Homeಮುಖಪುಟನೇಮಕಾತಿಯಲ್ಲಿ ಹಿನ್ನಡೆ ಕಾರಣ: ಹೊಸ ಸಿಬಿಐ ನಿರ್ದೇಶಕರ ಅಧಿಕಾರವಧಿ ಕಡಿತಕ್ಕೆ ಮುಂದಾದ ಕೇಂದ್ರ?

ನೇಮಕಾತಿಯಲ್ಲಿ ಹಿನ್ನಡೆ ಕಾರಣ: ಹೊಸ ಸಿಬಿಐ ನಿರ್ದೇಶಕರ ಅಧಿಕಾರವಧಿ ಕಡಿತಕ್ಕೆ ಮುಂದಾದ ಕೇಂದ್ರ?

ಸುಪ್ರೀಂ ಕೋರ್ಟ್ ಮತ್ತು ದೆಹಲಿ ವಿಶೇಷ ಪೊಲೀಸ್ ಸ್ಥಾಪನಾ ಕಾಯ್ದೆ ಸಿಬಿಐ ನಿರ್ದೇಶಕರಿಗೆ ಕನಿಷ್ಠ ಎರಡು ವರ್ಷಗಳ ಅವಧಿ ನಿಗಧಿಪಡಿಸಿವೆ.

- Advertisement -
- Advertisement -

ಫೆಬ್ರವರಿಯಿಂದ ಖಾಲಿಯಿದ್ದ ಸಿಬಿಐ ನಿರ್ದೇಶಕರ ಹುದ್ದೆಗೆ ಕಳೆದ ತಿಂಗಳು 1985ರ ಬ್ಯಾಚ್‌ನ ಮಹಾರಾಷ್ಟ್ರ ಕೇಡರ್‌ನ ಐಪಿಎಸ್ ಅಧಿಕಾರಿ ಸುಬೋಧ್ ಕುಮಾರ್ ಜೈಸ್ವಾಲ್ ಅವರನ್ನು ತ್ರಿಸದಸ್ಯ ಸಮಿತಿಯು ನೇಮಕ ಮಾಡಿತ್ತು. ಇದು ಪ್ರಧಾನಿ ನರೇಂದ್ರ ಮೋದಿಯವರಿಗೆ ಇರಿಸುಮುರಿಸು ತಂದಿತ್ತು ಏಕೆಂದರೆ ಕೇಂದ್ರ ಸರ್ಕಾರವು ಸಿದ್ದಪಡಿಸಿದ್ದ ಪಟ್ಟಿಯಲ್ಲಿ ಗಡಿ ಭದ್ರತಾ ಪಡೆ ಮುಖ್ಯಸ್ಥ ರಾಕೇಶ್ ಅಸ್ತಾನಾ ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆ ಮುಖ್ಯಸ್ಥ ವೈ.ಸಿ. ಮೋದಿ ಅವರ ಹೆಸರುಗಳಿದ್ದವು. ಈ ಇಬ್ಬರೂ ಬಿಜೆಪಿಗೆ ಆಪ್ತರಾಗಿದ್ದರು ಎನ್ನಲಾಗಿದೆ. ಆದರೆ ಮುಖ್ಯ ನ್ಯಾಯಮೂರ್ತಿ ರಮಣ ಅವರು, “ಈ ಸ್ಥಾನಕ್ಕೆ ಆರು ತಿಂಗಳಿಗಿಂತ ಕಡಿಮೆ ಅವಧಿಯ ಸೇವೆಯನ್ನು ಹೊಂದಿರುವ ಪೊಲೀಸ್ ಅಧಿಕಾರಿಯನ್ನು ಪರಿಗಣಿಸಬಾರದು” ಎಂದು ಒತ್ತಾಯಿಸಿದ್ದರಿಂದ ಕೇಂದ್ರ ತಯಾರಿಸಿದ್ದ ಪಟ್ಟಿಯು ಹಿನ್ನಲೆಗೆ ಸರಿದಿತ್ತು.

