Homeಮುಖಪುಟನೇಮಕಾತಿಯಲ್ಲಿ ಹಿನ್ನಡೆ ಕಾರಣ: ಹೊಸ ಸಿಬಿಐ ನಿರ್ದೇಶಕರ ಅಧಿಕಾರವಧಿ ಕಡಿತಕ್ಕೆ ಮುಂದಾದ ಕೇಂದ್ರ?

ನೇಮಕಾತಿಯಲ್ಲಿ ಹಿನ್ನಡೆ ಕಾರಣ: ಹೊಸ ಸಿಬಿಐ ನಿರ್ದೇಶಕರ ಅಧಿಕಾರವಧಿ ಕಡಿತಕ್ಕೆ ಮುಂದಾದ ಕೇಂದ್ರ?

ಸುಪ್ರೀಂ ಕೋರ್ಟ್ ಮತ್ತು ದೆಹಲಿ ವಿಶೇಷ ಪೊಲೀಸ್ ಸ್ಥಾಪನಾ ಕಾಯ್ದೆ ಸಿಬಿಐ ನಿರ್ದೇಶಕರಿಗೆ ಕನಿಷ್ಠ ಎರಡು ವರ್ಷಗಳ ಅವಧಿ ನಿಗಧಿಪಡಿಸಿವೆ.

- Advertisement -
- Advertisement -

ಫೆಬ್ರವರಿಯಿಂದ ಖಾಲಿಯಿದ್ದ ಸಿಬಿಐ ನಿರ್ದೇಶಕರ ಹುದ್ದೆಗೆ ಕಳೆದ ತಿಂಗಳು 1985ರ ಬ್ಯಾಚ್‌ನ ಮಹಾರಾಷ್ಟ್ರ ಕೇಡರ್‌ನ ಐಪಿಎಸ್ ಅಧಿಕಾರಿ ಸುಬೋಧ್ ಕುಮಾರ್ ಜೈಸ್ವಾಲ್ ಅವರನ್ನು ತ್ರಿಸದಸ್ಯ ಸಮಿತಿಯು ನೇಮಕ ಮಾಡಿತ್ತು. ಇದು ಪ್ರಧಾನಿ ನರೇಂದ್ರ ಮೋದಿಯವರಿಗೆ ಇರಿಸುಮುರಿಸು ತಂದಿತ್ತು ಏಕೆಂದರೆ ಕೇಂದ್ರ ಸರ್ಕಾರವು ಸಿದ್ದಪಡಿಸಿದ್ದ ಪಟ್ಟಿಯಲ್ಲಿ ಗಡಿ ಭದ್ರತಾ ಪಡೆ ಮುಖ್ಯಸ್ಥ ರಾಕೇಶ್ ಅಸ್ತಾನಾ ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆ ಮುಖ್ಯಸ್ಥ ವೈ.ಸಿ. ಮೋದಿ ಅವರ ಹೆಸರುಗಳಿದ್ದವು. ಈ ಇಬ್ಬರೂ ಬಿಜೆಪಿಗೆ ಆಪ್ತರಾಗಿದ್ದರು ಎನ್ನಲಾಗಿದೆ. ಆದರೆ ಮುಖ್ಯ ನ್ಯಾಯಮೂರ್ತಿ ರಮಣ ಅವರು, “ಈ ಸ್ಥಾನಕ್ಕೆ ಆರು ತಿಂಗಳಿಗಿಂತ ಕಡಿಮೆ ಅವಧಿಯ ಸೇವೆಯನ್ನು ಹೊಂದಿರುವ ಪೊಲೀಸ್ ಅಧಿಕಾರಿಯನ್ನು ಪರಿಗಣಿಸಬಾರದು” ಎಂದು ಒತ್ತಾಯಿಸಿದ್ದರಿಂದ ಕೇಂದ್ರ ತಯಾರಿಸಿದ್ದ ಪಟ್ಟಿಯು ಹಿನ್ನಲೆಗೆ ಸರಿದಿತ್ತು.

