Homeಮುಖಪುಟಯುಪಿ ಮುಸ್ಲಿಂ ವೃದ್ದನ ಮೇಲಿನ ದಾಳಿ ಪ್ರಕರಣ: ಟ್ವಿಟರ್‌‌, ಪತ್ರಕರ್ತರು, ರಾಜಕೀಯ ನಾಯಕರ ವಿರುದ್ದ FIR!

ಯುಪಿ ಮುಸ್ಲಿಂ ವೃದ್ದನ ಮೇಲಿನ ದಾಳಿ ಪ್ರಕರಣ: ಟ್ವಿಟರ್‌‌, ಪತ್ರಕರ್ತರು, ರಾಜಕೀಯ ನಾಯಕರ ವಿರುದ್ದ FIR!

- Advertisement -
- Advertisement -

ಉತ್ತರ ಪ್ರದೇಶದ ಗಾಝಿಯಾಬಾದ್‌‌ನಲ್ಲಿ ಪ್ರಾರ್ಥನೆ ಮುಗಿಸಿ ಮನೆಗೆ ತೆರಳುತ್ತಿದ್ದ ಮುಸ್ಲಿಂ ವೃದ್ಧನ ಮೇಲೆ ಚಿತ್ರಹಿಂಸೆ ನೀಡಿರುವ ಘಟನೆಯ ಕುರಿತು ಟ್ವೀಟ್ ಮಾಡಿ ಕೋಮು ಪ್ರಚೋದನೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಟ್ವಿಟರ್‌, ಹಲವಾರು ಪತ್ರಕರ್ತರು ಮತ್ತು ಕಾಂಗ್ರೆಸ್ ನಾಯಕರು ಸೇರಿದಂತೆ ಒಟ್ಟು 9 ಹೆಸರುಗಳ ಮೇಲೆ ಗಾಜಿಯಾಬಾದ್ ಪೊಲೀಸರು ಎಫ್‌ಐಆರ್‌‌ ದಾಖಲಿಸಿದ್ದಾರೆ.

ಸಂತ್ರಸ್ತ ವೃದ್ಧ ಅಬ್ದುಲ್ ಸಮದ್ ಎಂಬವರು ಪ್ರಾರ್ಥನೆ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಆಟೋದಲ್ಲಿ ಬಂದ ದುಷ್ಕರ್ಮಿಗಳು ಅವರನ್ನು ಕಾಡಿನೊಳಗೆ ಎಳೆದೊಯ್ದು ಚಿತ್ರ ಹಿಂಸೆ ನೀಡಿದ್ದರು ಎಂದು ಆರೋಪಿಸಲಾಗಿತ್ತು. ಚಾಕುವಿನಲ್ಲಿ ವೃದ್ದನ ಗಡ್ಡ ಕತ್ತರಿಸಿ, ಕೋಲಿನಿಂದ ಹಲ್ಲೆ ಮಾಡುತ್ತಿರುವುದನ್ನು ವಿಡಿಯೋ ವೈರಲ್ ಆಗಿತ್ತು.

