಮೂಡಿಸಿದ್ದರು. ಇದರ ನಡುವೆ ಪ್ರಶಾಂತ್ ಕಿಶೋರ್ ರಾಜಕೀಯಕ್ಕೆ ಪ್ರವೇಶಿಸುತ್ತಾರ ಎಂಬ ಸುದ್ದಿಗಳು ಕೆಲವುದಿನ ಹರಿದಾಡುತ್ತಿತ್ತು. ಬಿಹಾರ ಮೂಲದ ಚುನಾವಣಾ ತಂತ್ರಜ್ಞ ಸದ್ಯ ರಾಜಕೀಯದ ಕಡೆ ಮುಖ ಮಾಡಿಲ್ಲ. ಹಾಗೆಂದು ರಾಜಕೀಯದಿಂದ ದೂರವೂ ಉಳಿದಿಲ್ಲ. ಇದರ ನಡುವೆ ತೃಣಮೂಲ್ ಕಾಂಗ್ರೆಸ್ ಪ್ರಶಾಂತ್ ಕಿಶೋರ್ ಹುಟ್ಟು ಹಾಕಿದ I-PAC ಚುನಾವಣಾ ವಿಶ್ಲೇಷಣಾ ಸಂಸ್ಥೆಯ ಜೊತೆ ತನ್ನ ಒಪ್ಪಂದವನ್ನು ಮುಂದುವರೆಸಿದೆ. ಪಶ್ಚಿಮ ಬಂಗಾಳದ ಜಿಲ್ಲಾ ಪಂಚಾಯತಿ, ಸ್ಥಳೀಯ ಸಂಸ್ಥೆಗಳು, ಇತರ ಚುನಾವಣೆಗಳು ಸೇರಿ ಎಲ್ಲಾ ಚುನಾವಣಾ ಪ್ರಕ್ರಿಯೆಯಲ್ಲಿ I-PAC ತೃಣಮೂಲ ಕಾಂಗ್ರೆಸ್‌ಗೆ ಸಹಾಯ ಮಾಡಲಿದೆ. ತೃಣಮೂಲ ಕಾಂಗ್ರೆಸ್‌ ಮತ್ತು I-PAC ನಡುವಿನ ಒಪ್ಪಂದ 2026 ರ ವರೆಗೂ ಮುಂದುವರೆಯಲಿದೆ. ಆದರೆ ಈಗ I-PAC ನಲ್ಲಿ ಮುಖ್ಯಸ್ಥರಾಗಿ ಪ್ರಶಾಂತ್ ಕಿಶೋರ್ ಕೆಲಸ ಮಾಡುತ್ತಿಲ್ಲ. ಅವರ ಬದಲಾಗಿ 9 ಜನ ಹಿರಿಯ ಸದಸ್ಯರ ನೇತೃತ್ವದಲ್ಲಿ I-PAC ಕಾರ್ಯನಿರ್ವಹಿಸುತ್ತಿದೆ. ಪ್ರಶಾಂತ್ ಕಿಶೋರ್ ಇಲ್ಲದೇ ತೃಣಮೂಲ್-I-PAC ಜೋಡಿ ಚುನಾವಣೆಗಳಲ್ಲಿ ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂದು ಬಂಗಾಳದ ಉಪಚುನಾವಣೆಗಳು ಸ್ಪಷ್ಟಪಡಿಸಲಿವೆ.

ಇದನ್ನೂ ಓದಿ : ಕೇಂದ್ರ ಸರ್ಕಾರ ಸದ್ದಿಲ್ಲದೇ CAA ಜಾರಿಗೊಳಿಸುತ್ತಿದೆ: ಸುಪ್ರೀಂನಲ್ಲಿ IUML ಪ್ರಶ್ನೆ