ಈಗ ಕೇಂದ್ರ ಸರ್ಕಾರ ಅವರ ಅಧಿಕಾರವಧಿಯಲ್ಲಿ ಕಡಿತಗೊಳಿಸುವ ಮೂಲಕ ಮತ್ತೊಂದು ರೀತಿಯಲ್ಲಿ ಹೊಸ ಸಿಬಿಐ ನಿರ್ದೇಶಕರಿಗೆ ತೊಂದರೆ ಕೊಡಲು ಮುಂದಾಗಿದೆ ಎಂದು ದಿ ವೈರ್ ವಿಸ್ತೃತ ವರದಿ ಮಾಡಿದೆ. ಸಾಮಾನ್ಯವಾಗಿ ನಿರ್ದೇಶಕರ ಅಧಿಕಾರವಧಿ 2 ವರ್ಷಗಳಿದ್ದರೂ ಸಹ ಇವರ ನೇಮಕಾತಿಯಲ್ಲಿ ಮುಂದಿನ ಆದೇಶದವರೆಗೆ ಎಂದು ಸೇರಿಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಮೇ 25 ರಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಹೊರಡಿಸಿದ ಟಿಪ್ಪಣಿಯಲ್ಲಿ, “ಕ್ಯಾಬಿನೆಟ್‌ನ ನೇಮಕಾತಿ ಸಮಿತಿಯು ಶಿಫಾರಸು ಮಾಡಿದ ಸಮಿತಿಯ ಆಧಾರದ ಮೇಲೆ, ಐಪಿಎಸ್ (ಎಂಹೆಚ್ 1985: ಶ್ರೀ ಸುಬೋಧ್ ಕುಮಾರ್ ಜೈಸ್ವಾಲ್ ಅವರ ನೇಮಕಕ್ಕೆ ಅನುಮೋದನೆ ನೀಡಿದೆ), ಸಿಬಿಐನ ನಿರ್ದೇಶಕರಾಗಿ, ಕಚೇರಿಯ ಉಸ್ತುವಾರಿ ವಹಿಸಿಕೊಂಡ ದಿನಾಂಕದಿಂದ ಎರಡು ವರ್ಷಗಳವರೆಗೆ ಅಥವಾ ಯಾವುದು ಮೊದಲಿನದೋ ಅಂತಹ ಮುಂದಿನ ಆದೇಶದವರೆಗೆ” ಎಂದು ಬರೆಯಲಾಗಿದೆ.

ಸಿಬಿಐ ಹೊಸ ನಿರ್ದೇಶಕರ ಅಧಿಕಾರಾವಧಿಯನ್ನು ಏಕೆ ಅನಿಯಂತ್ರಿತವಾಗಿ ಬದಲಾಯಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂಬ ಪ್ರಶ್ನೆಗೆ ಅದು ಉತ್ತರ ನೀಡಿಲ್ಲ. ಸುಬೋಧ್ ಕುಮಾರ್ ಜೈಸ್ವಾಲ್ ಅವರ ಮೊದಲು, ನರೇಂದ್ರ ಮೋದಿ ಸರ್ಕಾರವು ಹಿಂದಿನ ಮೂರು ಸಿಬಿಐ ಮುಖ್ಯಸ್ಥರಾದ ಅನಿಲ್ ಸಿನ್ಹಾ, ಅಲೋಕ್ ವರ್ಮಾ ಮತ್ತು ರಿಷಿ ಕುಮಾರ್ ಶುಕ್ಲಾ ಅವರ ನೇಮಕಾತಿಗಳನ್ನು ಹಿಂದಿನ ಮಾನದಂಡಗಳ ಮೇಲೆ ಮಾಡಿದ್ದರು. ಅಂದರೆ ಅವರ ಅಧಿಕಾರವದಿ 2 ವರ್ಷ ಇತ್ತು ಮತ್ತು ಆಗ ಮುಂದಿನ ಆದೇಶದವರೆಗೆ ಎಂಬ ಷರತ್ತು ಇರಲಿಲ್ಲ. ಆದರೆ ಹೀಗೆಕೆ ಎಂಬ ಪ್ರಶ್ನೆ ಎದ್ದಿದೆ.

