Homeಅಂತರಾಷ್ಟ್ರೀಯಪ್ಯಾಲೆಸ್ತೀನ್‌‌: ಗಾಝಾ ಮೇಲೆ ಮತ್ತೆ ವಾಯುದಾಳಿ ನಡೆಸಿದ ಇಸ್ರೇಲ್‌

ಪ್ಯಾಲೆಸ್ತೀನ್‌‌: ಗಾಝಾ ಮೇಲೆ ಮತ್ತೆ ವಾಯುದಾಳಿ ನಡೆಸಿದ ಇಸ್ರೇಲ್‌

- Advertisement -
- Advertisement -

ಹೊಸ ಸರ್ಕಾರ ರಚನೆಯಾದ ಕೆಲವೆ ದಿನಗಳ ಅಂತರದಲ್ಲಿ ಮಂಗಳವಾರ ಗಾಝಾದ ಮೇಲೆ ಇಸ್ರೇಲ್‌ ಮತ್ತೆ ವಾಯುದಾಳಿ ಪ್ರಾರಂಭಿಸಿದೆ. ಇಸ್ರೇಲ್‌ ಆಕ್ರಮಿಸಿದ ದಕ್ಷಿಣ ಇಸ್ರೇಲ್‌‌ ಗಡಿಗೆ ಪ್ಯಾಲೆಸ್ತೀನಿಯನ್‌ ಹೋರಾಟಗಾರರು ಬೆಂಕಿಯ ಬಲೂನ್‌ಗಳನ್ನು ಕಳುಹಿಸಿದ್ದರಿಂದ ಈ ವಾಯುದಾಳಿ ನಡೆಸಿದ್ದೇವೆ ಎಂದು ಇಸ್ರೇಲ್‌ ಹೇಳಿದೆ.

ಇಸ್ರೇಲ್ ಮತ್ತು ಹಮಾಸ್ ಕಳೆದ ತಿಂಗಳು ಕದನ ವಿರಾಮಕ್ಕೆ ಒಪ್ಪಿದ 11 ದಿನಗಳ ನಂತರ ಈ ವಾಯುದಾಳಿ ಪ್ರಾರಂಭವಾಗಿದೆ. ಕಳೆದ ಬಾರಿ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಪ್ಯಾಲೆಸ್ತೀನಿನ 250 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು.

ಇದನ್ನೂ ಓದಿ: ‘ಗಾಝಾದಲ್ಲಿ ಈದ್‌ ಪ್ರಾರಂಭ!’ – ಕದನ ವಿರಾಮ ಘೋಷಿಸಿದ ಇಸ್ರೇಲ್‌

ನಗರದ ಪೂರ್ವ ವಲಯವನ್ನು ಇಸ್ರೇಲ್ ಆಕ್ರಮಿಸಿಕೊಂಡ 1967 ರ ವಾರ್ಷಿಕೋತ್ಸವವನ್ನು ಆಚರಿಸಿ, ಜೆರುಸಲೆಮ್‌‌ನ ಓಲ್ಡ್ ಸಿಟಿ ಮೂಲಕ ಬಲಪಂಥೀಯ ಇಸ್ರೇಲಿಗಳು ನಡೆಸಿದ ಮೆರವಣಿಗೆಗೆ ಪ್ರತಿಕ್ರಿಯೆಯಾಗಿ ಬೆಂಕಿಯ ಬಲೂನ್‌ಗಳನ್ನು ಕಳುಹಿಸಲಾಗಿದೆ ಎಂದು ವರದಿಯಾಗಿದೆ.

ಇಸ್ರೇಲಿ ವಿಮಾನವು ಗಾಜಾದ ಪ್ಯಾಲೆಸ್ತೀನಿಯನ್ ತರಬೇತಿ ಶಿಬಿರವನ್ನು ಗುರಿಯಾಗಿಸಿಕೊಂಡಿದೆ ಎಂದು ಹಮಾಸ್ ರೇಡಿಯೊ ಕೇಂದ್ರ ಹೇಳಿದೆ ಎಂದು ವರದಿಯಾಗಿದೆ.

ಮಂಗಳವಾರ ತಡರಾತ್ರಿ ಗಾಜಾ ಪ್ರದೇಶದ ಹಮಾಸ್‌ಗೆ ಸೇರಿದ ಹಲವಾರು ಮಿಲಿಟರಿ ತಾಣಗಳಿಗೆ ದಾಳಿ ಮಾಡಲಾಗಿದೆ ಎಂದು ಇಸ್ರೇಲಿ ರಕ್ಷಣಾ ಪಡೆ ದೃಡಪಡಿಸಿದೆ. ವಾಯುದಾಳಿಯಲ್ಲಿ ಗಾಝಾದ ಯಾವುದೆ ನಾಗರಿಕರು ಗಾಯಗೊಂಡಿಲ್ಲ ಎಂದು ಹಮಾಸ್ ಅಂಗಸಂಸ್ಥೆ ಮಾಧ್ಯಮ ವರದಿ ಮಾಡಿದೆ ಎಂದು ಬಿಬಿಸಿ ವರದಿ ಮಾಡಿದೆ.

