Homeಸಿನಿಮಾಕ್ರೀಡೆರೊನಾಲ್ಡೊ ಮಾಡಿದ ಒಂದು ಸಣ್ಣ ಕೆಲಸಕ್ಕೆ 4 ಬಿಲಿಯನ್ ಡಾಲರ್ ಕಳೆದುಕೊಂಡ ಕೋಕೊ-ಕೋಲಾ

ರೊನಾಲ್ಡೊ ಮಾಡಿದ ಒಂದು ಸಣ್ಣ ಕೆಲಸಕ್ಕೆ 4 ಬಿಲಿಯನ್ ಡಾಲರ್ ಕಳೆದುಕೊಂಡ ಕೋಕೊ-ಕೋಲಾ

- Advertisement -
- Advertisement -

ವಿಶ್ವದ ಅತ್ಯಂತ ಪ್ರಸಿದ್ಧ ಮತ್ತು ಅಗ್ರ ಫುಟ್ಬಾಲ್ ಆಟಗಾರರಲ್ಲಿ ಒಬ್ಬರಾದ,
ಪೋರ್ಚುಗಲ್ ಫುಟ್ಬಾಲ್ ತಂಡದ ನಾಯಕ ಹಾಗು ಪ್ರಸಿದ್ಧ ಫಿಟ್ನೆಸ್ ಉತ್ಸಾಹಿ ಕ್ರಿಸ್ಟಿಯಾನೊ ರೊನಾಲ್ಡೊ ಮಾಡಿದ ಒಂದು ಸಣ್ಣ ಕೆಲಸಕ್ಕೆ ಪಾನೀಯ ತಯಾರಿಕ ಕಂಪನಿ ಕೋಕೊ-ಕೋಲಾ ಬಹು ದೊಡ್ಡ ಬೆಲೆ ತೆರಬೇಕಾಗಿ ಬಂದಿದೆ.

ಸಾಮಾನ್ಯವಾಗಿ ಕ್ರೀಡಾಪಟುಗಳು ಮತ್ತು ಸಿನಿಮಾ ತಾರೆಯರು ಹಣಕ್ಕಾಗಿ ಯಾವ ಕಂಪನಿಯ ಜಾಹೀರಾತಿನಲ್ಲಿ ಬೇಕಾದರೂ ನಟಿಸುತ್ತಾರೆ, ಅವುಗಳನ್ನು ಪ್ರಚಾರ ಮಾಡುತ್ತಾರೆ ಎಂಬ ಆಪಾದನೆಯಿದೆ. ಅದಕ್ಕೆ ವಿರುದ್ಧವಾಗಿ ವರ್ತಿಸಿದ ಕ್ರಿಸ್ಟಿಯಾನೊ ರೊನಾಲ್ಡೊ ಹಲವರ ಕಣ್ಣಲ್ಲಿ ಒಬ್ಬ ಉತ್ತಮ ವ್ಯಕ್ತಿಯೆನಿಸಿಕೊಂಡರೆ ಆತ ಮಾಡಿದ ಕೆಲಸದಿಂದ ಕೋಕೊ-ಕೋಲಾ ಕಂಪನಿ 4 ಬಿಲಿಯನ್ ಡಾಲರ್ ಕಳೆದುಕೊಂಡು ಶಪಿಸುತ್ತಿದೆ.

ಅಷ್ಟಕ್ಕೂ ಅಷ್ಟೊಂದು ಹಣ ಕಳೆದುಕೊಳ್ಳುವಂತೆ ಆತ ಮಾಡಿದ್ದಾದೂ ಏನು? ಯುರೋ 2020 ರಲ್ಲಿ ಪೋರ್ಚುಗಲ್ ತಂಡವು ಹಂಗೇರಿ ವಿರುದ್ಧ ಕಾದಾಡುವ ಮೊದಲು ಸೋಮವಾರ ಬುಡಾಪೆಸ್ಟ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಟೇಬಲ್ ಮೇಲಿದ್ದ ಎರಡು ಕೋಕೊ-ಕೋಲಾ ಬಾಟಲಿಗಳನ್ನು ತೆಗೆದು ಕಾಣದಂತೆ ಕೆಳಗಿಟ್ಟಿದ್ದು ಮತ್ತು ನೀರಿನ ಬಾಟಲಿಯನ್ನು ತನ್ನ ಮುಂದಿಟ್ಟುಕೊಂಡಿದ್ದು…!

