Homeಮುಖಪುಟಯುಪಿ ಮುಸ್ಲಿಂ ವೃದ್ದನ ಮೇಲಿನ ದಾಳಿ ಪ್ರಕರಣ: ಟ್ವಿಟರ್‌‌, ಪತ್ರಕರ್ತರು, ರಾಜಕೀಯ ನಾಯಕರ ವಿರುದ್ದ FIR!

ಯುಪಿ ಮುಸ್ಲಿಂ ವೃದ್ದನ ಮೇಲಿನ ದಾಳಿ ಪ್ರಕರಣ: ಟ್ವಿಟರ್‌‌, ಪತ್ರಕರ್ತರು, ರಾಜಕೀಯ ನಾಯಕರ ವಿರುದ್ದ FIR!

- Advertisement -
- Advertisement -

ಉತ್ತರ ಪ್ರದೇಶದ ಗಾಝಿಯಾಬಾದ್‌‌ನಲ್ಲಿ ಪ್ರಾರ್ಥನೆ ಮುಗಿಸಿ ಮನೆಗೆ ತೆರಳುತ್ತಿದ್ದ ಮುಸ್ಲಿಂ ವೃದ್ಧನ ಮೇಲೆ ಚಿತ್ರಹಿಂಸೆ ನೀಡಿರುವ ಘಟನೆಯ ಕುರಿತು ಟ್ವೀಟ್ ಮಾಡಿ ಕೋಮು ಪ್ರಚೋದನೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಟ್ವಿಟರ್‌, ಹಲವಾರು ಪತ್ರಕರ್ತರು ಮತ್ತು ಕಾಂಗ್ರೆಸ್ ನಾಯಕರು ಸೇರಿದಂತೆ ಒಟ್ಟು 9 ಹೆಸರುಗಳ ಮೇಲೆ ಗಾಜಿಯಾಬಾದ್ ಪೊಲೀಸರು ಎಫ್‌ಐಆರ್‌‌ ದಾಖಲಿಸಿದ್ದಾರೆ.

ಸಂತ್ರಸ್ತ ವೃದ್ಧ ಅಬ್ದುಲ್ ಸಮದ್ ಎಂಬವರು ಪ್ರಾರ್ಥನೆ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಆಟೋದಲ್ಲಿ ಬಂದ ದುಷ್ಕರ್ಮಿಗಳು ಅವರನ್ನು ಕಾಡಿನೊಳಗೆ ಎಳೆದೊಯ್ದು ಚಿತ್ರ ಹಿಂಸೆ ನೀಡಿದ್ದರು ಎಂದು ಆರೋಪಿಸಲಾಗಿತ್ತು. ಚಾಕುವಿನಲ್ಲಿ ವೃದ್ದನ ಗಡ್ಡ ಕತ್ತರಿಸಿ, ಕೋಲಿನಿಂದ ಹಲ್ಲೆ ಮಾಡುತ್ತಿರುವುದನ್ನು ವಿಡಿಯೋ ವೈರಲ್ ಆಗಿತ್ತು.