ಘಟನೆಯ ಬಗ್ಗೆ ಸ್ವತಃ ವೃದ್ದನೆ ಅಳುತ್ತಾ ಮಾಹಿತಿ ನೀಡಿದ್ದರು. ಅದರಲ್ಲಿ, “ನನ್ನ ಹೆಸರು ಚೌದರಿ ಅಬ್ದುಲ್ ಸಮದ್ ಎಂದಾಗಿದ್ದು, ದೆಹಲಿ ಗಡಿಯ ಗಾಝಿಯಾಬಾದ್‌ನ ಲೋನಿಯಲ್ಲಿ ನನ್ನ ಮೇಲೆ ದಾಳಿ ನಡೆದಿದೆ. ಅಲ್ಲಿ ಇಬ್ಬರು ಆಟೋದವರು ನನ್ನ ಮುಖಕ್ಕೆ ರುಮಾಲನ್ನು ಮುಚ್ಚಿ ಕರೆದುಕೊಂಡು ಹೋದರು. ಬಳಿಕೆ ನನಗೆ ಹೊಡೆಯಲು ಪ್ರಾರಂಭಿಸಿದರು. ಅಲ್ಲಿಂದ ನನ್ನ ಕಾಡಿಗೆ ಕರೆದುಕೊಂಡುಹೋಗಿ ಒಂದು ಕೋಣೆಯಲ್ಲಿಟ್ಟರು. ಅವರು ಜೈಶ್ರೀರಾಮ್‌ ಘೋಷಣೆ ಕೂಗುವಂತೆ ಒತ್ತಾಯಿಸಿದ್ದರು, ನಾನು ಯಾ ಅಲ್ಲಾಹ್ ಎಂದು ಕೂಗಿದರೆ ಹೊಡೆಯುತ್ತಿದ್ದರು. ಪಿಸ್ತೂಲ್ ಹಣೆಗೆ ಇಟ್ಟಿದ್ದು, ನನ್ನ ಮೇಲೆ ಭೀಕರ ಹಲ್ಲೆ ನಡೆಸಿದ್ದು, ನಾವು ಮುಸ್ಲಿಮರಿಗೆ ಹಲ್ಲೆ ನಡೆಸಿದ್ದೇವೆ… ನನ್ನ ಗಡ್ಡವನ್ನು ಕಿತ್ತರು ಎಂದು” ಎಂದು ಹೇಳುವುದನ್ನು ಕಾಣಬಹುದಾಗಿದೆ.

ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ಲೋನಿ ಎಂಬಲ್ಲಿ ಜೂನ್ 05 ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿತ್ತು. ಆದರೆ ಘಟನೆಯಲ್ಲಿ ಯಾವುದೇ “ಕೋಮು ಆಯಾಮ” ಇಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ಮುಸ್ಲೀಂ ವ್ಯಕ್ತಿಯ ಮೇಲಿನ ಹಲ್ಲೆ ಸಮಾಜಕ್ಕೆ ಒಂದು ಕಳಂಕ : ರಾಹುಲ್ ಗಾಂಧಿ

ಗಾಜಿಯಾಬಾದ್ ಪೊಲೀಸರು ಪತ್ರಕರ್ತರಾದ ಮೊಹಮ್ಮದ್‌ ಜುಬೈರ್‌, ರಾಣಾ ಆಯೂಬ್‌, ಸಬಾ ನಖ್ವಿ, ಡಿಜಿಟಲ್ ಮಾಧ್ಯಮ ಸಂಸ್ಥೆಯಾದ ದಿ ವೈರ್‌, ಕಾಂಗ್ರೆಸ್‌ ನಾಯಕರಾದ ಸಲ್ಮಾನ್‌ ನಿಜಾಮಿ, ಮಸ್ಕೂರ್‌ ಉಸ್ಮಾನಿ, ಶಮಾ ಮೊಹಮ್ಮದ್‌ ಮತ್ತು ಟ್ವಿಟರ್‌ ಇಂಕ್‌ ಮತ್ತು ಟ್ವಿಟರ್‌ ಇಂಡಿಯಾ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ.

ಈ ಘಟನೆಯ ಬಗೆಗಿನ ಸತ್ಯಾಸತ್ಯತೆಗಳನ್ನು ಪರಿಶೀಲಿಸದೆ, ಕೋಮು ಬಣ್ಣವನ್ನು ಹಚ್ಚಿ ಟ್ವೀಟ್‌ ಮಾಡಿದ್ದಾರೆ ಎಂಬ ಆರೋಪವನ್ನು ಅವರ ಮೇಲೆ ಹಾಕಲಾಗಿದೆ. “ಕೋಮು ಭಾವನೆಗಳನ್ನು ಪ್ರಚೋದಿಸುವ ಸ್ಪಷ್ಟ ಉದ್ದೇಶದಿಂದ ಟ್ವೀಟ್‌ಗಳನ್ನು ಹಂಚಿಕೊಳ್ಳಲಾಗಿದೆ” ಎಂದು ಎಫ್‌ಐಆರ್ ಹೇಳುತ್ತದೆ.