ಕ್ರಿಸ್ಟಿಯಾನೊ ರೊನಾಲ್ಡೊ ಪತ್ರಿಕಾಗೋಷ್ಠಿಗೆ ಆಗಮಿಸುವ ಮೊದಲು ಆತನ ಟೇಬಲ್ ಮೇಲೆ ಎರಡು ಕೋಕೊ-ಕೋಲಾ ಬಾಟಲಿಗಳನ್ನು ಇಡಲಾಗಿತ್ತು. ಆತ ಬಂದವನೆ ಅದನ್ನು ನೋಡಿ ತೆಗೆದು ಕೆಳಗಿಟ್ಟ. ನಂತರ ನೀರಿನ ಬಾಟಲಿಯನ್ನು ಮೇಲೆತ್ತಿ ಇದನ್ನು ಕುಡಿಯಿರಿ ಎಂದು ಸನ್ಹೆ ಮಾಡಿದ ಅಷ್ಟೇ.. ಈ ವಿಡಿಯೋ ಪ್ರಪಂಚಾದ್ಯಂತ ವೈರಲ್ ಆಯಿತು. ಅಷ್ಟಕ್ಕೆ ಪತ್ರಿಕಾಗೋಷ್ಠಿಯ ಅಂತ್ಯದ ವೇಳೆಗೆ ಕೋಕಾ-ಕೋಲಾದ ಷೇರು ಬೆಲೆ $56.10 ರಿಂದ $55.22 ಕ್ಕೆ ಇಳಿದಿತ್ತು. ಅಂದರೆ ಶೇಕಡಾ 1.6 ರಷ್ಟು ಕುಸಿತ. ಇದು ಈಗ ಅದರ ಬೆಲೆ $55.41 ಕ್ಕೆ ಏರಿದೆ.

ಕೋಕಾ-ಕೋಲಾದ ಮಾರುಕಟ್ಟೆ ಮೌಲ್ಯವು $242 ಬಿಲಿಯನ್‌ನಿಂದ $238 ಶತಕೋಟಿಗೆ ಇಳಿದಿದೆ. ಅಂದರೆ 4 ಬಿಲಿಯನ್‌ ಡಾಲರ್ ಕುಸಿತ ಕಂಡಿದೆ.

ಕೋಕಾ-ಕೋಲಾ ಯುರೋ 2020 ರ ಅಧಿಕೃತ ಪ್ರಾಯೋಜಕರಲ್ಲಿ ಒಬ್ಬರು. ಹಾಗಾಗಿ ಆ ಬಾಟಲಿಗಳನ್ನು ಮೇಜಿನ ಮೇಲೆ ಪ್ರಚಾರ ಮಾಡಲು ಇರಿಸಲಾಗಿತ್ತು ಎಂದು ಹೇಳಿಕೊಂಡಿದೆ. ಪ್ರತಿಯೊಬ್ಬರೂ ತಮ್ಮ ಪಾನೀಯ ಆದ್ಯತೆಗಳಿಗೆ ಅರ್ಹರಾಗಿದ್ದಾರೆ ಎಂದು ಹೇಳುವ ಮೂಲಕ ಕೋಕಾ-ಕೋಲಾ ತನ್ನ ಅಸಮಾಧಾನ ಹೊರ ಹಾಕಿದೆ.

ವಿಶ್ವದ ಅತ್ಯಂತ ಪ್ರಸಿದ್ಧ ಫುಟ್ಬಾಲ್ ಆಟಗಾರರಲ್ಲಿ ಒಬ್ಬರಾದ ರೊನಾಲ್ಡೊಗೆ ಇನ್ಸ್ಟಾಗ್ರಾಮ್‌ನಲ್ಲಿ ಸುಮಾರು 300 ಮಿಲಿಯನ್ ಅನುಯಾಯಿಗಳಿದ್ದಾರೆ. ಮಂಗಳವಾರ, ಹಂಗೇರಿ ವಿರುದ್ಧ ಪೋರ್ಚುಗಲ್ 3-0 ಗೋಲುಗಳಿಂದ ಗೆಲುವು ಸಾಧಿಸಿತು. ಎರಡು ಗೋಲು ಗಳಿಸಿ ರೊನಾಲ್ಡೊ ಮಿಂಚಿದರು. ಅಲ್ಲದೇ ಯುರೋಪಿಯನ್ ಚಾಂಪಿಯನ್‌ಶಿಪ್ ನಲ್ಲಿ 11 ಗೋಲುಗಳೊಂದಿಗೆ ದಾಖಲೆ ನಿರ್ಮಿಸಿದರು.


ಇದನ್ನೂ ಓದಿ; ನೇಮಕಾತಿಯಲ್ಲಿ ಹಿನ್ನಡೆ ಕಾರಣ: ಹೊಸ ಸಿಬಿಐ ನಿರ್ದೇಶಕರ ಅಧಿಕಾರವಧಿ ಕಡಿತಕ್ಕೆ ಮುಂದಾದ ಕೇಂದ್ರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...