ಇಸ್ರೇಲ್‌‌‌‌‌ ಅತಿಕ್ರಮಣವನ್ನು ವಿರೋಧಿಸಿ ಹಮಾಸ್‌‌, ‘ಆಕ್ರೋಶ ದಿನ’ ಆಚರಿಸಲು ಕರೆ ನೀಡಿತ್ತು.

ಇದನ್ನೂ ಓದಿ: ಪ್ಯಾಲೆಸ್ಟೀನೀಯರ ಹೋರಾಟ; ದಬ್ಬಾಳಿಕೆಯ ವಿರೋಧ ಅದು ಜಗಳಗಂಟತನವಲ್ಲ

“ಮುಂದಿನ ಮಂಗಳವಾರ ಸಜ್ಜುಗೊಳ್ಳುವ ದಿನವಾಗಿರಲಿ, ಅಲ್-ಅಕ್ಸಾ ಮಸೀದಿಯ ಕಡೆಗಿನ ಪ್ರೀತಿಯಿಂದಾಗಿರಲಿ, ಆಕ್ರಮಣಕಾರನ್ನು ಧಿಕ್ಕರಿಸುವ ದಿನವಾಗಲಿ. ನೀವು ಏನು ಮಾಡಿದ್ದೀರಿ ಎಂದು ದೇವನಿಗೆ ಮತ್ತು ನಿಮ್ಮ ಜನರಿಗೆ ತೋರಿಸಿ. ಜೆರುಸಲೆಮ್ ಮತ್ತು ಅಲ್-ಅಕ್ಸಾಗೆ ಅತ್ಯುತ್ತಮ ಖಡ್ಗವಾಗಿರಿ” ಎಂದು ಹಮಾಸ್ ಕರೆ ನೀಡಿತ್ತು.

ಬಲಪಂಥೀಯ ಇಸ್ರೇಲಿಗರು ಮೆರವಣಿಗೆಯಲ್ಲಿ, “ಇದು ನಮ್ಮ ಮನೆ”, “ಜೆರುಸಲೆಮ್ ನಮ್ಮದು”, “ಅರಬ್ಬರ ಸಾವು” ಎಂಬ ಘೋಷಣೆಗಳನ್ನು ಕೂಗಿದ್ದರು ಎಂದು CNN ವರದಿ ಮಾಡಿದೆ. ಆದರೆ ಈ ಘೋಷಣೆಗಳನ್ನು ವಿರೋಧಿಸಿ ಸ್ವತಃ ಇಸ್ರೇಲ್‌ನ ಹೊಸ ವಿದೇಶಾಂಗ ಸಚಿವ ಯಾಯರ್ ಲ್ಯಾಪಿಡ್ ಹೇಳಿಕೆ ನೀಡಿದ್ದಾರೆ.

“ಇಸ್ರೇಲಿ ಧ್ವಜವನ್ನು ಕೈಯಲ್ಲಿ ಹಿಡಿದುಕೊಂಡು ‘ಅರಬ್ಬರ ಸಾವು’ ಎಂದು ಕೂಗುವುದು ಹೇಗೆ ಎಂದು ಊಹಿಸಲಾಗದು. ಇದು ಜುಡಾಯಿಸಂ ಅಥವಾ ಇಸ್ರೇಲ್ ಅಲ್ಲ. ಆ ಘೋಷಣೆಯು ಖಂಡಿತವಾಗಿಯೂ ನಮ್ಮ ಧ್ವಜವನ್ನು ಸಂಕೇತಿಸುವುದಿಲ್ಲ. ಈ ಜನರು ಇಸ್ರೇಲ್‌ನ ಜನತೆಗೆ ನಾಚಿಕೆಗೇಡು” ಎಂದು ಅವರು ಹೇಳಿದ್ದಾರೆ.

ಜೆರುಸಲೆಮ್‌‌ನಲ್ಲಿ ಮಂಗಳವಾರ ಕನಿಷ್ಠ 17 ಪ್ಯಾಲೆಸ್ತೀನಿಯನ್ನರನ್ನು ಭದ್ರತಾ ಪಡೆಗಳು ಬಂಧಿಸಿವೆ ಮತ್ತು ಘರ್ಷಣೆಯಲ್ಲಿ ಕನಿಷ್ಠ 33 ಮಂದಿ ಗಾಯಗೊಂಡಿದ್ದಾರೆ ಎಂದು ಅಲ್-ಜಝೀರಾ ವರದಿ ಮಾಡಿದೆ.

ಇದನ್ನೂ ಓದಿ: ಪ್ಯಾಲೆಸ್ತೀನ್ ಸಂಘರ್ಷ ಕೊನೆಗೊಳಿಸಲು ’ದ್ವಿರಾಷ್ಟ್ರ’ ಪರಿಹಾರವನ್ನು ಬೆಂಬಲಿಸಿದ ಭಾರತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...