ಇವೆಲ್ಲದರ ನಡುವೆ ಇತ್ತ ಪ್ರಶಾಂತ್ ಕಿಶೋರ್ ಸದ್ದಿಲ್ಲದೇ ಶರತ್ ಪವಾರ್ ಅವರನ್ನು ಭೇಟಿ ಮಾಡಿದ್ದಾರೆ. ಬಂಗಾಳ ಚುನಾವಣೆಯಲ್ಲಿ ಬೆಂಬಲಿಸಿದ್ದಕ್ಕೆ ಕೃತಜ್ಞತೆ ತಿಳಿಸಲು ಪವಾರ್ ಭೇಟಿಯಾಗಿದ್ದಾಗಿ ಪ್ರಶಾಂತ್ ಕಿಶೋರ್ ಹೇಳುತ್ತಿದ್ದಾರಾದರೂ  ಭೇಟಿ ಹಿಂದೆ ಮಹತ್ವದ ರಾಜಕೀಯ ಉದ್ಧೇಶವಿದೆಯೆಂದು ಹೇಳಲಾಗುತ್ತಿದೆ. ಮಮತಾ ಬ್ಯಾನರ್ಜಿ ಪರವಾಗಿ ಪ್ರಶಾಂತ್ ಕಿಶೋರ್ ಶರದ್ ಪವಾರ್ ಅವರನ್ನು ಭೇಟಿಯಾಗಿದ್ದಾರೆ. ಮಮತಾ ಬ್ಯಾನರ್ಜಿ ರಾಷ್ಟ್ರ ಮಟ್ಟದಲ್ಲಿ ವಿರೋಧ ಪಕ್ಷಗಳ ಒಕ್ಕೂಟಗಳನ್ನು ಸಂಘಟಿಸಲು ಆರಂಭಿಸಿದ್ದಾರೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಗಳು ಕೇಳಿ ಬರುತ್ತಿವೆ. ಇದಕ್ಕೆ ಪುಷ್ಠಿ ನೀಡುವಂತೆ ತೃಣಮೂಲ್ ಕಾಂಗ್ರೆಸ್‌ ನಾಯಕಿ ಮಮತಾ ಬ್ಯಾನರ್ಜಿ ಪಕ್ಷವನ್ನು ರಾಷ್ಟ್ರ ಮಟ್ಟಕ್ಕೆ ಕೊಂಡೊಯ್ಯುವ ಅವಶ್ಯಕತೆಯಿದೆಯೆಂದು ಹೇಳಿದ್ದಾರೆ. ಮತ್ತೊಬ್ಬ ತೃಣಮೂಲ್ ನಾಯಕ ಅಭಿಷೇಕ್ ಬ್ಯಾನರ್ಜಿ ಕೂಡ ಇದೇ ರೀತಿಯ ಹೇಳಿಕೆಯನ್ನು ಇತ್ತೀಚೆಗೆ ನೀಡಿದ್ದಾರೆ. ಪ್ರಶಾಂತ್ ಕಿಶೋರ್ ಶರದ್ ಪವಾರ್ ಅವರನ್ನು ಭೇಟಿಯಾಗಿರುವುದು, ಮಮತಾ ಬ್ಯಾನರ್ಜಿಯವರ ರಾಷ್ಟ್ರ ರಾಜಕಾರಣದ ಕನಸು ಎಲ್ಲವನ್ನೂ ತಾಳೆಹಾಕಿ ನೋಡಿದರೆ ತೃಣಮೂಲ ಕಾಂಗ್ರೆಸ್‌ ತೆರೆಮರೆಯಲ್ಲಿ ರಾಷ್ಟ್ರರಾಜಕಾರಣದಲ್ಲಿ ಮಹತ್ವದ ಹೆಜ್ಜೆಯಿಡಲು ಸಜ್ಜಾಗುತ್ತಿರುವುದು ಸ್ಪಷ್ಟವಾಗುತ್ತದೆ.