ಘಟನೆಯ ಬಗ್ಗೆ ಸ್ವತಃ ವೃದ್ದನೆ ಅಳುತ್ತಾ ಮಾಹಿತಿ ನೀಡಿದ್ದರು. ಅದರಲ್ಲಿ, “ನನ್ನ ಹೆಸರು ಚೌದರಿ ಅಬ್ದುಲ್ ಸಮದ್ ಎಂದಾಗಿದ್ದು, ದೆಹಲಿ ಗಡಿಯ ಗಾಝಿಯಾಬಾದ್‌ನ ಲೋನಿಯಲ್ಲಿ ನನ್ನ ಮೇಲೆ ದಾಳಿ ನಡೆದಿದೆ. ಅಲ್ಲಿ ಇಬ್ಬರು ಆಟೋದವರು ನನ್ನ ಮುಖಕ್ಕೆ ರುಮಾಲನ್ನು ಮುಚ್ಚಿ ಕರೆದುಕೊಂಡು ಹೋದರು. ಬಳಿಕೆ ನನಗೆ ಹೊಡೆಯಲು ಪ್ರಾರಂಭಿಸಿದರು. ಅಲ್ಲಿಂದ ನನ್ನ ಕಾಡಿಗೆ ಕರೆದುಕೊಂಡುಹೋಗಿ ಒಂದು ಕೋಣೆಯಲ್ಲಿಟ್ಟರು. ಅವರು ಜೈಶ್ರೀರಾಮ್‌ ಘೋಷಣೆ ಕೂಗುವಂತೆ ಒತ್ತಾಯಿಸಿದ್ದರು, ನಾನು ಯಾ ಅಲ್ಲಾಹ್ ಎಂದು ಕೂಗಿದರೆ ಹೊಡೆಯುತ್ತಿದ್ದರು. ಪಿಸ್ತೂಲ್ ಹಣೆಗೆ ಇಟ್ಟಿದ್ದು, ನನ್ನ ಮೇಲೆ ಭೀಕರ ಹಲ್ಲೆ ನಡೆಸಿದ್ದು, ನಾವು ಮುಸ್ಲಿಮರಿಗೆ ಹಲ್ಲೆ ನಡೆಸಿದ್ದೇವೆ… ನನ್ನ ಗಡ್ಡವನ್ನು ಕಿತ್ತರು ಎಂದು” ಎಂದು ಹೇಳುವುದನ್ನು ಕಾಣಬಹುದಾಗಿದೆ.

ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ಲೋನಿ ಎಂಬಲ್ಲಿ ಜೂನ್ 05 ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿತ್ತು. ಆದರೆ ಘಟನೆಯಲ್ಲಿ ಯಾವುದೇ “ಕೋಮು ಆಯಾಮ” ಇಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ಮುಸ್ಲೀಂ ವ್ಯಕ್ತಿಯ ಮೇಲಿನ ಹಲ್ಲೆ ಸಮಾಜಕ್ಕೆ ಒಂದು ಕಳಂಕ : ರಾಹುಲ್ ಗಾಂಧಿ

ಗಾಜಿಯಾಬಾದ್ ಪೊಲೀಸರು ಪತ್ರಕರ್ತರಾದ ಮೊಹಮ್ಮದ್‌ ಜುಬೈರ್‌, ರಾಣಾ ಆಯೂಬ್‌, ಸಬಾ ನಖ್ವಿ, ಡಿಜಿಟಲ್ ಮಾಧ್ಯಮ ಸಂಸ್ಥೆಯಾದ ದಿ ವೈರ್‌, ಕಾಂಗ್ರೆಸ್‌ ನಾಯಕರಾದ ಸಲ್ಮಾನ್‌ ನಿಜಾಮಿ, ಮಸ್ಕೂರ್‌ ಉಸ್ಮಾನಿ, ಶಮಾ ಮೊಹಮ್ಮದ್‌ ಮತ್ತು ಟ್ವಿಟರ್‌ ಇಂಕ್‌ ಮತ್ತು ಟ್ವಿಟರ್‌ ಇಂಡಿಯಾ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ.

ಈ ಘಟನೆಯ ಬಗೆಗಿನ ಸತ್ಯಾಸತ್ಯತೆಗಳನ್ನು ಪರಿಶೀಲಿಸದೆ, ಕೋಮು ಬಣ್ಣವನ್ನು ಹಚ್ಚಿ ಟ್ವೀಟ್‌ ಮಾಡಿದ್ದಾರೆ ಎಂಬ ಆರೋಪವನ್ನು ಅವರ ಮೇಲೆ ಹಾಕಲಾಗಿದೆ. “ಕೋಮು ಭಾವನೆಗಳನ್ನು ಪ್ರಚೋದಿಸುವ ಸ್ಪಷ್ಟ ಉದ್ದೇಶದಿಂದ ಟ್ವೀಟ್‌ಗಳನ್ನು ಹಂಚಿಕೊಳ್ಳಲಾಗಿದೆ” ಎಂದು ಎಫ್‌ಐಆರ್ ಹೇಳುತ್ತದೆ.