ಈ ಆದೇಶಕ್ಕೆ ಪ್ರತಿಕ್ರಿಯೆಯಾಗಿ, ಹರಿಯಾಣ ಮೂಲದ ವಕೀಲ ಮತ್ತು ಆರ್‌ಟಿಐ ಕಾರ್ಯಕರ್ತ ಹೇಮಂತ್ ಕುಮಾರ್ ಅವರು ಜೂನ್ 4 ರಂದು ಡಿಒಪಿಟಿಗೆ ಮಾಹಿತಿ ಹಕ್ಕು (ಆರ್‌ಟಿಐ) ಅರ್ಜಿಯನ್ನು ಸಲ್ಲಿಸಿದ್ದಾರೆ. ಮುಂದಿನ ಆದೇಶದವರೆಗೆ ಎಂಬ ಪದಗಳನ್ನು ಏಕೆ ಸೇರಿಸಲಾಗಿದೆ ಎಂಬ ಮಾಹಿತಿ ನೀಡುವಂತೆ ಮನವಿ ಮಾಡಿದ್ದರು.

ಅವರ ಪ್ರಶ್ನೆಗೆ ಪ್ರತಿಯಾಗಿ ಜೂನ್ 14 ರಂದು “ನೀವು ಕೇಳಿದ ಮಾಹಿತಿಯು ಪ್ರಶ್ನೆ / ಸ್ಪಷ್ಟೀಕರಣ ಸ್ವರೂಪದ್ದಾಗಿದೆ ಮತ್ತು ಸ್ಪಷ್ಟೀಕರಣ ಅಥವಾ ವ್ಯಾಖ್ಯಾನಿಸುವುದು ಆರ್‌ಟಿಐ ಕಾಯ್ದೆ, 2005 ರ ವಿಭಾಗ 2 (ಎಫ್) ಅಡಿಯಲ್ಲಿ ವ್ಯಾಖ್ಯಾನಿಸಲಾದ ಮಾಹಿತಿಯ ವ್ಯಾಪ್ತಿಯನ್ನು ಮೀರಿದೆ, ಹಾಗಾಗಿ ಉತ್ತರಿಸಲು ಬರುವುದಿಲ್ಲ” ಎಂಬ ಪ್ರತ್ಯುತ್ತರ ಬಂದಿದೆ.

ಅಲ್ಲದೆ ಕುಮಾರ್ ಅವರು ಅರ್ಜಿಯಲ್ಲಿ “ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ ಕಾಯ್ದೆ, 1946 ರ ಸೆಕ್ಷನ್ 4 ಬಿ (ಐ) ಪ್ರಕಾರ, ಸಿಬಿಐ ನಿರ್ದೇಶಕರು, ತಮ್ಮ ಸೇವಾ ಪರಿಸ್ಥಿತಿಗಳಿಗೆ ಸಂಬಂಧಿಸಿದ ನಿಯಮಗಳಲ್ಲಿ ವ್ಯತಿರಿಕ್ತವಾಗಿ ಏನಾದರೂ ಇದ್ದರೂ, ಅವರು ಅವರು ಅಧಿಕಾರ ವಹಿಸಿಕೊಂಡ ದಿನಾಂಕದಿಂದ ಎರಡು ವರ್ಷಗಳಿಗಿಂತ ಕಡಿಮೆಯಿಲ್ಲದಂತೆ ಅಧಿಕಾರವನ್ನು ಮುಂದುವರಿಸುತ್ತಾರೆ” ಎಂದಿರುವುದನ್ನು ಎತ್ತಿ ತೋರಿಸಿದ್ದಾರೆ.