ಬಂಗಾಳದ ಗೆಲುವು ಮಮತಾ ಬ್ಯಾನರ್ಜಿ ಅವರಲ್ಲಿ ದೆಹಲಿ ಗದ್ದುಗೆಯ ಕನಸನ್ನು ಬಿತ್ತಿರಬಹುದು. ಹಾಗಾಗಿ ಮಮತಾ ಈಗಿನಿಂದಲೇ ಪ್ರಧಾನಿ ಮೋದಿ ವಿರುದ್ಧ ವಿರೋಧ ಪಕ್ಷಗಳ ಒಕ್ಕೂಟವನ್ನು ಸಂಘಟಿಸುವ ಯತ್ನಕ್ಕೆ ಕೈ ಹಾಕಿದ್ದಾರೆ. ಬಂಗಾಳ ಚುನಾವಣೆಯ ಸಂದರ್ಭದಲ್ಲಿ ಮಮತಾ ಬ್ಯಾನರ್ಜಿ ವಿರೋಧ ಪಕ್ಷಗಳು ಒಟ್ಟಾದರೆ ಪ್ರಧಾನಿ ಮೋದಿಯವರನ್ನು ಸೋಲಿಸಬಹುದು ಎಂದಿದ್ದರು. ಹಾಗೇ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿ ಹಲವು ನಾಯಕರುಗಳಿಗೆ ಬೆಂಬಲ ಕೋರಿ ಪತ್ರ ಬರೆದಿದ್ದರು.

ಇದಕ್ಕೂ ಹಿಂದೆ 2019 ರ ಲೋಕಸಭೆ ಚುನಾವಣೆಯ ಸಮಯದಲ್ಲೂ ಮಮತಾ ಬ್ಯಾನರ್ಜಿ ಅವರು ವಿರೋಧ ಪಕ್ಷಗಳ ಒಕ್ಕೂಟವಾದ ತೃತೀಯ ರಂಗವನ್ನು ಸಂಘಟಿಸಲು ಪ್ರಯತ್ನಿಸಿದ್ದರು. ಈ ನಡುವೆ ಮಮಾತಾ ಬ್ಯಾನರ್ಜಿ ಮತ್ತು ಪ್ರಧಾನಿ ಮೋದಿಯವರ ನಡುವಿನ ವಾಕ್ಸಮರಗಳು, ಅಧಿಕಾರಿ ವರ್ಗಾವಣೆ ತಿಕ್ಕಾಟಗಳನ್ನು ಗಮನಿಸಿದರೆ ಪ್ರಶಾಂತ್ ಕಿಶೋರ್ ಶರದ್‌ ಪವಾರ್ ಭೇಟಿಯೆ ಹಿಂದೆ ಹಲವು ಅರ್ಥಗಳು ಹುಟ್ಟಿಕೊಳ್ಳುತ್ತವೆ. ಜೊತೆಗೆ ಪ್ರಶಾಂತ್ ಕಿಶೋರ್ ಸ್ಥಾಪಿಸಿದ I-PAC  ಸಂಸ್ಥೆ ಜೊತೆ ತೃಣಮೂಲ್ ಒಪ್ಪಂದವನ್ನು ಮುಂದುವರೆಸಿರುವುದು ಸಹ ಮಮತಾ ಬ್ಯಾನರ್ಜಿಯವರ ರಾಷ್ಟ್ರ ರಾಜಕಾರಣದ ಮಹತ್ವಾಕಾಂಕ್ಷೆಯ ಜಾಡನ್ನು ಸೂಚಿಸುವಂತಿದೆ.

ಒಟ್ಟಿನಲ್ಲಿ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್‌ ಗೆಲುವು, ಚುನಾವಣೆಯ ನಂತರದ ಬಿಜೆಪಿ ನಾಯಕರ ವಲಸೆ, ಪ್ರಶಾಂತ್ ಕಿಶೋರ್- ಶರದ್ ಪವಾರ್ ನಿಗೂಢ ಭೇಟಿ ಎಲ್ಲವೂ ಮಮತಾ ಬ್ಯಾನರ್ಜಿ ಅವರನ್ನು ಮತ್ತೊಮ್ಮೆ ರಾಷ್ಟ್ರ ರಾಜಕಾರಣದ ಮುನ್ನೆಲೆಗೆ ತಂದು ನಿಲ್ಲಿಸಿವೆ.


ಇದನ್ನೂ ಓದಿ : ಅಕ್ರಮ‌ ಹಣ ವರ್ಗಾವಣೆ ಆರೋಪ: ಬಿಎಸ್‌ವೈ ವಿರುದ್ಧ ಜಾರಿ ನಿರ್ದೇಶನಾಲಯಕ್ಕೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...