ಒಕ್ಕೂಟ ಸರ್ಕಾರದ ಹೊಸ ಐಟಿ ನಿಯಮಗಳು ಜಾರಿಗೆ ಬಂದ ನಂತರ ಸಾಮಾಜಿಕ ಜಾಲತಾಣವೊಂದರ ವಿರುದ್ದ ದಾಖಲಾದ ಮೊದಲ ಪ್ರಕರಣವಾಗಿದೆ ಇದು. ಟ್ವಿಟರ್‌‌ ಹೊಸ ಐಟಿ ನಿಯಮಗಳನ್ನು ಪಾಲಿಸದ ಕಾರಣ ಕಾನೂನು ರಕ್ಷಣೆಯನ್ನು ಕಳೆದುಕೊಂಡಿದೆ ಸರ್ಕಾರದ ಮೂಲಗಳು ಬುಧವಾರ ಹೇಳಿವೆ.

“ಇದರಿಂದಾಗಿ ಇತರ ಪ್ರಕಾಶನ ಸಂಸ್ಥೆಯಂತೆ ಟ್ವಿಟರ್ ಕೂಡಾ ಭಾರತೀಯ ಕಾನೂನಿನ ಪ್ರಕಾರ ಪ್ರಕರಣವನ್ನು ಎದುರಿಸಬೇಕಾಗಬಹುದು. ಯಾಕೆಂದರೆ ಅವರು ಪ್ರಕರಣದ ವೀಡಿಯೊವನ್ನು ‘ತಿರುಚಲ್ಪಟ್ಟ ವಿಡಿಯೊ’ ಎಂದು ಅದನ್ನು ಗುರುತಿಸದ ಮಾಡದ ಕಾರಣಕ್ಕೆ ದಂಡನೆಯನ್ನು ಎದುರಿಸಬಹುದು ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಕೇಂದ್ರ ಸರ್ಕಾರ ಸದ್ದಿಲ್ಲದೇ CAA ಜಾರಿಗೊಳಿಸುತ್ತಿದೆ: ಸುಪ್ರೀಂನಲ್ಲಿ IUML ಪ್ರಶ್ನೆ

ಆದರೆ ಮಂಗಳವಾರ ಸಂಜೆ, ಟ್ವಿಟರ್ ಒಕ್ಕೂಟ ಸರ್ಕಾರದ ಹೊಸ ಕಾನೂನುಗಳ ಪ್ರಕಾರ ಮಧ್ಯಂತರವಾಗಿ ಮುಖ್ಯ ಅನುಸರಣಾ ಅಧಿಕಾರಿಯನ್ನು ನೇಮಿಸಿದೆ ಎಂದು ಹೇಳಿದೆ.

ಈ ಬಗ್ಗೆ ಒಕ್ಕೂಟದ ಸಚಿವ ರವಿಶಂಕರ್ ಪ್ರಸಾದ್ ಅವರು ಇಂದು ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ. ಅವರು, “ಯುಪಿಯಲ್ಲಿ ನಡೆದಿದೆ ಎನ್ನಲಾಗಿರುವ ನಕಲಿ ಸುದ್ದಿಗಳ ವಿರುದ್ಧದ ಹೋರಾಟದಲ್ಲಿ ಟ್ವಿಟರ್‌ನ ಅನಿಯಂತ್ರಿತತೆಗೆ ಉದಾಹರಣೆಯಾಗಿದೆ. ಟ್ವಿಟರ್ ತನ್ನ ಫ್ಯಾಕ್ಟ್‌‌ ಚೆಕ್‌ ಕಾರ್ಯವಿಧಾನದಲ್ಲಿ ಉತ್ಸಾಹದಿಂದ ಕೂಡಿದ್ದರೂ, ಯುಪಿ ಘಟನೆಯಂತಹ ಅನೇಕ ಸಂದರ್ಭಗಳಲ್ಲಿ ಅದು ಕಾರ್ಯನಿರ್ವಹಿಸುವಲ್ಲಿ ವಿಫಲವಾಗಿದೆ ಹಾಗೂ ಗೊಂದಲಕ್ಕೊಳಗಾಗಿದೆ. ಇದು ಸುಳ್ಳು ಮಾಹಿತಿಯ ವಿರುದ್ಧ ಹೋರಾಡುವಲ್ಲಿ ಅದರ ಅಸಂಗತತೆಯನ್ನು ಸೂಚಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಈ ಪ್ರಕರಣದಲ್ಲಿ ಯಾವುದೇ ಕೋಮು ಆಯಾಮವನ್ನು ಪೊಲೀಸರು ತಳ್ಳಿಹಾಕಿದ್ದಾರೆ. ಸೂಫಿ ಅಬ್ದುಲ್ ಸಮದ್ ಮಾರಾಟ ಮಾಡಿದ ಕೆಲವು ತಾಯತಗಳು ಕೆಲಸ ಮಾಡಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿ ಹಿಂದೂ ಮತ್ತು ಮುಸ್ಲಿಮ್‌ ಧರ್ಮಿಯರಾದ ಆರು ಜನರು ಅವರ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಜೈಶ್ರೀರಾಮ್ ಘೋಷಣೆ ಕೂಗುವಂತೆ ಮುಸ್ಲಿಂ ವೃದ್ಧನ ಮೇಲೆ ಹಲ್ಲೆ, ಗಡ್ಡ ಕಿತ್ತು ಚಿತ್ರಹಿಂಸೆ