ಒಕ್ಕೂಟ ಸರ್ಕಾರದ ಹೊಸ ಐಟಿ ನಿಯಮಗಳು ಜಾರಿಗೆ ಬಂದ ನಂತರ ಸಾಮಾಜಿಕ ಜಾಲತಾಣವೊಂದರ ವಿರುದ್ದ ದಾಖಲಾದ ಮೊದಲ ಪ್ರಕರಣವಾಗಿದೆ ಇದು. ಟ್ವಿಟರ್‌‌ ಹೊಸ ಐಟಿ ನಿಯಮಗಳನ್ನು ಪಾಲಿಸದ ಕಾರಣ ಕಾನೂನು ರಕ್ಷಣೆಯನ್ನು ಕಳೆದುಕೊಂಡಿದೆ ಸರ್ಕಾರದ ಮೂಲಗಳು ಬುಧವಾರ ಹೇಳಿವೆ.

“ಇದರಿಂದಾಗಿ ಇತರ ಪ್ರಕಾಶನ ಸಂಸ್ಥೆಯಂತೆ ಟ್ವಿಟರ್ ಕೂಡಾ ಭಾರತೀಯ ಕಾನೂನಿನ ಪ್ರಕಾರ ಪ್ರಕರಣವನ್ನು ಎದುರಿಸಬೇಕಾಗಬಹುದು. ಯಾಕೆಂದರೆ ಅವರು ಪ್ರಕರಣದ ವೀಡಿಯೊವನ್ನು ‘ತಿರುಚಲ್ಪಟ್ಟ ವಿಡಿಯೊ’ ಎಂದು ಅದನ್ನು ಗುರುತಿಸದ ಮಾಡದ ಕಾರಣಕ್ಕೆ ದಂಡನೆಯನ್ನು ಎದುರಿಸಬಹುದು ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಕೇಂದ್ರ ಸರ್ಕಾರ ಸದ್ದಿಲ್ಲದೇ CAA ಜಾರಿಗೊಳಿಸುತ್ತಿದೆ: ಸುಪ್ರೀಂನಲ್ಲಿ IUML ಪ್ರಶ್ನೆ

ಆದರೆ ಮಂಗಳವಾರ ಸಂಜೆ, ಟ್ವಿಟರ್ ಒಕ್ಕೂಟ ಸರ್ಕಾರದ ಹೊಸ ಕಾನೂನುಗಳ ಪ್ರಕಾರ ಮಧ್ಯಂತರವಾಗಿ ಮುಖ್ಯ ಅನುಸರಣಾ ಅಧಿಕಾರಿಯನ್ನು ನೇಮಿಸಿದೆ ಎಂದು ಹೇಳಿದೆ.

ಈ ಬಗ್ಗೆ ಒಕ್ಕೂಟದ ಸಚಿವ ರವಿಶಂಕರ್ ಪ್ರಸಾದ್ ಅವರು ಇಂದು ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ. ಅವರು, “ಯುಪಿಯಲ್ಲಿ ನಡೆದಿದೆ ಎನ್ನಲಾಗಿರುವ ನಕಲಿ ಸುದ್ದಿಗಳ ವಿರುದ್ಧದ ಹೋರಾಟದಲ್ಲಿ ಟ್ವಿಟರ್‌ನ ಅನಿಯಂತ್ರಿತತೆಗೆ ಉದಾಹರಣೆಯಾಗಿದೆ. ಟ್ವಿಟರ್ ತನ್ನ ಫ್ಯಾಕ್ಟ್‌‌ ಚೆಕ್‌ ಕಾರ್ಯವಿಧಾನದಲ್ಲಿ ಉತ್ಸಾಹದಿಂದ ಕೂಡಿದ್ದರೂ, ಯುಪಿ ಘಟನೆಯಂತಹ ಅನೇಕ ಸಂದರ್ಭಗಳಲ್ಲಿ ಅದು ಕಾರ್ಯನಿರ್ವಹಿಸುವಲ್ಲಿ ವಿಫಲವಾಗಿದೆ ಹಾಗೂ ಗೊಂದಲಕ್ಕೊಳಗಾಗಿದೆ. ಇದು ಸುಳ್ಳು ಮಾಹಿತಿಯ ವಿರುದ್ಧ ಹೋರಾಡುವಲ್ಲಿ ಅದರ ಅಸಂಗತತೆಯನ್ನು ಸೂಚಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಈ ಪ್ರಕರಣದಲ್ಲಿ ಯಾವುದೇ ಕೋಮು ಆಯಾಮವನ್ನು ಪೊಲೀಸರು ತಳ್ಳಿಹಾಕಿದ್ದಾರೆ. ಸೂಫಿ ಅಬ್ದುಲ್ ಸಮದ್ ಮಾರಾಟ ಮಾಡಿದ ಕೆಲವು ತಾಯತಗಳು ಕೆಲಸ ಮಾಡಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿ ಹಿಂದೂ ಮತ್ತು ಮುಸ್ಲಿಮ್‌ ಧರ್ಮಿಯರಾದ ಆರು ಜನರು ಅವರ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಜೈಶ್ರೀರಾಮ್ ಘೋಷಣೆ ಕೂಗುವಂತೆ ಮುಸ್ಲಿಂ ವೃದ್ಧನ ಮೇಲೆ ಹಲ್ಲೆ, ಗಡ್ಡ ಕಿತ್ತು ಚಿತ್ರಹಿಂಸೆ

