Homeಅಂತರಾಷ್ಟ್ರೀಯಪ್ಯಾಲೆಸ್ತೀನ್‌‌: ಗಾಝಾ ಮೇಲೆ ಮತ್ತೆ ವಾಯುದಾಳಿ ನಡೆಸಿದ ಇಸ್ರೇಲ್‌

ಪ್ಯಾಲೆಸ್ತೀನ್‌‌: ಗಾಝಾ ಮೇಲೆ ಮತ್ತೆ ವಾಯುದಾಳಿ ನಡೆಸಿದ ಇಸ್ರೇಲ್‌

- Advertisement -
- Advertisement -

ಹೊಸ ಸರ್ಕಾರ ರಚನೆಯಾದ ಕೆಲವೆ ದಿನಗಳ ಅಂತರದಲ್ಲಿ ಮಂಗಳವಾರ ಗಾಝಾದ ಮೇಲೆ ಇಸ್ರೇಲ್‌ ಮತ್ತೆ ವಾಯುದಾಳಿ ಪ್ರಾರಂಭಿಸಿದೆ. ಇಸ್ರೇಲ್‌ ಆಕ್ರಮಿಸಿದ ದಕ್ಷಿಣ ಇಸ್ರೇಲ್‌‌ ಗಡಿಗೆ ಪ್ಯಾಲೆಸ್ತೀನಿಯನ್‌ ಹೋರಾಟಗಾರರು ಬೆಂಕಿಯ ಬಲೂನ್‌ಗಳನ್ನು ಕಳುಹಿಸಿದ್ದರಿಂದ ಈ ವಾಯುದಾಳಿ ನಡೆಸಿದ್ದೇವೆ ಎಂದು ಇಸ್ರೇಲ್‌ ಹೇಳಿದೆ.

ಇಸ್ರೇಲ್ ಮತ್ತು ಹಮಾಸ್ ಕಳೆದ ತಿಂಗಳು ಕದನ ವಿರಾಮಕ್ಕೆ ಒಪ್ಪಿದ 11 ದಿನಗಳ ನಂತರ ಈ ವಾಯುದಾಳಿ ಪ್ರಾರಂಭವಾಗಿದೆ. ಕಳೆದ ಬಾರಿ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಪ್ಯಾಲೆಸ್ತೀನಿನ 250 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು.

ಇದನ್ನೂ ಓದಿ: ‘ಗಾಝಾದಲ್ಲಿ ಈದ್‌ ಪ್ರಾರಂಭ!’ – ಕದನ ವಿರಾಮ ಘೋಷಿಸಿದ ಇಸ್ರೇಲ್‌

ನಗರದ ಪೂರ್ವ ವಲಯವನ್ನು ಇಸ್ರೇಲ್ ಆಕ್ರಮಿಸಿಕೊಂಡ 1967 ರ ವಾರ್ಷಿಕೋತ್ಸವವನ್ನು ಆಚರಿಸಿ, ಜೆರುಸಲೆಮ್‌‌ನ ಓಲ್ಡ್ ಸಿಟಿ ಮೂಲಕ ಬಲಪಂಥೀಯ ಇಸ್ರೇಲಿಗಳು ನಡೆಸಿದ ಮೆರವಣಿಗೆಗೆ ಪ್ರತಿಕ್ರಿಯೆಯಾಗಿ ಬೆಂಕಿಯ ಬಲೂನ್‌ಗಳನ್ನು ಕಳುಹಿಸಲಾಗಿದೆ ಎಂದು ವರದಿಯಾಗಿದೆ.

ಇಸ್ರೇಲಿ ವಿಮಾನವು ಗಾಜಾದ ಪ್ಯಾಲೆಸ್ತೀನಿಯನ್ ತರಬೇತಿ ಶಿಬಿರವನ್ನು ಗುರಿಯಾಗಿಸಿಕೊಂಡಿದೆ ಎಂದು ಹಮಾಸ್ ರೇಡಿಯೊ ಕೇಂದ್ರ ಹೇಳಿದೆ ಎಂದು ವರದಿಯಾಗಿದೆ.

ಮಂಗಳವಾರ ತಡರಾತ್ರಿ ಗಾಜಾ ಪ್ರದೇಶದ ಹಮಾಸ್‌ಗೆ ಸೇರಿದ ಹಲವಾರು ಮಿಲಿಟರಿ ತಾಣಗಳಿಗೆ ದಾಳಿ ಮಾಡಲಾಗಿದೆ ಎಂದು ಇಸ್ರೇಲಿ ರಕ್ಷಣಾ ಪಡೆ ದೃಡಪಡಿಸಿದೆ. ವಾಯುದಾಳಿಯಲ್ಲಿ ಗಾಝಾದ ಯಾವುದೆ ನಾಗರಿಕರು ಗಾಯಗೊಂಡಿಲ್ಲ ಎಂದು ಹಮಾಸ್ ಅಂಗಸಂಸ್ಥೆ ಮಾಧ್ಯಮ ವರದಿ ಮಾಡಿದೆ ಎಂದು ಬಿಬಿಸಿ ವರದಿ ಮಾಡಿದೆ.