ಈಗ ಕೇಂದ್ರ ಸರ್ಕಾರ ಅವರ ಅಧಿಕಾರವಧಿಯಲ್ಲಿ ಕಡಿತಗೊಳಿಸುವ ಮೂಲಕ ಮತ್ತೊಂದು ರೀತಿಯಲ್ಲಿ ಹೊಸ ಸಿಬಿಐ ನಿರ್ದೇಶಕರಿಗೆ ತೊಂದರೆ ಕೊಡಲು ಮುಂದಾಗಿದೆ ಎಂದು ದಿ ವೈರ್ ವಿಸ್ತೃತ ವರದಿ ಮಾಡಿದೆ. ಸಾಮಾನ್ಯವಾಗಿ ನಿರ್ದೇಶಕರ ಅಧಿಕಾರವಧಿ 2 ವರ್ಷಗಳಿದ್ದರೂ ಸಹ ಇವರ ನೇಮಕಾತಿಯಲ್ಲಿ ಮುಂದಿನ ಆದೇಶದವರೆಗೆ ಎಂದು ಸೇರಿಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಮೇ 25 ರಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಹೊರಡಿಸಿದ ಟಿಪ್ಪಣಿಯಲ್ಲಿ, “ಕ್ಯಾಬಿನೆಟ್‌ನ ನೇಮಕಾತಿ ಸಮಿತಿಯು ಶಿಫಾರಸು ಮಾಡಿದ ಸಮಿತಿಯ ಆಧಾರದ ಮೇಲೆ, ಐಪಿಎಸ್ (ಎಂಹೆಚ್ 1985: ಶ್ರೀ ಸುಬೋಧ್ ಕುಮಾರ್ ಜೈಸ್ವಾಲ್ ಅವರ ನೇಮಕಕ್ಕೆ ಅನುಮೋದನೆ ನೀಡಿದೆ), ಸಿಬಿಐನ ನಿರ್ದೇಶಕರಾಗಿ, ಕಚೇರಿಯ ಉಸ್ತುವಾರಿ ವಹಿಸಿಕೊಂಡ ದಿನಾಂಕದಿಂದ ಎರಡು ವರ್ಷಗಳವರೆಗೆ ಅಥವಾ ಯಾವುದು ಮೊದಲಿನದೋ ಅಂತಹ ಮುಂದಿನ ಆದೇಶದವರೆಗೆ” ಎಂದು ಬರೆಯಲಾಗಿದೆ.

ಸಿಬಿಐ ಹೊಸ ನಿರ್ದೇಶಕರ ಅಧಿಕಾರಾವಧಿಯನ್ನು ಏಕೆ ಅನಿಯಂತ್ರಿತವಾಗಿ ಬದಲಾಯಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂಬ ಪ್ರಶ್ನೆಗೆ ಅದು ಉತ್ತರ ನೀಡಿಲ್ಲ. ಸುಬೋಧ್ ಕುಮಾರ್ ಜೈಸ್ವಾಲ್ ಅವರ ಮೊದಲು, ನರೇಂದ್ರ ಮೋದಿ ಸರ್ಕಾರವು ಹಿಂದಿನ ಮೂರು ಸಿಬಿಐ ಮುಖ್ಯಸ್ಥರಾದ ಅನಿಲ್ ಸಿನ್ಹಾ, ಅಲೋಕ್ ವರ್ಮಾ ಮತ್ತು ರಿಷಿ ಕುಮಾರ್ ಶುಕ್ಲಾ ಅವರ ನೇಮಕಾತಿಗಳನ್ನು ಹಿಂದಿನ ಮಾನದಂಡಗಳ ಮೇಲೆ ಮಾಡಿದ್ದರು. ಅಂದರೆ ಅವರ ಅಧಿಕಾರವದಿ 2 ವರ್ಷ ಇತ್ತು ಮತ್ತು ಆಗ ಮುಂದಿನ ಆದೇಶದವರೆಗೆ ಎಂಬ ಷರತ್ತು ಇರಲಿಲ್ಲ. ಆದರೆ ಹೀಗೆಕೆ ಎಂಬ ಪ್ರಶ್ನೆ ಎದ್ದಿದೆ.