ಉತ್ತರಕ್ಕೆ ಪ್ರತಿಕ್ರಿಯಿಸಿದ ಕುಮಾರ್, ತಾನು ಎಂದಿಗೂ ಸ್ಪಷ್ಟೀಕರಣವನ್ನು ಕೇಳಲಿಲ್ಲ ಆದರೆ ಸಿಬಿಐ ನಿರ್ದೇಶಕರ ಅಧಿಕಾರಾವಧಿಯನ್ನು ನಿರ್ದಿಷ್ಟಪಡಿಸಲು ಇಲಾಖೆಯ ಆದೇಶದಲ್ಲಿ ಬಳಸಲಾದ ಪದಗಳ ಬಗ್ಗೆ ಮಾತ್ರ ವಿವರಗಳನ್ನು ಕೋರಿದ್ದೇನೆ ಎಂದು ಹೇಳಿದ್ದಾರೆ.

1997 ರ ಡಿಸೆಂಬರ್‌ನಲ್ಲಿ, ವಿನೀತ್ ನರೈನ್ ವರ್ಸಸ್ ಯೂನಿಯನ್ ಆಫ್ ಇಂಡಿಯಾ ಪ್ರಕರಣದಲ್ಲಿ ಸಿಬಿಐ ನಿರ್ದೇಶಕರ ಕನಿಷ್ಠ ಅಧಿಕಾರಾವಧಿಯು ಎರಡು ವರ್ಷಗಳು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಆದರೂ ಕೇಂದ್ರ ಸರ್ಕಾರ ಅದನ್ನು ಉಲ್ಲಂಘಿಸುತ್ತಿದೆ ಎಂದು ಕುಮಾರ್ ಆರೋಪಿಸಿದ್ದಾರೆ.

ಸಿಬಿಐ ನಿರ್ದೇಶಕರ ನೇಮಕಾತಿಯನ್ನು ಮೂರು ಸದಸ್ಯರ ಸಮಿತಿಯು ನಿರ್ಧರಿಸುತ್ತದೆ. ಅದರಲ್ಲಿ ಪ್ರಧಾನ ಮಂತ್ರಿ ಆ ಸಮಿತಿಯ ಅಧ್ಯಕ್ಷರಾದರೆ, ಭಾರತದ ಮುಖ್ಯ ನ್ಯಾಯಮೂರ್ತಿ ಅಥವಾ ಅವರು ನೇಮಿಸುವ ಸದಸ್ಯರು ಮತ್ತು ಪ್ರತಿಪಕ್ಷದ ನಾಯಕರು ಇರುತ್ತಾರೆ.

ಒಟ್ಟಾರೆ ಈ ಪ್ರಕರಣದಲ್ಲಿ ತಾನು ಬಯಸಿದವರು ಸಿಬಿಐ ನಿರ್ದೇಶಕರಾಗದ ಕಾರಣ ಕೇಂದ್ರ ಸರ್ಕಾರ ಅವರ ಅಧಿಕಾರಾವಧಿಯನ್ನು ಕಡಿಮೆ ಮಾಡಲು ಯತ್ನಿಸುತ್ತಿದೆ ಎಂಬ ಆರೋಪಗಳಿಗೆ ಪುಷ್ಟಿ ಕೊಡುವಂತೆ ನಡೆದುಕೊಳ್ಳುತ್ತಿದೆ ಎಂಬುದನ್ನು ಮೇಲಿನ ಆಧಾರಗಳು ಸೂಚಿಸುತ್ತವೆ.

ಕೃಪೆ: ದಿ ವೈರ್


ಇದನ್ನೂ ಓದಿ: ಸಿಬಿಐ ಮುಖ್ಯಸ್ಥರಾಗಿ ಆಯ್ಕೆಯಾದ ಸುಬೋಧ್ ಕುಮಾರ್ ಜೈಸ್ವಾಲ್; ಕೇಂದ್ರಕ್ಕೆ ಹಿನ್ನಡೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...