ಇಸ್ರೇಲ್‌‌‌‌‌ ಅತಿಕ್ರಮಣವನ್ನು ವಿರೋಧಿಸಿ ಹಮಾಸ್‌‌, ‘ಆಕ್ರೋಶ ದಿನ’ ಆಚರಿಸಲು ಕರೆ ನೀಡಿತ್ತು.

ಇದನ್ನೂ ಓದಿ: ಪ್ಯಾಲೆಸ್ಟೀನೀಯರ ಹೋರಾಟ; ದಬ್ಬಾಳಿಕೆಯ ವಿರೋಧ ಅದು ಜಗಳಗಂಟತನವಲ್ಲ

“ಮುಂದಿನ ಮಂಗಳವಾರ ಸಜ್ಜುಗೊಳ್ಳುವ ದಿನವಾಗಿರಲಿ, ಅಲ್-ಅಕ್ಸಾ ಮಸೀದಿಯ ಕಡೆಗಿನ ಪ್ರೀತಿಯಿಂದಾಗಿರಲಿ, ಆಕ್ರಮಣಕಾರನ್ನು ಧಿಕ್ಕರಿಸುವ ದಿನವಾಗಲಿ. ನೀವು ಏನು ಮಾಡಿದ್ದೀರಿ ಎಂದು ದೇವನಿಗೆ ಮತ್ತು ನಿಮ್ಮ ಜನರಿಗೆ ತೋರಿಸಿ. ಜೆರುಸಲೆಮ್ ಮತ್ತು ಅಲ್-ಅಕ್ಸಾಗೆ ಅತ್ಯುತ್ತಮ ಖಡ್ಗವಾಗಿರಿ” ಎಂದು ಹಮಾಸ್ ಕರೆ ನೀಡಿತ್ತು.

ಬಲಪಂಥೀಯ ಇಸ್ರೇಲಿಗರು ಮೆರವಣಿಗೆಯಲ್ಲಿ, “ಇದು ನಮ್ಮ ಮನೆ”, “ಜೆರುಸಲೆಮ್ ನಮ್ಮದು”, “ಅರಬ್ಬರ ಸಾವು” ಎಂಬ ಘೋಷಣೆಗಳನ್ನು ಕೂಗಿದ್ದರು ಎಂದು CNN ವರದಿ ಮಾಡಿದೆ. ಆದರೆ ಈ ಘೋಷಣೆಗಳನ್ನು ವಿರೋಧಿಸಿ ಸ್ವತಃ ಇಸ್ರೇಲ್‌ನ ಹೊಸ ವಿದೇಶಾಂಗ ಸಚಿವ ಯಾಯರ್ ಲ್ಯಾಪಿಡ್ ಹೇಳಿಕೆ ನೀಡಿದ್ದಾರೆ.

“ಇಸ್ರೇಲಿ ಧ್ವಜವನ್ನು ಕೈಯಲ್ಲಿ ಹಿಡಿದುಕೊಂಡು ‘ಅರಬ್ಬರ ಸಾವು’ ಎಂದು ಕೂಗುವುದು ಹೇಗೆ ಎಂದು ಊಹಿಸಲಾಗದು. ಇದು ಜುಡಾಯಿಸಂ ಅಥವಾ ಇಸ್ರೇಲ್ ಅಲ್ಲ. ಆ ಘೋಷಣೆಯು ಖಂಡಿತವಾಗಿಯೂ ನಮ್ಮ ಧ್ವಜವನ್ನು ಸಂಕೇತಿಸುವುದಿಲ್ಲ. ಈ ಜನರು ಇಸ್ರೇಲ್‌ನ ಜನತೆಗೆ ನಾಚಿಕೆಗೇಡು” ಎಂದು ಅವರು ಹೇಳಿದ್ದಾರೆ.

ಜೆರುಸಲೆಮ್‌‌ನಲ್ಲಿ ಮಂಗಳವಾರ ಕನಿಷ್ಠ 17 ಪ್ಯಾಲೆಸ್ತೀನಿಯನ್ನರನ್ನು ಭದ್ರತಾ ಪಡೆಗಳು ಬಂಧಿಸಿವೆ ಮತ್ತು ಘರ್ಷಣೆಯಲ್ಲಿ ಕನಿಷ್ಠ 33 ಮಂದಿ ಗಾಯಗೊಂಡಿದ್ದಾರೆ ಎಂದು ಅಲ್-ಜಝೀರಾ ವರದಿ ಮಾಡಿದೆ.

ಇದನ್ನೂ ಓದಿ: ಪ್ಯಾಲೆಸ್ತೀನ್ ಸಂಘರ್ಷ ಕೊನೆಗೊಳಿಸಲು ’ದ್ವಿರಾಷ್ಟ್ರ’ ಪರಿಹಾರವನ್ನು ಬೆಂಬಲಿಸಿದ ಭಾರತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...