ಈ ಆದೇಶಕ್ಕೆ ಪ್ರತಿಕ್ರಿಯೆಯಾಗಿ, ಹರಿಯಾಣ ಮೂಲದ ವಕೀಲ ಮತ್ತು ಆರ್‌ಟಿಐ ಕಾರ್ಯಕರ್ತ ಹೇಮಂತ್ ಕುಮಾರ್ ಅವರು ಜೂನ್ 4 ರಂದು ಡಿಒಪಿಟಿಗೆ ಮಾಹಿತಿ ಹಕ್ಕು (ಆರ್‌ಟಿಐ) ಅರ್ಜಿಯನ್ನು ಸಲ್ಲಿಸಿದ್ದಾರೆ. ಮುಂದಿನ ಆದೇಶದವರೆಗೆ ಎಂಬ ಪದಗಳನ್ನು ಏಕೆ ಸೇರಿಸಲಾಗಿದೆ ಎಂಬ ಮಾಹಿತಿ ನೀಡುವಂತೆ ಮನವಿ ಮಾಡಿದ್ದರು.

ಅವರ ಪ್ರಶ್ನೆಗೆ ಪ್ರತಿಯಾಗಿ ಜೂನ್ 14 ರಂದು “ನೀವು ಕೇಳಿದ ಮಾಹಿತಿಯು ಪ್ರಶ್ನೆ / ಸ್ಪಷ್ಟೀಕರಣ ಸ್ವರೂಪದ್ದಾಗಿದೆ ಮತ್ತು ಸ್ಪಷ್ಟೀಕರಣ ಅಥವಾ ವ್ಯಾಖ್ಯಾನಿಸುವುದು ಆರ್‌ಟಿಐ ಕಾಯ್ದೆ, 2005 ರ ವಿಭಾಗ 2 (ಎಫ್) ಅಡಿಯಲ್ಲಿ ವ್ಯಾಖ್ಯಾನಿಸಲಾದ ಮಾಹಿತಿಯ ವ್ಯಾಪ್ತಿಯನ್ನು ಮೀರಿದೆ, ಹಾಗಾಗಿ ಉತ್ತರಿಸಲು ಬರುವುದಿಲ್ಲ” ಎಂಬ ಪ್ರತ್ಯುತ್ತರ ಬಂದಿದೆ.

ಅಲ್ಲದೆ ಕುಮಾರ್ ಅವರು ಅರ್ಜಿಯಲ್ಲಿ “ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ ಕಾಯ್ದೆ, 1946 ರ ಸೆಕ್ಷನ್ 4 ಬಿ (ಐ) ಪ್ರಕಾರ, ಸಿಬಿಐ ನಿರ್ದೇಶಕರು, ತಮ್ಮ ಸೇವಾ ಪರಿಸ್ಥಿತಿಗಳಿಗೆ ಸಂಬಂಧಿಸಿದ ನಿಯಮಗಳಲ್ಲಿ ವ್ಯತಿರಿಕ್ತವಾಗಿ ಏನಾದರೂ ಇದ್ದರೂ, ಅವರು ಅವರು ಅಧಿಕಾರ ವಹಿಸಿಕೊಂಡ ದಿನಾಂಕದಿಂದ ಎರಡು ವರ್ಷಗಳಿಗಿಂತ ಕಡಿಮೆಯಿಲ್ಲದಂತೆ ಅಧಿಕಾರವನ್ನು ಮುಂದುವರಿಸುತ್ತಾರೆ” ಎಂದಿರುವುದನ್ನು ಎತ್ತಿ ತೋರಿಸಿದ್ದಾರೆ.