“ಯುಪಿಯ ಬುಲಂದ್‌ಶಹರ್ ನಿವಾಸಿ ಅಬ್ದುಲ್ ಸಮದ್ ಎಂಬ ವೃದ್ಧನ ಮೇಲೆ ಕೆಲವರು ಹಲ್ಲೆ ನಡೆಸುತ್ತಿರುವ ವಿಡಿಯೋವೊಂದನ್ನು ನಾವು ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಈ ಘಟನೆಯ ಬಗ್ಗೆ ಮತ್ತಷ್ಟು ತನಿಖೆ ಮಾಡಿದಾಗ, ಸಂತ್ರಸ್ತ ವೃದ್ದನೂ ಜೂನ್ 5 ರಂದು ಲೋನಿ ಗಡಿ ಪ್ರದೇಶದಿಂದ ಬಂದಿದ್ದಾರೆ ಎಂದು ನಾವು ಕಂಡುಕೊಂಡಿದ್ದೇವೆ. ತಾಯತಗಳನ್ನು ತಯಾರಿಸುವ ಅಬ್ದುಲ್ ಸಮದ್ ಅವರು ಅಲ್ಲಿಂದ ಹಾಜಿಪುರ ಗ್ರಾಮಕ್ಕೆ ತೆರಳಿದ್ದಾರೆ. ಅವರಿಗೆ ಈಗಾಗಲೇ ಆರೋಪಿಗಳು ಯಾರೆಂದು ತಿಳಿದಿತ್ತು. ಅವರ ಮೇಲೆ ಅಸಮಾಧಾನಗೊಂಡಿದ್ದ ಆರೋಪಿಗಳೇ ಅವರನ್ನು ಕರೆದಿದ್ದರು. ಈಗಾಗಲೇ ಹಲವರ ಬಂಧನಗಳನ್ನು ನಡೆಸಲಾಗಿದೆ” ಎಂದು ಗಾಜಿಯಾಬಾದ್ ಪೊಲೀಸ್ ಅಧಿಕಾರಿ ಇರಾಜ್ ರಾಜಾ ವಿಡಿಯೊವೊಂದರಲ್ಲಿ ಹೇಳಿದ್ದಾರೆ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಮೂವರನ್ನು ಬಂಧಿಸಲಾಗಿದೆ.

ಟ್ವಿಟರ್ ಮತ್ತು ಇತರ ಎಂಟು ಜನರ ವಿರುದ್ಧ ಐಪಿಸಿ ಸೆಕ್ಷನ್ 153 (ಗಲಭೆಗೆ ಪ್ರಚೋದನೆ), 153 ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 295 ಎ (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ), 505 (ಕಿಡಿಗೇಡಿತನ), 120 ಬಿ (ಕ್ರಿಮಿನಲ್ ಪಿತೂರಿ) ಮತ್ತು 34 (ಸಾಮಾನ್ಯ ಉದ್ದೇಶ) ಮುಂತಾದ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಸಂಚಾರಿ ವಿಜಯ್‌ ನಿಧನಕ್ಕೆ ಕನ್ನಡದಲ್ಲಿ ಸಂತಾಪ ಸೂಚಿಸಿದ ಅಮೆರಿಕಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...