“ಯುಪಿಯ ಬುಲಂದ್‌ಶಹರ್ ನಿವಾಸಿ ಅಬ್ದುಲ್ ಸಮದ್ ಎಂಬ ವೃದ್ಧನ ಮೇಲೆ ಕೆಲವರು ಹಲ್ಲೆ ನಡೆಸುತ್ತಿರುವ ವಿಡಿಯೋವೊಂದನ್ನು ನಾವು ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಈ ಘಟನೆಯ ಬಗ್ಗೆ ಮತ್ತಷ್ಟು ತನಿಖೆ ಮಾಡಿದಾಗ, ಸಂತ್ರಸ್ತ ವೃದ್ದನೂ ಜೂನ್ 5 ರಂದು ಲೋನಿ ಗಡಿ ಪ್ರದೇಶದಿಂದ ಬಂದಿದ್ದಾರೆ ಎಂದು ನಾವು ಕಂಡುಕೊಂಡಿದ್ದೇವೆ. ತಾಯತಗಳನ್ನು ತಯಾರಿಸುವ ಅಬ್ದುಲ್ ಸಮದ್ ಅವರು ಅಲ್ಲಿಂದ ಹಾಜಿಪುರ ಗ್ರಾಮಕ್ಕೆ ತೆರಳಿದ್ದಾರೆ. ಅವರಿಗೆ ಈಗಾಗಲೇ ಆರೋಪಿಗಳು ಯಾರೆಂದು ತಿಳಿದಿತ್ತು. ಅವರ ಮೇಲೆ ಅಸಮಾಧಾನಗೊಂಡಿದ್ದ ಆರೋಪಿಗಳೇ ಅವರನ್ನು ಕರೆದಿದ್ದರು. ಈಗಾಗಲೇ ಹಲವರ ಬಂಧನಗಳನ್ನು ನಡೆಸಲಾಗಿದೆ” ಎಂದು ಗಾಜಿಯಾಬಾದ್ ಪೊಲೀಸ್ ಅಧಿಕಾರಿ ಇರಾಜ್ ರಾಜಾ ವಿಡಿಯೊವೊಂದರಲ್ಲಿ ಹೇಳಿದ್ದಾರೆ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಮೂವರನ್ನು ಬಂಧಿಸಲಾಗಿದೆ.

ಟ್ವಿಟರ್ ಮತ್ತು ಇತರ ಎಂಟು ಜನರ ವಿರುದ್ಧ ಐಪಿಸಿ ಸೆಕ್ಷನ್ 153 (ಗಲಭೆಗೆ ಪ್ರಚೋದನೆ), 153 ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 295 ಎ (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ), 505 (ಕಿಡಿಗೇಡಿತನ), 120 ಬಿ (ಕ್ರಿಮಿನಲ್ ಪಿತೂರಿ) ಮತ್ತು 34 (ಸಾಮಾನ್ಯ ಉದ್ದೇಶ) ಮುಂತಾದ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಸಂಚಾರಿ ವಿಜಯ್‌ ನಿಧನಕ್ಕೆ ಕನ್ನಡದಲ್ಲಿ ಸಂತಾಪ ಸೂಚಿಸಿದ ಅಮೆರಿಕಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...