ಉತ್ತರಕ್ಕೆ ಪ್ರತಿಕ್ರಿಯಿಸಿದ ಕುಮಾರ್, ತಾನು ಎಂದಿಗೂ ಸ್ಪಷ್ಟೀಕರಣವನ್ನು ಕೇಳಲಿಲ್ಲ ಆದರೆ ಸಿಬಿಐ ನಿರ್ದೇಶಕರ ಅಧಿಕಾರಾವಧಿಯನ್ನು ನಿರ್ದಿಷ್ಟಪಡಿಸಲು ಇಲಾಖೆಯ ಆದೇಶದಲ್ಲಿ ಬಳಸಲಾದ ಪದಗಳ ಬಗ್ಗೆ ಮಾತ್ರ ವಿವರಗಳನ್ನು ಕೋರಿದ್ದೇನೆ ಎಂದು ಹೇಳಿದ್ದಾರೆ.

1997 ರ ಡಿಸೆಂಬರ್‌ನಲ್ಲಿ, ವಿನೀತ್ ನರೈನ್ ವರ್ಸಸ್ ಯೂನಿಯನ್ ಆಫ್ ಇಂಡಿಯಾ ಪ್ರಕರಣದಲ್ಲಿ ಸಿಬಿಐ ನಿರ್ದೇಶಕರ ಕನಿಷ್ಠ ಅಧಿಕಾರಾವಧಿಯು ಎರಡು ವರ್ಷಗಳು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಆದರೂ ಕೇಂದ್ರ ಸರ್ಕಾರ ಅದನ್ನು ಉಲ್ಲಂಘಿಸುತ್ತಿದೆ ಎಂದು ಕುಮಾರ್ ಆರೋಪಿಸಿದ್ದಾರೆ.

ಸಿಬಿಐ ನಿರ್ದೇಶಕರ ನೇಮಕಾತಿಯನ್ನು ಮೂರು ಸದಸ್ಯರ ಸಮಿತಿಯು ನಿರ್ಧರಿಸುತ್ತದೆ. ಅದರಲ್ಲಿ ಪ್ರಧಾನ ಮಂತ್ರಿ ಆ ಸಮಿತಿಯ ಅಧ್ಯಕ್ಷರಾದರೆ, ಭಾರತದ ಮುಖ್ಯ ನ್ಯಾಯಮೂರ್ತಿ ಅಥವಾ ಅವರು ನೇಮಿಸುವ ಸದಸ್ಯರು ಮತ್ತು ಪ್ರತಿಪಕ್ಷದ ನಾಯಕರು ಇರುತ್ತಾರೆ.

ಒಟ್ಟಾರೆ ಈ ಪ್ರಕರಣದಲ್ಲಿ ತಾನು ಬಯಸಿದವರು ಸಿಬಿಐ ನಿರ್ದೇಶಕರಾಗದ ಕಾರಣ ಕೇಂದ್ರ ಸರ್ಕಾರ ಅವರ ಅಧಿಕಾರಾವಧಿಯನ್ನು ಕಡಿಮೆ ಮಾಡಲು ಯತ್ನಿಸುತ್ತಿದೆ ಎಂಬ ಆರೋಪಗಳಿಗೆ ಪುಷ್ಟಿ ಕೊಡುವಂತೆ ನಡೆದುಕೊಳ್ಳುತ್ತಿದೆ ಎಂಬುದನ್ನು ಮೇಲಿನ ಆಧಾರಗಳು ಸೂಚಿಸುತ್ತವೆ.

ಕೃಪೆ: ದಿ ವೈರ್


ಇದನ್ನೂ ಓದಿ: ಸಿಬಿಐ ಮುಖ್ಯಸ್ಥರಾಗಿ ಆಯ್ಕೆಯಾದ ಸುಬೋಧ್ ಕುಮಾರ್ ಜೈಸ್ವಾಲ್; ಕೇಂದ್ರಕ್ಕೆ ಹಿನ್ನಡೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...